Homeಮುಖಪುಟರೈತರ ಮೊಮ್ಮಗಳನ್ನು ಬಂಧಿಸಿದರೆ ಹೋರಾಟ ದುರ್ಬಲಗೊಳ್ಳುವುದಿಲ್ಲ: ದಿಶಾ ರವಿಗೆ ಜಾಗತಿಕ ಬೆಂಬಲ

ರೈತರ ಮೊಮ್ಮಗಳನ್ನು ಬಂಧಿಸಿದರೆ ಹೋರಾಟ ದುರ್ಬಲಗೊಳ್ಳುವುದಿಲ್ಲ: ದಿಶಾ ರವಿಗೆ ಜಾಗತಿಕ ಬೆಂಬಲ

- Advertisement -
- Advertisement -

ರೈತ ಪ್ರತಿಭಟನೆ ಕುರಿತು ಜಾಗತಿಕ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದ ‘ಟೂಲ್‌ಕಿಟ್‌’ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 21 ವರ್ಷದ ಪರಿಸರ ಹೋರಾಟಗಾರ್ತಿ ದಿಶಾ ರವಿಯನ್ನು ದೆಹಲಿ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಇದರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ದಿಶಾ ಅವರಿಗೆ ಜಾಗತಿಕ ಬೆಂಬಲ ವ್ಯಕ್ತವಾಗುತ್ತಿದೆ.

ಕಮಲಾ ಹ್ಯಾರಿಸ್ ಅವರ ಸಂಬಂಧಿ ಮತ್ತು ಅಮೆರಿಕದ ವಕೀಲೆ ಮೀನಾ ಹ್ಯಾರಿಸ್ ದಿಶಾ ರವಿಗೆ ಬೆಂಬಲ ಸೂಚಿಸಿದ್ದು, “ರೈತರ ಪ್ರತಿಭಟನೆಯನ್ನು ಹೇಗೆ ಬೆಂಬಲಿಸಬೇಕು ಎಂಬ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಟೂಲ್‌ಕಿಟ್‌ ಅನ್ನು ಹಂಚಿಕೊಂಡಿದ್ದರಿಂದ ಭಾರತೀಯ ಅಧಿಕಾರಿಗಳು ಮತ್ತೊಬ್ಬ ಯುವ ಮಹಿಳಾ ಕಾರ್ಯಕರ್ತೆ 21 ವರ್ಷದ ದಿಶಾ ರವಿ ಅವರನ್ನು ಬಂಧಿಸಿದ್ದಾರೆ. ಇಂತಹ ಹೋರಾಟಗಾರರನ್ನು ಸರ್ಕಾರ ಗುರಿಯಾಗಿಸಿಕೊಂಡು ಏಕೆ ಅವರ ಬಾಯಿಮುಚ್ಚಿಸುತ್ತಿದೆ ಎಂದು ಕೇಳಿ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ನನ್ನನ್ನು ಹೆದರಿಸೋಕೆ ನೋಟಿಸ್ ನೀಡಿದ್ದಾರೆ, ಫೆ. 21ರೊಳಗೆ ಹಿಂಪಡೆಯುತ್ತಾರಂತೆ: ಯತ್ನಾಳ್

ದಿಶಾ ರವಿಯವರಿಗೆ ಬಹುಭಾಷಾ ನಟ ಸಿದ್ದಾರ್ಥ್ ಬೆಂಬಲ ಸೂಚಿಸಿದ್ದು, “ದಿಶಾ ರವಿಯವರೊಂದಿಗೆ ಬೇಷರತ್ ನಿಲ್ಲುತ್ತೇವೆ. ನಿನಗೆ ಹೀಗಾಗಿರುವುದಕ್ಕೆ ನಮ್ಮನ್ನು ಕ್ಷಮಿಸು ಸಹೋದರಿ. ನಾವೆಲ್ಲರೂ ನಿನ್ನೊಂದಿಗೆ ಇದ್ದೇವೆ. ದೃಢವಾಗಿರು. ಈ ಅನ್ಯಾಯವೂ ಕಳೆದಹೋಗುತ್ತದೆ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ’ದೆಹಲಿ ಗಡಿಗಳಲ್ಲಿ ನಡೆಯುತ್ತಿರುವ ಟೆಸ್ಟ್‌ ಪಂದ್ಯಾಟವನ್ನೂ ಸೆರೆಹಿಡಿಯಿರಿ’-ಮೋದಿಗೆ ನೆಟ್ಟಿಗರ ತರಾಟೆ

ರಾಜ್ಯ ಸಭಾ ಸಂಸದರಾದ ಜೈರಾಮ್ ರಮೇಶ್ ಅವರು ಟ್ವೀಟ್ ಮಾಡಿದ್ದು, “ಇದು ದೌರ್ಜನ್ಯದ ಪರಮಾವಧಿ. ಇದು ಕಾನೂನುಬಾಹಿರ ಕಿರುಕುಳ ಮತ್ತು ಬೆದರಿಕೆಯಾಗಿದೆ. ದಿಶಾ ರವಿಯವರಿಗೆ ನನ್ನ ಸಂಪೂರ್ಣ ಬೆಂಬಲವಿದೆ” ಎಂದು ಬರೆದುಕೊಂಡಿದ್ದಾರೆ.

ಹಿರಿಯ ಕಾಂಗ್ರೆಸ್ ಮುಖಂಡ ಪಿ ಚಿದಂಬರಂ ಟ್ವೀಟ್ ಮಾಡಿ, “21 ವರ್ಷದ ದಿಶಾ ರವಿ ದೇಶಕ್ಕೆ ತೊಂದರೆಯುಂಟು ಮಾಡುತ್ತಾರೆ ಎನ್ನುವುದಾದರೆ, ದೇಶದ ಬುಡ ಗಟ್ಟಿಯಿಲ್ಲ ಎನಿಸುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿಗೆ ಅನುಕೂಲ ಮಾಡಿಕೊಡುವುದಿಲ್ಲ, ಮೂರೂ ಕ್ಷೇತ್ರದ ಉಪಚುನಾವಣೆಯಲ್ಲೂ ಸ್ಪರ್ಧೆ: ನಿರ್ಧಾರ ಬದಲಿಸಿದ HDK

ಸಿಪಿಐ ನ ಮುಖಂಡರಾದ ಸೀತಾರಾಂ ಯೆಚೋರಿ ಟ್ವೀಟ್ ಮಾಡಿ, “ರೈತರ ಮೊಮ್ಮಗಳನ್ನು ದೇಶದ್ರೋಹ ಪ್ರಕರಣದ ಅಡಿಯಲ್ಲಿ ಬಂಧಿಸಿದರೆ ಅದು ರೈತರ ಹೋರಾಟವನ್ನು ದುರ್ಬಲಗೊಳಿಸುತ್ತದೆ ಎಂದು ಮೋದಿ ಸರ್ಕಾರ ಎಣಿಸುತ್ತಿದೆ. ವಾಸ್ತವವಾಗಿ, ಇದು ದೇಶದ ಯುವಕರನ್ನು ಜಾಗೃತಗೊಳಿಸುತ್ತದೆ ಮತ್ತು ಪ್ರಜಾಪ್ರಭುತ್ವದ ಹೋರಾಟಗಳನ್ನು ಬಲಪಡಿಸುತ್ತದೆ” ಎಂದು ಕಿಡಿಕಾರಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿ, “ದಿಶಾ ರವಿಯ ಬಂಧನ ಪ್ರಜಾಪ್ರಭುತ್ವದ ಮೇಲಿನ ಅಸಾಂವಿಧಾನಿಕ ದಾಳಿಯಾಗಿದೆ. ರೈತರನ್ನು ಬೆಂಬಲಿಸುವುದು ಅಪರಾಧವಲ್ಲ” ಎಂದು ಬರೆದುಕೊಂಡಿದ್ದಾರೆ.

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿ, “ಪರಿಸರ ಹೋರಾಟಗಾರ್ತಿ ದಿಶಾ ರವಿಯ ಬಂಧನ ನರೇಂದ್ರ ಮೋದಿ ಆಡಳಿತದಲ್ಲಿ ಭಾರತದ ಪ್ರಜಾಪ್ರಭುತ್ವದಲ್ಲಿ ಬಿಟ್ಟಿರುವ ಬಿರುಕನ್ನು ತೋರಿಸುತ್ತಿದೆ. ರೈತರನ್ನು ಬೆಂಬಲಿಸುವುದು ದೇಶದ್ರೋಹ ಪ್ರಕರಣದ ಅಡಿಯಲ್ಲಿ ಹೇಗೆ ಬರುತ್ತದೆ. ದೆಹಲಿ ಪೊಲೀಸರ ರಾಜಕೀಯ ಪ್ರೇರಿತವಾದ ಈ ಕ್ರಮವನ್ನು ನಾನು ಬಲವಾಗಿ ಖಂಡಿಸುತ್ತೇನೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೀಗೆ ಇನ್ನೂ ನೂರಾರು ಜನರು ದಿಶಾ ರವಿಯವರಿಗೆ ಬೆಂಬಲ ಸೂಚಿಸಿದ್ದಾರೆ. ರೈತ ಹೋರಾಟವನ್ನು ದುರ್ಬಲಗೊಳಿಸುವ ಸಲುವಾಗಿ ಕೇಂದ್ರದ ಬಿಜೆಪಿ ಸರ್ಕಾರ ಇಂತಹ ನೀಚ ಕೆಲಸಗಳನ್ನು ಮಾಡುತ್ತಿದೆ ಎಂದು ಹಲವರು ಆರೋಪಿಸಿದ್ದಾರೆ.

ದಿಶಾ ರವಿ ಅವರು ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾರೆ. ಫ್ರೈಡೇಸ್ ಫಾರ್ ಫ್ಯೂಚರ್ ಇಂಡಿಯಾದ ಸಂಸ್ಥಾಪಕರಲ್ಲಿ ಒಬ್ಬರಾದ ದಿಶಾ ರವಿ ಅವರು ವಿವಾದಿತ ಟೂಲ್‌ಕಿಟ್ ಅನ್ನು ಸಂಪಾದಿಸಿ ಹಂಚಿಕೊಂಡಿದ್ದಾರೆ ಎಂದು ದೆಹಲಿ ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ಇದನ್ನೂ ಓದಿ: ದೇಶ ಭಕ್ತರು ಯಾರು? ದೇಶ ದ್ರೋಹಿಗಳು ಯಾರು? – ನಟ ಚೇತನ್ ಹೇಳುತ್ತಾರೆ ಕೇಳಿ

ಜನವರಿ 26 ರ ಗಣರಾಜ್ಯೋತ್ಸವದಂದು ರೈತರ ಟ್ರಾಕ್ಟರ್ ರ್‍ಯಾಲಿಯ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆಯಲ್ಲಿ ಈ ಟೂಲ್‌ಕಿಟ್‌ನ ಪಾತ್ರವಿದೆ ಎಂದು ಪೊಲೀಸರು ಆಪಾದಿಸಿದ್ದಾರೆ. ವಿಶೇಷ ಸಿಪಿ (ಅಪರಾಧ ಶಾಖೆ) ಪ್ರವೀರ್ ರಂಜನ್, ಪ್ರಾಥಮಿಕ ವಿಚಾರಣೆಯಲ್ಲಿ ವಿವಾದಿತ ಟೂಲ್‌ಕಿಟ್ ಅನ್ನು “ಖಲಿಸ್ತಾನಿ ಪರ ಸಂಸ್ಥೆ” ಪೊಯೆಟಿಕ್ ಜಸ್ಟೀಸ್ ಫೌಂಡೇಶನ್ ರಚಿಸಿದೆ ಎಂದು ಸೂಚಿಸಿದೆ ಎಂದು ಹೇಳಿದ್ದಾರೆ.

ಫ್ರೈಡೆ ಫಾರ್‌ ಫ್ಯೂಚರ್‌‌ ಎಂಬುವುದು ಅಂತಾರಾಷ್ಟ್ರೀಯ ಚಳವಳಿಯಾಗಿದ್ದು, ಇದರಲ್ಲಿ ವಿದ್ಯಾರ್ಥಿಗಳು ಶುಕ್ರವಾರದಂದು ತರಗತಿಯನ್ನು ಬಹಿಷ್ಕರಿಸಿ ಹವಾಮಾನ ಬದಲಾವಣೆಗಳ ವಿರುದ್ಧ ರಾಜಕಾರಣಿಗಳು ಮಾತನಾಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಾರೆ. ಗ್ರೇಟಾ ಥನ್ಬರ್ಗ್ ಸ್ವೀಡಿಷ್ ಸಂಸತ್ತಿನ ಹೊರಗೆ ಪ್ರತಿಭಟಿಸಿದ ನಂತರ ಇದು ವ್ಯಾಪಕ ಜನಪ್ರಿಯತೆಯನ್ನು ಗಳಿಸಿತು.

ಫೆಬ್ರವರಿ 4 ರಂದು ವಿವಾದಿತ ಟೂಲ್‌ಕಿಟ್‌ ತಯಾರಿಸಿದವರ ವಿರುದ್ದ ದೆಹಲಿ ಸೈಬರ್‌‌‌-ಕ್ರೈಮ್‌ ಸೆಲ್ ಪೊಲೀಸರು‌, ದೇಶದ್ರೋಹ, ಕ್ರಿಮಿನಲ್ ಪಿತೂರಿ ಮತ್ತು ದ್ವೇಷವನ್ನು ಉತ್ತೇಜಿಸುವ ಆರೋಪದ ಮೇಲೆ ಎಫ್ಐಆರ್ ದಾಖಲಿಸಿದ್ದರು.


ಇದನ್ನೂ ಓದಿ: ಜಮ್ಮುಕಾಶ್ಮೀರದಲ್ಲಿ ಮತ್ತೊಮ್ಮೆ ಗೃಹ ಬಂಧನ: ಮಾಜಿ ಮುಖ್ಯಮಂತ್ರಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...