Homeಚಳವಳಿರೈತರಿಗೆ ಪ್ರತಿಭಟಿಸುವ ಹಕ್ಕಿದೆ, ಆದರೆ, ರಸ್ತೆಗಳನ್ನು ಅನಿರ್ದಿಷ್ಟವಾಗಿ ನಿರ್ಬಂಧಿಸಲು ಸಾಧ್ಯವಿಲ್ಲ- ಸುಪ್ರೀಂ

ರೈತರಿಗೆ ಪ್ರತಿಭಟಿಸುವ ಹಕ್ಕಿದೆ, ಆದರೆ, ರಸ್ತೆಗಳನ್ನು ಅನಿರ್ದಿಷ್ಟವಾಗಿ ನಿರ್ಬಂಧಿಸಲು ಸಾಧ್ಯವಿಲ್ಲ- ಸುಪ್ರೀಂ

- Advertisement -
- Advertisement -

ಒಕ್ಕೂಟ ಸರ್ಕಾರದ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು ದೆಹಲಿಯ ಹೆದ್ದಾರಿಗಳ‌ನ್ನು ತಡೆಹಿಡಿದಿರುವ ಕುರಿತು ಸುಪ್ರೀಂಕೋರ್ಟ್ ಮತ್ತೆ ಅಸಮಾಧಾನ ವ್ಯಕ್ತಪಡಿಸಿದೆ. ’ರೈತರಿಗೆ ಪ್ರತಿಭಟನೆ ಮಾಡುವ ಹಕ್ಕಿದೆ. ಆದರೆ, ರಸ್ತೆಗಳನ್ನು ಹೀಗೆ ಅನಿರ್ದಿಷ್ಟವಾಗಿ ನಿರ್ಬಂಧಿಸಲು ಸಾಧ್ಯವಿಲ್ಲ’ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.

ಒಕ್ಕೂಟ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಬೇಕು ಎಂದು ರೈತರು ಕಳೆದ ಒಂದು ವರ್ಷದಿಂದ ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಗಡಿಗಳಿಂದ ರೈತರ ಪ್ರತಿಭಟನೆಯನ್ನು ತೆರವುಗೊಳಿಸುವಂತೆ ಕೋರಿ ಹಲವರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ನೊಯ್ಡಾ ನಿವಾಸಿ ಮೋನಿಕಾ ಅಗರವಾಲ್ ಅವರು ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯವು ವಿಚಾರಣೆ ನಡೆಸುತ್ತಿದೆ. ಅರ್ಜಿಯಲ್ಲಿ, ಮೊದಲು ದಿಲ್ಲಿಯನ್ನು ತಲುಪಲು 20 ನಿಮಿಷಗಳಾಗುತ್ತಿತ್ತು. ಆದರೆ, ಈಗ ಎರಡು ಗಂಟೆಗಳಿಗಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತಿದೆ ಎಂದಿದ್ದಾರೆ. ಜೊತೆಗೆ ಯುಪಿ ಗೇಟ್ ಬಳಿಯ ಪ್ರತಿಭಟನೆಗಳಿಂದಾಗಿ ಪ್ರದೇಶದ ಜನರು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ ಎಂದಿದ್ದರು.

ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಮತ್ತು ಎಂಎಂ ಸುಂದ್ರೇಶ್ ಅವರ ನ್ಯಾಯಪೀಠವು, ರೈತರಿಗೆ ಪ್ರತಿಭಟನೆ ಮಾಡುವ ಹಕ್ಕಿದೆ. ಆದರೆ, ರಸ್ತೆಗಳನ್ನು ಅನಿರ್ದಿಷ್ಟವಾಗಿ ನಿರ್ಬಂಧಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

ಇದನ್ನೂ ಓದಿ: ಲಖಿಂಪುರ್‌ ಖೇರಿ ಹತ್ಯಾಕಾಂಡ: ಅ.26ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ಅಲ್ಲದೆ, ಪ್ರತಿಭಟನೆಗೆ ತೆರವಿಗೆ ಸಲ್ಲಿಸಲಾಗಿರುವ ಅರ್ಜಿಯ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ರೈತ ಸಂಘಟನೆಗಳಿಗೆ ಮೂರು ವಾರಗಳ ಸಮಯವನ್ನು ಕೋರ್ಟ್‌ ನೀಡಿದ್ದು, ಮುಂದಿನ ವಿಚಾರಣೆಯನ್ನು ಡಿಸೆಂಬರ್ 7 ರಂದು ಮುಂದೂಡಿದೆ.

“ಕಾಯ್ದೆಗಳ ಬಗ್ಗೆ ನ್ಯಾಯಾಲಯದಲ್ಲಿ ವಿಚಾರಣೆ ಬಾಕಿಯಿರುವಾಗಲೂ ರೈತರ ಪ್ರತಿಭಟಿಸುವ ಹಕ್ಕನ್ನು ನಾವು ವಿರೋಧಿಸುವುದಿಲ್ಲ. ಆದರೆ ರಸ್ತೆಗಳನ್ನು ಹೀಗೆ ಅನಿರ್ಧಿಷ್ಟಾವಧಿಗೆ ನಿರ್ಬಂಧಿಸಲು ಸಾಧ್ಯವಿಲ್ಲ. ನೀವು ಯಾವುದೇ ರೀತಿಯಲ್ಲಿ ಆಂದೋಲನ ಮಾಡುವ ಹಕ್ಕನ್ನು ಹೊಂದಿದ್ದೀರಿ. ಆದರೆ ರಸ್ತೆಗಳನ್ನು ಈ ರೀತಿ ನಿರ್ಬಂಧಿಸಬಾರದು. ಜನರಿಗೆ ರಸ್ತೆಗಳಲ್ಲಿ ಸಂಚರಿಸಲು ಹಕ್ಕಿದೆ. ಅದನ್ನು ನಿರ್ಬಂಧಿಸಲು ಸಾಧ್ಯವಿಲ್ಲ” ಎಂದು ನ್ಯಾಯಪೀಠವು ಹೇಳಿದೆ.

ಈ ಹಿಂದೆ ಸೆಪ್ಟಂಬರ್‌ 30 ರಂದು ಇದೇ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಪೀಠ, “ಸಮಸ್ಯೆಗಳ ಪರಿಹಾರವು ನ್ಯಾಯಾಂಗ ಸ್ವರೂಪ, ಆಂದೋಲನ ಅಥವಾ ಸಂಸತ್ತಿನ ಚರ್ಚೆಗಳ ಮೂಲಕ ಮಾಡಬಹುದು. ಆದರೆ, ಹೆದ್ದಾರಿಗಳನ್ನು ಹೇಗೆ ನಿರ್ಬಂಧಿಸಬಹುದು..? ಅದು ಶಾಶ್ವತವಾಗಿ ಹೇಗೆ ಸಾಧ್ಯ…? ಇದು ಯಾವಾಗ ಕೊನೆಗೊಳ್ಳುತ್ತದೆ..?” ಎಂದು ಪ್ರಶ್ನಿಸಿತ್ತು.


ಇದನ್ನೂ ಓದಿ: ರೈತ ಹೋರಾಟ: ಹೆದ್ದಾರಿಗಳನ್ನು ಶಾಶ್ವತವಾಗಿ ನಿರ್ಬಂಧಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...