Homeಮುಖಪುಟರೈತರಿಗೆ ಪ್ರತಿಭಟಿಸುವ ಹಕ್ಕಿದೆ: ರೈತ ಹೋರಾಟ ಬೆಂಬಲಿಸಿದ ಅಮೆರಿಕ ರಾಜಕಾರಣಿಗಳು

ರೈತರಿಗೆ ಪ್ರತಿಭಟಿಸುವ ಹಕ್ಕಿದೆ: ರೈತ ಹೋರಾಟ ಬೆಂಬಲಿಸಿದ ಅಮೆರಿಕ ರಾಜಕಾರಣಿಗಳು

ಭಾರತದ ರೈತರಿಗೆ ಶಾಂತಿಯುತವಾಗಿ ಪ್ರತಿಭಟಿಸಲು ಅವಕಾಶ ನೀಡಬೇಕೆಂದೂ, ಅನ್ಯಾಯಯುತವಾಗಿರುವ ಕೃಷಿ ಕಾಯ್ದೆಗಳನ್ನು ರದ್ದುಪಡಿಸಬೇಕೆಂದೂ ನಾನು ಭಾರತ ಸರ್ಕಾರವನ್ನು ಒತ್ತಾಯಿಸುತ್ತೇನೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಗಡಿಗಳಲ್ಲಿ ಕಳೆದ 79 ದಿನಗಳಿಂದ ಹೋರಾಟ ನಡೆಸುತ್ತಿರುವ ರೈತರಿಗೆ ಪ್ರಪಂಚದೆಲ್ಲೆಡೆಯಿಂದ ಬೆಂಬಲ ಮುಂದುವರೆದಿದೆ. ಕ್ಯಾಲಿಫೋರ್ನಿಯ ರಾಜ್ಯದ ಬೇಕರ್ಸ್‌ಫೀಲ್ಡ್ ನಗರದ ಮೇಯರ್ ಕೆರೆನ್ ಗೌ ಮತ್ತು ಮಿಚಿಗನ್‌ನ 13 ನೇ ಕಾಂಗ್ರೆಸ್ ಜಿಲ್ಲೆಯ ಯು.ಎಸ್. ಪ್ರತಿನಿಧಿ ರಶೀದಾ ಹರ್ಬಿ ತ್ಲೈಬ್ ಭಾರತದ ರೈತರಿಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ.

ರಶೀದಾ ಹರ್ಬಿ ತ್ಲೈಬ್ ಮಂಗಳವಾರ ರಾತ್ರಿ ಟ್ವೀಟ್ ಮಾಡಿ “ಭಾರತದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗಳು ಇದುವರೆಗಿನ ಅತ್ಯಂತ ವಿವಿಧ್ಯಮಯ ಪ್ರತಿಭಟನೆಗಳಾಗಿವೆ. ಕೃಷಿಯನ್ನು ಕಾರ್ಪೊರೇಟ್‌ ವಯಲಕ್ಕೆ ಹಸ್ತಾಂತರಿಸುವುದನ್ನು ವಿರೋಧಿಸಿ ಭಾರತದ ರೈತರಿಗೆ (ಅಮೆರಿಕದಂತೆಯೇ) ತಮ್ಮ ಸಾಮೂಹಿಕ ಧ್ವನಿಯನ್ನು ಬಳಸುವ ಎಲ್ಲ ಹಕ್ಕಿದೆ” ಎಂದು ತಿಳಿಸಿದ್ದಾರೆ.

ಸಿಎಎ, ಕಾಶ್ಮೀರ ಮತ್ತು ಕೃಷಿ ಕಾಯ್ದೆ ಬಿಕ್ಕಟ್ಟುಗಳ ಮೂಲಕ ನಾಗರಿಕರ ವಿರುದ್ಧ ಹೆಚ್ಚುತ್ತಿರುವ ರಾಜ್ಯ ಹಿಂಸಾಚಾರದ ಗೊಂದಲದ ಪ್ರವೃತ್ತಿಯನ್ನು ನಾವು ನೋಡಿದ್ದೇವೆ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವಾಗಿ, ಮೋದಿ ಸರ್ಕಾರ ಪ್ರತಿಭಟಿಸುವ ಹಕ್ಕನ್ನು ಗೌರವಿಸುವುದು ನಿರ್ಣಾಯಕ ಎಂದು ಅವರು ನ್ಯೂಯಾರ್ಕ್ ಟೈಮ್ಸ್‌ನ ಪತ್ರಿಕಾ ವರದಿಯೊಂದನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಅಮೇರಿಕದ ಕ್ಯಾಲಿಫೋರ್ನಿಯ ರಾಜ್ಯದ ಬೇಕರ್ಸ್‌ಫೀಲ್ಡ್ ನಗರದ ಮೇಯರ್ ಕೆರೆನ್ ಗೌ ಕಿಸಾನ್ ಏಕತಾ ಜಿಂದಾಬಾದ್ ಹೆಸರಿನ ವಿಡಿಯೋವೊಂದನ್ನು ಮಾಡಿ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ ಎಂದು ಅಸೋಸಿಯೇಟ್ಸ್‌‌ ಟೈಮ್ಸ್‌ ವರದಿ ಮಾಡಿದೆ.

ಆ ವಿಡಿಯೋದಲ್ಲಿ “ಭಾರತದ ರೈತರೆ, ನಿಮಗೆ ಶುಭಾಶಯಗಳು. ನಾನು ಭಾರತದಲ್ಲಿ ಜನಿಸಿದವಳು. ಭಾರತದ ಪುತ್ರಿಯಾಗಿ ನನ್ನ ಮಾತೃದೇಶದ ರೈತರ ಸ್ಥಿತಿಗತಿ ಬಗ್ಗೆ ನನಗೆ ಬಹಳ ಕಳವಳವಾಗಿದೆ. ನಾನು ನಿಮ್ಮ ಬೆಂಬಲಕ್ಕೆ ಇದ್ದೇನೆ. ನಮ್ಮ ಬೇಕರ್ಸ್‌ಫೀಲ್ಡ್ ನಗರವೊಂದು ರೈತಾಪಿ ಸೀಮೆ. ರೈತರ ಮಹತ್ವ ಎಷ್ಟೆನ್ನುವುದು ನಮಗೆ ಚೆನ್ನಾಗಿ ಗೊತ್ತಿದೆ. ನೀವು ನಮ್ಮ ಅನ್ನದಾತರು. ನೀವು ಜಗತ್ತಿಗೇ ಊಟ ನೀಡುವವರು” ಎಂದು ಹೇಳಿದ್ದಾರೆ.

ಭಾರತದ ರೈತರಿಗೆ ಶಾಂತಿಯುತವಾಗಿ ಪ್ರತಿಭಟಿಸಲು ಅವಕಾಶ ನೀಡಬೇಕೆಂದೂ, ಅನ್ಯಾಯಯುತವಾಗಿರುವ ಕೃಷಿ ಕಾಯ್ದೆಗಳನ್ನು ರದ್ದುಪಡಿಸಬೇಕೆಂದೂ ನಾನು ಭಾರತ ಸರ್ಕಾರವನ್ನು ಒತ್ತಾಯಿಸುತ್ತೇನೆ. ಕಿಸಾನ್ ಏಕತಾ ಜಿಂದಾಬಾದ್ ಎಂದು ವಿಡಿಯೋದಲ್ಲಿ ಅವರು ತಿಳಿಸಿದ್ದಾರೆ.

ಅಮೆರಿಕ ಸಂಸತ್ತಿನ ಇಂಡಿಯಾ ಕಾಕಸ್‌ನ ಸಹ-ಅಧ್ಯಕ್ಷ, ಸಂಸದ ಬ್ರಾಡ್ ಶೆರ್ಮನ್ ಅವರು ಭಾರತೀಯ ರೈತರ ಪ್ರತಿಭಟನೆ ಕುರಿತಂತೆ ಚರ್ಚೆ ಮಾಡಲು ಒಂದು ಸಭೆ ಕರೆದಿದ್ದಾರೆ. ಪ್ರಜಾಪ್ರಭುತ್ವದ ಬೇರುಗಳನ್ನು ಕಾಪಾಡಿಕೊಳ್ಳಲಾಗಿದೆಯೇ? ಪ್ರತಿಭಟನಾಕಾರರಿಗೆ ಶಾಂತಿಯುತವಾಗಿ ಪ್ರತಿಭಟಿಸಲು ಅವಕಾಶ ನೀಡಲಾಗಿದೆಯೇ? ಪ್ರತಿಭಟನಾಕಾರರಿಗೆ ಇಂಟರ್ನೆಟ್ ಲಭ್ಯವಿದೆಯೇ ಮತ್ತು ಪ್ರತಿಭಟನಾಕಾರರು ಪತ್ರಕರ್ತರನ್ನು ಭೇಟಿ ಮಾಡಲು ಅವಕಾಶ ಕಲ್ಪಿಸಲಾಗಿದೆಯೇ ಎಂಬುದನ್ನು ಖಚಿತಪಡಿಸಬೇಕು” ಎಂದು ಬ್ರಾಡ್ ಶೆರ್ಮನ್ ಹೇಳಿದ್ದಾರೆ.

ಪಾಪ್ ತಾರೆ ರಿಹಾನ್ನ ನಾವು ವಿಷಯದ ಕುರಿತು ಮಾತನಾಡಬಾರದೇಕೆ ಎಂದು ರೈತರ ಹೋರಾಟವನ್ನು ಉಲ್ಲೇಖಿಸಿದ ನಂತರ ಈ ಚಳವಳಿಗೆ ವಿಶ್ವದಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.


ಇದನ್ನೂ ಓದಿ : ಭಾರತೀಯ ರೈತರ ಪರ ಧ್ವನಿಯೆತ್ತಿದ ಅಮೆರಿಕ ಸಂಸದರ ಗುಂಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...