Homeಚಳವಳಿಹರಿಯಾಣದಲ್ಲಿ ಬಿಜೆಪಿ ನಾಯಕರಿಗೆ ಮತ್ತೆ ಮುಖಭಂಗ: ಮುಂದುವರೆದ ರೈತರ ಪ್ರತಿಭಟನೆ

ಹರಿಯಾಣದಲ್ಲಿ ಬಿಜೆಪಿ ನಾಯಕರಿಗೆ ಮತ್ತೆ ಮುಖಭಂಗ: ಮುಂದುವರೆದ ರೈತರ ಪ್ರತಿಭಟನೆ

- Advertisement -
- Advertisement -

ಹರಿಯಾಣದಲ್ಲಿ ಎರಡನೇ ದಿನವೂ ಬಿಜೆಪಿ, ಅದರ ಮಿತ್ರ ಪಕ್ಷಗಳು ಮತ್ತು ರಾಜ್ಯದ ಬಿಜೆಪಿ ನಾಯಕರ ವಿರುದ್ಧ ರೈತರು ಪ್ರತಿಭಟನೆ ಮುಂದುವರೆಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ- ಜೆಜೆಪಿ ನಾಯಕರು ನಡೆಸಲು ನಿರ್ಧರಿಸಿರುವ ಎಲ್ಲಾ ಕಾರ್ಯಕ್ರಮಗಳಲ್ಲಿ ಕಪ್ಪು ಧ್ವಜಗಳನ್ನು ತೋರಿಸಿ ಕಾರ್ಯಕ್ರಮದಿಂದ ವಾಪಸ್ ತೆರಳುವಂತೆ ಮಾಡಲಾಗುತ್ತಿದೆ.

ರಾಜ್ಯ ಸಹಕಾರ ಸಚಿವ ಬನ್ವಾರಿ ಲಾಲ್ ಹಾಜರಿದ್ದ ಫತೇಹಾಬಾದ್ ಜಿಲ್ಲೆಯ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಪ್ರತಿಭಟನಾಕಾರರು ಕಪ್ಪು ಧ್ವಜಗಳನ್ನು ಹಾರಿಸಿ ಪ್ರತಿಭಟನೆ ನಡೆಸಿದ್ದಾರೆ. ಜಜ್ಜರ್‌ನಲ್ಲಿ ನಡೆದ ಮತ್ತೊಂದು ಕಾರ್ಯಕ್ರಮದಲ್ಲಿಯೂ ಇದೇ ರೀತಿ ಪ್ರತಿಭಟನೆ ನಡೆಸಲಾಗಿದೆ.

ಹಿಸಾರ್ ಮತ್ತು ಯಮುನಾನಗರ್ ಜಿಲ್ಲೆಗಳಲ್ಲಿ ಶನಿವಾರ ನಡೆಸಿದ್ದ ತಯಾರಿಯನ್ನೇ ಪೊಲೀಸರು ಇಲ್ಲಿಯೂ ಮಾಡಿಕೊಂಡಿದ್ದರು. ರೈತರು ಪ್ರತಿಭಟನೆ ನಡೆಸುತ್ತಾರೆ ಎಂಬ ನಿರೀಕ್ಷೆಯಲ್ಲಿ ಸಾಕಷ್ಟು ಪೊಲೀಸರನ್ನು ನಿಯೋಜಿಸಿ, ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿತ್ತು. ಆದರೆ, ಬ್ಯಾರಿಕೇಡ್‌ಗಳನ್ನು ತಳ್ಳಿ ಪ್ರತಿಭಟನೆ ನಡೆಸಿದ ರೈತರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿದೆ.

ಇದನ್ನೂ ಓದಿ: ಜ.26 ರ ಘಟನೆ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆದರೆ, ವಿಶ್ವಸಂಸ್ಥೆ ಬಳಿ ಹೋಗುವುದಿಲ್ಲ-ರಾಕೇಶ್ ಟಿಕಾಯತ್

ಬಿಜೆಪಿ ಕಾರ್ಯಕರ್ತರನ್ನು ಒಳಗೊಂಡ ಜಜ್ಜರ್ ಕಾರ್ಯಕ್ರಮದಲ್ಲಿ ಸಂಸದ ಡಾ.ಅರವಿಂದ್ ಶರ್ಮಾ, ಪ್ರದೇಶದ ಉಸ್ತುವಾರಿ ವಿನೋದ್ ತಾವ್ಡೆ ಮತ್ತು ಬಿಜೆಪಿ ರಾಜ್ಯ ಅಧ್ಯಕ್ಷ ಓಂ ಪ್ರಕಾಶ್ ಧನ್ಖಾದ್ ಭಾಗವಹಿಸಬೇಕಿತ್ತು.

ಜಿಲ್ಲೆಯಲ್ಲಿ ಕಾರ್ಯಕ್ರಮ ನಡೆಯುವುದನ್ನು ರಹಸ್ಯವಾಗಿಡಲಾಗಿತ್ತು. ಆದರೆ, ಹೇಗೊ ಮಾಹಿತಿ ಪಡೆದ ರೈತರು ಕಾರ್ಯಕ್ರಮ ಸ್ಥಳವನ್ನು ತಲುಪಲು ಯಶಸ್ವಿಯಾಗಿ, ಪ್ರತಿಭಟನೆ ನಡೆಸಿದ್ದಾರೆ.

ಈ ತಿಂಗಳಿನಲ್ಲಿ ಬಿಜೆಪಿ ರಾಜ್ಯದಾದ್ಯಂತ ಸರಣಿ ಕಾರ್ಯಕ್ರಮಗಳನ್ನು ಯೋಜಿಸಿದೆ, ಈ ಕಾರ್ಯಕ್ರಮಗಳನ್ನು ಗುರಿಯಾಗಿಸಿಕೊಂಡಿರುವ ರೈತರು ಕಾರ್ಯಕ್ರಮಗಳ ಸ್ಥಳಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹರಿಯಾಣದಲ್ಲಿ ಯಾವುದೇ ಸಾರ್ವಜನಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಬಿಜೆಪಿ-ಜನ್ನಾಯಕ್ ಜನತಾ ಪಕ್ಷದ ಮುಖಂಡರಿಗೆ ಅವಕಾಶ ನೀಡದಂತೆ ರೈತರು ಈ ಹಿಂದೆ ಕರೆ ನೀಡಿದ್ದರು.

ಕಳೆದ 8 ತಿಂಗಳಿನಿಂದ ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ಲಕ್ಷಾಂತರ ರೈತರು ದೆಹಲಿಯ ಸಿಂಘು, ಟಿಕ್ರಿ, ಗಾಝಿಪುರ್‌ ಮತ್ತು ರಾಜಸ್ಥಾನದ ಶಹಾಜಾನ್‌ಪುರ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹರಿಯಾಣ, ಪಂಜಾಬ್, ರಾಜಸ್ಥಾನ, ಉತ್ತರಪ್ರದೇಶಗಳಲ್ಲಿಯೂ ಪ್ರತಿಭಟನೆ ನಡೆಯುತ್ತಿದೆ.


ಇದನ್ನೂ ಓದಿ: ಕೇಂದ್ರ ಚರ್ಚೆ ನಡೆಸಲು ಬಯಸಿದರೆ, ರೈತರಿಗೆ ಷರತ್ತು ವಿಧಿಸುವಂತಿಲ್ಲ- ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...