Homeಚಳವಳಿಹರಿಯಾಣದಲ್ಲಿ ಬಿಜೆಪಿ ನಾಯಕರಿಗೆ ಮತ್ತೆ ಮುಖಭಂಗ: ಮುಂದುವರೆದ ರೈತರ ಪ್ರತಿಭಟನೆ

ಹರಿಯಾಣದಲ್ಲಿ ಬಿಜೆಪಿ ನಾಯಕರಿಗೆ ಮತ್ತೆ ಮುಖಭಂಗ: ಮುಂದುವರೆದ ರೈತರ ಪ್ರತಿಭಟನೆ

- Advertisement -
- Advertisement -

ಹರಿಯಾಣದಲ್ಲಿ ಎರಡನೇ ದಿನವೂ ಬಿಜೆಪಿ, ಅದರ ಮಿತ್ರ ಪಕ್ಷಗಳು ಮತ್ತು ರಾಜ್ಯದ ಬಿಜೆಪಿ ನಾಯಕರ ವಿರುದ್ಧ ರೈತರು ಪ್ರತಿಭಟನೆ ಮುಂದುವರೆಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ- ಜೆಜೆಪಿ ನಾಯಕರು ನಡೆಸಲು ನಿರ್ಧರಿಸಿರುವ ಎಲ್ಲಾ ಕಾರ್ಯಕ್ರಮಗಳಲ್ಲಿ ಕಪ್ಪು ಧ್ವಜಗಳನ್ನು ತೋರಿಸಿ ಕಾರ್ಯಕ್ರಮದಿಂದ ವಾಪಸ್ ತೆರಳುವಂತೆ ಮಾಡಲಾಗುತ್ತಿದೆ.

ರಾಜ್ಯ ಸಹಕಾರ ಸಚಿವ ಬನ್ವಾರಿ ಲಾಲ್ ಹಾಜರಿದ್ದ ಫತೇಹಾಬಾದ್ ಜಿಲ್ಲೆಯ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಪ್ರತಿಭಟನಾಕಾರರು ಕಪ್ಪು ಧ್ವಜಗಳನ್ನು ಹಾರಿಸಿ ಪ್ರತಿಭಟನೆ ನಡೆಸಿದ್ದಾರೆ. ಜಜ್ಜರ್‌ನಲ್ಲಿ ನಡೆದ ಮತ್ತೊಂದು ಕಾರ್ಯಕ್ರಮದಲ್ಲಿಯೂ ಇದೇ ರೀತಿ ಪ್ರತಿಭಟನೆ ನಡೆಸಲಾಗಿದೆ.

ಹಿಸಾರ್ ಮತ್ತು ಯಮುನಾನಗರ್ ಜಿಲ್ಲೆಗಳಲ್ಲಿ ಶನಿವಾರ ನಡೆಸಿದ್ದ ತಯಾರಿಯನ್ನೇ ಪೊಲೀಸರು ಇಲ್ಲಿಯೂ ಮಾಡಿಕೊಂಡಿದ್ದರು. ರೈತರು ಪ್ರತಿಭಟನೆ ನಡೆಸುತ್ತಾರೆ ಎಂಬ ನಿರೀಕ್ಷೆಯಲ್ಲಿ ಸಾಕಷ್ಟು ಪೊಲೀಸರನ್ನು ನಿಯೋಜಿಸಿ, ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿತ್ತು. ಆದರೆ, ಬ್ಯಾರಿಕೇಡ್‌ಗಳನ್ನು ತಳ್ಳಿ ಪ್ರತಿಭಟನೆ ನಡೆಸಿದ ರೈತರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿದೆ.

ಇದನ್ನೂ ಓದಿ: ಜ.26 ರ ಘಟನೆ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆದರೆ, ವಿಶ್ವಸಂಸ್ಥೆ ಬಳಿ ಹೋಗುವುದಿಲ್ಲ-ರಾಕೇಶ್ ಟಿಕಾಯತ್

ಬಿಜೆಪಿ ಕಾರ್ಯಕರ್ತರನ್ನು ಒಳಗೊಂಡ ಜಜ್ಜರ್ ಕಾರ್ಯಕ್ರಮದಲ್ಲಿ ಸಂಸದ ಡಾ.ಅರವಿಂದ್ ಶರ್ಮಾ, ಪ್ರದೇಶದ ಉಸ್ತುವಾರಿ ವಿನೋದ್ ತಾವ್ಡೆ ಮತ್ತು ಬಿಜೆಪಿ ರಾಜ್ಯ ಅಧ್ಯಕ್ಷ ಓಂ ಪ್ರಕಾಶ್ ಧನ್ಖಾದ್ ಭಾಗವಹಿಸಬೇಕಿತ್ತು.

ಜಿಲ್ಲೆಯಲ್ಲಿ ಕಾರ್ಯಕ್ರಮ ನಡೆಯುವುದನ್ನು ರಹಸ್ಯವಾಗಿಡಲಾಗಿತ್ತು. ಆದರೆ, ಹೇಗೊ ಮಾಹಿತಿ ಪಡೆದ ರೈತರು ಕಾರ್ಯಕ್ರಮ ಸ್ಥಳವನ್ನು ತಲುಪಲು ಯಶಸ್ವಿಯಾಗಿ, ಪ್ರತಿಭಟನೆ ನಡೆಸಿದ್ದಾರೆ.

ಈ ತಿಂಗಳಿನಲ್ಲಿ ಬಿಜೆಪಿ ರಾಜ್ಯದಾದ್ಯಂತ ಸರಣಿ ಕಾರ್ಯಕ್ರಮಗಳನ್ನು ಯೋಜಿಸಿದೆ, ಈ ಕಾರ್ಯಕ್ರಮಗಳನ್ನು ಗುರಿಯಾಗಿಸಿಕೊಂಡಿರುವ ರೈತರು ಕಾರ್ಯಕ್ರಮಗಳ ಸ್ಥಳಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹರಿಯಾಣದಲ್ಲಿ ಯಾವುದೇ ಸಾರ್ವಜನಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಬಿಜೆಪಿ-ಜನ್ನಾಯಕ್ ಜನತಾ ಪಕ್ಷದ ಮುಖಂಡರಿಗೆ ಅವಕಾಶ ನೀಡದಂತೆ ರೈತರು ಈ ಹಿಂದೆ ಕರೆ ನೀಡಿದ್ದರು.

ಕಳೆದ 8 ತಿಂಗಳಿನಿಂದ ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ಲಕ್ಷಾಂತರ ರೈತರು ದೆಹಲಿಯ ಸಿಂಘು, ಟಿಕ್ರಿ, ಗಾಝಿಪುರ್‌ ಮತ್ತು ರಾಜಸ್ಥಾನದ ಶಹಾಜಾನ್‌ಪುರ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹರಿಯಾಣ, ಪಂಜಾಬ್, ರಾಜಸ್ಥಾನ, ಉತ್ತರಪ್ರದೇಶಗಳಲ್ಲಿಯೂ ಪ್ರತಿಭಟನೆ ನಡೆಯುತ್ತಿದೆ.


ಇದನ್ನೂ ಓದಿ: ಕೇಂದ್ರ ಚರ್ಚೆ ನಡೆಸಲು ಬಯಸಿದರೆ, ರೈತರಿಗೆ ಷರತ್ತು ವಿಧಿಸುವಂತಿಲ್ಲ- ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....