Homeಚಳವಳಿಸಚಿವನ ಪುತ್ರ ಹಾಗೂ ಆತನ ಗೂಂಡಾಗಳಿಂದ ರೈತರ ಹತ್ಯೆ: ಸಂಯುಕ್ತ ಕಿಸಾನ್‌ ಮೋರ್ಚಾ

ಸಚಿವನ ಪುತ್ರ ಹಾಗೂ ಆತನ ಗೂಂಡಾಗಳಿಂದ ರೈತರ ಹತ್ಯೆ: ಸಂಯುಕ್ತ ಕಿಸಾನ್‌ ಮೋರ್ಚಾ

ನಾಲ್ವರು ರೈತರ ಹತ್ಯೆಗೆ ಸಂಬಂಧಿಸಿದಂತೆ ಮೂರು ಪ್ರಮುಖ ಬೇಡಿಕೆಗಳನ್ನು ರೈತ ಸಮುದಾಯ ಸರ್ಕಾರದ ಮುಂದಿಟ್ಟಿದೆ.

- Advertisement -
- Advertisement -

“ಕೇಂದ್ರ ಸಚಿವ ಅಜಯ್‌ ಮಿಶ್ರಾ ಭೇಟಿಯನ್ನು ವಿರೋಧಿಸಿ ಉತ್ತರ ಪ್ರದೇಶದ ಲಿಖಿಮ್‌ಪುರ ಖೇರಿ ಜಿಲ್ಲೆಯಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ವಾಹನ ಹತ್ತಿಸಿ ನಾಲ್ವರು ರೈತರನ್ನು ಹತ್ಯೆ ಮಾಡಲಾಗಿದೆ. ಮಿಶ್ರಾ ಅವರ ಪುತ್ರ ಹಾಗೂ ಆತನ ಗೂಂಡಾಗಳು ಮೂವರು ರೈತರ ಮೇಲೆ ವಾಹನ ಹತ್ತಿಸಿದ್ದಾರೆ. ಒಬ್ಬರನ್ನು ಗುಂಡಿಕ್ಕಿ ಕೊಲ್ಲಲಾಗಿದೆ” ಎಂದು ಸಂಯುಕ್ತ ಕಿಸಾನ್‌ ಮೋರ್ಚಾ ಹೇಳಿದೆ.

ಭಾನುವಾರ ನಡೆದ ಘಟನೆಗೆ ಸಂಬಂಧಿಸಿದಂತೆ ವರ್ಚ್ಯೂವಲ್‌‌ ವೇದಿಕೆ ಮೂಲಕ ಪತ್ರಿಕಾಗೋಷ್ಠಿ ನಡೆಸಿರುವ ಸಂಯುಕ್ತ ಕಿಸಾನ್‌ ಮೋರ್ಚಾ, ಘಟನೆಗೆ ಸಂಬಂಧಿಸಿದಂತೆ ಪ್ರತ್ಯಕ್ಷದರ್ಶಿಗಳ ಹೇಳಿಕೆಗಳನ್ನು ಬಿಡುಗಡೆ ಮಾಡಿದೆ.

ಘಟನಾ ಸ್ಥಳದಲ್ಲಿದ್ದ ಸೀತಾಪುರದ ರಿಚಾ ಸಿಂಗ್‌‌ ಹೇಳಿಕೆ ನೀಡಿದ್ದು, “ಮಿಶ್ರಾ ಇಳಿಯಲಿರುವ ಹೆಲಿಪ್ಯಾಡ್‌ ಬಳಿ ರೈತರು ಸೇರಿದ್ದರು ಮತ್ತು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರು. ಸಚಿವರಿಗೆ ಕಪ್ಪು ಬಾವುಟಗಳನ್ನು ಪ್ರದರ್ಶಿಸಿದ್ದರು. ಮಿಶ್ರಾ ಬಂದಿಳಿದು ಕಾರ್ಯಕ್ರಮಕ್ಕೆ ತೆರಳಿದರು. ನಾವು ಅವರನ್ನು ಹಿಂಬಾಲಿಸಲಿಲ್ಲ. ನಮ್ಮ ಪ್ರತಿಭಟನೆಯನ್ನು ಹೆಲಿಪ್ಯಾಡ್‌ನಲ್ಲೇ ಮುಂದುವರಿಸಿದೆವು. ಕೆಲವರು ರೈತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸಚಿವರು ಹೋದ ಬಳಿಕವೂ ನಮ್ಮ ಘೋಷಣೆಗಳನ್ನು ಕೂಗಿದೆವು. ನಂತರ ನಮ್ಮ ದಾರಿಯಲ್ಲಿ ನಾವು ನಡೆದೆವು” ಎಂದಿದ್ದಾರೆ.

ಇದನ್ನೂ ಓದಿರಿ: ಸಚಿವರ ಬೆಂಗಾವಲು ವಾಹನ ಹತ್ತಿಸಿ ನಾಲ್ವರು ರೈತರ ಹತ್ಯೆ; ನಂತರದ ಪ್ರತಿರೋಧದಲ್ಲಿ ನಾಲ್ವರ ಸಾವು

ಗುಂಡಿನ ದಾಳಿ ಹಾಗೂ ಹತ್ಯೆ ನಡೆದಾಗ ಸ್ಥಳದಲ್ಲಿದ್ದ ರಿಚಾ ಸಿಂಗ್ ಜೊತೆ ಇದ್ದ ಗುರುಮ್ನೀತ್‌‌ ಮಂಗತ್‌ ಅವರೂ ಹೇಳಿಕೆ ನೀಡಿದ್ದು, “ಸಚಿವರು ಹೋದ ಬಳಿಕ ರೈತರು ಚದುರಿದರು. ಆ ವೇಳೆಗೆ ಸಚಿವರ ಮಗ ಆಶೀಶ್‌ ಮಿಶ್ರಾ, ಆತನ ಸಹೋದರ ಹಾಗೂ ಕೆಲವು ಗೂಂಡಾಗಳು ಮೂರು ಕಾರುಗಳಲ್ಲಿ ಸುಮಾರು 3.15ರ ವೇಳೆಗೆ ಬಂದರು. ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿಸಿದರು. ರೈತರ ಮೇಲೆ ನುಗ್ಗಿಸಿದರು. ಜೊತೆಗೆ ರೈತರ ಮೇಲೆ ಬಂದೂಕಿನ ಮಳೆಗರೆದರು. ಹತ್ತಿರದಲ್ಲಿದ್ದ ರೈತನಿಗೆ ಗುಂಡು ತಾಕಿ, ಆತ ಮೃತಪಟ್ಟ” ಎಂದು ಹೇಳಿದ್ದಾರೆ.

ಆಕ್ಟೋಬರ್‌ 4ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ರಾಷ್ಟ್ರದ್ಯಾಂತ ರೈತರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸುವಂತೆ ಸಂಯುಕ್ತ ಕಿಸಾನ್‌ ಮೋರ್ಚಾ ಮನವಿ ಮಾಡಿದೆ. ರೈತರು ಮೂರು ಬೇಡಿಕೆಗಳನ್ನು ಮುಂದಿಡಲು ಕೋರಿದೆ.

ಅಜಯ್‌ ಮಿಶ್ರಾ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸಬೇಕು, ಕೊಲೆ ಮಾಡಿದ ಕಾರಣ ಆಶೀಶ್‌ ಮಿಶ್ರಾ ಹಾಗೂ ಇತರರ ಮೇಲೆ ಐಪಿಸಿ ಸೆಕ್ಷನ್‌ 302 ಪ್ರಕರಣ ದಾಖಲಿಸಬೇಕು, ಸುಪ್ರೀಂಕೋರ್ಟ್‌ ನ್ಯಾಯಾಧೀಶರ ನೇತೃತ್ವದಲ್ಲಿ ಪ್ರಕರಣ ತನಿಖೆಯಾಗಬೇಕೇ ಹೊರತು, ಉತ್ತರ ಪ್ರದೇಶದ ಪೊಲೀಸರಿಗೆ ವಹಿಸಬಾರದು ಎಂದು ಕಿಸಾನ್‌ ಮೋರ್ಚಾ ಮೂರುಪ್ರಮುಖ ಬೇಡಿಕೆಗಳನ್ನು ಇಟ್ಟಿದೆ.

“ಅಜಯ್‌ ಮಿಶ್ರಾ ಹಾಗೂ ಹರಿಯಾಣ ಮುಖ್ಯಮಂತ್ರಿ ಮನೋಹರ ಲಾಲ್ ಖಟ್ಟರ್‌ ಥರದವರು ಪ್ರತಿಭಟನಾನಿರತ ರೈತರನ್ನು ಪ್ರಚೋದಿಸಲು ಯತ್ನಿಸುತ್ತಿದ್ದಾರೆ.  ಆದರೆ ನಾವು ಶಾಂತಿಯುತ ಹೋರಾಟ ಮುಂದುವರಿಸುತ್ತೇವೆ” ಎಂದು ರೈತ ನಾಯಕ ಡಾ.ದರ್ಶನ್‌ ಪಾಲ್‌ ಹೇಳಿದ್ದಾರೆ.

ಇದನ್ನೂ ಓದಿರಿ: ನಾಲ್ವರು ರೈತರ ಹತ್ಯೆ: ಕೇಂದ್ರ ಸಚಿವ ಮತ್ತು ಮಗನ ಮೇಲೆ ಕೊಲೆ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...