Homeಚಳವಳಿಸಚಿವನ ಪುತ್ರ ಹಾಗೂ ಆತನ ಗೂಂಡಾಗಳಿಂದ ರೈತರ ಹತ್ಯೆ: ಸಂಯುಕ್ತ ಕಿಸಾನ್‌ ಮೋರ್ಚಾ

ಸಚಿವನ ಪುತ್ರ ಹಾಗೂ ಆತನ ಗೂಂಡಾಗಳಿಂದ ರೈತರ ಹತ್ಯೆ: ಸಂಯುಕ್ತ ಕಿಸಾನ್‌ ಮೋರ್ಚಾ

ನಾಲ್ವರು ರೈತರ ಹತ್ಯೆಗೆ ಸಂಬಂಧಿಸಿದಂತೆ ಮೂರು ಪ್ರಮುಖ ಬೇಡಿಕೆಗಳನ್ನು ರೈತ ಸಮುದಾಯ ಸರ್ಕಾರದ ಮುಂದಿಟ್ಟಿದೆ.

- Advertisement -
- Advertisement -

“ಕೇಂದ್ರ ಸಚಿವ ಅಜಯ್‌ ಮಿಶ್ರಾ ಭೇಟಿಯನ್ನು ವಿರೋಧಿಸಿ ಉತ್ತರ ಪ್ರದೇಶದ ಲಿಖಿಮ್‌ಪುರ ಖೇರಿ ಜಿಲ್ಲೆಯಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ವಾಹನ ಹತ್ತಿಸಿ ನಾಲ್ವರು ರೈತರನ್ನು ಹತ್ಯೆ ಮಾಡಲಾಗಿದೆ. ಮಿಶ್ರಾ ಅವರ ಪುತ್ರ ಹಾಗೂ ಆತನ ಗೂಂಡಾಗಳು ಮೂವರು ರೈತರ ಮೇಲೆ ವಾಹನ ಹತ್ತಿಸಿದ್ದಾರೆ. ಒಬ್ಬರನ್ನು ಗುಂಡಿಕ್ಕಿ ಕೊಲ್ಲಲಾಗಿದೆ” ಎಂದು ಸಂಯುಕ್ತ ಕಿಸಾನ್‌ ಮೋರ್ಚಾ ಹೇಳಿದೆ.

ಭಾನುವಾರ ನಡೆದ ಘಟನೆಗೆ ಸಂಬಂಧಿಸಿದಂತೆ ವರ್ಚ್ಯೂವಲ್‌‌ ವೇದಿಕೆ ಮೂಲಕ ಪತ್ರಿಕಾಗೋಷ್ಠಿ ನಡೆಸಿರುವ ಸಂಯುಕ್ತ ಕಿಸಾನ್‌ ಮೋರ್ಚಾ, ಘಟನೆಗೆ ಸಂಬಂಧಿಸಿದಂತೆ ಪ್ರತ್ಯಕ್ಷದರ್ಶಿಗಳ ಹೇಳಿಕೆಗಳನ್ನು ಬಿಡುಗಡೆ ಮಾಡಿದೆ.

ಘಟನಾ ಸ್ಥಳದಲ್ಲಿದ್ದ ಸೀತಾಪುರದ ರಿಚಾ ಸಿಂಗ್‌‌ ಹೇಳಿಕೆ ನೀಡಿದ್ದು, “ಮಿಶ್ರಾ ಇಳಿಯಲಿರುವ ಹೆಲಿಪ್ಯಾಡ್‌ ಬಳಿ ರೈತರು ಸೇರಿದ್ದರು ಮತ್ತು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರು. ಸಚಿವರಿಗೆ ಕಪ್ಪು ಬಾವುಟಗಳನ್ನು ಪ್ರದರ್ಶಿಸಿದ್ದರು. ಮಿಶ್ರಾ ಬಂದಿಳಿದು ಕಾರ್ಯಕ್ರಮಕ್ಕೆ ತೆರಳಿದರು. ನಾವು ಅವರನ್ನು ಹಿಂಬಾಲಿಸಲಿಲ್ಲ. ನಮ್ಮ ಪ್ರತಿಭಟನೆಯನ್ನು ಹೆಲಿಪ್ಯಾಡ್‌ನಲ್ಲೇ ಮುಂದುವರಿಸಿದೆವು. ಕೆಲವರು ರೈತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸಚಿವರು ಹೋದ ಬಳಿಕವೂ ನಮ್ಮ ಘೋಷಣೆಗಳನ್ನು ಕೂಗಿದೆವು. ನಂತರ ನಮ್ಮ ದಾರಿಯಲ್ಲಿ ನಾವು ನಡೆದೆವು” ಎಂದಿದ್ದಾರೆ.

ಇದನ್ನೂ ಓದಿರಿ: ಸಚಿವರ ಬೆಂಗಾವಲು ವಾಹನ ಹತ್ತಿಸಿ ನಾಲ್ವರು ರೈತರ ಹತ್ಯೆ; ನಂತರದ ಪ್ರತಿರೋಧದಲ್ಲಿ ನಾಲ್ವರ ಸಾವು

ಗುಂಡಿನ ದಾಳಿ ಹಾಗೂ ಹತ್ಯೆ ನಡೆದಾಗ ಸ್ಥಳದಲ್ಲಿದ್ದ ರಿಚಾ ಸಿಂಗ್ ಜೊತೆ ಇದ್ದ ಗುರುಮ್ನೀತ್‌‌ ಮಂಗತ್‌ ಅವರೂ ಹೇಳಿಕೆ ನೀಡಿದ್ದು, “ಸಚಿವರು ಹೋದ ಬಳಿಕ ರೈತರು ಚದುರಿದರು. ಆ ವೇಳೆಗೆ ಸಚಿವರ ಮಗ ಆಶೀಶ್‌ ಮಿಶ್ರಾ, ಆತನ ಸಹೋದರ ಹಾಗೂ ಕೆಲವು ಗೂಂಡಾಗಳು ಮೂರು ಕಾರುಗಳಲ್ಲಿ ಸುಮಾರು 3.15ರ ವೇಳೆಗೆ ಬಂದರು. ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿಸಿದರು. ರೈತರ ಮೇಲೆ ನುಗ್ಗಿಸಿದರು. ಜೊತೆಗೆ ರೈತರ ಮೇಲೆ ಬಂದೂಕಿನ ಮಳೆಗರೆದರು. ಹತ್ತಿರದಲ್ಲಿದ್ದ ರೈತನಿಗೆ ಗುಂಡು ತಾಕಿ, ಆತ ಮೃತಪಟ್ಟ” ಎಂದು ಹೇಳಿದ್ದಾರೆ.

ಆಕ್ಟೋಬರ್‌ 4ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ರಾಷ್ಟ್ರದ್ಯಾಂತ ರೈತರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸುವಂತೆ ಸಂಯುಕ್ತ ಕಿಸಾನ್‌ ಮೋರ್ಚಾ ಮನವಿ ಮಾಡಿದೆ. ರೈತರು ಮೂರು ಬೇಡಿಕೆಗಳನ್ನು ಮುಂದಿಡಲು ಕೋರಿದೆ.

ಅಜಯ್‌ ಮಿಶ್ರಾ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸಬೇಕು, ಕೊಲೆ ಮಾಡಿದ ಕಾರಣ ಆಶೀಶ್‌ ಮಿಶ್ರಾ ಹಾಗೂ ಇತರರ ಮೇಲೆ ಐಪಿಸಿ ಸೆಕ್ಷನ್‌ 302 ಪ್ರಕರಣ ದಾಖಲಿಸಬೇಕು, ಸುಪ್ರೀಂಕೋರ್ಟ್‌ ನ್ಯಾಯಾಧೀಶರ ನೇತೃತ್ವದಲ್ಲಿ ಪ್ರಕರಣ ತನಿಖೆಯಾಗಬೇಕೇ ಹೊರತು, ಉತ್ತರ ಪ್ರದೇಶದ ಪೊಲೀಸರಿಗೆ ವಹಿಸಬಾರದು ಎಂದು ಕಿಸಾನ್‌ ಮೋರ್ಚಾ ಮೂರುಪ್ರಮುಖ ಬೇಡಿಕೆಗಳನ್ನು ಇಟ್ಟಿದೆ.

“ಅಜಯ್‌ ಮಿಶ್ರಾ ಹಾಗೂ ಹರಿಯಾಣ ಮುಖ್ಯಮಂತ್ರಿ ಮನೋಹರ ಲಾಲ್ ಖಟ್ಟರ್‌ ಥರದವರು ಪ್ರತಿಭಟನಾನಿರತ ರೈತರನ್ನು ಪ್ರಚೋದಿಸಲು ಯತ್ನಿಸುತ್ತಿದ್ದಾರೆ.  ಆದರೆ ನಾವು ಶಾಂತಿಯುತ ಹೋರಾಟ ಮುಂದುವರಿಸುತ್ತೇವೆ” ಎಂದು ರೈತ ನಾಯಕ ಡಾ.ದರ್ಶನ್‌ ಪಾಲ್‌ ಹೇಳಿದ್ದಾರೆ.

ಇದನ್ನೂ ಓದಿರಿ: ನಾಲ್ವರು ರೈತರ ಹತ್ಯೆ: ಕೇಂದ್ರ ಸಚಿವ ಮತ್ತು ಮಗನ ಮೇಲೆ ಕೊಲೆ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...