Homeಚಳವಳಿರೈತರು ಮೋದಿ ಸರ್ಕಾರದ ಅಹಂಕಾರವನ್ನು ಮಟ್ಟಹಾಕುತ್ತಾರೆ: ಪ್ರತಿಭಟನಾ ನಿರತ ರೈತರು

ರೈತರು ಮೋದಿ ಸರ್ಕಾರದ ಅಹಂಕಾರವನ್ನು ಮಟ್ಟಹಾಕುತ್ತಾರೆ: ಪ್ರತಿಭಟನಾ ನಿರತ ರೈತರು

ರಾಮನ ಕಾಲದಲ್ಲಿ ರಾವಣನ ಅಹಂಕಾರವನ್ನು ಮಟ್ಟಹಾಕಲಾಯಿತು. 100 ಸಹೋದರರನ್ನು ಹೊಂದಿದ್ದ ದುರ್ಯೋಧನನ ಅಹಂಕಾರವನ್ನು ಪಾಂಡವರು ಮಟ್ಟಹಾಕಿದರು. ಅದೇ ರೀತಿ ಮೋದಿ ಸರ್ಕಾರದ ಅಹಂಕಾರವನ್ನು ರೈತರು ಮಟ್ಟಹಾಕುತ್ತಾರೆ

- Advertisement -
- Advertisement -

ಕೇಂದ್ರ ಸರ್ಕಾರದ ರೈತವಿರೋಧಿ ಮಸೂದೆಗಳನ್ನು ವಿರೋಧಿಸಿ ದೇಶದಾದ್ಯಂತ ರೈತರು ಪ್ರತಿಭಟನೆ ನಡೆಸುತ್ತಿದ್ದು, “ರಾಮ, ರಾವಣನ ಅಹಂಕಾರವನ್ನು ಮಟ್ಟಹಾಕಿದಂತೆ, ಮೋದಿ ಸರ್ಕಾರದ ಅಹಂಕಾರವನ್ನು ರೈತರು ಮಟ್ಟಹಾಕುತ್ತಾರೆ” ಎಂದು ರೈತರು ಸರ್ಕಾರದ ವಿರುದ್ಧ ತಮ್ಮ ಆಕ್ರೋಶವನ್ನು ಹೊರಹಾಕಿದರು.  ಹರಿಯಾಣದ ಅಂಬಲಾ ಬಳಿ ರೈಲ್ವೇ ಹಳಿ ಮತ್ತು ರಸ್ತೆಗೆ ಮುತ್ತಿಗೆ ಹಾಕಿರುವ ರೈತರು, ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ಜಮಾಯಿಸಿ ಶುಕ್ರವಾರ ಪ್ರತಿಭಟಿಸಿದರು.

ಸದನಗಳಲ್ಲಿ ಅಂಗೀಕೃತವಾಗಿ ಈಗ ರಾಷ್ಟ್ರಪತಿಗಳ ಒಪ್ಪಿಗೆಗಾಗಿ ಕಾಯುತ್ತಿರುವ ವಿವಾದಾತ್ಮಕ ಕೃಷಿ ಮಸೂದೆಗಳನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿ, ಭಾರತದ ಕಿಸಾನ್ ಯೂನಿಯನ್ (ಬಿಕೆಯು)ನ ನೂರಾರು ರೈತರು ಆರ್ದ್ರತೆಯ ಉಷ್ಣಾಂಶವನ್ನೂ ಲೆಕ್ಕಿಸದೇ ದೆಹಲಿಯತ್ತ ಮೆರವಣಿಗೆ ನಡೆದರು.

ಇದನ್ನೂ ಓದಿ: ಸೆ.27 ರಂದು ಉಡುಪಿಯಲ್ಲಿ ‘ಪೂನಾ ಒಪ್ಪಂದ ದಿನ’ದ ನೆನಪಿನ ಕಾರ್ಯಕ್ರಮ

ವಿರೋಧ ಪಕ್ಷಗಳೂ ಸೇರಿದಂತೆ ಸುಮಾರು 30 ಕ್ಕೂ ಹೆಚ್ಚು ರೈತ ಸಂಘಟನೆಗಳ ಪ್ರತಿಭಟನಾಕಾರರನ್ನು ಪೊಲೀಸರು ನೋಯ್ಡಾ-ಮಯೂರ್ ವಿಹಾರ್ ಗಡಿಯಲ್ಲಿ ತಡೆದು ನಿಲ್ಲಿಸಿದರು.

ಸರ್ಕಾರಕ್ಕೆ ಆಗಬಹುದಾದ ತೊಂದರೆಯನ್ನು ಮನಗಂಡ ದೆಹಲಿ ಪೊಲೀಸರು, ರಾಜಧಾನಿಗೆ ಸಂಪರ್ಕಿಸುವ ರಸ್ತೆಯನ್ನು ಸೀಲ್ ಮಾಡಿದರು. ಹಾಗಾಗಿ ಪ್ರತಿಭಟನಾಕಾರರಿಗೆ ಪ್ರವೇಶ ಅಸಾಧ್ಯವಾಯಿತು. ಆದರೆ ರೈತರು ಮಾಧ್ಯಮಗಳ ಗಮನ ಸೆಳೆದು ತಮ್ಮ ಪ್ರತಿಭಟನೆಯನ್ನು ದಾಖಲಿಸಿದರು.

ಮಸೂದೆಗಳನ್ನು ಹಿಂತೆಗೆದುಕೊಳ್ಳುವುದರ ಜೊತೆಗೆ ಬೆಂಬಲ ಬೆಲೆಯನ್ನು ಕಾನೂನಿನಡಿಯಲ್ಲಿ ತರಬೇಕು ಎಂದು ಪ್ರತಿಭಟನಾ ನಿರತ ರೈತರು ಒತ್ತಾಯಿಸಿದರು. “ವಿರೋಧ ಪಕ್ಷಗಳು ರೈತರನ್ನು ದಾರಿ ತಪ್ಪಿಸಿವೆ” ಎಂಬ ಪ್ರಧಾನಿಯವರ ಹೇಳಿಕೆಯ ಬಗ್ಗೆ ಕೇಳಿದಾಗ ರೈತರ ಆಕ್ರೋಶ ಮತ್ತಷ್ಟು ಹೆಚ್ಚಾಯಿತು ಎಂದು ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ.

ಇದನ್ನೂ ಓದಿ: ಕೃಷಿ ಮಸೂದೆಗಳ ವಿರುದ್ಧ ದೇಶಾದ್ಯಂತ ”ಅನ್ನದಾತ’ರ ಪ್ರತಿಭಟನೆ

2014 ರಲ್ಲಿ ಮತ್ತು 2019 ರಲ್ಲಿ ಬಿಜೆಪಿಗೆ ಮತ ಹಾಕಿದ ಕೆಲವು ರೈತರು, ಮೋದಿ ಸರ್ಕಾರ ತಮಗೆ ಮೋಸ ಮಾಡಿದೆ ಎಂದು ದೂರಿದರು. “ಬಿಜೆಪಿ ಆಯ್ಕೆಯಾಗುವವರೆಗೂ ರೈತರ ಬಗ್ಗೆ ಮಾತನಾಡುತ್ತಿತ್ತು. ಆದರೆ ಈಗ ಅಧಿಕಾರಕ್ಕೆ ಬಂದ ನಂತರ ನಮ್ಮನ್ನು ಮರೆತಿದ್ದಾರೆ. ರೈತರು ಮತ ಚಲಾಯಿಸಿದ ಅದೇ ಮೋದಿ ನಮ್ಮ ವಿರುದ್ಧ ನಿಂತಿದ್ದಾರೆ” ಪ್ರತಿಭಟನಾಕಾರರನ್ನುದ್ದೇಶಿಸಿ ಸಹ ಪ್ರತಿಭಟನಾಕಾರರು ಭಾಷಣ ಮಾಡಿದರು.

“ಕೊರೊನಾ ಸಾಂಕ್ರಾಮಿಕ ಕಾಲದಲ್ಲೂ, ರೈತರು ಎಲ್ಲರಿಗೂ ಆಹಾರವನ್ನು ಒದಗಿಸಿದರು. ವಲಸೆ ಕಾರ್ಮಿಕರು ನಗರದಿಂದ ಪಲಾಯನ ಮಾಡುತ್ತಿರುವಾಗ, ರೈತರು ಅವರಿಗೆ ಆಹಾರವನ್ನು ಒದಗಿಸಿದರು. ಇಂದು ಮೋದಿ ಸರ್ಕಾರ ನಮ್ಮದೇ ಆಹಾರವನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಿದೆ” ಎಂದು ಬಿಕೆಯು ಕಾರ್ಯಕರ್ತರೊಬ್ಬರು ಹೇಳಿದರು.

ಇದನ್ನೂ ಓದಿ: ಕೃಷಿ ಮಸೂದೆಗಳ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ: ರಾಜ್ಯಾದ್ಯಂತ ರಸ್ತೆ ತಡೆ ಪ್ರತಿಭಟನೆ

ಮತ್ತೊಬ್ಬ ರೈತ ಕಾರ್ಯಕರ್ತ ಮತ್ತು ಬಿಕೆಯು ಸದಸ್ಯರೊಬ್ಬರು, “ರಾಮನ ಕಾಲದಲ್ಲಿ ಭೂಮಿಯ ಮತ್ತು ಸ್ವರ್ಗದ ಮೇಲೆ ಅತ್ಯಂತ ಶಕ್ತಿಶಾಲಿ ರಾಜನಾಗಿದ್ದ ರಾವಣನ ಅಹಂಕಾರವನ್ನು ಮಟ್ಟಹಾಕಲಾಯಿತು. 100 ಸಹೋದರರನ್ನು ಹೊಂದಿದ್ದ ದುರ್ಯೋಧನನ ಅಹಂಕಾರವನ್ನು ಪಾಂಡವರು ಮಟ್ಟಹಾಕಿದರು. ಅದೇ ರೀತಿ ಮೋದಿ ಸರ್ಕಾರದ ಅಹಂಕಾರವನ್ನು ರೈತರು ಮಟ್ಟಹಾಕುತ್ತಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಸರ್ಕಾರವು ಮಸೂದೆಗಳನ್ನು ಹಿಂತೆಗೆದುಕೊಂಡರೆ, ನಾವು ನಮ್ಮ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುತ್ತೇವೆ” ಎಂದು ಮತ್ತೊಬ್ಬ ಪ್ರತಿಭಟನಾಕಾರರು ಹೇಳಿದರು.

ಮಸೂದೆಗಳಿಗೆ ತೀವ್ರ ವಿರೋಧ ಮತ್ತು ತೀವ್ರ ಸ್ವರೂಪದ ಪ್ರತಿಭಟನೆಗಳು ನಡೆಸುತ್ತಿರುವ ಪಂಜಾಬ್‌ನಲ್ಲಿ ರೈಲು ಹಳಿಗಳ ಮೇಲೆ ಕುಳಿತು ರೈಲ್​ ರೋಕೋ ಚಳವಳಿ ನಡೆಸುತ್ತಿದ್ದಾರೆ. ಈ ಚಳುವಳಿಯನ್ನು ಸೆ.29ರವರೆಗೂ ಮುಂದುವರೆಸುತ್ತೇವೆ ಎಂದು ರೈತ ಸಂಘದ ಮುಖಂಡರು ತಿಳಿಸಿದ್ದಾರೆ. ಈಗಾಗಲೇ ಉತ್ತರ ರೈಲ್ವೇ ವಿಭಾಗ ಈ ಭಾಗದಲ್ಲಿ ಸಂಚರಿಸುವ ಕೆಲವು ರೈಲುಗಳನ್ನ ರದ್ದುಗೊಳಿಸಿದೆ. ಪಂಜಾಂಬ್​ ಸಿಎಂ ಅಮರೀಂದರ್​ ಸಿಂಗ್​ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಪ್ರತಿಭಟನಾಕಾರಲ್ಲಿ ಮನವಿ ಮಾಡಿದ್ದಾರೆ.


ಇದನ್ನೂ ಓದಿ: ಬೆಂಬಲ ಬೆಲೆ ಹಿಂದೆಯೂ ಇರಲಿಲ್ಲ, ಈಗಲೂ ಕೊಡಲು ಸಾಧ್ಯವಿಲ್ಲ: ಕೇಂದ್ರ ಕೃಷಿ ಸಚಿವ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ತೆಲಂಗಾಣದಲ್ಲಿ ಮುಸ್ಲಿಮರಿಗೆ ನೀಡಿದ್ದ ಮೀಸಲಾತಿಯನ್ನು ರದ್ದುಪಡಿಸುತ್ತೇವೆ: ಅಮಿತ್‌ ಶಾ

0
ಲೋಕಸಭೆ ಚುನಾವಣೆ ಹಿನ್ನೆಲೆ ಮುಸ್ಲಿಮರನ್ನೇ ಟಾರ್ಗೆಟ್‌ ಮಾಡಿಕೊಂಡು ದ್ವೇಷದ ಹೇಳಿಕೆ ನೀಡುತ್ತಾ ಬಿಜೆಪಿ ನಾಯಕರು ಹಿಂದೂ ಸಮುದಾಯದ ಜನರ ಓಲೈಕೆ ರಾಜಕೀಯ ಮಾಡುತ್ತಿರುವುದು ವ್ಯಾಪಕವಾಗಿದೆ. ಇದರ ಮುಂದುವರಿದ ಭಾಗವಾಗಿ ತೆಲಂಗಾಣದಲ್ಲಿ ಕಾಂಗ್ರೆಸ್ ಮತ್ತು...