Homeಚಳವಳಿರೈತರು ಮೋದಿ ಸರ್ಕಾರದ ಅಹಂಕಾರವನ್ನು ಮಟ್ಟಹಾಕುತ್ತಾರೆ: ಪ್ರತಿಭಟನಾ ನಿರತ ರೈತರು

ರೈತರು ಮೋದಿ ಸರ್ಕಾರದ ಅಹಂಕಾರವನ್ನು ಮಟ್ಟಹಾಕುತ್ತಾರೆ: ಪ್ರತಿಭಟನಾ ನಿರತ ರೈತರು

ರಾಮನ ಕಾಲದಲ್ಲಿ ರಾವಣನ ಅಹಂಕಾರವನ್ನು ಮಟ್ಟಹಾಕಲಾಯಿತು. 100 ಸಹೋದರರನ್ನು ಹೊಂದಿದ್ದ ದುರ್ಯೋಧನನ ಅಹಂಕಾರವನ್ನು ಪಾಂಡವರು ಮಟ್ಟಹಾಕಿದರು. ಅದೇ ರೀತಿ ಮೋದಿ ಸರ್ಕಾರದ ಅಹಂಕಾರವನ್ನು ರೈತರು ಮಟ್ಟಹಾಕುತ್ತಾರೆ

- Advertisement -
- Advertisement -

ಕೇಂದ್ರ ಸರ್ಕಾರದ ರೈತವಿರೋಧಿ ಮಸೂದೆಗಳನ್ನು ವಿರೋಧಿಸಿ ದೇಶದಾದ್ಯಂತ ರೈತರು ಪ್ರತಿಭಟನೆ ನಡೆಸುತ್ತಿದ್ದು, “ರಾಮ, ರಾವಣನ ಅಹಂಕಾರವನ್ನು ಮಟ್ಟಹಾಕಿದಂತೆ, ಮೋದಿ ಸರ್ಕಾರದ ಅಹಂಕಾರವನ್ನು ರೈತರು ಮಟ್ಟಹಾಕುತ್ತಾರೆ” ಎಂದು ರೈತರು ಸರ್ಕಾರದ ವಿರುದ್ಧ ತಮ್ಮ ಆಕ್ರೋಶವನ್ನು ಹೊರಹಾಕಿದರು.  ಹರಿಯಾಣದ ಅಂಬಲಾ ಬಳಿ ರೈಲ್ವೇ ಹಳಿ ಮತ್ತು ರಸ್ತೆಗೆ ಮುತ್ತಿಗೆ ಹಾಕಿರುವ ರೈತರು, ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ಜಮಾಯಿಸಿ ಶುಕ್ರವಾರ ಪ್ರತಿಭಟಿಸಿದರು.

ಸದನಗಳಲ್ಲಿ ಅಂಗೀಕೃತವಾಗಿ ಈಗ ರಾಷ್ಟ್ರಪತಿಗಳ ಒಪ್ಪಿಗೆಗಾಗಿ ಕಾಯುತ್ತಿರುವ ವಿವಾದಾತ್ಮಕ ಕೃಷಿ ಮಸೂದೆಗಳನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿ, ಭಾರತದ ಕಿಸಾನ್ ಯೂನಿಯನ್ (ಬಿಕೆಯು)ನ ನೂರಾರು ರೈತರು ಆರ್ದ್ರತೆಯ ಉಷ್ಣಾಂಶವನ್ನೂ ಲೆಕ್ಕಿಸದೇ ದೆಹಲಿಯತ್ತ ಮೆರವಣಿಗೆ ನಡೆದರು.

ಇದನ್ನೂ ಓದಿ: ಸೆ.27 ರಂದು ಉಡುಪಿಯಲ್ಲಿ ‘ಪೂನಾ ಒಪ್ಪಂದ ದಿನ’ದ ನೆನಪಿನ ಕಾರ್ಯಕ್ರಮ

ವಿರೋಧ ಪಕ್ಷಗಳೂ ಸೇರಿದಂತೆ ಸುಮಾರು 30 ಕ್ಕೂ ಹೆಚ್ಚು ರೈತ ಸಂಘಟನೆಗಳ ಪ್ರತಿಭಟನಾಕಾರರನ್ನು ಪೊಲೀಸರು ನೋಯ್ಡಾ-ಮಯೂರ್ ವಿಹಾರ್ ಗಡಿಯಲ್ಲಿ ತಡೆದು ನಿಲ್ಲಿಸಿದರು.

ಸರ್ಕಾರಕ್ಕೆ ಆಗಬಹುದಾದ ತೊಂದರೆಯನ್ನು ಮನಗಂಡ ದೆಹಲಿ ಪೊಲೀಸರು, ರಾಜಧಾನಿಗೆ ಸಂಪರ್ಕಿಸುವ ರಸ್ತೆಯನ್ನು ಸೀಲ್ ಮಾಡಿದರು. ಹಾಗಾಗಿ ಪ್ರತಿಭಟನಾಕಾರರಿಗೆ ಪ್ರವೇಶ ಅಸಾಧ್ಯವಾಯಿತು. ಆದರೆ ರೈತರು ಮಾಧ್ಯಮಗಳ ಗಮನ ಸೆಳೆದು ತಮ್ಮ ಪ್ರತಿಭಟನೆಯನ್ನು ದಾಖಲಿಸಿದರು.

ಮಸೂದೆಗಳನ್ನು ಹಿಂತೆಗೆದುಕೊಳ್ಳುವುದರ ಜೊತೆಗೆ ಬೆಂಬಲ ಬೆಲೆಯನ್ನು ಕಾನೂನಿನಡಿಯಲ್ಲಿ ತರಬೇಕು ಎಂದು ಪ್ರತಿಭಟನಾ ನಿರತ ರೈತರು ಒತ್ತಾಯಿಸಿದರು. “ವಿರೋಧ ಪಕ್ಷಗಳು ರೈತರನ್ನು ದಾರಿ ತಪ್ಪಿಸಿವೆ” ಎಂಬ ಪ್ರಧಾನಿಯವರ ಹೇಳಿಕೆಯ ಬಗ್ಗೆ ಕೇಳಿದಾಗ ರೈತರ ಆಕ್ರೋಶ ಮತ್ತಷ್ಟು ಹೆಚ್ಚಾಯಿತು ಎಂದು ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ.

ಇದನ್ನೂ ಓದಿ: ಕೃಷಿ ಮಸೂದೆಗಳ ವಿರುದ್ಧ ದೇಶಾದ್ಯಂತ ”ಅನ್ನದಾತ’ರ ಪ್ರತಿಭಟನೆ

2014 ರಲ್ಲಿ ಮತ್ತು 2019 ರಲ್ಲಿ ಬಿಜೆಪಿಗೆ ಮತ ಹಾಕಿದ ಕೆಲವು ರೈತರು, ಮೋದಿ ಸರ್ಕಾರ ತಮಗೆ ಮೋಸ ಮಾಡಿದೆ ಎಂದು ದೂರಿದರು. “ಬಿಜೆಪಿ ಆಯ್ಕೆಯಾಗುವವರೆಗೂ ರೈತರ ಬಗ್ಗೆ ಮಾತನಾಡುತ್ತಿತ್ತು. ಆದರೆ ಈಗ ಅಧಿಕಾರಕ್ಕೆ ಬಂದ ನಂತರ ನಮ್ಮನ್ನು ಮರೆತಿದ್ದಾರೆ. ರೈತರು ಮತ ಚಲಾಯಿಸಿದ ಅದೇ ಮೋದಿ ನಮ್ಮ ವಿರುದ್ಧ ನಿಂತಿದ್ದಾರೆ” ಪ್ರತಿಭಟನಾಕಾರರನ್ನುದ್ದೇಶಿಸಿ ಸಹ ಪ್ರತಿಭಟನಾಕಾರರು ಭಾಷಣ ಮಾಡಿದರು.

“ಕೊರೊನಾ ಸಾಂಕ್ರಾಮಿಕ ಕಾಲದಲ್ಲೂ, ರೈತರು ಎಲ್ಲರಿಗೂ ಆಹಾರವನ್ನು ಒದಗಿಸಿದರು. ವಲಸೆ ಕಾರ್ಮಿಕರು ನಗರದಿಂದ ಪಲಾಯನ ಮಾಡುತ್ತಿರುವಾಗ, ರೈತರು ಅವರಿಗೆ ಆಹಾರವನ್ನು ಒದಗಿಸಿದರು. ಇಂದು ಮೋದಿ ಸರ್ಕಾರ ನಮ್ಮದೇ ಆಹಾರವನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಿದೆ” ಎಂದು ಬಿಕೆಯು ಕಾರ್ಯಕರ್ತರೊಬ್ಬರು ಹೇಳಿದರು.

ಇದನ್ನೂ ಓದಿ: ಕೃಷಿ ಮಸೂದೆಗಳ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ: ರಾಜ್ಯಾದ್ಯಂತ ರಸ್ತೆ ತಡೆ ಪ್ರತಿಭಟನೆ

ಮತ್ತೊಬ್ಬ ರೈತ ಕಾರ್ಯಕರ್ತ ಮತ್ತು ಬಿಕೆಯು ಸದಸ್ಯರೊಬ್ಬರು, “ರಾಮನ ಕಾಲದಲ್ಲಿ ಭೂಮಿಯ ಮತ್ತು ಸ್ವರ್ಗದ ಮೇಲೆ ಅತ್ಯಂತ ಶಕ್ತಿಶಾಲಿ ರಾಜನಾಗಿದ್ದ ರಾವಣನ ಅಹಂಕಾರವನ್ನು ಮಟ್ಟಹಾಕಲಾಯಿತು. 100 ಸಹೋದರರನ್ನು ಹೊಂದಿದ್ದ ದುರ್ಯೋಧನನ ಅಹಂಕಾರವನ್ನು ಪಾಂಡವರು ಮಟ್ಟಹಾಕಿದರು. ಅದೇ ರೀತಿ ಮೋದಿ ಸರ್ಕಾರದ ಅಹಂಕಾರವನ್ನು ರೈತರು ಮಟ್ಟಹಾಕುತ್ತಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಸರ್ಕಾರವು ಮಸೂದೆಗಳನ್ನು ಹಿಂತೆಗೆದುಕೊಂಡರೆ, ನಾವು ನಮ್ಮ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುತ್ತೇವೆ” ಎಂದು ಮತ್ತೊಬ್ಬ ಪ್ರತಿಭಟನಾಕಾರರು ಹೇಳಿದರು.

ಮಸೂದೆಗಳಿಗೆ ತೀವ್ರ ವಿರೋಧ ಮತ್ತು ತೀವ್ರ ಸ್ವರೂಪದ ಪ್ರತಿಭಟನೆಗಳು ನಡೆಸುತ್ತಿರುವ ಪಂಜಾಬ್‌ನಲ್ಲಿ ರೈಲು ಹಳಿಗಳ ಮೇಲೆ ಕುಳಿತು ರೈಲ್​ ರೋಕೋ ಚಳವಳಿ ನಡೆಸುತ್ತಿದ್ದಾರೆ. ಈ ಚಳುವಳಿಯನ್ನು ಸೆ.29ರವರೆಗೂ ಮುಂದುವರೆಸುತ್ತೇವೆ ಎಂದು ರೈತ ಸಂಘದ ಮುಖಂಡರು ತಿಳಿಸಿದ್ದಾರೆ. ಈಗಾಗಲೇ ಉತ್ತರ ರೈಲ್ವೇ ವಿಭಾಗ ಈ ಭಾಗದಲ್ಲಿ ಸಂಚರಿಸುವ ಕೆಲವು ರೈಲುಗಳನ್ನ ರದ್ದುಗೊಳಿಸಿದೆ. ಪಂಜಾಂಬ್​ ಸಿಎಂ ಅಮರೀಂದರ್​ ಸಿಂಗ್​ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಪ್ರತಿಭಟನಾಕಾರಲ್ಲಿ ಮನವಿ ಮಾಡಿದ್ದಾರೆ.


ಇದನ್ನೂ ಓದಿ: ಬೆಂಬಲ ಬೆಲೆ ಹಿಂದೆಯೂ ಇರಲಿಲ್ಲ, ಈಗಲೂ ಕೊಡಲು ಸಾಧ್ಯವಿಲ್ಲ: ಕೇಂದ್ರ ಕೃಷಿ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...