Homeಚಳವಳಿರೈತರು ಮೋದಿ ಸರ್ಕಾರದ ಅಹಂಕಾರವನ್ನು ಮಟ್ಟಹಾಕುತ್ತಾರೆ: ಪ್ರತಿಭಟನಾ ನಿರತ ರೈತರು

ರೈತರು ಮೋದಿ ಸರ್ಕಾರದ ಅಹಂಕಾರವನ್ನು ಮಟ್ಟಹಾಕುತ್ತಾರೆ: ಪ್ರತಿಭಟನಾ ನಿರತ ರೈತರು

ರಾಮನ ಕಾಲದಲ್ಲಿ ರಾವಣನ ಅಹಂಕಾರವನ್ನು ಮಟ್ಟಹಾಕಲಾಯಿತು. 100 ಸಹೋದರರನ್ನು ಹೊಂದಿದ್ದ ದುರ್ಯೋಧನನ ಅಹಂಕಾರವನ್ನು ಪಾಂಡವರು ಮಟ್ಟಹಾಕಿದರು. ಅದೇ ರೀತಿ ಮೋದಿ ಸರ್ಕಾರದ ಅಹಂಕಾರವನ್ನು ರೈತರು ಮಟ್ಟಹಾಕುತ್ತಾರೆ

- Advertisement -
- Advertisement -

ಕೇಂದ್ರ ಸರ್ಕಾರದ ರೈತವಿರೋಧಿ ಮಸೂದೆಗಳನ್ನು ವಿರೋಧಿಸಿ ದೇಶದಾದ್ಯಂತ ರೈತರು ಪ್ರತಿಭಟನೆ ನಡೆಸುತ್ತಿದ್ದು, “ರಾಮ, ರಾವಣನ ಅಹಂಕಾರವನ್ನು ಮಟ್ಟಹಾಕಿದಂತೆ, ಮೋದಿ ಸರ್ಕಾರದ ಅಹಂಕಾರವನ್ನು ರೈತರು ಮಟ್ಟಹಾಕುತ್ತಾರೆ” ಎಂದು ರೈತರು ಸರ್ಕಾರದ ವಿರುದ್ಧ ತಮ್ಮ ಆಕ್ರೋಶವನ್ನು ಹೊರಹಾಕಿದರು.  ಹರಿಯಾಣದ ಅಂಬಲಾ ಬಳಿ ರೈಲ್ವೇ ಹಳಿ ಮತ್ತು ರಸ್ತೆಗೆ ಮುತ್ತಿಗೆ ಹಾಕಿರುವ ರೈತರು, ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ಜಮಾಯಿಸಿ ಶುಕ್ರವಾರ ಪ್ರತಿಭಟಿಸಿದರು.

ಸದನಗಳಲ್ಲಿ ಅಂಗೀಕೃತವಾಗಿ ಈಗ ರಾಷ್ಟ್ರಪತಿಗಳ ಒಪ್ಪಿಗೆಗಾಗಿ ಕಾಯುತ್ತಿರುವ ವಿವಾದಾತ್ಮಕ ಕೃಷಿ ಮಸೂದೆಗಳನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿ, ಭಾರತದ ಕಿಸಾನ್ ಯೂನಿಯನ್ (ಬಿಕೆಯು)ನ ನೂರಾರು ರೈತರು ಆರ್ದ್ರತೆಯ ಉಷ್ಣಾಂಶವನ್ನೂ ಲೆಕ್ಕಿಸದೇ ದೆಹಲಿಯತ್ತ ಮೆರವಣಿಗೆ ನಡೆದರು.

ಇದನ್ನೂ ಓದಿ: ಸೆ.27 ರಂದು ಉಡುಪಿಯಲ್ಲಿ ‘ಪೂನಾ ಒಪ್ಪಂದ ದಿನ’ದ ನೆನಪಿನ ಕಾರ್ಯಕ್ರಮ

ವಿರೋಧ ಪಕ್ಷಗಳೂ ಸೇರಿದಂತೆ ಸುಮಾರು 30 ಕ್ಕೂ ಹೆಚ್ಚು ರೈತ ಸಂಘಟನೆಗಳ ಪ್ರತಿಭಟನಾಕಾರರನ್ನು ಪೊಲೀಸರು ನೋಯ್ಡಾ-ಮಯೂರ್ ವಿಹಾರ್ ಗಡಿಯಲ್ಲಿ ತಡೆದು ನಿಲ್ಲಿಸಿದರು.

ಸರ್ಕಾರಕ್ಕೆ ಆಗಬಹುದಾದ ತೊಂದರೆಯನ್ನು ಮನಗಂಡ ದೆಹಲಿ ಪೊಲೀಸರು, ರಾಜಧಾನಿಗೆ ಸಂಪರ್ಕಿಸುವ ರಸ್ತೆಯನ್ನು ಸೀಲ್ ಮಾಡಿದರು. ಹಾಗಾಗಿ ಪ್ರತಿಭಟನಾಕಾರರಿಗೆ ಪ್ರವೇಶ ಅಸಾಧ್ಯವಾಯಿತು. ಆದರೆ ರೈತರು ಮಾಧ್ಯಮಗಳ ಗಮನ ಸೆಳೆದು ತಮ್ಮ ಪ್ರತಿಭಟನೆಯನ್ನು ದಾಖಲಿಸಿದರು.

ಮಸೂದೆಗಳನ್ನು ಹಿಂತೆಗೆದುಕೊಳ್ಳುವುದರ ಜೊತೆಗೆ ಬೆಂಬಲ ಬೆಲೆಯನ್ನು ಕಾನೂನಿನಡಿಯಲ್ಲಿ ತರಬೇಕು ಎಂದು ಪ್ರತಿಭಟನಾ ನಿರತ ರೈತರು ಒತ್ತಾಯಿಸಿದರು. “ವಿರೋಧ ಪಕ್ಷಗಳು ರೈತರನ್ನು ದಾರಿ ತಪ್ಪಿಸಿವೆ” ಎಂಬ ಪ್ರಧಾನಿಯವರ ಹೇಳಿಕೆಯ ಬಗ್ಗೆ ಕೇಳಿದಾಗ ರೈತರ ಆಕ್ರೋಶ ಮತ್ತಷ್ಟು ಹೆಚ್ಚಾಯಿತು ಎಂದು ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ.

ಇದನ್ನೂ ಓದಿ: ಕೃಷಿ ಮಸೂದೆಗಳ ವಿರುದ್ಧ ದೇಶಾದ್ಯಂತ ”ಅನ್ನದಾತ’ರ ಪ್ರತಿಭಟನೆ

2014 ರಲ್ಲಿ ಮತ್ತು 2019 ರಲ್ಲಿ ಬಿಜೆಪಿಗೆ ಮತ ಹಾಕಿದ ಕೆಲವು ರೈತರು, ಮೋದಿ ಸರ್ಕಾರ ತಮಗೆ ಮೋಸ ಮಾಡಿದೆ ಎಂದು ದೂರಿದರು. “ಬಿಜೆಪಿ ಆಯ್ಕೆಯಾಗುವವರೆಗೂ ರೈತರ ಬಗ್ಗೆ ಮಾತನಾಡುತ್ತಿತ್ತು. ಆದರೆ ಈಗ ಅಧಿಕಾರಕ್ಕೆ ಬಂದ ನಂತರ ನಮ್ಮನ್ನು ಮರೆತಿದ್ದಾರೆ. ರೈತರು ಮತ ಚಲಾಯಿಸಿದ ಅದೇ ಮೋದಿ ನಮ್ಮ ವಿರುದ್ಧ ನಿಂತಿದ್ದಾರೆ” ಪ್ರತಿಭಟನಾಕಾರರನ್ನುದ್ದೇಶಿಸಿ ಸಹ ಪ್ರತಿಭಟನಾಕಾರರು ಭಾಷಣ ಮಾಡಿದರು.

“ಕೊರೊನಾ ಸಾಂಕ್ರಾಮಿಕ ಕಾಲದಲ್ಲೂ, ರೈತರು ಎಲ್ಲರಿಗೂ ಆಹಾರವನ್ನು ಒದಗಿಸಿದರು. ವಲಸೆ ಕಾರ್ಮಿಕರು ನಗರದಿಂದ ಪಲಾಯನ ಮಾಡುತ್ತಿರುವಾಗ, ರೈತರು ಅವರಿಗೆ ಆಹಾರವನ್ನು ಒದಗಿಸಿದರು. ಇಂದು ಮೋದಿ ಸರ್ಕಾರ ನಮ್ಮದೇ ಆಹಾರವನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಿದೆ” ಎಂದು ಬಿಕೆಯು ಕಾರ್ಯಕರ್ತರೊಬ್ಬರು ಹೇಳಿದರು.

ಇದನ್ನೂ ಓದಿ: ಕೃಷಿ ಮಸೂದೆಗಳ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ: ರಾಜ್ಯಾದ್ಯಂತ ರಸ್ತೆ ತಡೆ ಪ್ರತಿಭಟನೆ

ಮತ್ತೊಬ್ಬ ರೈತ ಕಾರ್ಯಕರ್ತ ಮತ್ತು ಬಿಕೆಯು ಸದಸ್ಯರೊಬ್ಬರು, “ರಾಮನ ಕಾಲದಲ್ಲಿ ಭೂಮಿಯ ಮತ್ತು ಸ್ವರ್ಗದ ಮೇಲೆ ಅತ್ಯಂತ ಶಕ್ತಿಶಾಲಿ ರಾಜನಾಗಿದ್ದ ರಾವಣನ ಅಹಂಕಾರವನ್ನು ಮಟ್ಟಹಾಕಲಾಯಿತು. 100 ಸಹೋದರರನ್ನು ಹೊಂದಿದ್ದ ದುರ್ಯೋಧನನ ಅಹಂಕಾರವನ್ನು ಪಾಂಡವರು ಮಟ್ಟಹಾಕಿದರು. ಅದೇ ರೀತಿ ಮೋದಿ ಸರ್ಕಾರದ ಅಹಂಕಾರವನ್ನು ರೈತರು ಮಟ್ಟಹಾಕುತ್ತಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಸರ್ಕಾರವು ಮಸೂದೆಗಳನ್ನು ಹಿಂತೆಗೆದುಕೊಂಡರೆ, ನಾವು ನಮ್ಮ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುತ್ತೇವೆ” ಎಂದು ಮತ್ತೊಬ್ಬ ಪ್ರತಿಭಟನಾಕಾರರು ಹೇಳಿದರು.

ಮಸೂದೆಗಳಿಗೆ ತೀವ್ರ ವಿರೋಧ ಮತ್ತು ತೀವ್ರ ಸ್ವರೂಪದ ಪ್ರತಿಭಟನೆಗಳು ನಡೆಸುತ್ತಿರುವ ಪಂಜಾಬ್‌ನಲ್ಲಿ ರೈಲು ಹಳಿಗಳ ಮೇಲೆ ಕುಳಿತು ರೈಲ್​ ರೋಕೋ ಚಳವಳಿ ನಡೆಸುತ್ತಿದ್ದಾರೆ. ಈ ಚಳುವಳಿಯನ್ನು ಸೆ.29ರವರೆಗೂ ಮುಂದುವರೆಸುತ್ತೇವೆ ಎಂದು ರೈತ ಸಂಘದ ಮುಖಂಡರು ತಿಳಿಸಿದ್ದಾರೆ. ಈಗಾಗಲೇ ಉತ್ತರ ರೈಲ್ವೇ ವಿಭಾಗ ಈ ಭಾಗದಲ್ಲಿ ಸಂಚರಿಸುವ ಕೆಲವು ರೈಲುಗಳನ್ನ ರದ್ದುಗೊಳಿಸಿದೆ. ಪಂಜಾಂಬ್​ ಸಿಎಂ ಅಮರೀಂದರ್​ ಸಿಂಗ್​ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಪ್ರತಿಭಟನಾಕಾರಲ್ಲಿ ಮನವಿ ಮಾಡಿದ್ದಾರೆ.


ಇದನ್ನೂ ಓದಿ: ಬೆಂಬಲ ಬೆಲೆ ಹಿಂದೆಯೂ ಇರಲಿಲ್ಲ, ಈಗಲೂ ಕೊಡಲು ಸಾಧ್ಯವಿಲ್ಲ: ಕೇಂದ್ರ ಕೃಷಿ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...