Homeಚಳವಳಿರೈತರು ಮೋದಿ ಸರ್ಕಾರದ ಅಹಂಕಾರವನ್ನು ಮಟ್ಟಹಾಕುತ್ತಾರೆ: ಪ್ರತಿಭಟನಾ ನಿರತ ರೈತರು

ರೈತರು ಮೋದಿ ಸರ್ಕಾರದ ಅಹಂಕಾರವನ್ನು ಮಟ್ಟಹಾಕುತ್ತಾರೆ: ಪ್ರತಿಭಟನಾ ನಿರತ ರೈತರು

ರಾಮನ ಕಾಲದಲ್ಲಿ ರಾವಣನ ಅಹಂಕಾರವನ್ನು ಮಟ್ಟಹಾಕಲಾಯಿತು. 100 ಸಹೋದರರನ್ನು ಹೊಂದಿದ್ದ ದುರ್ಯೋಧನನ ಅಹಂಕಾರವನ್ನು ಪಾಂಡವರು ಮಟ್ಟಹಾಕಿದರು. ಅದೇ ರೀತಿ ಮೋದಿ ಸರ್ಕಾರದ ಅಹಂಕಾರವನ್ನು ರೈತರು ಮಟ್ಟಹಾಕುತ್ತಾರೆ

- Advertisement -
- Advertisement -

ಕೇಂದ್ರ ಸರ್ಕಾರದ ರೈತವಿರೋಧಿ ಮಸೂದೆಗಳನ್ನು ವಿರೋಧಿಸಿ ದೇಶದಾದ್ಯಂತ ರೈತರು ಪ್ರತಿಭಟನೆ ನಡೆಸುತ್ತಿದ್ದು, “ರಾಮ, ರಾವಣನ ಅಹಂಕಾರವನ್ನು ಮಟ್ಟಹಾಕಿದಂತೆ, ಮೋದಿ ಸರ್ಕಾರದ ಅಹಂಕಾರವನ್ನು ರೈತರು ಮಟ್ಟಹಾಕುತ್ತಾರೆ” ಎಂದು ರೈತರು ಸರ್ಕಾರದ ವಿರುದ್ಧ ತಮ್ಮ ಆಕ್ರೋಶವನ್ನು ಹೊರಹಾಕಿದರು.  ಹರಿಯಾಣದ ಅಂಬಲಾ ಬಳಿ ರೈಲ್ವೇ ಹಳಿ ಮತ್ತು ರಸ್ತೆಗೆ ಮುತ್ತಿಗೆ ಹಾಕಿರುವ ರೈತರು, ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ಜಮಾಯಿಸಿ ಶುಕ್ರವಾರ ಪ್ರತಿಭಟಿಸಿದರು.

ಸದನಗಳಲ್ಲಿ ಅಂಗೀಕೃತವಾಗಿ ಈಗ ರಾಷ್ಟ್ರಪತಿಗಳ ಒಪ್ಪಿಗೆಗಾಗಿ ಕಾಯುತ್ತಿರುವ ವಿವಾದಾತ್ಮಕ ಕೃಷಿ ಮಸೂದೆಗಳನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿ, ಭಾರತದ ಕಿಸಾನ್ ಯೂನಿಯನ್ (ಬಿಕೆಯು)ನ ನೂರಾರು ರೈತರು ಆರ್ದ್ರತೆಯ ಉಷ್ಣಾಂಶವನ್ನೂ ಲೆಕ್ಕಿಸದೇ ದೆಹಲಿಯತ್ತ ಮೆರವಣಿಗೆ ನಡೆದರು.

ಇದನ್ನೂ ಓದಿ: ಸೆ.27 ರಂದು ಉಡುಪಿಯಲ್ಲಿ ‘ಪೂನಾ ಒಪ್ಪಂದ ದಿನ’ದ ನೆನಪಿನ ಕಾರ್ಯಕ್ರಮ

ವಿರೋಧ ಪಕ್ಷಗಳೂ ಸೇರಿದಂತೆ ಸುಮಾರು 30 ಕ್ಕೂ ಹೆಚ್ಚು ರೈತ ಸಂಘಟನೆಗಳ ಪ್ರತಿಭಟನಾಕಾರರನ್ನು ಪೊಲೀಸರು ನೋಯ್ಡಾ-ಮಯೂರ್ ವಿಹಾರ್ ಗಡಿಯಲ್ಲಿ ತಡೆದು ನಿಲ್ಲಿಸಿದರು.

ಸರ್ಕಾರಕ್ಕೆ ಆಗಬಹುದಾದ ತೊಂದರೆಯನ್ನು ಮನಗಂಡ ದೆಹಲಿ ಪೊಲೀಸರು, ರಾಜಧಾನಿಗೆ ಸಂಪರ್ಕಿಸುವ ರಸ್ತೆಯನ್ನು ಸೀಲ್ ಮಾಡಿದರು. ಹಾಗಾಗಿ ಪ್ರತಿಭಟನಾಕಾರರಿಗೆ ಪ್ರವೇಶ ಅಸಾಧ್ಯವಾಯಿತು. ಆದರೆ ರೈತರು ಮಾಧ್ಯಮಗಳ ಗಮನ ಸೆಳೆದು ತಮ್ಮ ಪ್ರತಿಭಟನೆಯನ್ನು ದಾಖಲಿಸಿದರು.

ಮಸೂದೆಗಳನ್ನು ಹಿಂತೆಗೆದುಕೊಳ್ಳುವುದರ ಜೊತೆಗೆ ಬೆಂಬಲ ಬೆಲೆಯನ್ನು ಕಾನೂನಿನಡಿಯಲ್ಲಿ ತರಬೇಕು ಎಂದು ಪ್ರತಿಭಟನಾ ನಿರತ ರೈತರು ಒತ್ತಾಯಿಸಿದರು. “ವಿರೋಧ ಪಕ್ಷಗಳು ರೈತರನ್ನು ದಾರಿ ತಪ್ಪಿಸಿವೆ” ಎಂಬ ಪ್ರಧಾನಿಯವರ ಹೇಳಿಕೆಯ ಬಗ್ಗೆ ಕೇಳಿದಾಗ ರೈತರ ಆಕ್ರೋಶ ಮತ್ತಷ್ಟು ಹೆಚ್ಚಾಯಿತು ಎಂದು ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ.

ಇದನ್ನೂ ಓದಿ: ಕೃಷಿ ಮಸೂದೆಗಳ ವಿರುದ್ಧ ದೇಶಾದ್ಯಂತ ”ಅನ್ನದಾತ’ರ ಪ್ರತಿಭಟನೆ

2014 ರಲ್ಲಿ ಮತ್ತು 2019 ರಲ್ಲಿ ಬಿಜೆಪಿಗೆ ಮತ ಹಾಕಿದ ಕೆಲವು ರೈತರು, ಮೋದಿ ಸರ್ಕಾರ ತಮಗೆ ಮೋಸ ಮಾಡಿದೆ ಎಂದು ದೂರಿದರು. “ಬಿಜೆಪಿ ಆಯ್ಕೆಯಾಗುವವರೆಗೂ ರೈತರ ಬಗ್ಗೆ ಮಾತನಾಡುತ್ತಿತ್ತು. ಆದರೆ ಈಗ ಅಧಿಕಾರಕ್ಕೆ ಬಂದ ನಂತರ ನಮ್ಮನ್ನು ಮರೆತಿದ್ದಾರೆ. ರೈತರು ಮತ ಚಲಾಯಿಸಿದ ಅದೇ ಮೋದಿ ನಮ್ಮ ವಿರುದ್ಧ ನಿಂತಿದ್ದಾರೆ” ಪ್ರತಿಭಟನಾಕಾರರನ್ನುದ್ದೇಶಿಸಿ ಸಹ ಪ್ರತಿಭಟನಾಕಾರರು ಭಾಷಣ ಮಾಡಿದರು.

“ಕೊರೊನಾ ಸಾಂಕ್ರಾಮಿಕ ಕಾಲದಲ್ಲೂ, ರೈತರು ಎಲ್ಲರಿಗೂ ಆಹಾರವನ್ನು ಒದಗಿಸಿದರು. ವಲಸೆ ಕಾರ್ಮಿಕರು ನಗರದಿಂದ ಪಲಾಯನ ಮಾಡುತ್ತಿರುವಾಗ, ರೈತರು ಅವರಿಗೆ ಆಹಾರವನ್ನು ಒದಗಿಸಿದರು. ಇಂದು ಮೋದಿ ಸರ್ಕಾರ ನಮ್ಮದೇ ಆಹಾರವನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಿದೆ” ಎಂದು ಬಿಕೆಯು ಕಾರ್ಯಕರ್ತರೊಬ್ಬರು ಹೇಳಿದರು.

ಇದನ್ನೂ ಓದಿ: ಕೃಷಿ ಮಸೂದೆಗಳ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ: ರಾಜ್ಯಾದ್ಯಂತ ರಸ್ತೆ ತಡೆ ಪ್ರತಿಭಟನೆ

ಮತ್ತೊಬ್ಬ ರೈತ ಕಾರ್ಯಕರ್ತ ಮತ್ತು ಬಿಕೆಯು ಸದಸ್ಯರೊಬ್ಬರು, “ರಾಮನ ಕಾಲದಲ್ಲಿ ಭೂಮಿಯ ಮತ್ತು ಸ್ವರ್ಗದ ಮೇಲೆ ಅತ್ಯಂತ ಶಕ್ತಿಶಾಲಿ ರಾಜನಾಗಿದ್ದ ರಾವಣನ ಅಹಂಕಾರವನ್ನು ಮಟ್ಟಹಾಕಲಾಯಿತು. 100 ಸಹೋದರರನ್ನು ಹೊಂದಿದ್ದ ದುರ್ಯೋಧನನ ಅಹಂಕಾರವನ್ನು ಪಾಂಡವರು ಮಟ್ಟಹಾಕಿದರು. ಅದೇ ರೀತಿ ಮೋದಿ ಸರ್ಕಾರದ ಅಹಂಕಾರವನ್ನು ರೈತರು ಮಟ್ಟಹಾಕುತ್ತಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಸರ್ಕಾರವು ಮಸೂದೆಗಳನ್ನು ಹಿಂತೆಗೆದುಕೊಂಡರೆ, ನಾವು ನಮ್ಮ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುತ್ತೇವೆ” ಎಂದು ಮತ್ತೊಬ್ಬ ಪ್ರತಿಭಟನಾಕಾರರು ಹೇಳಿದರು.

ಮಸೂದೆಗಳಿಗೆ ತೀವ್ರ ವಿರೋಧ ಮತ್ತು ತೀವ್ರ ಸ್ವರೂಪದ ಪ್ರತಿಭಟನೆಗಳು ನಡೆಸುತ್ತಿರುವ ಪಂಜಾಬ್‌ನಲ್ಲಿ ರೈಲು ಹಳಿಗಳ ಮೇಲೆ ಕುಳಿತು ರೈಲ್​ ರೋಕೋ ಚಳವಳಿ ನಡೆಸುತ್ತಿದ್ದಾರೆ. ಈ ಚಳುವಳಿಯನ್ನು ಸೆ.29ರವರೆಗೂ ಮುಂದುವರೆಸುತ್ತೇವೆ ಎಂದು ರೈತ ಸಂಘದ ಮುಖಂಡರು ತಿಳಿಸಿದ್ದಾರೆ. ಈಗಾಗಲೇ ಉತ್ತರ ರೈಲ್ವೇ ವಿಭಾಗ ಈ ಭಾಗದಲ್ಲಿ ಸಂಚರಿಸುವ ಕೆಲವು ರೈಲುಗಳನ್ನ ರದ್ದುಗೊಳಿಸಿದೆ. ಪಂಜಾಂಬ್​ ಸಿಎಂ ಅಮರೀಂದರ್​ ಸಿಂಗ್​ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಪ್ರತಿಭಟನಾಕಾರಲ್ಲಿ ಮನವಿ ಮಾಡಿದ್ದಾರೆ.


ಇದನ್ನೂ ಓದಿ: ಬೆಂಬಲ ಬೆಲೆ ಹಿಂದೆಯೂ ಇರಲಿಲ್ಲ, ಈಗಲೂ ಕೊಡಲು ಸಾಧ್ಯವಿಲ್ಲ: ಕೇಂದ್ರ ಕೃಷಿ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...