Homeಕರ್ನಾಟಕರೈತರ ಸಾಲಮನ್ನಾದಿಂದ ದೇಶಕ್ಕೆ ಉಪಯೋಗವಾಗಿಲ್ಲ; ತೇಜಸ್ವಿ ಸೂರ್ಯ ಹೇಳಿಕೆಗೆ ಮಣ್ಣಿನ ಮಕ್ಕಳ ಆಕ್ರೋಶ

ರೈತರ ಸಾಲಮನ್ನಾದಿಂದ ದೇಶಕ್ಕೆ ಉಪಯೋಗವಾಗಿಲ್ಲ; ತೇಜಸ್ವಿ ಸೂರ್ಯ ಹೇಳಿಕೆಗೆ ಮಣ್ಣಿನ ಮಕ್ಕಳ ಆಕ್ರೋಶ

ತೇಜಸ್ವಿ ಸೂರ್ಯರಿಗೆ ಅರ್ಥವ್ಯವಸ್ಥೆಯ ಎಬಿಸಿಡಿ ಗೊತ್ತಿಲ್ಲ ಎಂದು ರೈತ ಮುಖಂಡರು ಪ್ರತಿಕ್ರಿಯಿಸಿದ್ದಾರೆ

- Advertisement -
- Advertisement -

ರೈತರ ಸಾಲಮನ್ನಾ ಮಾಡುವುದರಿಂದ ದೇಶದ ಆರ್ಥಿಕತೆಗೆ ಯಾವುದೇ ರೀತಿಯ ಉಪಯೋಗವಾಗಿಲ್ಲ ಎಂದು ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ, ಸಂಸದ ತೇಜಸ್ವಿ ಸೂರ್ಯ ಹೇಳಿಕೆ ನೀಡಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿರುವ ಅವರು, “ಆಗ ಯುಪಿಎ ಸರ್ಕಾರವಿತ್ತು. 2009ನೇ ಇಸವಿಯಲ್ಲಿ ಚುನಾವಣೆಗೆ ಹೋಗಬೇಕಿತ್ತು. 2008ನೇ ಇಸವಿಯ ಬಜೆಟ್‌ನಲ್ಲಿ ಒಂದು ಲಕ್ಷ ಕೋಟಿ ರೂಪಾಯಿ ರೈತರ ಸಾಲವನ್ನು ಮನ್ನಾ ಮಾಡಿದರು. ಚುನಾವಣೆ ಗೆಲ್ಲುವ ದೃಷ್ಟಿಯಲ್ಲಿ ಈ ಕ್ರಮ ಜರುಗಿಸಿದರು. ಸಾಲಮನ್ನಾದಿಂದ ತಾತ್ಕಾಲಿಕವಾಗಿ ರೈತರಿಗೆ ಒಂದಿಷ್ಟು ಉಪಯೋಗವಾಯಿತು. ಅದರಿಂದ ದೇಶದ ಆರ್ಥಿಕತೆಗೆ ಯಾವುದೇ ರೀತಿಯ ಉಪಯೋಗವಾಗಲಿಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಮುಂದಿನ ವರ್ಷ ಚುನಾವಣೆ ಇದ್ದರೂ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರ ದೇಶಕ್ಕೆ ಲುಕ್ಸಾನು (ನಷ್ಟ) ಆಗುವಂತಹ ಜನಪ್ರಿಯ ಯೋಜನೆಗಳಿಗೆ ಹೋಗಲಿಲ್ಲ. ಬದಲಿಗೆ ಹತ್ತು ಲಕ್ಷ ಕೋಟಿ ರೂಪಾಯಿಯನ್ನು ಹೂಡಿಕೆ ಮಾಡುತ್ತೇವೆ, ಮೂಲಸೌಕರ್ಯ ಸೃಷ್ಟಿಸುತ್ತೇವೆ, ಆ ಮೂಲಕ 30 ಲಕ್ಷ ಕೋಟಿ ರೂ. ಲಾಭವನ್ನು ಈ ದೇಶದಲ್ಲಿ ಕಾಣುತ್ತೇವೆ ಎನ್ನುವಂತಹ ದೂರದೃಷ್ಟಿಯ ಕೆಲಸವನ್ನು ಮೋದಿಯವರ ಸರ್ಕಾರ ಮಾಡಿದೆ” ಎಂದು ಬಣ್ಣಿಸಿದ್ದಾರೆ.

“ಕಾಂಗ್ರೆಸ್ ಮಾದರಿಯ ಆರ್ಥಿಕತೆ ಮತ್ತು ಬಿಜೆಪಿ ಮಾದರಿಯ ಆರ್ಥಿಕತೆ ನಡುವಿನ ವ್ಯತ್ಯಾಸವಿದು” ಎಂದು ಅವರು ವಿಶ್ಲೇಷಿಸಿದ್ದಾರೆ.

ಅವಿವೇಕದ ಹೇಳಿಕೆ: ಬಡಗಲಪುರ ನಾಗೇಂದ್ರ 

ರಾಜ್ಯ ರೈತ ಸಂಘದ ಅಧ್ಯಕ್ಷರಾದ ಬಡಗಲಪುರ ನಾಗೇಂದ್ರ ಅವರು ಸಂಸದರ ಹೇಳಿಕೆಗೆ ಸಂಬಂಧಿಸಿದಂತೆ ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯಿಸಿ, “ತೇಜಸ್ವಿ ಸೂರ್ಯ ಅವರ ಹೇಳಿಕೆ ಅವಿವೇಕತನದಿಂದ ಕೂಡಿದೆ. ಸಾಮಾಜಿಕ ಮತ್ತು ಕೃಷಿಯ ಜ್ಞಾನದ ಕೊರತೆ ಇವರಿಗಿದೆ. ಕೃಷಿಯಿಂದ ಶೇ. 63ರಷ್ಟು ಉದ್ಯೋಗ ಸೃಷ್ಟಿಯಾಗುತ್ತದೆ ಎಂದು ಇದೇ ಬಿಜೆಪಿ ಸರ್ಕಾರದ ಸಚಿವರು ಉತ್ತರಿಸಿದ್ದಾರೆ. ಈ ದೇಶದಲ್ಲಿರುವ ಶೇ. 63ರಷ್ಟು ರೈತರು ಪರೋಕ್ಷ ತೆರಿಗೆಯನ್ನು ಕಟ್ಟುತ್ತಿದ್ದಾರೆ. ಎಲ್ಲ ವಸ್ತುಗಳನ್ನು ಖರೀದಿಸಿ, ಖಜಾನೆಗೆ ಹಣ ಸಂದಾಯ ಮಾಡುತ್ತಿರುವವರು ನಾವು. ಸಾಲಮನ್ನಾ ಮಾಡಿ ಎಂದು ನಾವು ಕೇಳುತ್ತಿಲ್ಲ. ಎಂಎಸ್‌ಪಿ ಜಾರಿಗೊಳಿಸುವುದಾಗಿ ಪ್ರಣಾಳಿಕೆಯಲ್ಲಿ ಹೇಳಿದ್ದ ಬಿಜೆಪಿ ಈವರೆಗೂ ಈ ಕುರಿತು ಮಾತನಾಡಿಲ್ಲ. ರೈತರನ್ನು ಕೊಳ್ಳೆ ಹೊಡೆಯುತ್ತಿದ್ದಾರೆ. ಕಾರ್ಪೊರೇಟ್‌ ಕಂಪನಿಗಳ ಸಾಲ ಮನ್ನಾ ಮಾಡಿದ್ದಾರೆ. ಇದರಿಂದ ಯಾವ ಉದ್ಧಾರವಾಗಿದೆ?” ಎಂದು ಕೇಳಿದರು.

“ಇಂದಿಗೂ 36% ಜನರು ಹಸಿವಿನಿಂದ, 37 % ಬಾಣಂತಿಯರು ಮತ್ತು ಮಕ್ಕಳು ಅಪೌಷ್ಟಿಕತೆಯಿಂದ ನರಳುತ್ತಿದ್ದಾರೆ. ಇವರ ಸರ್ಕಾರದಿಂದ ಯಾವ ಸಾಧನೆಯಾಗಿದೆ? ಅನ್ನ ತಿನ್ನುವ ಮುನ್ನ, ಯಾರ ಶ್ರಮದಿಂದ ಈ ಅನ್ನ ಬಂದಿದೆ ಎಂಬುದನ್ನು ತೇಜಸ್ವಿ ಸೂರ್ಯ ಯೋಜನೆ ಮಾಡಬೇಕು. ಗ್ರಾಮೀಣ ಪ್ರದೇಶಕ್ಕೆ ಬಂದು ರೈತರೊಂದಿಗೆ ಸಂವಾದ ಮಾಡಲಿ, ವಾಸ್ತವಗಳನ್ನು ಅವರು ತಿಳಿದುಕೊಳ್ಳಲಿ” ಎಂದು ಆಶಿಸಿದರು.

ತೇಜಸ್ವಿ ಸೂರ್ಯರಿಗೆ ಅರ್ಥವ್ಯವಸ್ಥೆಯ ಎಬಿಸಿಡಿ ಗೊತ್ತಿಲ್ಲ: ಟಿ.ಯಶವಂತ್

ಮದ್ದೂರಿನ ರೈತ ಮುಖಂಡರಾದ ಟಿ.ಯಶವಂತ್‌ ಅವರು ಪ್ರತಿಕ್ರಿಯಿಸಿ, “ತೇಜಸ್ವಿ ಸೂರ್ಯ ಅವರಿಗೆ ಅರ್ಥ ವ್ಯವಸ್ಥೆಯ ಎಬಿಸಿಡಿ ಗೊತ್ತಿಲ್ಲ. ಶತಮೂರ್ಖನ ರೀತಿ ಮಾತನಾಡಿದ್ದಾರೆ. ಜಗತ್ತು ಆರ್ಥಿಕ ಹಿಂಜರಿತದಿಂದ ಹೊರಬರಬೇಕಾದರೆ ಜನತೆಯಲ್ಲಿ ಕೊಳ್ಳುವ ಶಕ್ತಿಯನ್ನು ಹೆಚ್ಚಿಸಬೇಕು ಎಂದು ಅರ್ಥಶಾಸ್ತ್ರಜ್ಞರು ಇಂದು ಸಲಹೆಗಳನ್ನು ನೀಡುತ್ತಿದ್ದಾರೆ. ಈ ಹೊತ್ತಿನಲ್ಲಿ ಅರ್ಥ ವ್ಯವಸ್ಥೆಯ ಬಗ್ಗೆ ಏನೂ ಗೊತ್ತಿಲ್ಲದ ರೀತಿಯಲ್ಲಿ ಅಜ್ಞಾನವನ್ನು ತೇಜಸ್ವಿ ಪ್ರದರ್ಶನ ಮಾಡಿದ್ದಾರೆ” ಎಂದು ಟೀಕಿಸಿದರು.

“ರೈತರು ಎರಡು ಸಲ ಮಾರ್ಕೆಟ್‌ಗೆ ಹೋಗುತ್ತಾರೆ- ತನಗೆ ಬೇಕಾದದ್ದನ್ನು ಖರೀದಿಸಲು ಹಾಗೂ ತಾನು ಬೆಳೆದದ್ದನ್ನು ಮಾರಲು. ಮಾರಲು ಹೋದಾಗಲೆಲ್ಲ ಅಗ್ಗ, ಬೇಕಾದದ್ದನ್ನೂ ಖರೀದಿಸುವಾಗಲೆಲ್ಲ ದುಬಾರಿಯನ್ನು ರೈತ ತೆರುತ್ತಾನೆ. ಇದು ರೈತರನ್ನು ಸಾಲದ ಸುಳಿಗೆ ಸಿಲುಕಿಸಿದೆ. ಇದಕ್ಕೆ  ಸರ್ಕಾರದ ತಪ್ಪು ನೀತಿಗಳು ಕಾರಣ. ಇಂದು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೆ ಬಿಜೆಪಿ ಅನುಸರಿಸುತ್ತಿರುವ ತಪ್ಪು ನೀತಿಗಳು ಕಾರಣ” ಎಂದು ತಿಳಿಸಿದರು.

“ತಪ್ಪು ನೀತಿಯನ್ನು ಸರಿಪಡಿಸಿ, ರೈತ ಸಮುದಾಯಕ್ಕೆ ನೆರವು ನೀಡಬೇಕೆಂದರೆ ಸಾಲಮನ್ನಾ ಅಗತ್ಯ. ವಿಜಯ ಮಲ್ಯ, ನೀರವ್ ಮೋದಿ, ಅದಾನಿ, ಅಂಬಾನಿಯಂತಹ ಬಂಡವಾಳಶಾಹಿಗಳ ಸಾಲ ಕಳೆದ ಹದಿನಾಲ್ಕು ವರ್ಷಗಳಲ್ಲಿ ಹದಿನೈದು ಲಕ್ಷ ಕೋಟಿ ರೂ. ಮನ್ನಾವಾಗಿದೆ. ಇದು ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತದೆಯೇ? ಉದ್ಯಮಿಗಳಿಗೆ ಒಂದು ನ್ಯಾಯ, ರೈತರಿಗೆ ಒಂದು ನ್ಯಾಯವೇ?” ಎಂದು ಪ್ರಶ್ನಿಸಿದರು.

“ಬೆಳೆ ಬೆಳೆಯಲು ರೈತ ಲಕ್ಷಾಂತರ ರೂ. ಖರ್ಚು ಮಾಡುತ್ತಾನೆ. ರೈತನ ಬಂಡವಾಳಕ್ಕೆ ರಕ್ಷಣೆ ಬೇಡವೇ? ರೈತರ ಬಗ್ಗೆ ಭಾಷಣ ಮಾಡಿ ಓಟು ಹಾಕಿಸಿಕೊಂಡ ನರೇಂದ್ರ ಮೋದಿಯವರು, ತೇಜಸ್ವಿ ಸೂರ್ಯರಂತಹ ಎಳಸು ವ್ಯಕ್ತಿಯ ಮೂಲಕ ಈ ಮಾತುಗಳನ್ನು ಹೇಳಿಸುತ್ತಿದ್ದಾರೆ. ಇದನ್ನು ರೈತ ಸಮುದಾಯ ಒಕ್ಕೊರಲಿನಿಂದ ಖಂಡಿಸುತ್ತದೆ” ಎಂದರು.

ಸಾಲಮನ್ನಾ ಬೇಡವೆಂದರೆ ವೈಜ್ಞಾನಿಕ ಬೆಲೆ ನಿಗದಿ ಮಾಡಿ: ಎಚ್‌.ಆರ್‌.ಬಸವರಾಜಪ್ಪ

ರೈತ ಮುಖಂಡರಾದ ಎಚ್.ಆರ್‌.ಬಸವರಾಜಪ್ಪ ಮಾತನಾಡಿ, “ಸ್ವಾಮಿನಾಥನ್ ಆಯೋಗದ ವರದಿ ಅನ್ವಯ ವೈಜ್ಞಾನಿಕ ಬೆಲೆ ನಿಗದಿ ಮಾಡಿದರೆ ಸಾಲ ಮನ್ನಾ ಮಾಡುವ ಅಗತ್ಯ ಬರುವುದಿಲ್ಲ. ಇವರು ಬಂಡವಾಳಶಾಹಿಗಳಿಗೆ ಶೇ. 1ರಷ್ಟು ಬಡ್ಡಿ ದರದಲ್ಲಿ ಸಾಲ ಕೊಡುತ್ತಾರೆ. ರೈತರಿಗೆ ಶೇ. 12ರಿಂದ ಶೇ. 36ರ ದರದಲ್ಲಿ ಬಡ್ಡಿ ವಿಧಿಸಿ ಸಾಲ ನೀಡುತ್ತಾರೆ. ಕಳೆದ 16 ವರ್ಷಗಳಲ್ಲಿ ರೈತರಿಗೆ  45 ಲಕ್ಷ ಕೋಟಿ ನಷ್ಟವಾಗಿದೆ ಎಂದು ಸರ್ಕಾರಿ ಸಂಸ್ಥೆಗಳೇ ಹೇಳುತ್ತಿವೆ. ಇದನ್ನು ಯಾರು ಕೊಡುತ್ತಾರೆ? ನಮಗೆ ಆಗಿರುವ ನಷ್ಟವನ್ನು ತುಂಬಿಕೊಡಬೇಕಲ್ಲವೇ? ನಷ್ಟಕ್ಕೆ ಪರಿಹಾರವಾಗಿ ಸಾಲಮನ್ನಾ ಮಾಡುತ್ತಿದ್ದಾರಷ್ಟೇ” ಎಂದು ತಿಳಿಸಿದರು.

“ಬಂಡವಾಳಶಾಹಿಗಳು ಕೋಟಿ ಕೋಟಿ ಹಣವನ್ನು ಮುಳುಗಿಸುತ್ತಾರೆ. ಈ ತೇಜಸ್ವಿ ಸೂರ್ಯನಂಥವರಿಗೆ ರೈತರ ಹೆಸರು ಹೇಳುವ ಯೋಗ್ಯತೆ ಇಲ್ಲ. ಕೈಗಾರಿಕೋದ್ಯಮಿಗಳ ಸಾಲವನ್ನು ಮನ್ನಾ ಮಾಡಿದ್ದು ಏಕೆ? ರೈತರ ಸಾಲ ಮನ್ನಾ ಬಂದಾಗ ಇವರ ಕಣ್ಣು ಕೆಂಪಾಗುತ್ತವೆ. ತೇಜಸ್ವಿ ಸೂರ್ಯ ರೈತರಲ್ಲ, ದೇಶಪ್ರೇಮಿಯೂ ಅಲ್ಲ, ದೇಶಕ್ಕೆ ಇವರ ಕೊಡುಗೆ ಏನೆಂದು ಸ್ಪಷ್ಟಪಡಿಸಬೇಕು. ರೈತರ ಬಗ್ಗೆ ಮಾತನಾಡುವ ನೈತಿಕತೆ ತೇಜಸ್ವಿಸೂರ್ಯರಿಗೆ ಇಲ್ಲ. ಹಿಂದುತ್ವ ಹೆಸರಲ್ಲಿ ಯುವಕರನ್ನು ಕೆರಳಿಸಿ ಮತಹಾಕಿಸಿಕೊಂಡು ಗೆದ್ದಂತೆ ಅಲ್ಲ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...