Homeಕರ್ನಾಟಕರೈತರ ಸಾಲಮನ್ನಾದಿಂದ ದೇಶಕ್ಕೆ ಉಪಯೋಗವಾಗಿಲ್ಲ; ತೇಜಸ್ವಿ ಸೂರ್ಯ ಹೇಳಿಕೆಗೆ ಮಣ್ಣಿನ ಮಕ್ಕಳ ಆಕ್ರೋಶ

ರೈತರ ಸಾಲಮನ್ನಾದಿಂದ ದೇಶಕ್ಕೆ ಉಪಯೋಗವಾಗಿಲ್ಲ; ತೇಜಸ್ವಿ ಸೂರ್ಯ ಹೇಳಿಕೆಗೆ ಮಣ್ಣಿನ ಮಕ್ಕಳ ಆಕ್ರೋಶ

ತೇಜಸ್ವಿ ಸೂರ್ಯರಿಗೆ ಅರ್ಥವ್ಯವಸ್ಥೆಯ ಎಬಿಸಿಡಿ ಗೊತ್ತಿಲ್ಲ ಎಂದು ರೈತ ಮುಖಂಡರು ಪ್ರತಿಕ್ರಿಯಿಸಿದ್ದಾರೆ

- Advertisement -
- Advertisement -

ರೈತರ ಸಾಲಮನ್ನಾ ಮಾಡುವುದರಿಂದ ದೇಶದ ಆರ್ಥಿಕತೆಗೆ ಯಾವುದೇ ರೀತಿಯ ಉಪಯೋಗವಾಗಿಲ್ಲ ಎಂದು ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ, ಸಂಸದ ತೇಜಸ್ವಿ ಸೂರ್ಯ ಹೇಳಿಕೆ ನೀಡಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿರುವ ಅವರು, “ಆಗ ಯುಪಿಎ ಸರ್ಕಾರವಿತ್ತು. 2009ನೇ ಇಸವಿಯಲ್ಲಿ ಚುನಾವಣೆಗೆ ಹೋಗಬೇಕಿತ್ತು. 2008ನೇ ಇಸವಿಯ ಬಜೆಟ್‌ನಲ್ಲಿ ಒಂದು ಲಕ್ಷ ಕೋಟಿ ರೂಪಾಯಿ ರೈತರ ಸಾಲವನ್ನು ಮನ್ನಾ ಮಾಡಿದರು. ಚುನಾವಣೆ ಗೆಲ್ಲುವ ದೃಷ್ಟಿಯಲ್ಲಿ ಈ ಕ್ರಮ ಜರುಗಿಸಿದರು. ಸಾಲಮನ್ನಾದಿಂದ ತಾತ್ಕಾಲಿಕವಾಗಿ ರೈತರಿಗೆ ಒಂದಿಷ್ಟು ಉಪಯೋಗವಾಯಿತು. ಅದರಿಂದ ದೇಶದ ಆರ್ಥಿಕತೆಗೆ ಯಾವುದೇ ರೀತಿಯ ಉಪಯೋಗವಾಗಲಿಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಮುಂದಿನ ವರ್ಷ ಚುನಾವಣೆ ಇದ್ದರೂ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರ ದೇಶಕ್ಕೆ ಲುಕ್ಸಾನು (ನಷ್ಟ) ಆಗುವಂತಹ ಜನಪ್ರಿಯ ಯೋಜನೆಗಳಿಗೆ ಹೋಗಲಿಲ್ಲ. ಬದಲಿಗೆ ಹತ್ತು ಲಕ್ಷ ಕೋಟಿ ರೂಪಾಯಿಯನ್ನು ಹೂಡಿಕೆ ಮಾಡುತ್ತೇವೆ, ಮೂಲಸೌಕರ್ಯ ಸೃಷ್ಟಿಸುತ್ತೇವೆ, ಆ ಮೂಲಕ 30 ಲಕ್ಷ ಕೋಟಿ ರೂ. ಲಾಭವನ್ನು ಈ ದೇಶದಲ್ಲಿ ಕಾಣುತ್ತೇವೆ ಎನ್ನುವಂತಹ ದೂರದೃಷ್ಟಿಯ ಕೆಲಸವನ್ನು ಮೋದಿಯವರ ಸರ್ಕಾರ ಮಾಡಿದೆ” ಎಂದು ಬಣ್ಣಿಸಿದ್ದಾರೆ.

“ಕಾಂಗ್ರೆಸ್ ಮಾದರಿಯ ಆರ್ಥಿಕತೆ ಮತ್ತು ಬಿಜೆಪಿ ಮಾದರಿಯ ಆರ್ಥಿಕತೆ ನಡುವಿನ ವ್ಯತ್ಯಾಸವಿದು” ಎಂದು ಅವರು ವಿಶ್ಲೇಷಿಸಿದ್ದಾರೆ.

ಅವಿವೇಕದ ಹೇಳಿಕೆ: ಬಡಗಲಪುರ ನಾಗೇಂದ್ರ 

ರಾಜ್ಯ ರೈತ ಸಂಘದ ಅಧ್ಯಕ್ಷರಾದ ಬಡಗಲಪುರ ನಾಗೇಂದ್ರ ಅವರು ಸಂಸದರ ಹೇಳಿಕೆಗೆ ಸಂಬಂಧಿಸಿದಂತೆ ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯಿಸಿ, “ತೇಜಸ್ವಿ ಸೂರ್ಯ ಅವರ ಹೇಳಿಕೆ ಅವಿವೇಕತನದಿಂದ ಕೂಡಿದೆ. ಸಾಮಾಜಿಕ ಮತ್ತು ಕೃಷಿಯ ಜ್ಞಾನದ ಕೊರತೆ ಇವರಿಗಿದೆ. ಕೃಷಿಯಿಂದ ಶೇ. 63ರಷ್ಟು ಉದ್ಯೋಗ ಸೃಷ್ಟಿಯಾಗುತ್ತದೆ ಎಂದು ಇದೇ ಬಿಜೆಪಿ ಸರ್ಕಾರದ ಸಚಿವರು ಉತ್ತರಿಸಿದ್ದಾರೆ. ಈ ದೇಶದಲ್ಲಿರುವ ಶೇ. 63ರಷ್ಟು ರೈತರು ಪರೋಕ್ಷ ತೆರಿಗೆಯನ್ನು ಕಟ್ಟುತ್ತಿದ್ದಾರೆ. ಎಲ್ಲ ವಸ್ತುಗಳನ್ನು ಖರೀದಿಸಿ, ಖಜಾನೆಗೆ ಹಣ ಸಂದಾಯ ಮಾಡುತ್ತಿರುವವರು ನಾವು. ಸಾಲಮನ್ನಾ ಮಾಡಿ ಎಂದು ನಾವು ಕೇಳುತ್ತಿಲ್ಲ. ಎಂಎಸ್‌ಪಿ ಜಾರಿಗೊಳಿಸುವುದಾಗಿ ಪ್ರಣಾಳಿಕೆಯಲ್ಲಿ ಹೇಳಿದ್ದ ಬಿಜೆಪಿ ಈವರೆಗೂ ಈ ಕುರಿತು ಮಾತನಾಡಿಲ್ಲ. ರೈತರನ್ನು ಕೊಳ್ಳೆ ಹೊಡೆಯುತ್ತಿದ್ದಾರೆ. ಕಾರ್ಪೊರೇಟ್‌ ಕಂಪನಿಗಳ ಸಾಲ ಮನ್ನಾ ಮಾಡಿದ್ದಾರೆ. ಇದರಿಂದ ಯಾವ ಉದ್ಧಾರವಾಗಿದೆ?” ಎಂದು ಕೇಳಿದರು.

“ಇಂದಿಗೂ 36% ಜನರು ಹಸಿವಿನಿಂದ, 37 % ಬಾಣಂತಿಯರು ಮತ್ತು ಮಕ್ಕಳು ಅಪೌಷ್ಟಿಕತೆಯಿಂದ ನರಳುತ್ತಿದ್ದಾರೆ. ಇವರ ಸರ್ಕಾರದಿಂದ ಯಾವ ಸಾಧನೆಯಾಗಿದೆ? ಅನ್ನ ತಿನ್ನುವ ಮುನ್ನ, ಯಾರ ಶ್ರಮದಿಂದ ಈ ಅನ್ನ ಬಂದಿದೆ ಎಂಬುದನ್ನು ತೇಜಸ್ವಿ ಸೂರ್ಯ ಯೋಜನೆ ಮಾಡಬೇಕು. ಗ್ರಾಮೀಣ ಪ್ರದೇಶಕ್ಕೆ ಬಂದು ರೈತರೊಂದಿಗೆ ಸಂವಾದ ಮಾಡಲಿ, ವಾಸ್ತವಗಳನ್ನು ಅವರು ತಿಳಿದುಕೊಳ್ಳಲಿ” ಎಂದು ಆಶಿಸಿದರು.

ತೇಜಸ್ವಿ ಸೂರ್ಯರಿಗೆ ಅರ್ಥವ್ಯವಸ್ಥೆಯ ಎಬಿಸಿಡಿ ಗೊತ್ತಿಲ್ಲ: ಟಿ.ಯಶವಂತ್

ಮದ್ದೂರಿನ ರೈತ ಮುಖಂಡರಾದ ಟಿ.ಯಶವಂತ್‌ ಅವರು ಪ್ರತಿಕ್ರಿಯಿಸಿ, “ತೇಜಸ್ವಿ ಸೂರ್ಯ ಅವರಿಗೆ ಅರ್ಥ ವ್ಯವಸ್ಥೆಯ ಎಬಿಸಿಡಿ ಗೊತ್ತಿಲ್ಲ. ಶತಮೂರ್ಖನ ರೀತಿ ಮಾತನಾಡಿದ್ದಾರೆ. ಜಗತ್ತು ಆರ್ಥಿಕ ಹಿಂಜರಿತದಿಂದ ಹೊರಬರಬೇಕಾದರೆ ಜನತೆಯಲ್ಲಿ ಕೊಳ್ಳುವ ಶಕ್ತಿಯನ್ನು ಹೆಚ್ಚಿಸಬೇಕು ಎಂದು ಅರ್ಥಶಾಸ್ತ್ರಜ್ಞರು ಇಂದು ಸಲಹೆಗಳನ್ನು ನೀಡುತ್ತಿದ್ದಾರೆ. ಈ ಹೊತ್ತಿನಲ್ಲಿ ಅರ್ಥ ವ್ಯವಸ್ಥೆಯ ಬಗ್ಗೆ ಏನೂ ಗೊತ್ತಿಲ್ಲದ ರೀತಿಯಲ್ಲಿ ಅಜ್ಞಾನವನ್ನು ತೇಜಸ್ವಿ ಪ್ರದರ್ಶನ ಮಾಡಿದ್ದಾರೆ” ಎಂದು ಟೀಕಿಸಿದರು.

“ರೈತರು ಎರಡು ಸಲ ಮಾರ್ಕೆಟ್‌ಗೆ ಹೋಗುತ್ತಾರೆ- ತನಗೆ ಬೇಕಾದದ್ದನ್ನು ಖರೀದಿಸಲು ಹಾಗೂ ತಾನು ಬೆಳೆದದ್ದನ್ನು ಮಾರಲು. ಮಾರಲು ಹೋದಾಗಲೆಲ್ಲ ಅಗ್ಗ, ಬೇಕಾದದ್ದನ್ನೂ ಖರೀದಿಸುವಾಗಲೆಲ್ಲ ದುಬಾರಿಯನ್ನು ರೈತ ತೆರುತ್ತಾನೆ. ಇದು ರೈತರನ್ನು ಸಾಲದ ಸುಳಿಗೆ ಸಿಲುಕಿಸಿದೆ. ಇದಕ್ಕೆ  ಸರ್ಕಾರದ ತಪ್ಪು ನೀತಿಗಳು ಕಾರಣ. ಇಂದು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೆ ಬಿಜೆಪಿ ಅನುಸರಿಸುತ್ತಿರುವ ತಪ್ಪು ನೀತಿಗಳು ಕಾರಣ” ಎಂದು ತಿಳಿಸಿದರು.

“ತಪ್ಪು ನೀತಿಯನ್ನು ಸರಿಪಡಿಸಿ, ರೈತ ಸಮುದಾಯಕ್ಕೆ ನೆರವು ನೀಡಬೇಕೆಂದರೆ ಸಾಲಮನ್ನಾ ಅಗತ್ಯ. ವಿಜಯ ಮಲ್ಯ, ನೀರವ್ ಮೋದಿ, ಅದಾನಿ, ಅಂಬಾನಿಯಂತಹ ಬಂಡವಾಳಶಾಹಿಗಳ ಸಾಲ ಕಳೆದ ಹದಿನಾಲ್ಕು ವರ್ಷಗಳಲ್ಲಿ ಹದಿನೈದು ಲಕ್ಷ ಕೋಟಿ ರೂ. ಮನ್ನಾವಾಗಿದೆ. ಇದು ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತದೆಯೇ? ಉದ್ಯಮಿಗಳಿಗೆ ಒಂದು ನ್ಯಾಯ, ರೈತರಿಗೆ ಒಂದು ನ್ಯಾಯವೇ?” ಎಂದು ಪ್ರಶ್ನಿಸಿದರು.

“ಬೆಳೆ ಬೆಳೆಯಲು ರೈತ ಲಕ್ಷಾಂತರ ರೂ. ಖರ್ಚು ಮಾಡುತ್ತಾನೆ. ರೈತನ ಬಂಡವಾಳಕ್ಕೆ ರಕ್ಷಣೆ ಬೇಡವೇ? ರೈತರ ಬಗ್ಗೆ ಭಾಷಣ ಮಾಡಿ ಓಟು ಹಾಕಿಸಿಕೊಂಡ ನರೇಂದ್ರ ಮೋದಿಯವರು, ತೇಜಸ್ವಿ ಸೂರ್ಯರಂತಹ ಎಳಸು ವ್ಯಕ್ತಿಯ ಮೂಲಕ ಈ ಮಾತುಗಳನ್ನು ಹೇಳಿಸುತ್ತಿದ್ದಾರೆ. ಇದನ್ನು ರೈತ ಸಮುದಾಯ ಒಕ್ಕೊರಲಿನಿಂದ ಖಂಡಿಸುತ್ತದೆ” ಎಂದರು.

ಸಾಲಮನ್ನಾ ಬೇಡವೆಂದರೆ ವೈಜ್ಞಾನಿಕ ಬೆಲೆ ನಿಗದಿ ಮಾಡಿ: ಎಚ್‌.ಆರ್‌.ಬಸವರಾಜಪ್ಪ

ರೈತ ಮುಖಂಡರಾದ ಎಚ್.ಆರ್‌.ಬಸವರಾಜಪ್ಪ ಮಾತನಾಡಿ, “ಸ್ವಾಮಿನಾಥನ್ ಆಯೋಗದ ವರದಿ ಅನ್ವಯ ವೈಜ್ಞಾನಿಕ ಬೆಲೆ ನಿಗದಿ ಮಾಡಿದರೆ ಸಾಲ ಮನ್ನಾ ಮಾಡುವ ಅಗತ್ಯ ಬರುವುದಿಲ್ಲ. ಇವರು ಬಂಡವಾಳಶಾಹಿಗಳಿಗೆ ಶೇ. 1ರಷ್ಟು ಬಡ್ಡಿ ದರದಲ್ಲಿ ಸಾಲ ಕೊಡುತ್ತಾರೆ. ರೈತರಿಗೆ ಶೇ. 12ರಿಂದ ಶೇ. 36ರ ದರದಲ್ಲಿ ಬಡ್ಡಿ ವಿಧಿಸಿ ಸಾಲ ನೀಡುತ್ತಾರೆ. ಕಳೆದ 16 ವರ್ಷಗಳಲ್ಲಿ ರೈತರಿಗೆ  45 ಲಕ್ಷ ಕೋಟಿ ನಷ್ಟವಾಗಿದೆ ಎಂದು ಸರ್ಕಾರಿ ಸಂಸ್ಥೆಗಳೇ ಹೇಳುತ್ತಿವೆ. ಇದನ್ನು ಯಾರು ಕೊಡುತ್ತಾರೆ? ನಮಗೆ ಆಗಿರುವ ನಷ್ಟವನ್ನು ತುಂಬಿಕೊಡಬೇಕಲ್ಲವೇ? ನಷ್ಟಕ್ಕೆ ಪರಿಹಾರವಾಗಿ ಸಾಲಮನ್ನಾ ಮಾಡುತ್ತಿದ್ದಾರಷ್ಟೇ” ಎಂದು ತಿಳಿಸಿದರು.

“ಬಂಡವಾಳಶಾಹಿಗಳು ಕೋಟಿ ಕೋಟಿ ಹಣವನ್ನು ಮುಳುಗಿಸುತ್ತಾರೆ. ಈ ತೇಜಸ್ವಿ ಸೂರ್ಯನಂಥವರಿಗೆ ರೈತರ ಹೆಸರು ಹೇಳುವ ಯೋಗ್ಯತೆ ಇಲ್ಲ. ಕೈಗಾರಿಕೋದ್ಯಮಿಗಳ ಸಾಲವನ್ನು ಮನ್ನಾ ಮಾಡಿದ್ದು ಏಕೆ? ರೈತರ ಸಾಲ ಮನ್ನಾ ಬಂದಾಗ ಇವರ ಕಣ್ಣು ಕೆಂಪಾಗುತ್ತವೆ. ತೇಜಸ್ವಿ ಸೂರ್ಯ ರೈತರಲ್ಲ, ದೇಶಪ್ರೇಮಿಯೂ ಅಲ್ಲ, ದೇಶಕ್ಕೆ ಇವರ ಕೊಡುಗೆ ಏನೆಂದು ಸ್ಪಷ್ಟಪಡಿಸಬೇಕು. ರೈತರ ಬಗ್ಗೆ ಮಾತನಾಡುವ ನೈತಿಕತೆ ತೇಜಸ್ವಿಸೂರ್ಯರಿಗೆ ಇಲ್ಲ. ಹಿಂದುತ್ವ ಹೆಸರಲ್ಲಿ ಯುವಕರನ್ನು ಕೆರಳಿಸಿ ಮತಹಾಕಿಸಿಕೊಂಡು ಗೆದ್ದಂತೆ ಅಲ್ಲ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...