Homeಕರ್ನಾಟಕರೈತರ ಸಾಲಮನ್ನಾದಿಂದ ದೇಶಕ್ಕೆ ಉಪಯೋಗವಾಗಿಲ್ಲ; ತೇಜಸ್ವಿ ಸೂರ್ಯ ಹೇಳಿಕೆಗೆ ಮಣ್ಣಿನ ಮಕ್ಕಳ ಆಕ್ರೋಶ

ರೈತರ ಸಾಲಮನ್ನಾದಿಂದ ದೇಶಕ್ಕೆ ಉಪಯೋಗವಾಗಿಲ್ಲ; ತೇಜಸ್ವಿ ಸೂರ್ಯ ಹೇಳಿಕೆಗೆ ಮಣ್ಣಿನ ಮಕ್ಕಳ ಆಕ್ರೋಶ

ತೇಜಸ್ವಿ ಸೂರ್ಯರಿಗೆ ಅರ್ಥವ್ಯವಸ್ಥೆಯ ಎಬಿಸಿಡಿ ಗೊತ್ತಿಲ್ಲ ಎಂದು ರೈತ ಮುಖಂಡರು ಪ್ರತಿಕ್ರಿಯಿಸಿದ್ದಾರೆ

- Advertisement -
- Advertisement -

ರೈತರ ಸಾಲಮನ್ನಾ ಮಾಡುವುದರಿಂದ ದೇಶದ ಆರ್ಥಿಕತೆಗೆ ಯಾವುದೇ ರೀತಿಯ ಉಪಯೋಗವಾಗಿಲ್ಲ ಎಂದು ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ, ಸಂಸದ ತೇಜಸ್ವಿ ಸೂರ್ಯ ಹೇಳಿಕೆ ನೀಡಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿರುವ ಅವರು, “ಆಗ ಯುಪಿಎ ಸರ್ಕಾರವಿತ್ತು. 2009ನೇ ಇಸವಿಯಲ್ಲಿ ಚುನಾವಣೆಗೆ ಹೋಗಬೇಕಿತ್ತು. 2008ನೇ ಇಸವಿಯ ಬಜೆಟ್‌ನಲ್ಲಿ ಒಂದು ಲಕ್ಷ ಕೋಟಿ ರೂಪಾಯಿ ರೈತರ ಸಾಲವನ್ನು ಮನ್ನಾ ಮಾಡಿದರು. ಚುನಾವಣೆ ಗೆಲ್ಲುವ ದೃಷ್ಟಿಯಲ್ಲಿ ಈ ಕ್ರಮ ಜರುಗಿಸಿದರು. ಸಾಲಮನ್ನಾದಿಂದ ತಾತ್ಕಾಲಿಕವಾಗಿ ರೈತರಿಗೆ ಒಂದಿಷ್ಟು ಉಪಯೋಗವಾಯಿತು. ಅದರಿಂದ ದೇಶದ ಆರ್ಥಿಕತೆಗೆ ಯಾವುದೇ ರೀತಿಯ ಉಪಯೋಗವಾಗಲಿಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಮುಂದಿನ ವರ್ಷ ಚುನಾವಣೆ ಇದ್ದರೂ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರ ದೇಶಕ್ಕೆ ಲುಕ್ಸಾನು (ನಷ್ಟ) ಆಗುವಂತಹ ಜನಪ್ರಿಯ ಯೋಜನೆಗಳಿಗೆ ಹೋಗಲಿಲ್ಲ. ಬದಲಿಗೆ ಹತ್ತು ಲಕ್ಷ ಕೋಟಿ ರೂಪಾಯಿಯನ್ನು ಹೂಡಿಕೆ ಮಾಡುತ್ತೇವೆ, ಮೂಲಸೌಕರ್ಯ ಸೃಷ್ಟಿಸುತ್ತೇವೆ, ಆ ಮೂಲಕ 30 ಲಕ್ಷ ಕೋಟಿ ರೂ. ಲಾಭವನ್ನು ಈ ದೇಶದಲ್ಲಿ ಕಾಣುತ್ತೇವೆ ಎನ್ನುವಂತಹ ದೂರದೃಷ್ಟಿಯ ಕೆಲಸವನ್ನು ಮೋದಿಯವರ ಸರ್ಕಾರ ಮಾಡಿದೆ” ಎಂದು ಬಣ್ಣಿಸಿದ್ದಾರೆ.

“ಕಾಂಗ್ರೆಸ್ ಮಾದರಿಯ ಆರ್ಥಿಕತೆ ಮತ್ತು ಬಿಜೆಪಿ ಮಾದರಿಯ ಆರ್ಥಿಕತೆ ನಡುವಿನ ವ್ಯತ್ಯಾಸವಿದು” ಎಂದು ಅವರು ವಿಶ್ಲೇಷಿಸಿದ್ದಾರೆ.

ಅವಿವೇಕದ ಹೇಳಿಕೆ: ಬಡಗಲಪುರ ನಾಗೇಂದ್ರ 

ರಾಜ್ಯ ರೈತ ಸಂಘದ ಅಧ್ಯಕ್ಷರಾದ ಬಡಗಲಪುರ ನಾಗೇಂದ್ರ ಅವರು ಸಂಸದರ ಹೇಳಿಕೆಗೆ ಸಂಬಂಧಿಸಿದಂತೆ ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯಿಸಿ, “ತೇಜಸ್ವಿ ಸೂರ್ಯ ಅವರ ಹೇಳಿಕೆ ಅವಿವೇಕತನದಿಂದ ಕೂಡಿದೆ. ಸಾಮಾಜಿಕ ಮತ್ತು ಕೃಷಿಯ ಜ್ಞಾನದ ಕೊರತೆ ಇವರಿಗಿದೆ. ಕೃಷಿಯಿಂದ ಶೇ. 63ರಷ್ಟು ಉದ್ಯೋಗ ಸೃಷ್ಟಿಯಾಗುತ್ತದೆ ಎಂದು ಇದೇ ಬಿಜೆಪಿ ಸರ್ಕಾರದ ಸಚಿವರು ಉತ್ತರಿಸಿದ್ದಾರೆ. ಈ ದೇಶದಲ್ಲಿರುವ ಶೇ. 63ರಷ್ಟು ರೈತರು ಪರೋಕ್ಷ ತೆರಿಗೆಯನ್ನು ಕಟ್ಟುತ್ತಿದ್ದಾರೆ. ಎಲ್ಲ ವಸ್ತುಗಳನ್ನು ಖರೀದಿಸಿ, ಖಜಾನೆಗೆ ಹಣ ಸಂದಾಯ ಮಾಡುತ್ತಿರುವವರು ನಾವು. ಸಾಲಮನ್ನಾ ಮಾಡಿ ಎಂದು ನಾವು ಕೇಳುತ್ತಿಲ್ಲ. ಎಂಎಸ್‌ಪಿ ಜಾರಿಗೊಳಿಸುವುದಾಗಿ ಪ್ರಣಾಳಿಕೆಯಲ್ಲಿ ಹೇಳಿದ್ದ ಬಿಜೆಪಿ ಈವರೆಗೂ ಈ ಕುರಿತು ಮಾತನಾಡಿಲ್ಲ. ರೈತರನ್ನು ಕೊಳ್ಳೆ ಹೊಡೆಯುತ್ತಿದ್ದಾರೆ. ಕಾರ್ಪೊರೇಟ್‌ ಕಂಪನಿಗಳ ಸಾಲ ಮನ್ನಾ ಮಾಡಿದ್ದಾರೆ. ಇದರಿಂದ ಯಾವ ಉದ್ಧಾರವಾಗಿದೆ?” ಎಂದು ಕೇಳಿದರು.

“ಇಂದಿಗೂ 36% ಜನರು ಹಸಿವಿನಿಂದ, 37 % ಬಾಣಂತಿಯರು ಮತ್ತು ಮಕ್ಕಳು ಅಪೌಷ್ಟಿಕತೆಯಿಂದ ನರಳುತ್ತಿದ್ದಾರೆ. ಇವರ ಸರ್ಕಾರದಿಂದ ಯಾವ ಸಾಧನೆಯಾಗಿದೆ? ಅನ್ನ ತಿನ್ನುವ ಮುನ್ನ, ಯಾರ ಶ್ರಮದಿಂದ ಈ ಅನ್ನ ಬಂದಿದೆ ಎಂಬುದನ್ನು ತೇಜಸ್ವಿ ಸೂರ್ಯ ಯೋಜನೆ ಮಾಡಬೇಕು. ಗ್ರಾಮೀಣ ಪ್ರದೇಶಕ್ಕೆ ಬಂದು ರೈತರೊಂದಿಗೆ ಸಂವಾದ ಮಾಡಲಿ, ವಾಸ್ತವಗಳನ್ನು ಅವರು ತಿಳಿದುಕೊಳ್ಳಲಿ” ಎಂದು ಆಶಿಸಿದರು.

ತೇಜಸ್ವಿ ಸೂರ್ಯರಿಗೆ ಅರ್ಥವ್ಯವಸ್ಥೆಯ ಎಬಿಸಿಡಿ ಗೊತ್ತಿಲ್ಲ: ಟಿ.ಯಶವಂತ್

ಮದ್ದೂರಿನ ರೈತ ಮುಖಂಡರಾದ ಟಿ.ಯಶವಂತ್‌ ಅವರು ಪ್ರತಿಕ್ರಿಯಿಸಿ, “ತೇಜಸ್ವಿ ಸೂರ್ಯ ಅವರಿಗೆ ಅರ್ಥ ವ್ಯವಸ್ಥೆಯ ಎಬಿಸಿಡಿ ಗೊತ್ತಿಲ್ಲ. ಶತಮೂರ್ಖನ ರೀತಿ ಮಾತನಾಡಿದ್ದಾರೆ. ಜಗತ್ತು ಆರ್ಥಿಕ ಹಿಂಜರಿತದಿಂದ ಹೊರಬರಬೇಕಾದರೆ ಜನತೆಯಲ್ಲಿ ಕೊಳ್ಳುವ ಶಕ್ತಿಯನ್ನು ಹೆಚ್ಚಿಸಬೇಕು ಎಂದು ಅರ್ಥಶಾಸ್ತ್ರಜ್ಞರು ಇಂದು ಸಲಹೆಗಳನ್ನು ನೀಡುತ್ತಿದ್ದಾರೆ. ಈ ಹೊತ್ತಿನಲ್ಲಿ ಅರ್ಥ ವ್ಯವಸ್ಥೆಯ ಬಗ್ಗೆ ಏನೂ ಗೊತ್ತಿಲ್ಲದ ರೀತಿಯಲ್ಲಿ ಅಜ್ಞಾನವನ್ನು ತೇಜಸ್ವಿ ಪ್ರದರ್ಶನ ಮಾಡಿದ್ದಾರೆ” ಎಂದು ಟೀಕಿಸಿದರು.

“ರೈತರು ಎರಡು ಸಲ ಮಾರ್ಕೆಟ್‌ಗೆ ಹೋಗುತ್ತಾರೆ- ತನಗೆ ಬೇಕಾದದ್ದನ್ನು ಖರೀದಿಸಲು ಹಾಗೂ ತಾನು ಬೆಳೆದದ್ದನ್ನು ಮಾರಲು. ಮಾರಲು ಹೋದಾಗಲೆಲ್ಲ ಅಗ್ಗ, ಬೇಕಾದದ್ದನ್ನೂ ಖರೀದಿಸುವಾಗಲೆಲ್ಲ ದುಬಾರಿಯನ್ನು ರೈತ ತೆರುತ್ತಾನೆ. ಇದು ರೈತರನ್ನು ಸಾಲದ ಸುಳಿಗೆ ಸಿಲುಕಿಸಿದೆ. ಇದಕ್ಕೆ  ಸರ್ಕಾರದ ತಪ್ಪು ನೀತಿಗಳು ಕಾರಣ. ಇಂದು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೆ ಬಿಜೆಪಿ ಅನುಸರಿಸುತ್ತಿರುವ ತಪ್ಪು ನೀತಿಗಳು ಕಾರಣ” ಎಂದು ತಿಳಿಸಿದರು.

“ತಪ್ಪು ನೀತಿಯನ್ನು ಸರಿಪಡಿಸಿ, ರೈತ ಸಮುದಾಯಕ್ಕೆ ನೆರವು ನೀಡಬೇಕೆಂದರೆ ಸಾಲಮನ್ನಾ ಅಗತ್ಯ. ವಿಜಯ ಮಲ್ಯ, ನೀರವ್ ಮೋದಿ, ಅದಾನಿ, ಅಂಬಾನಿಯಂತಹ ಬಂಡವಾಳಶಾಹಿಗಳ ಸಾಲ ಕಳೆದ ಹದಿನಾಲ್ಕು ವರ್ಷಗಳಲ್ಲಿ ಹದಿನೈದು ಲಕ್ಷ ಕೋಟಿ ರೂ. ಮನ್ನಾವಾಗಿದೆ. ಇದು ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತದೆಯೇ? ಉದ್ಯಮಿಗಳಿಗೆ ಒಂದು ನ್ಯಾಯ, ರೈತರಿಗೆ ಒಂದು ನ್ಯಾಯವೇ?” ಎಂದು ಪ್ರಶ್ನಿಸಿದರು.

“ಬೆಳೆ ಬೆಳೆಯಲು ರೈತ ಲಕ್ಷಾಂತರ ರೂ. ಖರ್ಚು ಮಾಡುತ್ತಾನೆ. ರೈತನ ಬಂಡವಾಳಕ್ಕೆ ರಕ್ಷಣೆ ಬೇಡವೇ? ರೈತರ ಬಗ್ಗೆ ಭಾಷಣ ಮಾಡಿ ಓಟು ಹಾಕಿಸಿಕೊಂಡ ನರೇಂದ್ರ ಮೋದಿಯವರು, ತೇಜಸ್ವಿ ಸೂರ್ಯರಂತಹ ಎಳಸು ವ್ಯಕ್ತಿಯ ಮೂಲಕ ಈ ಮಾತುಗಳನ್ನು ಹೇಳಿಸುತ್ತಿದ್ದಾರೆ. ಇದನ್ನು ರೈತ ಸಮುದಾಯ ಒಕ್ಕೊರಲಿನಿಂದ ಖಂಡಿಸುತ್ತದೆ” ಎಂದರು.

ಸಾಲಮನ್ನಾ ಬೇಡವೆಂದರೆ ವೈಜ್ಞಾನಿಕ ಬೆಲೆ ನಿಗದಿ ಮಾಡಿ: ಎಚ್‌.ಆರ್‌.ಬಸವರಾಜಪ್ಪ

ರೈತ ಮುಖಂಡರಾದ ಎಚ್.ಆರ್‌.ಬಸವರಾಜಪ್ಪ ಮಾತನಾಡಿ, “ಸ್ವಾಮಿನಾಥನ್ ಆಯೋಗದ ವರದಿ ಅನ್ವಯ ವೈಜ್ಞಾನಿಕ ಬೆಲೆ ನಿಗದಿ ಮಾಡಿದರೆ ಸಾಲ ಮನ್ನಾ ಮಾಡುವ ಅಗತ್ಯ ಬರುವುದಿಲ್ಲ. ಇವರು ಬಂಡವಾಳಶಾಹಿಗಳಿಗೆ ಶೇ. 1ರಷ್ಟು ಬಡ್ಡಿ ದರದಲ್ಲಿ ಸಾಲ ಕೊಡುತ್ತಾರೆ. ರೈತರಿಗೆ ಶೇ. 12ರಿಂದ ಶೇ. 36ರ ದರದಲ್ಲಿ ಬಡ್ಡಿ ವಿಧಿಸಿ ಸಾಲ ನೀಡುತ್ತಾರೆ. ಕಳೆದ 16 ವರ್ಷಗಳಲ್ಲಿ ರೈತರಿಗೆ  45 ಲಕ್ಷ ಕೋಟಿ ನಷ್ಟವಾಗಿದೆ ಎಂದು ಸರ್ಕಾರಿ ಸಂಸ್ಥೆಗಳೇ ಹೇಳುತ್ತಿವೆ. ಇದನ್ನು ಯಾರು ಕೊಡುತ್ತಾರೆ? ನಮಗೆ ಆಗಿರುವ ನಷ್ಟವನ್ನು ತುಂಬಿಕೊಡಬೇಕಲ್ಲವೇ? ನಷ್ಟಕ್ಕೆ ಪರಿಹಾರವಾಗಿ ಸಾಲಮನ್ನಾ ಮಾಡುತ್ತಿದ್ದಾರಷ್ಟೇ” ಎಂದು ತಿಳಿಸಿದರು.

“ಬಂಡವಾಳಶಾಹಿಗಳು ಕೋಟಿ ಕೋಟಿ ಹಣವನ್ನು ಮುಳುಗಿಸುತ್ತಾರೆ. ಈ ತೇಜಸ್ವಿ ಸೂರ್ಯನಂಥವರಿಗೆ ರೈತರ ಹೆಸರು ಹೇಳುವ ಯೋಗ್ಯತೆ ಇಲ್ಲ. ಕೈಗಾರಿಕೋದ್ಯಮಿಗಳ ಸಾಲವನ್ನು ಮನ್ನಾ ಮಾಡಿದ್ದು ಏಕೆ? ರೈತರ ಸಾಲ ಮನ್ನಾ ಬಂದಾಗ ಇವರ ಕಣ್ಣು ಕೆಂಪಾಗುತ್ತವೆ. ತೇಜಸ್ವಿ ಸೂರ್ಯ ರೈತರಲ್ಲ, ದೇಶಪ್ರೇಮಿಯೂ ಅಲ್ಲ, ದೇಶಕ್ಕೆ ಇವರ ಕೊಡುಗೆ ಏನೆಂದು ಸ್ಪಷ್ಟಪಡಿಸಬೇಕು. ರೈತರ ಬಗ್ಗೆ ಮಾತನಾಡುವ ನೈತಿಕತೆ ತೇಜಸ್ವಿಸೂರ್ಯರಿಗೆ ಇಲ್ಲ. ಹಿಂದುತ್ವ ಹೆಸರಲ್ಲಿ ಯುವಕರನ್ನು ಕೆರಳಿಸಿ ಮತಹಾಕಿಸಿಕೊಂಡು ಗೆದ್ದಂತೆ ಅಲ್ಲ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...