Homeಕರ್ನಾಟಕರೈತರ ಸಾಲಮನ್ನಾದಿಂದ ದೇಶಕ್ಕೆ ಉಪಯೋಗವಾಗಿಲ್ಲ; ತೇಜಸ್ವಿ ಸೂರ್ಯ ಹೇಳಿಕೆಗೆ ಮಣ್ಣಿನ ಮಕ್ಕಳ ಆಕ್ರೋಶ

ರೈತರ ಸಾಲಮನ್ನಾದಿಂದ ದೇಶಕ್ಕೆ ಉಪಯೋಗವಾಗಿಲ್ಲ; ತೇಜಸ್ವಿ ಸೂರ್ಯ ಹೇಳಿಕೆಗೆ ಮಣ್ಣಿನ ಮಕ್ಕಳ ಆಕ್ರೋಶ

ತೇಜಸ್ವಿ ಸೂರ್ಯರಿಗೆ ಅರ್ಥವ್ಯವಸ್ಥೆಯ ಎಬಿಸಿಡಿ ಗೊತ್ತಿಲ್ಲ ಎಂದು ರೈತ ಮುಖಂಡರು ಪ್ರತಿಕ್ರಿಯಿಸಿದ್ದಾರೆ

- Advertisement -
- Advertisement -

ರೈತರ ಸಾಲಮನ್ನಾ ಮಾಡುವುದರಿಂದ ದೇಶದ ಆರ್ಥಿಕತೆಗೆ ಯಾವುದೇ ರೀತಿಯ ಉಪಯೋಗವಾಗಿಲ್ಲ ಎಂದು ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ, ಸಂಸದ ತೇಜಸ್ವಿ ಸೂರ್ಯ ಹೇಳಿಕೆ ನೀಡಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿರುವ ಅವರು, “ಆಗ ಯುಪಿಎ ಸರ್ಕಾರವಿತ್ತು. 2009ನೇ ಇಸವಿಯಲ್ಲಿ ಚುನಾವಣೆಗೆ ಹೋಗಬೇಕಿತ್ತು. 2008ನೇ ಇಸವಿಯ ಬಜೆಟ್‌ನಲ್ಲಿ ಒಂದು ಲಕ್ಷ ಕೋಟಿ ರೂಪಾಯಿ ರೈತರ ಸಾಲವನ್ನು ಮನ್ನಾ ಮಾಡಿದರು. ಚುನಾವಣೆ ಗೆಲ್ಲುವ ದೃಷ್ಟಿಯಲ್ಲಿ ಈ ಕ್ರಮ ಜರುಗಿಸಿದರು. ಸಾಲಮನ್ನಾದಿಂದ ತಾತ್ಕಾಲಿಕವಾಗಿ ರೈತರಿಗೆ ಒಂದಿಷ್ಟು ಉಪಯೋಗವಾಯಿತು. ಅದರಿಂದ ದೇಶದ ಆರ್ಥಿಕತೆಗೆ ಯಾವುದೇ ರೀತಿಯ ಉಪಯೋಗವಾಗಲಿಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಮುಂದಿನ ವರ್ಷ ಚುನಾವಣೆ ಇದ್ದರೂ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರ ದೇಶಕ್ಕೆ ಲುಕ್ಸಾನು (ನಷ್ಟ) ಆಗುವಂತಹ ಜನಪ್ರಿಯ ಯೋಜನೆಗಳಿಗೆ ಹೋಗಲಿಲ್ಲ. ಬದಲಿಗೆ ಹತ್ತು ಲಕ್ಷ ಕೋಟಿ ರೂಪಾಯಿಯನ್ನು ಹೂಡಿಕೆ ಮಾಡುತ್ತೇವೆ, ಮೂಲಸೌಕರ್ಯ ಸೃಷ್ಟಿಸುತ್ತೇವೆ, ಆ ಮೂಲಕ 30 ಲಕ್ಷ ಕೋಟಿ ರೂ. ಲಾಭವನ್ನು ಈ ದೇಶದಲ್ಲಿ ಕಾಣುತ್ತೇವೆ ಎನ್ನುವಂತಹ ದೂರದೃಷ್ಟಿಯ ಕೆಲಸವನ್ನು ಮೋದಿಯವರ ಸರ್ಕಾರ ಮಾಡಿದೆ” ಎಂದು ಬಣ್ಣಿಸಿದ್ದಾರೆ.

“ಕಾಂಗ್ರೆಸ್ ಮಾದರಿಯ ಆರ್ಥಿಕತೆ ಮತ್ತು ಬಿಜೆಪಿ ಮಾದರಿಯ ಆರ್ಥಿಕತೆ ನಡುವಿನ ವ್ಯತ್ಯಾಸವಿದು” ಎಂದು ಅವರು ವಿಶ್ಲೇಷಿಸಿದ್ದಾರೆ.

ಅವಿವೇಕದ ಹೇಳಿಕೆ: ಬಡಗಲಪುರ ನಾಗೇಂದ್ರ 

ರಾಜ್ಯ ರೈತ ಸಂಘದ ಅಧ್ಯಕ್ಷರಾದ ಬಡಗಲಪುರ ನಾಗೇಂದ್ರ ಅವರು ಸಂಸದರ ಹೇಳಿಕೆಗೆ ಸಂಬಂಧಿಸಿದಂತೆ ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯಿಸಿ, “ತೇಜಸ್ವಿ ಸೂರ್ಯ ಅವರ ಹೇಳಿಕೆ ಅವಿವೇಕತನದಿಂದ ಕೂಡಿದೆ. ಸಾಮಾಜಿಕ ಮತ್ತು ಕೃಷಿಯ ಜ್ಞಾನದ ಕೊರತೆ ಇವರಿಗಿದೆ. ಕೃಷಿಯಿಂದ ಶೇ. 63ರಷ್ಟು ಉದ್ಯೋಗ ಸೃಷ್ಟಿಯಾಗುತ್ತದೆ ಎಂದು ಇದೇ ಬಿಜೆಪಿ ಸರ್ಕಾರದ ಸಚಿವರು ಉತ್ತರಿಸಿದ್ದಾರೆ. ಈ ದೇಶದಲ್ಲಿರುವ ಶೇ. 63ರಷ್ಟು ರೈತರು ಪರೋಕ್ಷ ತೆರಿಗೆಯನ್ನು ಕಟ್ಟುತ್ತಿದ್ದಾರೆ. ಎಲ್ಲ ವಸ್ತುಗಳನ್ನು ಖರೀದಿಸಿ, ಖಜಾನೆಗೆ ಹಣ ಸಂದಾಯ ಮಾಡುತ್ತಿರುವವರು ನಾವು. ಸಾಲಮನ್ನಾ ಮಾಡಿ ಎಂದು ನಾವು ಕೇಳುತ್ತಿಲ್ಲ. ಎಂಎಸ್‌ಪಿ ಜಾರಿಗೊಳಿಸುವುದಾಗಿ ಪ್ರಣಾಳಿಕೆಯಲ್ಲಿ ಹೇಳಿದ್ದ ಬಿಜೆಪಿ ಈವರೆಗೂ ಈ ಕುರಿತು ಮಾತನಾಡಿಲ್ಲ. ರೈತರನ್ನು ಕೊಳ್ಳೆ ಹೊಡೆಯುತ್ತಿದ್ದಾರೆ. ಕಾರ್ಪೊರೇಟ್‌ ಕಂಪನಿಗಳ ಸಾಲ ಮನ್ನಾ ಮಾಡಿದ್ದಾರೆ. ಇದರಿಂದ ಯಾವ ಉದ್ಧಾರವಾಗಿದೆ?” ಎಂದು ಕೇಳಿದರು.

“ಇಂದಿಗೂ 36% ಜನರು ಹಸಿವಿನಿಂದ, 37 % ಬಾಣಂತಿಯರು ಮತ್ತು ಮಕ್ಕಳು ಅಪೌಷ್ಟಿಕತೆಯಿಂದ ನರಳುತ್ತಿದ್ದಾರೆ. ಇವರ ಸರ್ಕಾರದಿಂದ ಯಾವ ಸಾಧನೆಯಾಗಿದೆ? ಅನ್ನ ತಿನ್ನುವ ಮುನ್ನ, ಯಾರ ಶ್ರಮದಿಂದ ಈ ಅನ್ನ ಬಂದಿದೆ ಎಂಬುದನ್ನು ತೇಜಸ್ವಿ ಸೂರ್ಯ ಯೋಜನೆ ಮಾಡಬೇಕು. ಗ್ರಾಮೀಣ ಪ್ರದೇಶಕ್ಕೆ ಬಂದು ರೈತರೊಂದಿಗೆ ಸಂವಾದ ಮಾಡಲಿ, ವಾಸ್ತವಗಳನ್ನು ಅವರು ತಿಳಿದುಕೊಳ್ಳಲಿ” ಎಂದು ಆಶಿಸಿದರು.

ತೇಜಸ್ವಿ ಸೂರ್ಯರಿಗೆ ಅರ್ಥವ್ಯವಸ್ಥೆಯ ಎಬಿಸಿಡಿ ಗೊತ್ತಿಲ್ಲ: ಟಿ.ಯಶವಂತ್

ಮದ್ದೂರಿನ ರೈತ ಮುಖಂಡರಾದ ಟಿ.ಯಶವಂತ್‌ ಅವರು ಪ್ರತಿಕ್ರಿಯಿಸಿ, “ತೇಜಸ್ವಿ ಸೂರ್ಯ ಅವರಿಗೆ ಅರ್ಥ ವ್ಯವಸ್ಥೆಯ ಎಬಿಸಿಡಿ ಗೊತ್ತಿಲ್ಲ. ಶತಮೂರ್ಖನ ರೀತಿ ಮಾತನಾಡಿದ್ದಾರೆ. ಜಗತ್ತು ಆರ್ಥಿಕ ಹಿಂಜರಿತದಿಂದ ಹೊರಬರಬೇಕಾದರೆ ಜನತೆಯಲ್ಲಿ ಕೊಳ್ಳುವ ಶಕ್ತಿಯನ್ನು ಹೆಚ್ಚಿಸಬೇಕು ಎಂದು ಅರ್ಥಶಾಸ್ತ್ರಜ್ಞರು ಇಂದು ಸಲಹೆಗಳನ್ನು ನೀಡುತ್ತಿದ್ದಾರೆ. ಈ ಹೊತ್ತಿನಲ್ಲಿ ಅರ್ಥ ವ್ಯವಸ್ಥೆಯ ಬಗ್ಗೆ ಏನೂ ಗೊತ್ತಿಲ್ಲದ ರೀತಿಯಲ್ಲಿ ಅಜ್ಞಾನವನ್ನು ತೇಜಸ್ವಿ ಪ್ರದರ್ಶನ ಮಾಡಿದ್ದಾರೆ” ಎಂದು ಟೀಕಿಸಿದರು.

“ರೈತರು ಎರಡು ಸಲ ಮಾರ್ಕೆಟ್‌ಗೆ ಹೋಗುತ್ತಾರೆ- ತನಗೆ ಬೇಕಾದದ್ದನ್ನು ಖರೀದಿಸಲು ಹಾಗೂ ತಾನು ಬೆಳೆದದ್ದನ್ನು ಮಾರಲು. ಮಾರಲು ಹೋದಾಗಲೆಲ್ಲ ಅಗ್ಗ, ಬೇಕಾದದ್ದನ್ನೂ ಖರೀದಿಸುವಾಗಲೆಲ್ಲ ದುಬಾರಿಯನ್ನು ರೈತ ತೆರುತ್ತಾನೆ. ಇದು ರೈತರನ್ನು ಸಾಲದ ಸುಳಿಗೆ ಸಿಲುಕಿಸಿದೆ. ಇದಕ್ಕೆ  ಸರ್ಕಾರದ ತಪ್ಪು ನೀತಿಗಳು ಕಾರಣ. ಇಂದು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೆ ಬಿಜೆಪಿ ಅನುಸರಿಸುತ್ತಿರುವ ತಪ್ಪು ನೀತಿಗಳು ಕಾರಣ” ಎಂದು ತಿಳಿಸಿದರು.

“ತಪ್ಪು ನೀತಿಯನ್ನು ಸರಿಪಡಿಸಿ, ರೈತ ಸಮುದಾಯಕ್ಕೆ ನೆರವು ನೀಡಬೇಕೆಂದರೆ ಸಾಲಮನ್ನಾ ಅಗತ್ಯ. ವಿಜಯ ಮಲ್ಯ, ನೀರವ್ ಮೋದಿ, ಅದಾನಿ, ಅಂಬಾನಿಯಂತಹ ಬಂಡವಾಳಶಾಹಿಗಳ ಸಾಲ ಕಳೆದ ಹದಿನಾಲ್ಕು ವರ್ಷಗಳಲ್ಲಿ ಹದಿನೈದು ಲಕ್ಷ ಕೋಟಿ ರೂ. ಮನ್ನಾವಾಗಿದೆ. ಇದು ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತದೆಯೇ? ಉದ್ಯಮಿಗಳಿಗೆ ಒಂದು ನ್ಯಾಯ, ರೈತರಿಗೆ ಒಂದು ನ್ಯಾಯವೇ?” ಎಂದು ಪ್ರಶ್ನಿಸಿದರು.

“ಬೆಳೆ ಬೆಳೆಯಲು ರೈತ ಲಕ್ಷಾಂತರ ರೂ. ಖರ್ಚು ಮಾಡುತ್ತಾನೆ. ರೈತನ ಬಂಡವಾಳಕ್ಕೆ ರಕ್ಷಣೆ ಬೇಡವೇ? ರೈತರ ಬಗ್ಗೆ ಭಾಷಣ ಮಾಡಿ ಓಟು ಹಾಕಿಸಿಕೊಂಡ ನರೇಂದ್ರ ಮೋದಿಯವರು, ತೇಜಸ್ವಿ ಸೂರ್ಯರಂತಹ ಎಳಸು ವ್ಯಕ್ತಿಯ ಮೂಲಕ ಈ ಮಾತುಗಳನ್ನು ಹೇಳಿಸುತ್ತಿದ್ದಾರೆ. ಇದನ್ನು ರೈತ ಸಮುದಾಯ ಒಕ್ಕೊರಲಿನಿಂದ ಖಂಡಿಸುತ್ತದೆ” ಎಂದರು.

ಸಾಲಮನ್ನಾ ಬೇಡವೆಂದರೆ ವೈಜ್ಞಾನಿಕ ಬೆಲೆ ನಿಗದಿ ಮಾಡಿ: ಎಚ್‌.ಆರ್‌.ಬಸವರಾಜಪ್ಪ

ರೈತ ಮುಖಂಡರಾದ ಎಚ್.ಆರ್‌.ಬಸವರಾಜಪ್ಪ ಮಾತನಾಡಿ, “ಸ್ವಾಮಿನಾಥನ್ ಆಯೋಗದ ವರದಿ ಅನ್ವಯ ವೈಜ್ಞಾನಿಕ ಬೆಲೆ ನಿಗದಿ ಮಾಡಿದರೆ ಸಾಲ ಮನ್ನಾ ಮಾಡುವ ಅಗತ್ಯ ಬರುವುದಿಲ್ಲ. ಇವರು ಬಂಡವಾಳಶಾಹಿಗಳಿಗೆ ಶೇ. 1ರಷ್ಟು ಬಡ್ಡಿ ದರದಲ್ಲಿ ಸಾಲ ಕೊಡುತ್ತಾರೆ. ರೈತರಿಗೆ ಶೇ. 12ರಿಂದ ಶೇ. 36ರ ದರದಲ್ಲಿ ಬಡ್ಡಿ ವಿಧಿಸಿ ಸಾಲ ನೀಡುತ್ತಾರೆ. ಕಳೆದ 16 ವರ್ಷಗಳಲ್ಲಿ ರೈತರಿಗೆ  45 ಲಕ್ಷ ಕೋಟಿ ನಷ್ಟವಾಗಿದೆ ಎಂದು ಸರ್ಕಾರಿ ಸಂಸ್ಥೆಗಳೇ ಹೇಳುತ್ತಿವೆ. ಇದನ್ನು ಯಾರು ಕೊಡುತ್ತಾರೆ? ನಮಗೆ ಆಗಿರುವ ನಷ್ಟವನ್ನು ತುಂಬಿಕೊಡಬೇಕಲ್ಲವೇ? ನಷ್ಟಕ್ಕೆ ಪರಿಹಾರವಾಗಿ ಸಾಲಮನ್ನಾ ಮಾಡುತ್ತಿದ್ದಾರಷ್ಟೇ” ಎಂದು ತಿಳಿಸಿದರು.

“ಬಂಡವಾಳಶಾಹಿಗಳು ಕೋಟಿ ಕೋಟಿ ಹಣವನ್ನು ಮುಳುಗಿಸುತ್ತಾರೆ. ಈ ತೇಜಸ್ವಿ ಸೂರ್ಯನಂಥವರಿಗೆ ರೈತರ ಹೆಸರು ಹೇಳುವ ಯೋಗ್ಯತೆ ಇಲ್ಲ. ಕೈಗಾರಿಕೋದ್ಯಮಿಗಳ ಸಾಲವನ್ನು ಮನ್ನಾ ಮಾಡಿದ್ದು ಏಕೆ? ರೈತರ ಸಾಲ ಮನ್ನಾ ಬಂದಾಗ ಇವರ ಕಣ್ಣು ಕೆಂಪಾಗುತ್ತವೆ. ತೇಜಸ್ವಿ ಸೂರ್ಯ ರೈತರಲ್ಲ, ದೇಶಪ್ರೇಮಿಯೂ ಅಲ್ಲ, ದೇಶಕ್ಕೆ ಇವರ ಕೊಡುಗೆ ಏನೆಂದು ಸ್ಪಷ್ಟಪಡಿಸಬೇಕು. ರೈತರ ಬಗ್ಗೆ ಮಾತನಾಡುವ ನೈತಿಕತೆ ತೇಜಸ್ವಿಸೂರ್ಯರಿಗೆ ಇಲ್ಲ. ಹಿಂದುತ್ವ ಹೆಸರಲ್ಲಿ ಯುವಕರನ್ನು ಕೆರಳಿಸಿ ಮತಹಾಕಿಸಿಕೊಂಡು ಗೆದ್ದಂತೆ ಅಲ್ಲ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...