Homeಮುಖಪುಟರೈತಹೋರಾಟದ ಮೈಲಿಗಲ್ಲುಗಳು ಈ ಪಿಲ್ಲರ್‌ ನಂಬರ್‌ಗಳು: ರೈತರ ಹೊಸ ಪಿಲ್ಲರ್‌ ವಿಳಾಸಗಳ ಬಗ್ಗೆ ನಿಮಗೆ ಗೊತ್ತೆ?

ರೈತಹೋರಾಟದ ಮೈಲಿಗಲ್ಲುಗಳು ಈ ಪಿಲ್ಲರ್‌ ನಂಬರ್‌ಗಳು: ರೈತರ ಹೊಸ ಪಿಲ್ಲರ್‌ ವಿಳಾಸಗಳ ಬಗ್ಗೆ ನಿಮಗೆ ಗೊತ್ತೆ?

ರೈತ ಹೋರಾಟದ ಸುದ್ದಿ ಪತ್ರಿಕೆ ಟ್ರ್ಯಾಲಿ ಟೈಮ್ಸ್‌ ಇರುವುದು ಪಿಲ್ಲರ್‌ ನಂಬರ್‌ 783 ರಲ್ಲೆ...

- Advertisement -
- Advertisement -

1. ಪಿಲ್ಲರ್ ನಂ‌, 803, ದಿಲ್ಜಿತ್‌ ಸರ್‌ಪಂಚ್‌ ಸಿಂಗ್, ಟಿಕ್ರಿ ಬಾರ್ಡರ್‌, ದೆಹಲಿ

2. ಪಿಲ್ಲರ್‌ ನಂ. 780, ವಿರೇಂದರ್‌ ಸಿಂಗ್, ಟಿಕ್ರಿ ಬಾರ್ಡರ್‌, ದೆಹಲಿ.

ಈ ವಿಳಾಸಗಳು ದೆಹಲಿಯಲ್ಲಿ ಹಲವಾರು ವರ್ಷಗಳಿಂದ ವಾಸ ಮಾಡುತ್ತಿರುವ ಯಾರದ್ದೋ ಶಾಶ್ವತ ವಿಳಾಸಗಳಲ್ಲ. ಕೇಂದ್ರ ಸರ್ಕಾರ ನಮ್ಮ ಹೋರಾಟಕ್ಕೆ ಜಗ್ಗದೆ ಇದ್ದರೇ ಶಾಶ್ವತ ವಿಳಾಸಗಳಾಗಿ ಮಾರ್ಪಡುವ ಜಾಗಗಳಿವು ಎನ್ನುವ ದಿಟ್ಟ ಎಚ್ಚರಿಕೆ ನೀಡಿರುವ ರೈತ ಹೋರಾಟಗಾರರದ್ದು.

ಹೌದು, ಈಗಾಗಲೇ ರೈತ ಹೋರಾಟ ಶುರಾವಾಗಿ 45ನೇ ದಿನಕ್ಕೆ ಕಾಲಿಟ್ಟಿದೆ. ತಮ್ಮ ಮನೆ, ಊರು, ಜಿಲ್ಲೆಗಳನ್ನು ತೊರೆದು ಇಲ್ಲಿ ನೆಲೆಸಿರುವ ರೈತರು ಇಲ್ಲಿಯೇ ಹೊಸ ವಿಳಾಸಗಳನ್ನು ನೀಡುವುದನ್ನು ಆರಂಭಿಸಿದ್ದಾರೆ. ತಮ್ಮ ಹಳ್ಳಿಗಳಿಂದ ಪ್ರತಿಭಟನಾ ಸ್ಥಳಕ್ಕೆ ಬರುವ ಗ್ರಾಮದ ಜನರಿಗೆ, ಪ್ರತಿಭಟನೆ ಬೆಂಬಲಿಸಲು ಬರುವ ಜನರಿಗೆ ತಮ್ಮ ಇರುವಿಕೆಯನ್ನು ತಿಳಿಸಲು ಈ ಪಿಲ್ಲರ್‌ಗಳನ್ನು ವಿಳಾಸವಾಗಿ ನೀಡುತ್ತಾರೆ.

ಈ ಪಿಲ್ಲರ್‌ ನಂಬರ್‌ಗಳು ಯಾವುವು ಎಂದು ಅನುಮಾನ ಮೂಡುತ್ತಿದ್ದರೇ, ಇವು ದೆಹಲಿಯ ಟಿಕ್ರಿ ಬಾರ್ಡರ್‌ನಲ್ಲಿರುವ ಮೆಟ್ರೊ ಪಿಲ್ಲರ್‌ಗಳು. ಟಿಕ್ರಿ ಬಾರ್ಡರ್ ಮೆಟ್ರೋ ನಿಲ್ದಾಣದ 750ನೇ ಮೆಟ್ರೋ ಪಿಲ್ಲರ್‌ನಿಂದ ಶುರುವಾಗುವ ಪಿಲ್ಲರ್‌ ವಿಳಾಸಗಳು, ಮೂರು ಮೆಟ್ರೋ ಸ್ಟೇಷನ್‌ಗಳನ್ನು ಸೇರಿಸುವ 820ನೇ ಪಿಲ್ಲರ್‌ವರೆಗೂ ಮುಂದುವರೆಯುತ್ತದೆ.

ಪಿಲ್ಲರ್‌ಗಳ ಕೆಳಗೆ ಟ್ರ್ಯಾಲಿಯಲ್ಲಿ ಜೀವನ ನಡೆಸುತ್ತಿರುವವರು,‌ ಊಟ, ಚಹಾದ ಲಂಗರ್‌ಗಳನ್ನು ಹಾಕಿಕೊಂಡಿರುವವರು, ಮೆಡಿಕಲ್‌ ಕ್ಯಾಂಪ್‌ಗಳ ವಿಳಾಸ ದೊರೆಯುವುದು ಇದೇ ರೀತಿಯಲ್ಲಿ. ಇದಲ್ಲದೇ ರೈತ ಹೋರಾಟದ ಸುದ್ದಿ ಪತ್ರಿಕೆ ಟ್ರ್ಯಾಲಿ ಟೈಮ್ಸ್‌ ಇರುವುದು ಪಿಲ್ಲರ್‌ ನಂಬರ್‌ 783 ರಲ್ಲೆ. ಅವರು ನಮಗೆ ಬರ ಹೇಳಿದ್ದು ಪಿಲ್ಲರ್‌ ವಿಳಾಸ ನೀಡಿಯೇ.

ಇದು ಮೇಟ್ರೋ ಕೆಳಗಿನ ಪಿಲ್ಲರ್‌ಗಳ ಟ್ರ್ಯಾಲಿ ವಿಳಾಸಗಳ ಕಥೆಯಾದರೇ,  ಇನ್ನು ಬಹುದುರ್‌ಪುರ್ ಹೈವ್‌ ಕಡೆಯಲ್ಲಿ ಸುಮಾರು 10 ಕಿ.ಮೀ ಉದ್ದ ಟ್ರ್ಯಾಲಿಗಳನ್ನು ನಿಲ್ಲಿಸಿಕೊಂಡಿರುವ ರೈತ ಹೋರಾಟಗಾರರು ವಿಳಾಸ ನೀಡಲು ತಾವು ಕಂಡುಕೊಂಡಿರುವ ಮಾರ್ಗ ಮತ್ತಷ್ಟು ಕುತೂಹಲ ಹುಟ್ಟಿಸುತ್ತವೆ. ರೈತ ಹೋರಾಟಗಾರರು ಪಂಜಾಬ್‌ನಿಂದ ಬಂದಿದ್ದರೇ ಅವರಿಗೆ, ಅವರ ಜಿಲ್ಲೆ, ಗ್ರಾಮದ ಹೆಸರುಗಳಲ್ಲಿ ಬೋರ್ಡ್‌ಗಳನ್ನು ನೀಡಲಾಗಿದೆ. ತಾವು ತಂಗಿರುವ ಟ್ರ್ಯಾಲಿ ಪಕ್ಕದ ರಸ್ತೆಯ ಬದಿಯಲ್ಲಿ ಇದನ್ನು ನೆಡಲಾಗಿದೆ. ತಾವು ಯಾವ ಜಿಲ್ಲೆಯ, ಎಷ್ಟು ದೂರದ ಗ್ರಾಮದಿಂದ ಬಂದಿದ್ದೇವೆ ಎಂಬುದನ್ನು ನಾಮ ಫಲಕದಲ್ಲಿ ಬರೆದಿರುತ್ತಾರೆ. ಇದನ್ನೂ ಕೂಡ ವಿಳಾಸ ರೀತಿ ಬಳಸಲಾಗುತ್ತಿದೆ.

ಒಂದೊಂದು ಟ್ರ್ಯಾಲಿಗೂ ಟ್ರ್ಯಾಲಿ ಸಂಖ್ಯೆ ನೀಡಲಾಗಿದೆ. ಇದನ್ನೂ ಜಿಲ್ಲೆಗಳ ಆಧಾರದಲ್ಲಿ ನೀಡಲಾಗಿದ್ದು, ಅದರಲ್ಲಿಯೂ ಹಲವು ವಿಭಾಗಗಳನ್ನು ಮಾಡಿಕೊಳ್ಳಲಾಗಿದೆ. ಉದಾಹರಣೆಗೆ ಪ್ಲಾಟ್‌ ನಂಬರ್‌ 201 ಎಂದಿದ್ದರೇ, ಮತ್ತೊಂದು ಟ್ರ್ಯಾಲಿಗೆ 201ಎ ಎಂದು ನೀಡಲಾಗಿದೆ.

ರೈತ ಹೋರಾಟಕ್ಕೆ ಪಾಳಿಗಳ ರೀತಿಯಲ್ಲಿ ಪ್ರತಿಭಟನಾಕಾರರು ತಮ್ಮ ತಮ್ಮ ಗ್ರಾಮಗಳಿಂದ ಬರುತ್ತಿರುವುದರಿಂದ ಅವರಿಗೆ ತಾವಿರುವ ಸ್ಥಳ ಹೇಗೆ ಸುಲಭವಾಗಿ ದೊರೆಯಬಹುದು ಎಂಬುದನ್ನು ಗಮನದಲ್ಲಿ ಇರಿಸಿಕೊಂಡು ಇಂತಹ ವ್ಯವಸ್ಥೆ ಮಾಡಲಾಗಿದೆ.

ನಮ್ಮ ತಂಡ ಕೂಡ ಟಿಕ್ರಿ ಬಾರ್ಡರ್‌ನಲ್ಲಿ ಇಳಿದು ರೈತ ಹೋರಾಟಗಾರರ ಸಭೆಗೆ ಹೋಗಲು ಕರೆ ಮಾಡಿದಾಗ ಅವರಿಂದ ನಮಗೆ ಸಿಕ್ಕ ವಿಳಾಸವು ಇದೆ ರೀತಿಯದ್ದು. ಪಿಲ್ಲರ್‌ 805 ರ ಬಳಿ ಬನ್ನಿ ಅಲ್ಲಿ ನಾವು ನಿಮಗೆ ಸಿಗುತ್ತೇವೆ ಎಂದು ಭಾರತೀಯ ಕಿಸಾನ್‌ ಯೂನಿಯನ್‌ ಮುಖಂಡರಾದ ಸುರೀಂಧರ್‌ ಸಿಂಗ್‌ ಹೇಳಿದಾಗ ನಮಗೂ ಒಮ್ಮೆ ಅದ್ಯಾವ ಪಿಲ್ಲರ್‌ ಎಂಬ ಕುತೂಹಲ ಸಹಜವಾಗಿಯೇ ಮೂಡಿತ್ತು.

ಈಗಾಗಲೇ ರೈತ ಮುಖಂಡರು ಮತ್ತು ಕೇಂದ್ರ ಸರ್ಕಾರದ ನಡುವೆ ನಡೆದ 8ನೇ ಸುತ್ತಿನ ಮಾತುಕತೆ ಕೂಡ ಮುರಿದು ಬಿದ್ದಿದೆ. ಮುಂದಿನ ಮಾತುಕತೆಗಳನ್ನು ರೈತರು ಬಹಿಷ್ಕರಿಸುವ ಎಚ್ಚರಿಕೆಯನ್ನು ನೀಡುತ್ತಿದ್ದಾರೆ. ರೈತರ ದೃಢ ನಿರ್ಧಾರ ನೋಡಿದರೇ, ಈ ಪಿಲ್ಲರ್‌, ಬೋರ್ಡ್‌ ವಿಳಾಸಗಳು ಒಂದೆರಡು ವರ್ಷಗಳವರೆಗೆ ಶಾಶ್ವತ ವಿಳಾಸಗಳಾಗುವ ಮುನ್ಸುಚನೆಯೇ ಎಂಬ ಅನುಮಾನ ಕಾಡದೇ ಇರದು.

(ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ)


ಇದನ್ನೂ ಓದಿ: ವಾಟ್ಸಾಪ್‌ಗೆ ಗುಡ್‌ಬೈ ಹೇಳಿ, ಸಿಗ್ನಲ್‌ಗೆ ಹೆಲೋ ಹೇಳಿ: ಏನಿದು ಸಿಗ್ನಲ್ ಆಪ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...