Homeಮುಖಪುಟರೈತಹೋರಾಟದ ಮೈಲಿಗಲ್ಲುಗಳು ಈ ಪಿಲ್ಲರ್‌ ನಂಬರ್‌ಗಳು: ರೈತರ ಹೊಸ ಪಿಲ್ಲರ್‌ ವಿಳಾಸಗಳ ಬಗ್ಗೆ ನಿಮಗೆ ಗೊತ್ತೆ?

ರೈತಹೋರಾಟದ ಮೈಲಿಗಲ್ಲುಗಳು ಈ ಪಿಲ್ಲರ್‌ ನಂಬರ್‌ಗಳು: ರೈತರ ಹೊಸ ಪಿಲ್ಲರ್‌ ವಿಳಾಸಗಳ ಬಗ್ಗೆ ನಿಮಗೆ ಗೊತ್ತೆ?

ರೈತ ಹೋರಾಟದ ಸುದ್ದಿ ಪತ್ರಿಕೆ ಟ್ರ್ಯಾಲಿ ಟೈಮ್ಸ್‌ ಇರುವುದು ಪಿಲ್ಲರ್‌ ನಂಬರ್‌ 783 ರಲ್ಲೆ...

- Advertisement -
- Advertisement -

1. ಪಿಲ್ಲರ್ ನಂ‌, 803, ದಿಲ್ಜಿತ್‌ ಸರ್‌ಪಂಚ್‌ ಸಿಂಗ್, ಟಿಕ್ರಿ ಬಾರ್ಡರ್‌, ದೆಹಲಿ

2. ಪಿಲ್ಲರ್‌ ನಂ. 780, ವಿರೇಂದರ್‌ ಸಿಂಗ್, ಟಿಕ್ರಿ ಬಾರ್ಡರ್‌, ದೆಹಲಿ.

ಈ ವಿಳಾಸಗಳು ದೆಹಲಿಯಲ್ಲಿ ಹಲವಾರು ವರ್ಷಗಳಿಂದ ವಾಸ ಮಾಡುತ್ತಿರುವ ಯಾರದ್ದೋ ಶಾಶ್ವತ ವಿಳಾಸಗಳಲ್ಲ. ಕೇಂದ್ರ ಸರ್ಕಾರ ನಮ್ಮ ಹೋರಾಟಕ್ಕೆ ಜಗ್ಗದೆ ಇದ್ದರೇ ಶಾಶ್ವತ ವಿಳಾಸಗಳಾಗಿ ಮಾರ್ಪಡುವ ಜಾಗಗಳಿವು ಎನ್ನುವ ದಿಟ್ಟ ಎಚ್ಚರಿಕೆ ನೀಡಿರುವ ರೈತ ಹೋರಾಟಗಾರರದ್ದು.

ಹೌದು, ಈಗಾಗಲೇ ರೈತ ಹೋರಾಟ ಶುರಾವಾಗಿ 45ನೇ ದಿನಕ್ಕೆ ಕಾಲಿಟ್ಟಿದೆ. ತಮ್ಮ ಮನೆ, ಊರು, ಜಿಲ್ಲೆಗಳನ್ನು ತೊರೆದು ಇಲ್ಲಿ ನೆಲೆಸಿರುವ ರೈತರು ಇಲ್ಲಿಯೇ ಹೊಸ ವಿಳಾಸಗಳನ್ನು ನೀಡುವುದನ್ನು ಆರಂಭಿಸಿದ್ದಾರೆ. ತಮ್ಮ ಹಳ್ಳಿಗಳಿಂದ ಪ್ರತಿಭಟನಾ ಸ್ಥಳಕ್ಕೆ ಬರುವ ಗ್ರಾಮದ ಜನರಿಗೆ, ಪ್ರತಿಭಟನೆ ಬೆಂಬಲಿಸಲು ಬರುವ ಜನರಿಗೆ ತಮ್ಮ ಇರುವಿಕೆಯನ್ನು ತಿಳಿಸಲು ಈ ಪಿಲ್ಲರ್‌ಗಳನ್ನು ವಿಳಾಸವಾಗಿ ನೀಡುತ್ತಾರೆ.

ಈ ಪಿಲ್ಲರ್‌ ನಂಬರ್‌ಗಳು ಯಾವುವು ಎಂದು ಅನುಮಾನ ಮೂಡುತ್ತಿದ್ದರೇ, ಇವು ದೆಹಲಿಯ ಟಿಕ್ರಿ ಬಾರ್ಡರ್‌ನಲ್ಲಿರುವ ಮೆಟ್ರೊ ಪಿಲ್ಲರ್‌ಗಳು. ಟಿಕ್ರಿ ಬಾರ್ಡರ್ ಮೆಟ್ರೋ ನಿಲ್ದಾಣದ 750ನೇ ಮೆಟ್ರೋ ಪಿಲ್ಲರ್‌ನಿಂದ ಶುರುವಾಗುವ ಪಿಲ್ಲರ್‌ ವಿಳಾಸಗಳು, ಮೂರು ಮೆಟ್ರೋ ಸ್ಟೇಷನ್‌ಗಳನ್ನು ಸೇರಿಸುವ 820ನೇ ಪಿಲ್ಲರ್‌ವರೆಗೂ ಮುಂದುವರೆಯುತ್ತದೆ.

ಪಿಲ್ಲರ್‌ಗಳ ಕೆಳಗೆ ಟ್ರ್ಯಾಲಿಯಲ್ಲಿ ಜೀವನ ನಡೆಸುತ್ತಿರುವವರು,‌ ಊಟ, ಚಹಾದ ಲಂಗರ್‌ಗಳನ್ನು ಹಾಕಿಕೊಂಡಿರುವವರು, ಮೆಡಿಕಲ್‌ ಕ್ಯಾಂಪ್‌ಗಳ ವಿಳಾಸ ದೊರೆಯುವುದು ಇದೇ ರೀತಿಯಲ್ಲಿ. ಇದಲ್ಲದೇ ರೈತ ಹೋರಾಟದ ಸುದ್ದಿ ಪತ್ರಿಕೆ ಟ್ರ್ಯಾಲಿ ಟೈಮ್ಸ್‌ ಇರುವುದು ಪಿಲ್ಲರ್‌ ನಂಬರ್‌ 783 ರಲ್ಲೆ. ಅವರು ನಮಗೆ ಬರ ಹೇಳಿದ್ದು ಪಿಲ್ಲರ್‌ ವಿಳಾಸ ನೀಡಿಯೇ.

ಇದು ಮೇಟ್ರೋ ಕೆಳಗಿನ ಪಿಲ್ಲರ್‌ಗಳ ಟ್ರ್ಯಾಲಿ ವಿಳಾಸಗಳ ಕಥೆಯಾದರೇ,  ಇನ್ನು ಬಹುದುರ್‌ಪುರ್ ಹೈವ್‌ ಕಡೆಯಲ್ಲಿ ಸುಮಾರು 10 ಕಿ.ಮೀ ಉದ್ದ ಟ್ರ್ಯಾಲಿಗಳನ್ನು ನಿಲ್ಲಿಸಿಕೊಂಡಿರುವ ರೈತ ಹೋರಾಟಗಾರರು ವಿಳಾಸ ನೀಡಲು ತಾವು ಕಂಡುಕೊಂಡಿರುವ ಮಾರ್ಗ ಮತ್ತಷ್ಟು ಕುತೂಹಲ ಹುಟ್ಟಿಸುತ್ತವೆ. ರೈತ ಹೋರಾಟಗಾರರು ಪಂಜಾಬ್‌ನಿಂದ ಬಂದಿದ್ದರೇ ಅವರಿಗೆ, ಅವರ ಜಿಲ್ಲೆ, ಗ್ರಾಮದ ಹೆಸರುಗಳಲ್ಲಿ ಬೋರ್ಡ್‌ಗಳನ್ನು ನೀಡಲಾಗಿದೆ. ತಾವು ತಂಗಿರುವ ಟ್ರ್ಯಾಲಿ ಪಕ್ಕದ ರಸ್ತೆಯ ಬದಿಯಲ್ಲಿ ಇದನ್ನು ನೆಡಲಾಗಿದೆ. ತಾವು ಯಾವ ಜಿಲ್ಲೆಯ, ಎಷ್ಟು ದೂರದ ಗ್ರಾಮದಿಂದ ಬಂದಿದ್ದೇವೆ ಎಂಬುದನ್ನು ನಾಮ ಫಲಕದಲ್ಲಿ ಬರೆದಿರುತ್ತಾರೆ. ಇದನ್ನೂ ಕೂಡ ವಿಳಾಸ ರೀತಿ ಬಳಸಲಾಗುತ್ತಿದೆ.

ಒಂದೊಂದು ಟ್ರ್ಯಾಲಿಗೂ ಟ್ರ್ಯಾಲಿ ಸಂಖ್ಯೆ ನೀಡಲಾಗಿದೆ. ಇದನ್ನೂ ಜಿಲ್ಲೆಗಳ ಆಧಾರದಲ್ಲಿ ನೀಡಲಾಗಿದ್ದು, ಅದರಲ್ಲಿಯೂ ಹಲವು ವಿಭಾಗಗಳನ್ನು ಮಾಡಿಕೊಳ್ಳಲಾಗಿದೆ. ಉದಾಹರಣೆಗೆ ಪ್ಲಾಟ್‌ ನಂಬರ್‌ 201 ಎಂದಿದ್ದರೇ, ಮತ್ತೊಂದು ಟ್ರ್ಯಾಲಿಗೆ 201ಎ ಎಂದು ನೀಡಲಾಗಿದೆ.

ರೈತ ಹೋರಾಟಕ್ಕೆ ಪಾಳಿಗಳ ರೀತಿಯಲ್ಲಿ ಪ್ರತಿಭಟನಾಕಾರರು ತಮ್ಮ ತಮ್ಮ ಗ್ರಾಮಗಳಿಂದ ಬರುತ್ತಿರುವುದರಿಂದ ಅವರಿಗೆ ತಾವಿರುವ ಸ್ಥಳ ಹೇಗೆ ಸುಲಭವಾಗಿ ದೊರೆಯಬಹುದು ಎಂಬುದನ್ನು ಗಮನದಲ್ಲಿ ಇರಿಸಿಕೊಂಡು ಇಂತಹ ವ್ಯವಸ್ಥೆ ಮಾಡಲಾಗಿದೆ.

ನಮ್ಮ ತಂಡ ಕೂಡ ಟಿಕ್ರಿ ಬಾರ್ಡರ್‌ನಲ್ಲಿ ಇಳಿದು ರೈತ ಹೋರಾಟಗಾರರ ಸಭೆಗೆ ಹೋಗಲು ಕರೆ ಮಾಡಿದಾಗ ಅವರಿಂದ ನಮಗೆ ಸಿಕ್ಕ ವಿಳಾಸವು ಇದೆ ರೀತಿಯದ್ದು. ಪಿಲ್ಲರ್‌ 805 ರ ಬಳಿ ಬನ್ನಿ ಅಲ್ಲಿ ನಾವು ನಿಮಗೆ ಸಿಗುತ್ತೇವೆ ಎಂದು ಭಾರತೀಯ ಕಿಸಾನ್‌ ಯೂನಿಯನ್‌ ಮುಖಂಡರಾದ ಸುರೀಂಧರ್‌ ಸಿಂಗ್‌ ಹೇಳಿದಾಗ ನಮಗೂ ಒಮ್ಮೆ ಅದ್ಯಾವ ಪಿಲ್ಲರ್‌ ಎಂಬ ಕುತೂಹಲ ಸಹಜವಾಗಿಯೇ ಮೂಡಿತ್ತು.

ಈಗಾಗಲೇ ರೈತ ಮುಖಂಡರು ಮತ್ತು ಕೇಂದ್ರ ಸರ್ಕಾರದ ನಡುವೆ ನಡೆದ 8ನೇ ಸುತ್ತಿನ ಮಾತುಕತೆ ಕೂಡ ಮುರಿದು ಬಿದ್ದಿದೆ. ಮುಂದಿನ ಮಾತುಕತೆಗಳನ್ನು ರೈತರು ಬಹಿಷ್ಕರಿಸುವ ಎಚ್ಚರಿಕೆಯನ್ನು ನೀಡುತ್ತಿದ್ದಾರೆ. ರೈತರ ದೃಢ ನಿರ್ಧಾರ ನೋಡಿದರೇ, ಈ ಪಿಲ್ಲರ್‌, ಬೋರ್ಡ್‌ ವಿಳಾಸಗಳು ಒಂದೆರಡು ವರ್ಷಗಳವರೆಗೆ ಶಾಶ್ವತ ವಿಳಾಸಗಳಾಗುವ ಮುನ್ಸುಚನೆಯೇ ಎಂಬ ಅನುಮಾನ ಕಾಡದೇ ಇರದು.

(ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ)


ಇದನ್ನೂ ಓದಿ: ವಾಟ್ಸಾಪ್‌ಗೆ ಗುಡ್‌ಬೈ ಹೇಳಿ, ಸಿಗ್ನಲ್‌ಗೆ ಹೆಲೋ ಹೇಳಿ: ಏನಿದು ಸಿಗ್ನಲ್ ಆಪ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...