Homeಮುಖಪುಟರೈತಹೋರಾಟದ ಮೈಲಿಗಲ್ಲುಗಳು ಈ ಪಿಲ್ಲರ್‌ ನಂಬರ್‌ಗಳು: ರೈತರ ಹೊಸ ಪಿಲ್ಲರ್‌ ವಿಳಾಸಗಳ ಬಗ್ಗೆ ನಿಮಗೆ ಗೊತ್ತೆ?

ರೈತಹೋರಾಟದ ಮೈಲಿಗಲ್ಲುಗಳು ಈ ಪಿಲ್ಲರ್‌ ನಂಬರ್‌ಗಳು: ರೈತರ ಹೊಸ ಪಿಲ್ಲರ್‌ ವಿಳಾಸಗಳ ಬಗ್ಗೆ ನಿಮಗೆ ಗೊತ್ತೆ?

ರೈತ ಹೋರಾಟದ ಸುದ್ದಿ ಪತ್ರಿಕೆ ಟ್ರ್ಯಾಲಿ ಟೈಮ್ಸ್‌ ಇರುವುದು ಪಿಲ್ಲರ್‌ ನಂಬರ್‌ 783 ರಲ್ಲೆ...

- Advertisement -
- Advertisement -

1. ಪಿಲ್ಲರ್ ನಂ‌, 803, ದಿಲ್ಜಿತ್‌ ಸರ್‌ಪಂಚ್‌ ಸಿಂಗ್, ಟಿಕ್ರಿ ಬಾರ್ಡರ್‌, ದೆಹಲಿ

2. ಪಿಲ್ಲರ್‌ ನಂ. 780, ವಿರೇಂದರ್‌ ಸಿಂಗ್, ಟಿಕ್ರಿ ಬಾರ್ಡರ್‌, ದೆಹಲಿ.

ಈ ವಿಳಾಸಗಳು ದೆಹಲಿಯಲ್ಲಿ ಹಲವಾರು ವರ್ಷಗಳಿಂದ ವಾಸ ಮಾಡುತ್ತಿರುವ ಯಾರದ್ದೋ ಶಾಶ್ವತ ವಿಳಾಸಗಳಲ್ಲ. ಕೇಂದ್ರ ಸರ್ಕಾರ ನಮ್ಮ ಹೋರಾಟಕ್ಕೆ ಜಗ್ಗದೆ ಇದ್ದರೇ ಶಾಶ್ವತ ವಿಳಾಸಗಳಾಗಿ ಮಾರ್ಪಡುವ ಜಾಗಗಳಿವು ಎನ್ನುವ ದಿಟ್ಟ ಎಚ್ಚರಿಕೆ ನೀಡಿರುವ ರೈತ ಹೋರಾಟಗಾರರದ್ದು.

ಹೌದು, ಈಗಾಗಲೇ ರೈತ ಹೋರಾಟ ಶುರಾವಾಗಿ 45ನೇ ದಿನಕ್ಕೆ ಕಾಲಿಟ್ಟಿದೆ. ತಮ್ಮ ಮನೆ, ಊರು, ಜಿಲ್ಲೆಗಳನ್ನು ತೊರೆದು ಇಲ್ಲಿ ನೆಲೆಸಿರುವ ರೈತರು ಇಲ್ಲಿಯೇ ಹೊಸ ವಿಳಾಸಗಳನ್ನು ನೀಡುವುದನ್ನು ಆರಂಭಿಸಿದ್ದಾರೆ. ತಮ್ಮ ಹಳ್ಳಿಗಳಿಂದ ಪ್ರತಿಭಟನಾ ಸ್ಥಳಕ್ಕೆ ಬರುವ ಗ್ರಾಮದ ಜನರಿಗೆ, ಪ್ರತಿಭಟನೆ ಬೆಂಬಲಿಸಲು ಬರುವ ಜನರಿಗೆ ತಮ್ಮ ಇರುವಿಕೆಯನ್ನು ತಿಳಿಸಲು ಈ ಪಿಲ್ಲರ್‌ಗಳನ್ನು ವಿಳಾಸವಾಗಿ ನೀಡುತ್ತಾರೆ.

ಈ ಪಿಲ್ಲರ್‌ ನಂಬರ್‌ಗಳು ಯಾವುವು ಎಂದು ಅನುಮಾನ ಮೂಡುತ್ತಿದ್ದರೇ, ಇವು ದೆಹಲಿಯ ಟಿಕ್ರಿ ಬಾರ್ಡರ್‌ನಲ್ಲಿರುವ ಮೆಟ್ರೊ ಪಿಲ್ಲರ್‌ಗಳು. ಟಿಕ್ರಿ ಬಾರ್ಡರ್ ಮೆಟ್ರೋ ನಿಲ್ದಾಣದ 750ನೇ ಮೆಟ್ರೋ ಪಿಲ್ಲರ್‌ನಿಂದ ಶುರುವಾಗುವ ಪಿಲ್ಲರ್‌ ವಿಳಾಸಗಳು, ಮೂರು ಮೆಟ್ರೋ ಸ್ಟೇಷನ್‌ಗಳನ್ನು ಸೇರಿಸುವ 820ನೇ ಪಿಲ್ಲರ್‌ವರೆಗೂ ಮುಂದುವರೆಯುತ್ತದೆ.

ಪಿಲ್ಲರ್‌ಗಳ ಕೆಳಗೆ ಟ್ರ್ಯಾಲಿಯಲ್ಲಿ ಜೀವನ ನಡೆಸುತ್ತಿರುವವರು,‌ ಊಟ, ಚಹಾದ ಲಂಗರ್‌ಗಳನ್ನು ಹಾಕಿಕೊಂಡಿರುವವರು, ಮೆಡಿಕಲ್‌ ಕ್ಯಾಂಪ್‌ಗಳ ವಿಳಾಸ ದೊರೆಯುವುದು ಇದೇ ರೀತಿಯಲ್ಲಿ. ಇದಲ್ಲದೇ ರೈತ ಹೋರಾಟದ ಸುದ್ದಿ ಪತ್ರಿಕೆ ಟ್ರ್ಯಾಲಿ ಟೈಮ್ಸ್‌ ಇರುವುದು ಪಿಲ್ಲರ್‌ ನಂಬರ್‌ 783 ರಲ್ಲೆ. ಅವರು ನಮಗೆ ಬರ ಹೇಳಿದ್ದು ಪಿಲ್ಲರ್‌ ವಿಳಾಸ ನೀಡಿಯೇ.

ಇದು ಮೇಟ್ರೋ ಕೆಳಗಿನ ಪಿಲ್ಲರ್‌ಗಳ ಟ್ರ್ಯಾಲಿ ವಿಳಾಸಗಳ ಕಥೆಯಾದರೇ,  ಇನ್ನು ಬಹುದುರ್‌ಪುರ್ ಹೈವ್‌ ಕಡೆಯಲ್ಲಿ ಸುಮಾರು 10 ಕಿ.ಮೀ ಉದ್ದ ಟ್ರ್ಯಾಲಿಗಳನ್ನು ನಿಲ್ಲಿಸಿಕೊಂಡಿರುವ ರೈತ ಹೋರಾಟಗಾರರು ವಿಳಾಸ ನೀಡಲು ತಾವು ಕಂಡುಕೊಂಡಿರುವ ಮಾರ್ಗ ಮತ್ತಷ್ಟು ಕುತೂಹಲ ಹುಟ್ಟಿಸುತ್ತವೆ. ರೈತ ಹೋರಾಟಗಾರರು ಪಂಜಾಬ್‌ನಿಂದ ಬಂದಿದ್ದರೇ ಅವರಿಗೆ, ಅವರ ಜಿಲ್ಲೆ, ಗ್ರಾಮದ ಹೆಸರುಗಳಲ್ಲಿ ಬೋರ್ಡ್‌ಗಳನ್ನು ನೀಡಲಾಗಿದೆ. ತಾವು ತಂಗಿರುವ ಟ್ರ್ಯಾಲಿ ಪಕ್ಕದ ರಸ್ತೆಯ ಬದಿಯಲ್ಲಿ ಇದನ್ನು ನೆಡಲಾಗಿದೆ. ತಾವು ಯಾವ ಜಿಲ್ಲೆಯ, ಎಷ್ಟು ದೂರದ ಗ್ರಾಮದಿಂದ ಬಂದಿದ್ದೇವೆ ಎಂಬುದನ್ನು ನಾಮ ಫಲಕದಲ್ಲಿ ಬರೆದಿರುತ್ತಾರೆ. ಇದನ್ನೂ ಕೂಡ ವಿಳಾಸ ರೀತಿ ಬಳಸಲಾಗುತ್ತಿದೆ.

ಒಂದೊಂದು ಟ್ರ್ಯಾಲಿಗೂ ಟ್ರ್ಯಾಲಿ ಸಂಖ್ಯೆ ನೀಡಲಾಗಿದೆ. ಇದನ್ನೂ ಜಿಲ್ಲೆಗಳ ಆಧಾರದಲ್ಲಿ ನೀಡಲಾಗಿದ್ದು, ಅದರಲ್ಲಿಯೂ ಹಲವು ವಿಭಾಗಗಳನ್ನು ಮಾಡಿಕೊಳ್ಳಲಾಗಿದೆ. ಉದಾಹರಣೆಗೆ ಪ್ಲಾಟ್‌ ನಂಬರ್‌ 201 ಎಂದಿದ್ದರೇ, ಮತ್ತೊಂದು ಟ್ರ್ಯಾಲಿಗೆ 201ಎ ಎಂದು ನೀಡಲಾಗಿದೆ.

ರೈತ ಹೋರಾಟಕ್ಕೆ ಪಾಳಿಗಳ ರೀತಿಯಲ್ಲಿ ಪ್ರತಿಭಟನಾಕಾರರು ತಮ್ಮ ತಮ್ಮ ಗ್ರಾಮಗಳಿಂದ ಬರುತ್ತಿರುವುದರಿಂದ ಅವರಿಗೆ ತಾವಿರುವ ಸ್ಥಳ ಹೇಗೆ ಸುಲಭವಾಗಿ ದೊರೆಯಬಹುದು ಎಂಬುದನ್ನು ಗಮನದಲ್ಲಿ ಇರಿಸಿಕೊಂಡು ಇಂತಹ ವ್ಯವಸ್ಥೆ ಮಾಡಲಾಗಿದೆ.

ನಮ್ಮ ತಂಡ ಕೂಡ ಟಿಕ್ರಿ ಬಾರ್ಡರ್‌ನಲ್ಲಿ ಇಳಿದು ರೈತ ಹೋರಾಟಗಾರರ ಸಭೆಗೆ ಹೋಗಲು ಕರೆ ಮಾಡಿದಾಗ ಅವರಿಂದ ನಮಗೆ ಸಿಕ್ಕ ವಿಳಾಸವು ಇದೆ ರೀತಿಯದ್ದು. ಪಿಲ್ಲರ್‌ 805 ರ ಬಳಿ ಬನ್ನಿ ಅಲ್ಲಿ ನಾವು ನಿಮಗೆ ಸಿಗುತ್ತೇವೆ ಎಂದು ಭಾರತೀಯ ಕಿಸಾನ್‌ ಯೂನಿಯನ್‌ ಮುಖಂಡರಾದ ಸುರೀಂಧರ್‌ ಸಿಂಗ್‌ ಹೇಳಿದಾಗ ನಮಗೂ ಒಮ್ಮೆ ಅದ್ಯಾವ ಪಿಲ್ಲರ್‌ ಎಂಬ ಕುತೂಹಲ ಸಹಜವಾಗಿಯೇ ಮೂಡಿತ್ತು.

ಈಗಾಗಲೇ ರೈತ ಮುಖಂಡರು ಮತ್ತು ಕೇಂದ್ರ ಸರ್ಕಾರದ ನಡುವೆ ನಡೆದ 8ನೇ ಸುತ್ತಿನ ಮಾತುಕತೆ ಕೂಡ ಮುರಿದು ಬಿದ್ದಿದೆ. ಮುಂದಿನ ಮಾತುಕತೆಗಳನ್ನು ರೈತರು ಬಹಿಷ್ಕರಿಸುವ ಎಚ್ಚರಿಕೆಯನ್ನು ನೀಡುತ್ತಿದ್ದಾರೆ. ರೈತರ ದೃಢ ನಿರ್ಧಾರ ನೋಡಿದರೇ, ಈ ಪಿಲ್ಲರ್‌, ಬೋರ್ಡ್‌ ವಿಳಾಸಗಳು ಒಂದೆರಡು ವರ್ಷಗಳವರೆಗೆ ಶಾಶ್ವತ ವಿಳಾಸಗಳಾಗುವ ಮುನ್ಸುಚನೆಯೇ ಎಂಬ ಅನುಮಾನ ಕಾಡದೇ ಇರದು.

(ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ)


ಇದನ್ನೂ ಓದಿ: ವಾಟ್ಸಾಪ್‌ಗೆ ಗುಡ್‌ಬೈ ಹೇಳಿ, ಸಿಗ್ನಲ್‌ಗೆ ಹೆಲೋ ಹೇಳಿ: ಏನಿದು ಸಿಗ್ನಲ್ ಆಪ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...