Homeಮುಖಪುಟರೈತಹೋರಾಟದ ಮೈಲಿಗಲ್ಲುಗಳು ಈ ಪಿಲ್ಲರ್‌ ನಂಬರ್‌ಗಳು: ರೈತರ ಹೊಸ ಪಿಲ್ಲರ್‌ ವಿಳಾಸಗಳ ಬಗ್ಗೆ ನಿಮಗೆ ಗೊತ್ತೆ?

ರೈತಹೋರಾಟದ ಮೈಲಿಗಲ್ಲುಗಳು ಈ ಪಿಲ್ಲರ್‌ ನಂಬರ್‌ಗಳು: ರೈತರ ಹೊಸ ಪಿಲ್ಲರ್‌ ವಿಳಾಸಗಳ ಬಗ್ಗೆ ನಿಮಗೆ ಗೊತ್ತೆ?

ರೈತ ಹೋರಾಟದ ಸುದ್ದಿ ಪತ್ರಿಕೆ ಟ್ರ್ಯಾಲಿ ಟೈಮ್ಸ್‌ ಇರುವುದು ಪಿಲ್ಲರ್‌ ನಂಬರ್‌ 783 ರಲ್ಲೆ...

- Advertisement -
- Advertisement -

1. ಪಿಲ್ಲರ್ ನಂ‌, 803, ದಿಲ್ಜಿತ್‌ ಸರ್‌ಪಂಚ್‌ ಸಿಂಗ್, ಟಿಕ್ರಿ ಬಾರ್ಡರ್‌, ದೆಹಲಿ

2. ಪಿಲ್ಲರ್‌ ನಂ. 780, ವಿರೇಂದರ್‌ ಸಿಂಗ್, ಟಿಕ್ರಿ ಬಾರ್ಡರ್‌, ದೆಹಲಿ.

ಈ ವಿಳಾಸಗಳು ದೆಹಲಿಯಲ್ಲಿ ಹಲವಾರು ವರ್ಷಗಳಿಂದ ವಾಸ ಮಾಡುತ್ತಿರುವ ಯಾರದ್ದೋ ಶಾಶ್ವತ ವಿಳಾಸಗಳಲ್ಲ. ಕೇಂದ್ರ ಸರ್ಕಾರ ನಮ್ಮ ಹೋರಾಟಕ್ಕೆ ಜಗ್ಗದೆ ಇದ್ದರೇ ಶಾಶ್ವತ ವಿಳಾಸಗಳಾಗಿ ಮಾರ್ಪಡುವ ಜಾಗಗಳಿವು ಎನ್ನುವ ದಿಟ್ಟ ಎಚ್ಚರಿಕೆ ನೀಡಿರುವ ರೈತ ಹೋರಾಟಗಾರರದ್ದು.

ಹೌದು, ಈಗಾಗಲೇ ರೈತ ಹೋರಾಟ ಶುರಾವಾಗಿ 45ನೇ ದಿನಕ್ಕೆ ಕಾಲಿಟ್ಟಿದೆ. ತಮ್ಮ ಮನೆ, ಊರು, ಜಿಲ್ಲೆಗಳನ್ನು ತೊರೆದು ಇಲ್ಲಿ ನೆಲೆಸಿರುವ ರೈತರು ಇಲ್ಲಿಯೇ ಹೊಸ ವಿಳಾಸಗಳನ್ನು ನೀಡುವುದನ್ನು ಆರಂಭಿಸಿದ್ದಾರೆ. ತಮ್ಮ ಹಳ್ಳಿಗಳಿಂದ ಪ್ರತಿಭಟನಾ ಸ್ಥಳಕ್ಕೆ ಬರುವ ಗ್ರಾಮದ ಜನರಿಗೆ, ಪ್ರತಿಭಟನೆ ಬೆಂಬಲಿಸಲು ಬರುವ ಜನರಿಗೆ ತಮ್ಮ ಇರುವಿಕೆಯನ್ನು ತಿಳಿಸಲು ಈ ಪಿಲ್ಲರ್‌ಗಳನ್ನು ವಿಳಾಸವಾಗಿ ನೀಡುತ್ತಾರೆ.

ಈ ಪಿಲ್ಲರ್‌ ನಂಬರ್‌ಗಳು ಯಾವುವು ಎಂದು ಅನುಮಾನ ಮೂಡುತ್ತಿದ್ದರೇ, ಇವು ದೆಹಲಿಯ ಟಿಕ್ರಿ ಬಾರ್ಡರ್‌ನಲ್ಲಿರುವ ಮೆಟ್ರೊ ಪಿಲ್ಲರ್‌ಗಳು. ಟಿಕ್ರಿ ಬಾರ್ಡರ್ ಮೆಟ್ರೋ ನಿಲ್ದಾಣದ 750ನೇ ಮೆಟ್ರೋ ಪಿಲ್ಲರ್‌ನಿಂದ ಶುರುವಾಗುವ ಪಿಲ್ಲರ್‌ ವಿಳಾಸಗಳು, ಮೂರು ಮೆಟ್ರೋ ಸ್ಟೇಷನ್‌ಗಳನ್ನು ಸೇರಿಸುವ 820ನೇ ಪಿಲ್ಲರ್‌ವರೆಗೂ ಮುಂದುವರೆಯುತ್ತದೆ.

ಪಿಲ್ಲರ್‌ಗಳ ಕೆಳಗೆ ಟ್ರ್ಯಾಲಿಯಲ್ಲಿ ಜೀವನ ನಡೆಸುತ್ತಿರುವವರು,‌ ಊಟ, ಚಹಾದ ಲಂಗರ್‌ಗಳನ್ನು ಹಾಕಿಕೊಂಡಿರುವವರು, ಮೆಡಿಕಲ್‌ ಕ್ಯಾಂಪ್‌ಗಳ ವಿಳಾಸ ದೊರೆಯುವುದು ಇದೇ ರೀತಿಯಲ್ಲಿ. ಇದಲ್ಲದೇ ರೈತ ಹೋರಾಟದ ಸುದ್ದಿ ಪತ್ರಿಕೆ ಟ್ರ್ಯಾಲಿ ಟೈಮ್ಸ್‌ ಇರುವುದು ಪಿಲ್ಲರ್‌ ನಂಬರ್‌ 783 ರಲ್ಲೆ. ಅವರು ನಮಗೆ ಬರ ಹೇಳಿದ್ದು ಪಿಲ್ಲರ್‌ ವಿಳಾಸ ನೀಡಿಯೇ.

ಇದು ಮೇಟ್ರೋ ಕೆಳಗಿನ ಪಿಲ್ಲರ್‌ಗಳ ಟ್ರ್ಯಾಲಿ ವಿಳಾಸಗಳ ಕಥೆಯಾದರೇ,  ಇನ್ನು ಬಹುದುರ್‌ಪುರ್ ಹೈವ್‌ ಕಡೆಯಲ್ಲಿ ಸುಮಾರು 10 ಕಿ.ಮೀ ಉದ್ದ ಟ್ರ್ಯಾಲಿಗಳನ್ನು ನಿಲ್ಲಿಸಿಕೊಂಡಿರುವ ರೈತ ಹೋರಾಟಗಾರರು ವಿಳಾಸ ನೀಡಲು ತಾವು ಕಂಡುಕೊಂಡಿರುವ ಮಾರ್ಗ ಮತ್ತಷ್ಟು ಕುತೂಹಲ ಹುಟ್ಟಿಸುತ್ತವೆ. ರೈತ ಹೋರಾಟಗಾರರು ಪಂಜಾಬ್‌ನಿಂದ ಬಂದಿದ್ದರೇ ಅವರಿಗೆ, ಅವರ ಜಿಲ್ಲೆ, ಗ್ರಾಮದ ಹೆಸರುಗಳಲ್ಲಿ ಬೋರ್ಡ್‌ಗಳನ್ನು ನೀಡಲಾಗಿದೆ. ತಾವು ತಂಗಿರುವ ಟ್ರ್ಯಾಲಿ ಪಕ್ಕದ ರಸ್ತೆಯ ಬದಿಯಲ್ಲಿ ಇದನ್ನು ನೆಡಲಾಗಿದೆ. ತಾವು ಯಾವ ಜಿಲ್ಲೆಯ, ಎಷ್ಟು ದೂರದ ಗ್ರಾಮದಿಂದ ಬಂದಿದ್ದೇವೆ ಎಂಬುದನ್ನು ನಾಮ ಫಲಕದಲ್ಲಿ ಬರೆದಿರುತ್ತಾರೆ. ಇದನ್ನೂ ಕೂಡ ವಿಳಾಸ ರೀತಿ ಬಳಸಲಾಗುತ್ತಿದೆ.

ಒಂದೊಂದು ಟ್ರ್ಯಾಲಿಗೂ ಟ್ರ್ಯಾಲಿ ಸಂಖ್ಯೆ ನೀಡಲಾಗಿದೆ. ಇದನ್ನೂ ಜಿಲ್ಲೆಗಳ ಆಧಾರದಲ್ಲಿ ನೀಡಲಾಗಿದ್ದು, ಅದರಲ್ಲಿಯೂ ಹಲವು ವಿಭಾಗಗಳನ್ನು ಮಾಡಿಕೊಳ್ಳಲಾಗಿದೆ. ಉದಾಹರಣೆಗೆ ಪ್ಲಾಟ್‌ ನಂಬರ್‌ 201 ಎಂದಿದ್ದರೇ, ಮತ್ತೊಂದು ಟ್ರ್ಯಾಲಿಗೆ 201ಎ ಎಂದು ನೀಡಲಾಗಿದೆ.

ರೈತ ಹೋರಾಟಕ್ಕೆ ಪಾಳಿಗಳ ರೀತಿಯಲ್ಲಿ ಪ್ರತಿಭಟನಾಕಾರರು ತಮ್ಮ ತಮ್ಮ ಗ್ರಾಮಗಳಿಂದ ಬರುತ್ತಿರುವುದರಿಂದ ಅವರಿಗೆ ತಾವಿರುವ ಸ್ಥಳ ಹೇಗೆ ಸುಲಭವಾಗಿ ದೊರೆಯಬಹುದು ಎಂಬುದನ್ನು ಗಮನದಲ್ಲಿ ಇರಿಸಿಕೊಂಡು ಇಂತಹ ವ್ಯವಸ್ಥೆ ಮಾಡಲಾಗಿದೆ.

ನಮ್ಮ ತಂಡ ಕೂಡ ಟಿಕ್ರಿ ಬಾರ್ಡರ್‌ನಲ್ಲಿ ಇಳಿದು ರೈತ ಹೋರಾಟಗಾರರ ಸಭೆಗೆ ಹೋಗಲು ಕರೆ ಮಾಡಿದಾಗ ಅವರಿಂದ ನಮಗೆ ಸಿಕ್ಕ ವಿಳಾಸವು ಇದೆ ರೀತಿಯದ್ದು. ಪಿಲ್ಲರ್‌ 805 ರ ಬಳಿ ಬನ್ನಿ ಅಲ್ಲಿ ನಾವು ನಿಮಗೆ ಸಿಗುತ್ತೇವೆ ಎಂದು ಭಾರತೀಯ ಕಿಸಾನ್‌ ಯೂನಿಯನ್‌ ಮುಖಂಡರಾದ ಸುರೀಂಧರ್‌ ಸಿಂಗ್‌ ಹೇಳಿದಾಗ ನಮಗೂ ಒಮ್ಮೆ ಅದ್ಯಾವ ಪಿಲ್ಲರ್‌ ಎಂಬ ಕುತೂಹಲ ಸಹಜವಾಗಿಯೇ ಮೂಡಿತ್ತು.

ಈಗಾಗಲೇ ರೈತ ಮುಖಂಡರು ಮತ್ತು ಕೇಂದ್ರ ಸರ್ಕಾರದ ನಡುವೆ ನಡೆದ 8ನೇ ಸುತ್ತಿನ ಮಾತುಕತೆ ಕೂಡ ಮುರಿದು ಬಿದ್ದಿದೆ. ಮುಂದಿನ ಮಾತುಕತೆಗಳನ್ನು ರೈತರು ಬಹಿಷ್ಕರಿಸುವ ಎಚ್ಚರಿಕೆಯನ್ನು ನೀಡುತ್ತಿದ್ದಾರೆ. ರೈತರ ದೃಢ ನಿರ್ಧಾರ ನೋಡಿದರೇ, ಈ ಪಿಲ್ಲರ್‌, ಬೋರ್ಡ್‌ ವಿಳಾಸಗಳು ಒಂದೆರಡು ವರ್ಷಗಳವರೆಗೆ ಶಾಶ್ವತ ವಿಳಾಸಗಳಾಗುವ ಮುನ್ಸುಚನೆಯೇ ಎಂಬ ಅನುಮಾನ ಕಾಡದೇ ಇರದು.

(ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ)


ಇದನ್ನೂ ಓದಿ: ವಾಟ್ಸಾಪ್‌ಗೆ ಗುಡ್‌ಬೈ ಹೇಳಿ, ಸಿಗ್ನಲ್‌ಗೆ ಹೆಲೋ ಹೇಳಿ: ಏನಿದು ಸಿಗ್ನಲ್ ಆಪ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...