Homeಮುಖಪುಟರೈತಹೋರಾಟದ ಮೈಲಿಗಲ್ಲುಗಳು ಈ ಪಿಲ್ಲರ್‌ ನಂಬರ್‌ಗಳು: ರೈತರ ಹೊಸ ಪಿಲ್ಲರ್‌ ವಿಳಾಸಗಳ ಬಗ್ಗೆ ನಿಮಗೆ ಗೊತ್ತೆ?

ರೈತಹೋರಾಟದ ಮೈಲಿಗಲ್ಲುಗಳು ಈ ಪಿಲ್ಲರ್‌ ನಂಬರ್‌ಗಳು: ರೈತರ ಹೊಸ ಪಿಲ್ಲರ್‌ ವಿಳಾಸಗಳ ಬಗ್ಗೆ ನಿಮಗೆ ಗೊತ್ತೆ?

ರೈತ ಹೋರಾಟದ ಸುದ್ದಿ ಪತ್ರಿಕೆ ಟ್ರ್ಯಾಲಿ ಟೈಮ್ಸ್‌ ಇರುವುದು ಪಿಲ್ಲರ್‌ ನಂಬರ್‌ 783 ರಲ್ಲೆ...

- Advertisement -
- Advertisement -

1. ಪಿಲ್ಲರ್ ನಂ‌, 803, ದಿಲ್ಜಿತ್‌ ಸರ್‌ಪಂಚ್‌ ಸಿಂಗ್, ಟಿಕ್ರಿ ಬಾರ್ಡರ್‌, ದೆಹಲಿ

2. ಪಿಲ್ಲರ್‌ ನಂ. 780, ವಿರೇಂದರ್‌ ಸಿಂಗ್, ಟಿಕ್ರಿ ಬಾರ್ಡರ್‌, ದೆಹಲಿ.

ಈ ವಿಳಾಸಗಳು ದೆಹಲಿಯಲ್ಲಿ ಹಲವಾರು ವರ್ಷಗಳಿಂದ ವಾಸ ಮಾಡುತ್ತಿರುವ ಯಾರದ್ದೋ ಶಾಶ್ವತ ವಿಳಾಸಗಳಲ್ಲ. ಕೇಂದ್ರ ಸರ್ಕಾರ ನಮ್ಮ ಹೋರಾಟಕ್ಕೆ ಜಗ್ಗದೆ ಇದ್ದರೇ ಶಾಶ್ವತ ವಿಳಾಸಗಳಾಗಿ ಮಾರ್ಪಡುವ ಜಾಗಗಳಿವು ಎನ್ನುವ ದಿಟ್ಟ ಎಚ್ಚರಿಕೆ ನೀಡಿರುವ ರೈತ ಹೋರಾಟಗಾರರದ್ದು.

ಹೌದು, ಈಗಾಗಲೇ ರೈತ ಹೋರಾಟ ಶುರಾವಾಗಿ 45ನೇ ದಿನಕ್ಕೆ ಕಾಲಿಟ್ಟಿದೆ. ತಮ್ಮ ಮನೆ, ಊರು, ಜಿಲ್ಲೆಗಳನ್ನು ತೊರೆದು ಇಲ್ಲಿ ನೆಲೆಸಿರುವ ರೈತರು ಇಲ್ಲಿಯೇ ಹೊಸ ವಿಳಾಸಗಳನ್ನು ನೀಡುವುದನ್ನು ಆರಂಭಿಸಿದ್ದಾರೆ. ತಮ್ಮ ಹಳ್ಳಿಗಳಿಂದ ಪ್ರತಿಭಟನಾ ಸ್ಥಳಕ್ಕೆ ಬರುವ ಗ್ರಾಮದ ಜನರಿಗೆ, ಪ್ರತಿಭಟನೆ ಬೆಂಬಲಿಸಲು ಬರುವ ಜನರಿಗೆ ತಮ್ಮ ಇರುವಿಕೆಯನ್ನು ತಿಳಿಸಲು ಈ ಪಿಲ್ಲರ್‌ಗಳನ್ನು ವಿಳಾಸವಾಗಿ ನೀಡುತ್ತಾರೆ.

ಈ ಪಿಲ್ಲರ್‌ ನಂಬರ್‌ಗಳು ಯಾವುವು ಎಂದು ಅನುಮಾನ ಮೂಡುತ್ತಿದ್ದರೇ, ಇವು ದೆಹಲಿಯ ಟಿಕ್ರಿ ಬಾರ್ಡರ್‌ನಲ್ಲಿರುವ ಮೆಟ್ರೊ ಪಿಲ್ಲರ್‌ಗಳು. ಟಿಕ್ರಿ ಬಾರ್ಡರ್ ಮೆಟ್ರೋ ನಿಲ್ದಾಣದ 750ನೇ ಮೆಟ್ರೋ ಪಿಲ್ಲರ್‌ನಿಂದ ಶುರುವಾಗುವ ಪಿಲ್ಲರ್‌ ವಿಳಾಸಗಳು, ಮೂರು ಮೆಟ್ರೋ ಸ್ಟೇಷನ್‌ಗಳನ್ನು ಸೇರಿಸುವ 820ನೇ ಪಿಲ್ಲರ್‌ವರೆಗೂ ಮುಂದುವರೆಯುತ್ತದೆ.

ಪಿಲ್ಲರ್‌ಗಳ ಕೆಳಗೆ ಟ್ರ್ಯಾಲಿಯಲ್ಲಿ ಜೀವನ ನಡೆಸುತ್ತಿರುವವರು,‌ ಊಟ, ಚಹಾದ ಲಂಗರ್‌ಗಳನ್ನು ಹಾಕಿಕೊಂಡಿರುವವರು, ಮೆಡಿಕಲ್‌ ಕ್ಯಾಂಪ್‌ಗಳ ವಿಳಾಸ ದೊರೆಯುವುದು ಇದೇ ರೀತಿಯಲ್ಲಿ. ಇದಲ್ಲದೇ ರೈತ ಹೋರಾಟದ ಸುದ್ದಿ ಪತ್ರಿಕೆ ಟ್ರ್ಯಾಲಿ ಟೈಮ್ಸ್‌ ಇರುವುದು ಪಿಲ್ಲರ್‌ ನಂಬರ್‌ 783 ರಲ್ಲೆ. ಅವರು ನಮಗೆ ಬರ ಹೇಳಿದ್ದು ಪಿಲ್ಲರ್‌ ವಿಳಾಸ ನೀಡಿಯೇ.

ಇದು ಮೇಟ್ರೋ ಕೆಳಗಿನ ಪಿಲ್ಲರ್‌ಗಳ ಟ್ರ್ಯಾಲಿ ವಿಳಾಸಗಳ ಕಥೆಯಾದರೇ,  ಇನ್ನು ಬಹುದುರ್‌ಪುರ್ ಹೈವ್‌ ಕಡೆಯಲ್ಲಿ ಸುಮಾರು 10 ಕಿ.ಮೀ ಉದ್ದ ಟ್ರ್ಯಾಲಿಗಳನ್ನು ನಿಲ್ಲಿಸಿಕೊಂಡಿರುವ ರೈತ ಹೋರಾಟಗಾರರು ವಿಳಾಸ ನೀಡಲು ತಾವು ಕಂಡುಕೊಂಡಿರುವ ಮಾರ್ಗ ಮತ್ತಷ್ಟು ಕುತೂಹಲ ಹುಟ್ಟಿಸುತ್ತವೆ. ರೈತ ಹೋರಾಟಗಾರರು ಪಂಜಾಬ್‌ನಿಂದ ಬಂದಿದ್ದರೇ ಅವರಿಗೆ, ಅವರ ಜಿಲ್ಲೆ, ಗ್ರಾಮದ ಹೆಸರುಗಳಲ್ಲಿ ಬೋರ್ಡ್‌ಗಳನ್ನು ನೀಡಲಾಗಿದೆ. ತಾವು ತಂಗಿರುವ ಟ್ರ್ಯಾಲಿ ಪಕ್ಕದ ರಸ್ತೆಯ ಬದಿಯಲ್ಲಿ ಇದನ್ನು ನೆಡಲಾಗಿದೆ. ತಾವು ಯಾವ ಜಿಲ್ಲೆಯ, ಎಷ್ಟು ದೂರದ ಗ್ರಾಮದಿಂದ ಬಂದಿದ್ದೇವೆ ಎಂಬುದನ್ನು ನಾಮ ಫಲಕದಲ್ಲಿ ಬರೆದಿರುತ್ತಾರೆ. ಇದನ್ನೂ ಕೂಡ ವಿಳಾಸ ರೀತಿ ಬಳಸಲಾಗುತ್ತಿದೆ.

ಒಂದೊಂದು ಟ್ರ್ಯಾಲಿಗೂ ಟ್ರ್ಯಾಲಿ ಸಂಖ್ಯೆ ನೀಡಲಾಗಿದೆ. ಇದನ್ನೂ ಜಿಲ್ಲೆಗಳ ಆಧಾರದಲ್ಲಿ ನೀಡಲಾಗಿದ್ದು, ಅದರಲ್ಲಿಯೂ ಹಲವು ವಿಭಾಗಗಳನ್ನು ಮಾಡಿಕೊಳ್ಳಲಾಗಿದೆ. ಉದಾಹರಣೆಗೆ ಪ್ಲಾಟ್‌ ನಂಬರ್‌ 201 ಎಂದಿದ್ದರೇ, ಮತ್ತೊಂದು ಟ್ರ್ಯಾಲಿಗೆ 201ಎ ಎಂದು ನೀಡಲಾಗಿದೆ.

ರೈತ ಹೋರಾಟಕ್ಕೆ ಪಾಳಿಗಳ ರೀತಿಯಲ್ಲಿ ಪ್ರತಿಭಟನಾಕಾರರು ತಮ್ಮ ತಮ್ಮ ಗ್ರಾಮಗಳಿಂದ ಬರುತ್ತಿರುವುದರಿಂದ ಅವರಿಗೆ ತಾವಿರುವ ಸ್ಥಳ ಹೇಗೆ ಸುಲಭವಾಗಿ ದೊರೆಯಬಹುದು ಎಂಬುದನ್ನು ಗಮನದಲ್ಲಿ ಇರಿಸಿಕೊಂಡು ಇಂತಹ ವ್ಯವಸ್ಥೆ ಮಾಡಲಾಗಿದೆ.

ನಮ್ಮ ತಂಡ ಕೂಡ ಟಿಕ್ರಿ ಬಾರ್ಡರ್‌ನಲ್ಲಿ ಇಳಿದು ರೈತ ಹೋರಾಟಗಾರರ ಸಭೆಗೆ ಹೋಗಲು ಕರೆ ಮಾಡಿದಾಗ ಅವರಿಂದ ನಮಗೆ ಸಿಕ್ಕ ವಿಳಾಸವು ಇದೆ ರೀತಿಯದ್ದು. ಪಿಲ್ಲರ್‌ 805 ರ ಬಳಿ ಬನ್ನಿ ಅಲ್ಲಿ ನಾವು ನಿಮಗೆ ಸಿಗುತ್ತೇವೆ ಎಂದು ಭಾರತೀಯ ಕಿಸಾನ್‌ ಯೂನಿಯನ್‌ ಮುಖಂಡರಾದ ಸುರೀಂಧರ್‌ ಸಿಂಗ್‌ ಹೇಳಿದಾಗ ನಮಗೂ ಒಮ್ಮೆ ಅದ್ಯಾವ ಪಿಲ್ಲರ್‌ ಎಂಬ ಕುತೂಹಲ ಸಹಜವಾಗಿಯೇ ಮೂಡಿತ್ತು.

ಈಗಾಗಲೇ ರೈತ ಮುಖಂಡರು ಮತ್ತು ಕೇಂದ್ರ ಸರ್ಕಾರದ ನಡುವೆ ನಡೆದ 8ನೇ ಸುತ್ತಿನ ಮಾತುಕತೆ ಕೂಡ ಮುರಿದು ಬಿದ್ದಿದೆ. ಮುಂದಿನ ಮಾತುಕತೆಗಳನ್ನು ರೈತರು ಬಹಿಷ್ಕರಿಸುವ ಎಚ್ಚರಿಕೆಯನ್ನು ನೀಡುತ್ತಿದ್ದಾರೆ. ರೈತರ ದೃಢ ನಿರ್ಧಾರ ನೋಡಿದರೇ, ಈ ಪಿಲ್ಲರ್‌, ಬೋರ್ಡ್‌ ವಿಳಾಸಗಳು ಒಂದೆರಡು ವರ್ಷಗಳವರೆಗೆ ಶಾಶ್ವತ ವಿಳಾಸಗಳಾಗುವ ಮುನ್ಸುಚನೆಯೇ ಎಂಬ ಅನುಮಾನ ಕಾಡದೇ ಇರದು.

(ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ)


ಇದನ್ನೂ ಓದಿ: ವಾಟ್ಸಾಪ್‌ಗೆ ಗುಡ್‌ಬೈ ಹೇಳಿ, ಸಿಗ್ನಲ್‌ಗೆ ಹೆಲೋ ಹೇಳಿ: ಏನಿದು ಸಿಗ್ನಲ್ ಆಪ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...