Homeಮುಖಪುಟರೈತಹೋರಾಟದ ಮೈಲಿಗಲ್ಲುಗಳು ಈ ಪಿಲ್ಲರ್‌ ನಂಬರ್‌ಗಳು: ರೈತರ ಹೊಸ ಪಿಲ್ಲರ್‌ ವಿಳಾಸಗಳ ಬಗ್ಗೆ ನಿಮಗೆ ಗೊತ್ತೆ?

ರೈತಹೋರಾಟದ ಮೈಲಿಗಲ್ಲುಗಳು ಈ ಪಿಲ್ಲರ್‌ ನಂಬರ್‌ಗಳು: ರೈತರ ಹೊಸ ಪಿಲ್ಲರ್‌ ವಿಳಾಸಗಳ ಬಗ್ಗೆ ನಿಮಗೆ ಗೊತ್ತೆ?

ರೈತ ಹೋರಾಟದ ಸುದ್ದಿ ಪತ್ರಿಕೆ ಟ್ರ್ಯಾಲಿ ಟೈಮ್ಸ್‌ ಇರುವುದು ಪಿಲ್ಲರ್‌ ನಂಬರ್‌ 783 ರಲ್ಲೆ...

- Advertisement -
- Advertisement -

1. ಪಿಲ್ಲರ್ ನಂ‌, 803, ದಿಲ್ಜಿತ್‌ ಸರ್‌ಪಂಚ್‌ ಸಿಂಗ್, ಟಿಕ್ರಿ ಬಾರ್ಡರ್‌, ದೆಹಲಿ

2. ಪಿಲ್ಲರ್‌ ನಂ. 780, ವಿರೇಂದರ್‌ ಸಿಂಗ್, ಟಿಕ್ರಿ ಬಾರ್ಡರ್‌, ದೆಹಲಿ.

ಈ ವಿಳಾಸಗಳು ದೆಹಲಿಯಲ್ಲಿ ಹಲವಾರು ವರ್ಷಗಳಿಂದ ವಾಸ ಮಾಡುತ್ತಿರುವ ಯಾರದ್ದೋ ಶಾಶ್ವತ ವಿಳಾಸಗಳಲ್ಲ. ಕೇಂದ್ರ ಸರ್ಕಾರ ನಮ್ಮ ಹೋರಾಟಕ್ಕೆ ಜಗ್ಗದೆ ಇದ್ದರೇ ಶಾಶ್ವತ ವಿಳಾಸಗಳಾಗಿ ಮಾರ್ಪಡುವ ಜಾಗಗಳಿವು ಎನ್ನುವ ದಿಟ್ಟ ಎಚ್ಚರಿಕೆ ನೀಡಿರುವ ರೈತ ಹೋರಾಟಗಾರರದ್ದು.

ಹೌದು, ಈಗಾಗಲೇ ರೈತ ಹೋರಾಟ ಶುರಾವಾಗಿ 45ನೇ ದಿನಕ್ಕೆ ಕಾಲಿಟ್ಟಿದೆ. ತಮ್ಮ ಮನೆ, ಊರು, ಜಿಲ್ಲೆಗಳನ್ನು ತೊರೆದು ಇಲ್ಲಿ ನೆಲೆಸಿರುವ ರೈತರು ಇಲ್ಲಿಯೇ ಹೊಸ ವಿಳಾಸಗಳನ್ನು ನೀಡುವುದನ್ನು ಆರಂಭಿಸಿದ್ದಾರೆ. ತಮ್ಮ ಹಳ್ಳಿಗಳಿಂದ ಪ್ರತಿಭಟನಾ ಸ್ಥಳಕ್ಕೆ ಬರುವ ಗ್ರಾಮದ ಜನರಿಗೆ, ಪ್ರತಿಭಟನೆ ಬೆಂಬಲಿಸಲು ಬರುವ ಜನರಿಗೆ ತಮ್ಮ ಇರುವಿಕೆಯನ್ನು ತಿಳಿಸಲು ಈ ಪಿಲ್ಲರ್‌ಗಳನ್ನು ವಿಳಾಸವಾಗಿ ನೀಡುತ್ತಾರೆ.

ಈ ಪಿಲ್ಲರ್‌ ನಂಬರ್‌ಗಳು ಯಾವುವು ಎಂದು ಅನುಮಾನ ಮೂಡುತ್ತಿದ್ದರೇ, ಇವು ದೆಹಲಿಯ ಟಿಕ್ರಿ ಬಾರ್ಡರ್‌ನಲ್ಲಿರುವ ಮೆಟ್ರೊ ಪಿಲ್ಲರ್‌ಗಳು. ಟಿಕ್ರಿ ಬಾರ್ಡರ್ ಮೆಟ್ರೋ ನಿಲ್ದಾಣದ 750ನೇ ಮೆಟ್ರೋ ಪಿಲ್ಲರ್‌ನಿಂದ ಶುರುವಾಗುವ ಪಿಲ್ಲರ್‌ ವಿಳಾಸಗಳು, ಮೂರು ಮೆಟ್ರೋ ಸ್ಟೇಷನ್‌ಗಳನ್ನು ಸೇರಿಸುವ 820ನೇ ಪಿಲ್ಲರ್‌ವರೆಗೂ ಮುಂದುವರೆಯುತ್ತದೆ.

ಪಿಲ್ಲರ್‌ಗಳ ಕೆಳಗೆ ಟ್ರ್ಯಾಲಿಯಲ್ಲಿ ಜೀವನ ನಡೆಸುತ್ತಿರುವವರು,‌ ಊಟ, ಚಹಾದ ಲಂಗರ್‌ಗಳನ್ನು ಹಾಕಿಕೊಂಡಿರುವವರು, ಮೆಡಿಕಲ್‌ ಕ್ಯಾಂಪ್‌ಗಳ ವಿಳಾಸ ದೊರೆಯುವುದು ಇದೇ ರೀತಿಯಲ್ಲಿ. ಇದಲ್ಲದೇ ರೈತ ಹೋರಾಟದ ಸುದ್ದಿ ಪತ್ರಿಕೆ ಟ್ರ್ಯಾಲಿ ಟೈಮ್ಸ್‌ ಇರುವುದು ಪಿಲ್ಲರ್‌ ನಂಬರ್‌ 783 ರಲ್ಲೆ. ಅವರು ನಮಗೆ ಬರ ಹೇಳಿದ್ದು ಪಿಲ್ಲರ್‌ ವಿಳಾಸ ನೀಡಿಯೇ.

ಇದು ಮೇಟ್ರೋ ಕೆಳಗಿನ ಪಿಲ್ಲರ್‌ಗಳ ಟ್ರ್ಯಾಲಿ ವಿಳಾಸಗಳ ಕಥೆಯಾದರೇ,  ಇನ್ನು ಬಹುದುರ್‌ಪುರ್ ಹೈವ್‌ ಕಡೆಯಲ್ಲಿ ಸುಮಾರು 10 ಕಿ.ಮೀ ಉದ್ದ ಟ್ರ್ಯಾಲಿಗಳನ್ನು ನಿಲ್ಲಿಸಿಕೊಂಡಿರುವ ರೈತ ಹೋರಾಟಗಾರರು ವಿಳಾಸ ನೀಡಲು ತಾವು ಕಂಡುಕೊಂಡಿರುವ ಮಾರ್ಗ ಮತ್ತಷ್ಟು ಕುತೂಹಲ ಹುಟ್ಟಿಸುತ್ತವೆ. ರೈತ ಹೋರಾಟಗಾರರು ಪಂಜಾಬ್‌ನಿಂದ ಬಂದಿದ್ದರೇ ಅವರಿಗೆ, ಅವರ ಜಿಲ್ಲೆ, ಗ್ರಾಮದ ಹೆಸರುಗಳಲ್ಲಿ ಬೋರ್ಡ್‌ಗಳನ್ನು ನೀಡಲಾಗಿದೆ. ತಾವು ತಂಗಿರುವ ಟ್ರ್ಯಾಲಿ ಪಕ್ಕದ ರಸ್ತೆಯ ಬದಿಯಲ್ಲಿ ಇದನ್ನು ನೆಡಲಾಗಿದೆ. ತಾವು ಯಾವ ಜಿಲ್ಲೆಯ, ಎಷ್ಟು ದೂರದ ಗ್ರಾಮದಿಂದ ಬಂದಿದ್ದೇವೆ ಎಂಬುದನ್ನು ನಾಮ ಫಲಕದಲ್ಲಿ ಬರೆದಿರುತ್ತಾರೆ. ಇದನ್ನೂ ಕೂಡ ವಿಳಾಸ ರೀತಿ ಬಳಸಲಾಗುತ್ತಿದೆ.

ಒಂದೊಂದು ಟ್ರ್ಯಾಲಿಗೂ ಟ್ರ್ಯಾಲಿ ಸಂಖ್ಯೆ ನೀಡಲಾಗಿದೆ. ಇದನ್ನೂ ಜಿಲ್ಲೆಗಳ ಆಧಾರದಲ್ಲಿ ನೀಡಲಾಗಿದ್ದು, ಅದರಲ್ಲಿಯೂ ಹಲವು ವಿಭಾಗಗಳನ್ನು ಮಾಡಿಕೊಳ್ಳಲಾಗಿದೆ. ಉದಾಹರಣೆಗೆ ಪ್ಲಾಟ್‌ ನಂಬರ್‌ 201 ಎಂದಿದ್ದರೇ, ಮತ್ತೊಂದು ಟ್ರ್ಯಾಲಿಗೆ 201ಎ ಎಂದು ನೀಡಲಾಗಿದೆ.

ರೈತ ಹೋರಾಟಕ್ಕೆ ಪಾಳಿಗಳ ರೀತಿಯಲ್ಲಿ ಪ್ರತಿಭಟನಾಕಾರರು ತಮ್ಮ ತಮ್ಮ ಗ್ರಾಮಗಳಿಂದ ಬರುತ್ತಿರುವುದರಿಂದ ಅವರಿಗೆ ತಾವಿರುವ ಸ್ಥಳ ಹೇಗೆ ಸುಲಭವಾಗಿ ದೊರೆಯಬಹುದು ಎಂಬುದನ್ನು ಗಮನದಲ್ಲಿ ಇರಿಸಿಕೊಂಡು ಇಂತಹ ವ್ಯವಸ್ಥೆ ಮಾಡಲಾಗಿದೆ.

ನಮ್ಮ ತಂಡ ಕೂಡ ಟಿಕ್ರಿ ಬಾರ್ಡರ್‌ನಲ್ಲಿ ಇಳಿದು ರೈತ ಹೋರಾಟಗಾರರ ಸಭೆಗೆ ಹೋಗಲು ಕರೆ ಮಾಡಿದಾಗ ಅವರಿಂದ ನಮಗೆ ಸಿಕ್ಕ ವಿಳಾಸವು ಇದೆ ರೀತಿಯದ್ದು. ಪಿಲ್ಲರ್‌ 805 ರ ಬಳಿ ಬನ್ನಿ ಅಲ್ಲಿ ನಾವು ನಿಮಗೆ ಸಿಗುತ್ತೇವೆ ಎಂದು ಭಾರತೀಯ ಕಿಸಾನ್‌ ಯೂನಿಯನ್‌ ಮುಖಂಡರಾದ ಸುರೀಂಧರ್‌ ಸಿಂಗ್‌ ಹೇಳಿದಾಗ ನಮಗೂ ಒಮ್ಮೆ ಅದ್ಯಾವ ಪಿಲ್ಲರ್‌ ಎಂಬ ಕುತೂಹಲ ಸಹಜವಾಗಿಯೇ ಮೂಡಿತ್ತು.

ಈಗಾಗಲೇ ರೈತ ಮುಖಂಡರು ಮತ್ತು ಕೇಂದ್ರ ಸರ್ಕಾರದ ನಡುವೆ ನಡೆದ 8ನೇ ಸುತ್ತಿನ ಮಾತುಕತೆ ಕೂಡ ಮುರಿದು ಬಿದ್ದಿದೆ. ಮುಂದಿನ ಮಾತುಕತೆಗಳನ್ನು ರೈತರು ಬಹಿಷ್ಕರಿಸುವ ಎಚ್ಚರಿಕೆಯನ್ನು ನೀಡುತ್ತಿದ್ದಾರೆ. ರೈತರ ದೃಢ ನಿರ್ಧಾರ ನೋಡಿದರೇ, ಈ ಪಿಲ್ಲರ್‌, ಬೋರ್ಡ್‌ ವಿಳಾಸಗಳು ಒಂದೆರಡು ವರ್ಷಗಳವರೆಗೆ ಶಾಶ್ವತ ವಿಳಾಸಗಳಾಗುವ ಮುನ್ಸುಚನೆಯೇ ಎಂಬ ಅನುಮಾನ ಕಾಡದೇ ಇರದು.

(ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ)


ಇದನ್ನೂ ಓದಿ: ವಾಟ್ಸಾಪ್‌ಗೆ ಗುಡ್‌ಬೈ ಹೇಳಿ, ಸಿಗ್ನಲ್‌ಗೆ ಹೆಲೋ ಹೇಳಿ: ಏನಿದು ಸಿಗ್ನಲ್ ಆಪ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...