Homeಮುಖಪುಟರೈತಹೋರಾಟದ ಮೈಲಿಗಲ್ಲುಗಳು ಈ ಪಿಲ್ಲರ್‌ ನಂಬರ್‌ಗಳು: ರೈತರ ಹೊಸ ಪಿಲ್ಲರ್‌ ವಿಳಾಸಗಳ ಬಗ್ಗೆ ನಿಮಗೆ ಗೊತ್ತೆ?

ರೈತಹೋರಾಟದ ಮೈಲಿಗಲ್ಲುಗಳು ಈ ಪಿಲ್ಲರ್‌ ನಂಬರ್‌ಗಳು: ರೈತರ ಹೊಸ ಪಿಲ್ಲರ್‌ ವಿಳಾಸಗಳ ಬಗ್ಗೆ ನಿಮಗೆ ಗೊತ್ತೆ?

ರೈತ ಹೋರಾಟದ ಸುದ್ದಿ ಪತ್ರಿಕೆ ಟ್ರ್ಯಾಲಿ ಟೈಮ್ಸ್‌ ಇರುವುದು ಪಿಲ್ಲರ್‌ ನಂಬರ್‌ 783 ರಲ್ಲೆ...

- Advertisement -
- Advertisement -

1. ಪಿಲ್ಲರ್ ನಂ‌, 803, ದಿಲ್ಜಿತ್‌ ಸರ್‌ಪಂಚ್‌ ಸಿಂಗ್, ಟಿಕ್ರಿ ಬಾರ್ಡರ್‌, ದೆಹಲಿ

2. ಪಿಲ್ಲರ್‌ ನಂ. 780, ವಿರೇಂದರ್‌ ಸಿಂಗ್, ಟಿಕ್ರಿ ಬಾರ್ಡರ್‌, ದೆಹಲಿ.

ಈ ವಿಳಾಸಗಳು ದೆಹಲಿಯಲ್ಲಿ ಹಲವಾರು ವರ್ಷಗಳಿಂದ ವಾಸ ಮಾಡುತ್ತಿರುವ ಯಾರದ್ದೋ ಶಾಶ್ವತ ವಿಳಾಸಗಳಲ್ಲ. ಕೇಂದ್ರ ಸರ್ಕಾರ ನಮ್ಮ ಹೋರಾಟಕ್ಕೆ ಜಗ್ಗದೆ ಇದ್ದರೇ ಶಾಶ್ವತ ವಿಳಾಸಗಳಾಗಿ ಮಾರ್ಪಡುವ ಜಾಗಗಳಿವು ಎನ್ನುವ ದಿಟ್ಟ ಎಚ್ಚರಿಕೆ ನೀಡಿರುವ ರೈತ ಹೋರಾಟಗಾರರದ್ದು.

ಹೌದು, ಈಗಾಗಲೇ ರೈತ ಹೋರಾಟ ಶುರಾವಾಗಿ 45ನೇ ದಿನಕ್ಕೆ ಕಾಲಿಟ್ಟಿದೆ. ತಮ್ಮ ಮನೆ, ಊರು, ಜಿಲ್ಲೆಗಳನ್ನು ತೊರೆದು ಇಲ್ಲಿ ನೆಲೆಸಿರುವ ರೈತರು ಇಲ್ಲಿಯೇ ಹೊಸ ವಿಳಾಸಗಳನ್ನು ನೀಡುವುದನ್ನು ಆರಂಭಿಸಿದ್ದಾರೆ. ತಮ್ಮ ಹಳ್ಳಿಗಳಿಂದ ಪ್ರತಿಭಟನಾ ಸ್ಥಳಕ್ಕೆ ಬರುವ ಗ್ರಾಮದ ಜನರಿಗೆ, ಪ್ರತಿಭಟನೆ ಬೆಂಬಲಿಸಲು ಬರುವ ಜನರಿಗೆ ತಮ್ಮ ಇರುವಿಕೆಯನ್ನು ತಿಳಿಸಲು ಈ ಪಿಲ್ಲರ್‌ಗಳನ್ನು ವಿಳಾಸವಾಗಿ ನೀಡುತ್ತಾರೆ.

ಈ ಪಿಲ್ಲರ್‌ ನಂಬರ್‌ಗಳು ಯಾವುವು ಎಂದು ಅನುಮಾನ ಮೂಡುತ್ತಿದ್ದರೇ, ಇವು ದೆಹಲಿಯ ಟಿಕ್ರಿ ಬಾರ್ಡರ್‌ನಲ್ಲಿರುವ ಮೆಟ್ರೊ ಪಿಲ್ಲರ್‌ಗಳು. ಟಿಕ್ರಿ ಬಾರ್ಡರ್ ಮೆಟ್ರೋ ನಿಲ್ದಾಣದ 750ನೇ ಮೆಟ್ರೋ ಪಿಲ್ಲರ್‌ನಿಂದ ಶುರುವಾಗುವ ಪಿಲ್ಲರ್‌ ವಿಳಾಸಗಳು, ಮೂರು ಮೆಟ್ರೋ ಸ್ಟೇಷನ್‌ಗಳನ್ನು ಸೇರಿಸುವ 820ನೇ ಪಿಲ್ಲರ್‌ವರೆಗೂ ಮುಂದುವರೆಯುತ್ತದೆ.

ಪಿಲ್ಲರ್‌ಗಳ ಕೆಳಗೆ ಟ್ರ್ಯಾಲಿಯಲ್ಲಿ ಜೀವನ ನಡೆಸುತ್ತಿರುವವರು,‌ ಊಟ, ಚಹಾದ ಲಂಗರ್‌ಗಳನ್ನು ಹಾಕಿಕೊಂಡಿರುವವರು, ಮೆಡಿಕಲ್‌ ಕ್ಯಾಂಪ್‌ಗಳ ವಿಳಾಸ ದೊರೆಯುವುದು ಇದೇ ರೀತಿಯಲ್ಲಿ. ಇದಲ್ಲದೇ ರೈತ ಹೋರಾಟದ ಸುದ್ದಿ ಪತ್ರಿಕೆ ಟ್ರ್ಯಾಲಿ ಟೈಮ್ಸ್‌ ಇರುವುದು ಪಿಲ್ಲರ್‌ ನಂಬರ್‌ 783 ರಲ್ಲೆ. ಅವರು ನಮಗೆ ಬರ ಹೇಳಿದ್ದು ಪಿಲ್ಲರ್‌ ವಿಳಾಸ ನೀಡಿಯೇ.

ಇದು ಮೇಟ್ರೋ ಕೆಳಗಿನ ಪಿಲ್ಲರ್‌ಗಳ ಟ್ರ್ಯಾಲಿ ವಿಳಾಸಗಳ ಕಥೆಯಾದರೇ,  ಇನ್ನು ಬಹುದುರ್‌ಪುರ್ ಹೈವ್‌ ಕಡೆಯಲ್ಲಿ ಸುಮಾರು 10 ಕಿ.ಮೀ ಉದ್ದ ಟ್ರ್ಯಾಲಿಗಳನ್ನು ನಿಲ್ಲಿಸಿಕೊಂಡಿರುವ ರೈತ ಹೋರಾಟಗಾರರು ವಿಳಾಸ ನೀಡಲು ತಾವು ಕಂಡುಕೊಂಡಿರುವ ಮಾರ್ಗ ಮತ್ತಷ್ಟು ಕುತೂಹಲ ಹುಟ್ಟಿಸುತ್ತವೆ. ರೈತ ಹೋರಾಟಗಾರರು ಪಂಜಾಬ್‌ನಿಂದ ಬಂದಿದ್ದರೇ ಅವರಿಗೆ, ಅವರ ಜಿಲ್ಲೆ, ಗ್ರಾಮದ ಹೆಸರುಗಳಲ್ಲಿ ಬೋರ್ಡ್‌ಗಳನ್ನು ನೀಡಲಾಗಿದೆ. ತಾವು ತಂಗಿರುವ ಟ್ರ್ಯಾಲಿ ಪಕ್ಕದ ರಸ್ತೆಯ ಬದಿಯಲ್ಲಿ ಇದನ್ನು ನೆಡಲಾಗಿದೆ. ತಾವು ಯಾವ ಜಿಲ್ಲೆಯ, ಎಷ್ಟು ದೂರದ ಗ್ರಾಮದಿಂದ ಬಂದಿದ್ದೇವೆ ಎಂಬುದನ್ನು ನಾಮ ಫಲಕದಲ್ಲಿ ಬರೆದಿರುತ್ತಾರೆ. ಇದನ್ನೂ ಕೂಡ ವಿಳಾಸ ರೀತಿ ಬಳಸಲಾಗುತ್ತಿದೆ.

ಒಂದೊಂದು ಟ್ರ್ಯಾಲಿಗೂ ಟ್ರ್ಯಾಲಿ ಸಂಖ್ಯೆ ನೀಡಲಾಗಿದೆ. ಇದನ್ನೂ ಜಿಲ್ಲೆಗಳ ಆಧಾರದಲ್ಲಿ ನೀಡಲಾಗಿದ್ದು, ಅದರಲ್ಲಿಯೂ ಹಲವು ವಿಭಾಗಗಳನ್ನು ಮಾಡಿಕೊಳ್ಳಲಾಗಿದೆ. ಉದಾಹರಣೆಗೆ ಪ್ಲಾಟ್‌ ನಂಬರ್‌ 201 ಎಂದಿದ್ದರೇ, ಮತ್ತೊಂದು ಟ್ರ್ಯಾಲಿಗೆ 201ಎ ಎಂದು ನೀಡಲಾಗಿದೆ.

ರೈತ ಹೋರಾಟಕ್ಕೆ ಪಾಳಿಗಳ ರೀತಿಯಲ್ಲಿ ಪ್ರತಿಭಟನಾಕಾರರು ತಮ್ಮ ತಮ್ಮ ಗ್ರಾಮಗಳಿಂದ ಬರುತ್ತಿರುವುದರಿಂದ ಅವರಿಗೆ ತಾವಿರುವ ಸ್ಥಳ ಹೇಗೆ ಸುಲಭವಾಗಿ ದೊರೆಯಬಹುದು ಎಂಬುದನ್ನು ಗಮನದಲ್ಲಿ ಇರಿಸಿಕೊಂಡು ಇಂತಹ ವ್ಯವಸ್ಥೆ ಮಾಡಲಾಗಿದೆ.

ನಮ್ಮ ತಂಡ ಕೂಡ ಟಿಕ್ರಿ ಬಾರ್ಡರ್‌ನಲ್ಲಿ ಇಳಿದು ರೈತ ಹೋರಾಟಗಾರರ ಸಭೆಗೆ ಹೋಗಲು ಕರೆ ಮಾಡಿದಾಗ ಅವರಿಂದ ನಮಗೆ ಸಿಕ್ಕ ವಿಳಾಸವು ಇದೆ ರೀತಿಯದ್ದು. ಪಿಲ್ಲರ್‌ 805 ರ ಬಳಿ ಬನ್ನಿ ಅಲ್ಲಿ ನಾವು ನಿಮಗೆ ಸಿಗುತ್ತೇವೆ ಎಂದು ಭಾರತೀಯ ಕಿಸಾನ್‌ ಯೂನಿಯನ್‌ ಮುಖಂಡರಾದ ಸುರೀಂಧರ್‌ ಸಿಂಗ್‌ ಹೇಳಿದಾಗ ನಮಗೂ ಒಮ್ಮೆ ಅದ್ಯಾವ ಪಿಲ್ಲರ್‌ ಎಂಬ ಕುತೂಹಲ ಸಹಜವಾಗಿಯೇ ಮೂಡಿತ್ತು.

ಈಗಾಗಲೇ ರೈತ ಮುಖಂಡರು ಮತ್ತು ಕೇಂದ್ರ ಸರ್ಕಾರದ ನಡುವೆ ನಡೆದ 8ನೇ ಸುತ್ತಿನ ಮಾತುಕತೆ ಕೂಡ ಮುರಿದು ಬಿದ್ದಿದೆ. ಮುಂದಿನ ಮಾತುಕತೆಗಳನ್ನು ರೈತರು ಬಹಿಷ್ಕರಿಸುವ ಎಚ್ಚರಿಕೆಯನ್ನು ನೀಡುತ್ತಿದ್ದಾರೆ. ರೈತರ ದೃಢ ನಿರ್ಧಾರ ನೋಡಿದರೇ, ಈ ಪಿಲ್ಲರ್‌, ಬೋರ್ಡ್‌ ವಿಳಾಸಗಳು ಒಂದೆರಡು ವರ್ಷಗಳವರೆಗೆ ಶಾಶ್ವತ ವಿಳಾಸಗಳಾಗುವ ಮುನ್ಸುಚನೆಯೇ ಎಂಬ ಅನುಮಾನ ಕಾಡದೇ ಇರದು.

(ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ)


ಇದನ್ನೂ ಓದಿ: ವಾಟ್ಸಾಪ್‌ಗೆ ಗುಡ್‌ಬೈ ಹೇಳಿ, ಸಿಗ್ನಲ್‌ಗೆ ಹೆಲೋ ಹೇಳಿ: ಏನಿದು ಸಿಗ್ನಲ್ ಆಪ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....