Homeಚಳವಳಿರೈತ ಹೋರಾಟ ನೆಲದಲ್ಲಿ ಕೊಲೆ: ನಿಹಾಂಗ್‌‌ ಬೆಂಬಲಿತ ವ್ಯಕ್ತಿ ಪೊಲೀಸರಿಗೆ ಶರಣು

ರೈತ ಹೋರಾಟ ನೆಲದಲ್ಲಿ ಕೊಲೆ: ನಿಹಾಂಗ್‌‌ ಬೆಂಬಲಿತ ವ್ಯಕ್ತಿ ಪೊಲೀಸರಿಗೆ ಶರಣು

ಒಬ್ಬಾತ ಕೊಂದಿದ್ದಾನೆ, ಆತನನ್ನು ಪೊಲೀಸರು ಬಂಧಿಸಿದ್ದಾರೆ. ತನಿಖೆ ನಡೆಯುತ್ತಿದೆ. ಆದರೆ ಈ ಘಟನೆ ರೈತ ಹೋರಾಟಕ್ಕೆ ಯಾವುದೇ ಸಮಸ್ಯೆ ಉಂಟು ಮಾಡುವುದಿಲ್ಲ: ರಾಕೇಶ್‌ ಟಿಕಾಯತ್‌

- Advertisement -
- Advertisement -

ಪ್ರತಿಭಟನಾ ನಿರತ ದೆಹಲಿಯ ಸಿಂಘು ಗಡಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿತ್ತು. ಈ ಕೊಲೆಯನ್ನು ತಾನೇ ಮಾಡಿದ್ದಾಗಿ ನಿಹಾಂಗ್‌ ಗುಂಪಿನ ಸದಸ್ಯ ಒಪ್ಪಿಕೊಂಡಿದ್ದಾರೆ.

ನಿಹಾಂಗ್ ಗುಂಪಿನ ಸರವ್ ಜಿತ್ ಸಿಂಗ್ ಶುಕ್ರವಾರ ಸಂಜೆ ಪೊಲೀಸರಿಗೆ ಶರಣಾಗಿದ್ದು, ಹತ್ಯೆಯ ಹೊಣೆ ಹೊತ್ತಿದ್ದಾನೆ. ಆತನನ್ನು ಬಂಧಿಸಿರುವ ಪೊಲೀಸರು, ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ತಿಳಿಸಿದ್ದಾರೆ.

ಮೃತರನ್ನು ಪಂಜಾಬ್‌ನ ತರ್ನ್‌ ತರನ್ ಜಿಲ್ಲೆಯ ಚೀಮಾ ಕಲಾ ಹಳ್ಳಿಯ ದರ್ಶನ್ ಸಿಂಗ್ ಎಂಬುವರ ಮಗ ಲಖ್ಬೀರ್ ಸಿಂಗ್ ಎಂದು ಗುರುತಿಸಲಾಗಿದೆ. ಈ ಯುವಕ ನಿಹಾಂಗ್‌ ಗುಂಪಿನ ಜೊತೆಯಲ್ಲಿಯೇ ಇದ್ದರು ಎನ್ನಲಾಗಿದೆ.

ಮೃತ ಲಖ್ಬೀರ್‌‌ ಸಿಂಗ್‌ ಅವರು, ಸುಮಾರು 35 ವರ್ಷ ವಯಸ್ಸಿನವರು. ದಲಿತರಾಗಿರುವ ಅವರು ಕಾರ್ಮಿಕರಾಗಿದ್ದು, ದತ್ತು ಪುತ್ರ, ಒಬ್ಬ ಸಹೋದರಿ, ಪತ್ನಿ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ ಎಂದು ಪೊಲೀಸ್‌ ಮೂಲಗಳು ಹೇಳಿವೆ.

ಈ ಹಿಂದೆ ಸೋನಿಪತ್‌ಗೆ ಭೇಟಿ ನೀಡಬೇಕಿದ್ದ ಹರಿಯಾಣ ಮುಖ್ಯಮಂತ್ರಿ ಮನೋಹರಲಾಲ್‌ ಖಟ್ಟರ್, “ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದ್ದರು. ಖಟ್ಟರ್ ಅವರು ಚಂಡಿಗಡದಲ್ಲಿನ ಅವರ ನಿವಾಸದಲ್ಲಿ ಸಭೆ ನಡೆಸಿ, ಹತ್ಯೆಯ ಸಂಬಂಧ ಗೃಹ ಸಚಿವ ಅನಿಲ್ ವಿಜ್ ಮತ್ತು ಹರಿಯಾಣ ಪೊಲೀಸ್ ಡಿಜಿಪಿ ಜೊತೆಗೆ ಚರ್ಚಿಸಿದ್ದರು.

ಇದನ್ನೂ ಓದಿರಿ: ರೈತರ ಹತ್ಯಾಕಾಂಡ: ಅಮಿತ್ ಶಾ ಮನೆ ಮುಂದೆ ಪ್ರತಿಭಟನೆ ನಡೆಸಿದ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ

ಸ್ಥಳೀಯ ಕುಂಡ್ಲಿ ಪೊಲೀಸರು ಎಚ್ಚರಿಕೆ ವಹಿಸಿದ ಬಳಿಕ  ಬೆಳಿಗ್ಗೆ ಐದು ಗಂಟೆಯ ವೇಳೆಗೆ ಮೃತದೇಹ ಪತ್ತೆಯಾಗಿತ್ತು. ಸೋನಿಪತ್‌ ಪೊಲೀಸ್‌ ಸೂಪರಿಡೆಂಟೆಡ್‌‌ ಜೆ.ಎಸ್‌.ರಾಂಧ್ವಾ ಅವರು, ಪ್ರಮುಖ ಸುಳಿವುಗಳು ದೊರೆತಿವೆ ಎಂದು ಹೇಳಿದ್ದರು. ಐಜಿಪಿ (ರೋಹ್ಟಕ್‌ ರೇಂಜ್‌) ಸಂದೀಪ್ ಖಿರ್ವಾರ್ ಫೋರೆನ್ಸಿಕ್ ತಂಡವು ಪ್ರದೇಶವನ್ನು ಪರಿಶೀಲಿಸಿರುವುದಾಗಿ ಎಎನ್‌ಐಗೆ ತಿಳಿಸಿದ್ದರು.

ಹತ್ಯೆಗೆ ಸಂಬಂಧಿಸಿದಂತೆ ಮೂರು ವೀಡಿಯೊಗಳು ಹರಿದಾಡಿದ್ದವು. ನಿಹಾಂಗ್‌ಗಳಂತೆ ಧರಿಸಿರುವ ಗಂಡಸರ ದೊಡ್ಡ ಗುಂಪನ್ನು ಒಂದು ವಿಡಿಯೋದಲ್ಲಿ ಕಾಣಬಹುದು. ನಿಹಾಂಗ್‌ನ ಸಿಖ್ ಗುಂಪು – ಲಖ್ಬೀರ್ ಸಿಂಗ್ ಸುತ್ತ ನಿಂತು ಅವನಿಗೆ ಪ್ರಶ್ನೆಗಳನ್ನು ಕೇಳುತ್ತಿರುವುದನ್ನು ನೋಡಬಹುದು. ಲಖ್ಬೀರ್‌ನ ಎಡಗೈ ಕತ್ತರಿಸಿದ ನಂತರ ಗುಂಪು ಆತನ ಮೇಲೆ ನಿಂತಿರುವುದನ್ನು ಒಂದು ವಿಡಿಯೋದಲ್ಲಿ ಕಾಣಬಹುದು ಎಂದು ವರದಿಗಳಾಗಿವೆ.

ಸಿಖ್ಖರ ಪವಿತ್ರ ಗ್ರಂಥವಾದ ಗುರು ಗ್ರಂಥ ಸಾಹಿಬ್ ಅನ್ನು ಅಪವಿತ್ರಗೊಳಿಸಿದ ಆರೋಪದ ಮೇಲೆ ಲಖ್ಬೀರ್ ಸಿಂಗ್ ಅವರನ್ನು ಹೊಡೆದು ಸಾಯಿಸಲಾಗಿದೆ. ಆತನ ಎಡಗೈ ಮತ್ತು ಬಲಗಾಲನ್ನು ಕತ್ತರಿಸಲಾಗಿದೆ ಎಂದು ವರದಿಗಳು ಹೇಳುತ್ತವೆ. ನಂತರ ಆತನ ಕೊಲೆಗಾರರು ಶವವನ್ನು ಪೊಲೀಸ್ ಬ್ಯಾರಿಕೇಡ್‌ಗೆ ಕಟ್ಟಿದ್ದರು ಎಂದು ತಿಳಿದುಬಂದಿದೆ.

ಹತ್ಯೆ ಸಂಬಂಧ ಹರಿಯಾಣ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಸೋನಿಪತ್‌ನ ಕುಂಡ್ಲಿ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 302 (ಕೊಲೆ) ಮತ್ತು 34 ಅಡಿಯಲ್ಲಿ ಅನಾಮಧೇಯ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಸಂಯುಕ್ತ ಕಿಸಾನ್‌ ಮೋರ್ಚಾ ಖಂಡನೆ

ಘಟನೆ ಕುರಿತು ಸಂಯುಕ್ತ ಕಿಸಾನ್‌ ಮೋರ್ಚಾ ಎಸ್‌ಕೆಎಂ ಪತ್ರಿಕಾ ಹೇಳಿಕೆ ನೀಡಿತ್ತು. “ಸಿಂಘು ಗಡಿಯಲ್ಲಿ ಪಂಜಾಬ್‌ನ ಒಬ್ಬ ವ್ಯಕ್ತಿಯನ್ನು (ತರ್ನ್ ತರನ್ ಜಿಲ್ಲೆಯ ಚೀಮಾ ಕಲಾ ಹಳ್ಳಿಯ ದರ್ಶನ್ ಸಿಂಗ್ ಎಂಬುವರ ಮಗ ಲಖ್ಬೀರ್ ಸಿಂಗ್) ವಿರೂಪಗೊಳಿಸಿ ಕೊಲೆ ಮಾಡಲಾಗಿದೆ ಎಂಬುದು ಸಂಯುಕ್ತ ಕಿಸಾನ್ ಮೋರ್ಚಾ ಗಮನಕ್ಕೆ ಬಂದಿದೆ. ಒಂದು ನಿಹಾಂಗ್ ಗುಂಪು ಘಟನೆಯ ಹೊಣೆ ಹೊತ್ತಿದ್ದು, ಧಾರ್ಮಿಕ ಗ್ರಂಥವನ್ನು ಅಪವಿತ್ರಗೊಳಿಸಲು ಪ್ರಯತ್ನ ಮಾಡಿದ್ದರಿಂದ ಹೀಗೆ ಮಾಡಿದ್ದೇವೆ ಎಂದು ಹೇಳಿದ್ದಾರೆ. ಮೃತ ವ್ಯಕ್ತಿ ಇದೇ ಗುಂಪಿನೊಂದಿಗೆ ಹಲವು ದಿನಗಳಿಂದ ಇದ್ದರು” ಎಂದು ಉಲ್ಲೇಖಿಸಿತ್ತು.

“ಈ ಕ್ರೂರ ಹತ್ಯೆಯನ್ನು ಎಸ್‌ಕೆಎಂ ಖಂಡಿಸುತ್ತದೆ. ಈ ಘಟನೆಯ ಎರಡೂ ಪಕ್ಷಗಳಾದ ಈ ನಿಹಾಂಗ್ ಗುಂಪು ಮತ್ತು ಮೃತ ವ್ಯಕ್ತಿಗೂ ಸಂಯುಕ್ತ ಕಿಸಾನ್ ಮೋರ್ಚಾದೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಲು ಬಯಸುತ್ತೇವೆ. ನಾವು ಯಾವುದೇ ಧಾರ್ಮಿಕ ಪಠ್ಯ ಅಥವಾ ಚಿಹ್ನೆಯ ಪವಿತ್ರತೆಗೆ ವಿರುದ್ಧವಾಗಿದ್ದೇವೆ” ಎಂದು ಸ್ಪಷ್ಟನೆ ನೀಡಿದೆ.

“ಆದರೆ, ಧಾರ್ಮಿಕತೆಯ ಆಧಾರದ ಮೇಲೆ ಯಾವುದೇ ವ್ಯಕ್ತಿ ಅಥವಾ ಗುಂಪು ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳಲು ಅನುಮತಿಸುವುದಿಲ್ಲ. ಕೊಲೆ ಆರೋಪ ಮತ್ತು ಅಪವಿತ್ರತೆಯ ಪಿತೂರಿ ಹಿಂದಿರುವವರ ಬಗ್ಗೆ ತನಿಖೆ ಮಾಡಿ, ತಪ್ಪಿತಸ್ಥರನ್ನು ಕಾನೂನಿನ ಪ್ರಕಾರ ಶಿಕ್ಷಿಸಬೇಕು ಎಂದು ಒತ್ತಾಯಿಸುತ್ತೇವೆ. ಸಂಯುಕ್ತ ಕಿಸಾನ್ ಮೋರ್ಚಾ ಯಾವುದೇ ಕಾನೂನುಬದ್ಧ ಕ್ರಮದಲ್ಲಿ ಪೊಲೀಸರು ಮತ್ತು ಆಡಳಿತದೊಂದಿಗೆ ಸಹಕರಿಸುತ್ತದೆ” ಎಂದು ಭರವಸೆ ನೀಡಿದೆ.

ಜೊತೆಗೆ “ಈ  ಪ್ರಜಾತಾಂತ್ರಿಕ ಶಾಂತಿಯುತ ರೈತ ಚಳವಳಿಯು ಯಾವುದೇ ರೀತಿಯ ಹಿಂಸೆಯನ್ನು ವಿರೋಧಿಸುತ್ತದೆ” ಎಂದು ತನ್ನ ಹೇಳಿಕೆಯಲ್ಲಿ ಎಸ್‌ಕೆಎಂ ತಿಳಿಸಿದೆ.

ರೈತ ಹೋರಾಟಕ್ಕೆ ಸಮಸ್ಯೆಯಾಗದು: ಟಿಕಾಯತ್‌

“ಈಗ ನಡೆದಿರುವ ಘಟನೆ ವಿಷಾದನೀಯ. ಒಬ್ಬಾತ ಕೊಂದಿದ್ದಾನೆ, ಆತನನ್ನು ಪೊಲೀಸರು ಬಂಧಿಸಿದ್ದಾರೆ. ತನಿಖೆ ನಡೆಯುತ್ತಿದೆ. ಆದರೆ ಈ ಘಟನೆ ರೈತ ಹೋರಾಟಕ್ಕೆ ಯಾವುದೇ ಸಮಸ್ಯೆ ಉಂಟು ಮಾಡುವುದಿಲ್ಲ” ಎಂದು ರೈತ ನಾಯಕ ರಾಕೇಶ್ ಟಿಕಾಯತ್‌‌‌ ಹೇಳಿಕೆ ನೀಡಿರುವುದಾಗಿ ಎಎನ್‌ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಇದನ್ನೂ ಓದಿರಿ: ರೈತ ಹೋರಾಟ: ರಾವಣನ ಬದಲು ಪ್ರಧಾನಿ ಮೋದಿ ಪ್ರತಿಕೃತಿ ದಹಿಸಿ ದಸರಾ ಆಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...