Homeಮುಖಪುಟದೆಹಲಿ ಗಡಿಗಳಲ್ಲಿನ ಹೋರಾಟಕ್ಕೆ ತೆರೆ: ವಿಜಯೀ ಮೆರವಣಿಗೆ ಮೂಲಕ ಪಂಜಾಬ್‌ಗೆ ತೆರಳಲಿರುವ ರೈತರು

ದೆಹಲಿ ಗಡಿಗಳಲ್ಲಿನ ಹೋರಾಟಕ್ಕೆ ತೆರೆ: ವಿಜಯೀ ಮೆರವಣಿಗೆ ಮೂಲಕ ಪಂಜಾಬ್‌ಗೆ ತೆರಳಲಿರುವ ರೈತರು

ವಿಜಯೀ ಮೆರವಣಿಗೆಗೆ ಹೂವುಗಳನ್ನು ಸುರಿಸುವುದಕ್ಕಾಗಿ ವಿಮಾನ ವ್ಯವಸ್ಥೆ ಮಾಡಬೇಕು. ಎಲ್ಲಾ ಹೆದ್ದಾರಿಗಳಲ್ಲಿ ಸ್ವಾಗತ ಫಲಕಗಳನ್ನು ಹಾಕಬೇಕು ಎಂದು ರೈತರು ಪಂಜಾಬ್‌ ಸಿಎಂಗೆ ಪತ್ರ ಬರೆದಿದ್ದಾರೆ.

- Advertisement -
- Advertisement -

ದೆಹಲಿ ಗಡಿಗಳಲ್ಲಿ ಮತ್ತು ಪಂಜಾಬ್‌- ಹರಿಯಾಣದ ಹಳ್ಳಿ ಹಳ್ಳಿಗಳಲ್ಲಿ ನಡೆಯುತ್ತಿರುವ ರೈತ ಹೋರಾಟಕ್ಕೆ ತೆರೆ ಎಳೆಯಲು ಪಂಜಾಬ್‌ನ 32 ಸಂಘಟನೆಗಳು ನಿರ್ಧರಿಸಿವೆ. ಕೇಂದ್ರ ಸರ್ಕಾರ ರೈತರ ಎಲ್ಲಾ ಹಕ್ಕೊತ್ತಾಯಗಳನ್ನು ಒಪ್ಪಿಕೊಂಡು ಲಿಖಿತ ಭರವಸೆ ನೀಡಿದ ನಂತರ ಸಂಯುಕ್ತ ಕಿಸಾನ್ ಮೋರ್ಚಾ ಸಭೆಯಲ್ಲಿ ರೈತ ಹೋರಾಟ ಕೊನೆಗೊಳಿಸಲು ತೀರ್ಮಾನಿಸಲಾಗಿದೆ.

ಎಂಎಸ್‌ಪಿಗೆ ಶಾಸನಬದ್ಧ ಮಾನ್ಯತೆ, ರೈತರ ಮೇಲಿನ ಎಲ್ಲಾ ಪೊಲೀಸ್ ಪ್ರಕರಣಗಳನ್ನು ವಾಪಸ್ ಪಡೆಯುವುದು, ಹುತಾತ್ಮ ರೈತ ಕುಟುಂಬಕ್ಕೆ ಪರಿಹಾರ ಮತ್ತು ಸರ್ಕಾರಿ ಉದ್ಯೋಗ, ವಿದ್ಯುತ್ ಮಸೂದೆ ಹಿಂಪಡೆಯುವುದು ಮತ್ತು ಕೃಷಿ ತ್ಯಾಜ್ಯ ಸುಡುವುದನ್ನು ಅಪರಾಧೀಕರಿಸುವುದಕ್ಕೆ ತಡೆಗೆ ಕೇಂದ್ರ ಸರ್ಕಾರ ಒಪ್ಪಿಕೊಂಡಿದ್ದು ಇದನ್ನು ಅಧಿಕೃತವಾಗಿ ಲಿಖಿತ ರೂಪದಲ್ಲಿ ಬರೆದು ಸಂಯುಕ್ತ ಕಿಸಾನ್ ಮೋರ್ಚಾಗೆ ನೀಡಿದೆ.

ನಂತರ ಪಂಜಾಬ್‌ನ 32 ರೈತ ಸಂಘಗಳು ಹೋರಾಟ ಅಂತ್ಯಗೊಳಿಸಿ ವಿಜಯೀ ಮೆರವಣಿಗೆಯ ಮೂಲಕ ಪಂಜಾಬ್‌ಗೆ ತೆರಳಲು ನಿರ್ಧರಿಸಿವೆ. ಇಂದು ಸಂಜೆ ದೆಹಲಿ ಗಡಿಗಳಲ್ಲಿ ವಿಜಯೋತ್ಸವ ಆಚರಿಸಲಿದ್ದು, ಶನಿವಾರದಿಂದ ಪಂಜಾಬ್ ಕಡೆಗೆ ವಿಜಯೀ ಮೆರವಣಿಗೆ ಆರಂಭವಾಗಲಿದೆ ಎಂದು ಟ್ರಾಕ್ಟರ್‌ ಟು ಟ್ವಿಟರ್ ಟ್ವೀಟ್ ಮೂಲಕ ದೃಢಪಡಿಸಿದೆ.

  1. ಇಂದು ಡಿಸೆಂಬರ್ 9 ರಂದು ಸಂಜೆ 5:30 ಕ್ಕೆ ಸಿಂಘು ಗಡಿಯಲ್ಲಿ ಫತೇ ಅರ್ದಾಸ್ (ವಿಜಯೋತ್ಸವ) ನಡೆಯಲಿದೆ.
  2. ಡಿಸೆಂಬರ್ 11 ರ ಶನಿವಾರ ಸಿಂಘು ಮತ್ತು ಟಿಕ್ರಿ ಗಡಿಯಿಂದ ಫತೇಹ್ ಮೆರವಣಿಗೆ (ವಿಜಯೀ ಮೆರವಣಿಗೆ) ಆರಂಭವಾಗುತ್ತದೆ.
  3. ಡಿಸೆಂಬರ್ 13ರಂದು ಅಮೃತಸರದ ಗೋಲ್ಡನ್ ಟೆಂಪಲ್ ಮತ್ತು ದರ್ಬಾರ್ ಸಾಹಿಬ್ ನಮಸ್ಕರಿಸುವ ಕಾರ್ಯಕ್ರಮ.
  4. ಡಿಸೆಂಬರ್ 15 ರಂದು ಪಂಜಾಬ್‌ನಲ್ಲಿ ವಿಜಯೀ ಮೆರವಣಿಗೆ ಅಂತ್ಯವಾಗಲಿದೆ.

ಈ ವಿಜಯೀ ಮೆರವಣಿಗೆಗೆ ಪಂಜಾಬ್ ಸರ್ಕಾರ ಕೆಲವು ಸಿದ್ದತೆಗಳನ್ನು ಮಾಡಿಕೊಡಬೇಕೆಂದು ಪಂಜಾಬ್ ಸರ್ಕಾರಕ್ಕೆ ರೈತರು ಪತ್ರ ಬರೆದಿದ್ದಾರೆ. ಅವುಗಳೆಂದರೆ

  1. ‘ಫತೇ ಮಾರ್ಚ್ (ವಿಜಯೀ ಮೆರವಣಿಗೆ)ಗೆ’ ಹೂವುಗಳನ್ನು ಸುರಿಸುವುದಕ್ಕಾಗಿ ವಿಮಾನ ವ್ಯವಸ್ಥೆ ಮಾಡಬೇಕು.
  2. ಎಲ್ಲಾ ಹೆದ್ದಾರಿಗಳಲ್ಲಿ ಸ್ವಾಗತ ಫಲಕಗಳನ್ನು ಹಾಕಬೇಕು.
  3. ಫತೇ ಮಾರ್ಚ್ ಸ್ವಾಗತಿಸಲು ಪಂಜಾಬ್‌ನಲ್ಲಿ ಮೂರು ದಿನಗಳ ರಜೆ ಘೋಷಿಸಬೇಕು.
  4. ಪಂಜಾಬ್‌ನ ಪ್ರತಿ ಜಿಲ್ಲೆಯಲ್ಲಿ ಕಿಸಾನ್ ಘರ್ (ರೈತ ಸಂಪರ್ಕ ಕೇಂದ್ರ) ಸ್ಥಾಪಿಸಬೇಕು.
  5. ಕಿಸಾನ್ ಮೋರ್ಚಾದ ಮ್ಯೂಸಿಯಂ ಸ್ಥಾಪಿಸಬೇಕು.
  6. ಲುಧಿಯಾನದಲ್ಲಿ 200 ಅಡಿ ರಸ್ತೆ (ಫುಲ್ಲನ್ವಾಲ್ ಚೌಕ್‌ನಿಂದ ಗಿಲ್ ರಸ್ತೆ) ‘ಶಹೀದ್ ಕಿಸಾನ್ ರಸ್ತೆ’ ಎಂದು ಘೋಷಿಸಬೇಕು. (ಜನವರಿಯಲ್ಲಿ ಇದೇ ರಸ್ತೆಯಲ್ಲಿ ಕಿಸಾನ್ ಶಹೀದ್ ಮಾರ್ಚ್ ಆಯೋಜಿಸಲಾಗಿತ್ತು)

ಒಟ್ಟಿನಲ್ಲಿ ರೈತರು ಅದ್ವಿತೀಯ ಗೆಲುವು ಸಾಧಿಸಿ ಪಂಜಾಬ್‌ಗೆ ಮರಳಿ ಹೊರಟಿದ್ದಾರೆ. ಐತಿಹಾಸಿಕ ರೈತ ಹೋರಾಟ ಚಿರಸ್ಥಾಯಿಯಾಗಿ ಉಳಿಯುವಂತೆ ಮಾಡಿದ್ದಾರೆ.


ಇದನ್ನೂ ಓದಿ: ಬಾಬರಿ ತೀರ್ಪಿತ್ತ ದಿನ ಇತರ ನ್ಯಾಯಮೂರ್ತಿ‌ಗಳನ್ನು ಡಿನ್ನರ್‌ಗೆ ಕರೆದೊಯ್ದು, ಉತ್ತಮ ವೈನ್‌ ಕೊಡಿಸಿದ್ದೆ: ನಿವೃತ್ತ ಸಿಜೆಐ ರಂಜನ್ ಗೊಗೊಯ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...