Homeಮುಖಪುಟದೆಹಲಿ ಗಡಿಗಳಲ್ಲಿನ ಹೋರಾಟಕ್ಕೆ ತೆರೆ: ವಿಜಯೀ ಮೆರವಣಿಗೆ ಮೂಲಕ ಪಂಜಾಬ್‌ಗೆ ತೆರಳಲಿರುವ ರೈತರು

ದೆಹಲಿ ಗಡಿಗಳಲ್ಲಿನ ಹೋರಾಟಕ್ಕೆ ತೆರೆ: ವಿಜಯೀ ಮೆರವಣಿಗೆ ಮೂಲಕ ಪಂಜಾಬ್‌ಗೆ ತೆರಳಲಿರುವ ರೈತರು

ವಿಜಯೀ ಮೆರವಣಿಗೆಗೆ ಹೂವುಗಳನ್ನು ಸುರಿಸುವುದಕ್ಕಾಗಿ ವಿಮಾನ ವ್ಯವಸ್ಥೆ ಮಾಡಬೇಕು. ಎಲ್ಲಾ ಹೆದ್ದಾರಿಗಳಲ್ಲಿ ಸ್ವಾಗತ ಫಲಕಗಳನ್ನು ಹಾಕಬೇಕು ಎಂದು ರೈತರು ಪಂಜಾಬ್‌ ಸಿಎಂಗೆ ಪತ್ರ ಬರೆದಿದ್ದಾರೆ.

- Advertisement -
- Advertisement -

ದೆಹಲಿ ಗಡಿಗಳಲ್ಲಿ ಮತ್ತು ಪಂಜಾಬ್‌- ಹರಿಯಾಣದ ಹಳ್ಳಿ ಹಳ್ಳಿಗಳಲ್ಲಿ ನಡೆಯುತ್ತಿರುವ ರೈತ ಹೋರಾಟಕ್ಕೆ ತೆರೆ ಎಳೆಯಲು ಪಂಜಾಬ್‌ನ 32 ಸಂಘಟನೆಗಳು ನಿರ್ಧರಿಸಿವೆ. ಕೇಂದ್ರ ಸರ್ಕಾರ ರೈತರ ಎಲ್ಲಾ ಹಕ್ಕೊತ್ತಾಯಗಳನ್ನು ಒಪ್ಪಿಕೊಂಡು ಲಿಖಿತ ಭರವಸೆ ನೀಡಿದ ನಂತರ ಸಂಯುಕ್ತ ಕಿಸಾನ್ ಮೋರ್ಚಾ ಸಭೆಯಲ್ಲಿ ರೈತ ಹೋರಾಟ ಕೊನೆಗೊಳಿಸಲು ತೀರ್ಮಾನಿಸಲಾಗಿದೆ.

ಎಂಎಸ್‌ಪಿಗೆ ಶಾಸನಬದ್ಧ ಮಾನ್ಯತೆ, ರೈತರ ಮೇಲಿನ ಎಲ್ಲಾ ಪೊಲೀಸ್ ಪ್ರಕರಣಗಳನ್ನು ವಾಪಸ್ ಪಡೆಯುವುದು, ಹುತಾತ್ಮ ರೈತ ಕುಟುಂಬಕ್ಕೆ ಪರಿಹಾರ ಮತ್ತು ಸರ್ಕಾರಿ ಉದ್ಯೋಗ, ವಿದ್ಯುತ್ ಮಸೂದೆ ಹಿಂಪಡೆಯುವುದು ಮತ್ತು ಕೃಷಿ ತ್ಯಾಜ್ಯ ಸುಡುವುದನ್ನು ಅಪರಾಧೀಕರಿಸುವುದಕ್ಕೆ ತಡೆಗೆ ಕೇಂದ್ರ ಸರ್ಕಾರ ಒಪ್ಪಿಕೊಂಡಿದ್ದು ಇದನ್ನು ಅಧಿಕೃತವಾಗಿ ಲಿಖಿತ ರೂಪದಲ್ಲಿ ಬರೆದು ಸಂಯುಕ್ತ ಕಿಸಾನ್ ಮೋರ್ಚಾಗೆ ನೀಡಿದೆ.

ನಂತರ ಪಂಜಾಬ್‌ನ 32 ರೈತ ಸಂಘಗಳು ಹೋರಾಟ ಅಂತ್ಯಗೊಳಿಸಿ ವಿಜಯೀ ಮೆರವಣಿಗೆಯ ಮೂಲಕ ಪಂಜಾಬ್‌ಗೆ ತೆರಳಲು ನಿರ್ಧರಿಸಿವೆ. ಇಂದು ಸಂಜೆ ದೆಹಲಿ ಗಡಿಗಳಲ್ಲಿ ವಿಜಯೋತ್ಸವ ಆಚರಿಸಲಿದ್ದು, ಶನಿವಾರದಿಂದ ಪಂಜಾಬ್ ಕಡೆಗೆ ವಿಜಯೀ ಮೆರವಣಿಗೆ ಆರಂಭವಾಗಲಿದೆ ಎಂದು ಟ್ರಾಕ್ಟರ್‌ ಟು ಟ್ವಿಟರ್ ಟ್ವೀಟ್ ಮೂಲಕ ದೃಢಪಡಿಸಿದೆ.

  1. ಇಂದು ಡಿಸೆಂಬರ್ 9 ರಂದು ಸಂಜೆ 5:30 ಕ್ಕೆ ಸಿಂಘು ಗಡಿಯಲ್ಲಿ ಫತೇ ಅರ್ದಾಸ್ (ವಿಜಯೋತ್ಸವ) ನಡೆಯಲಿದೆ.
  2. ಡಿಸೆಂಬರ್ 11 ರ ಶನಿವಾರ ಸಿಂಘು ಮತ್ತು ಟಿಕ್ರಿ ಗಡಿಯಿಂದ ಫತೇಹ್ ಮೆರವಣಿಗೆ (ವಿಜಯೀ ಮೆರವಣಿಗೆ) ಆರಂಭವಾಗುತ್ತದೆ.
  3. ಡಿಸೆಂಬರ್ 13ರಂದು ಅಮೃತಸರದ ಗೋಲ್ಡನ್ ಟೆಂಪಲ್ ಮತ್ತು ದರ್ಬಾರ್ ಸಾಹಿಬ್ ನಮಸ್ಕರಿಸುವ ಕಾರ್ಯಕ್ರಮ.
  4. ಡಿಸೆಂಬರ್ 15 ರಂದು ಪಂಜಾಬ್‌ನಲ್ಲಿ ವಿಜಯೀ ಮೆರವಣಿಗೆ ಅಂತ್ಯವಾಗಲಿದೆ.

ಈ ವಿಜಯೀ ಮೆರವಣಿಗೆಗೆ ಪಂಜಾಬ್ ಸರ್ಕಾರ ಕೆಲವು ಸಿದ್ದತೆಗಳನ್ನು ಮಾಡಿಕೊಡಬೇಕೆಂದು ಪಂಜಾಬ್ ಸರ್ಕಾರಕ್ಕೆ ರೈತರು ಪತ್ರ ಬರೆದಿದ್ದಾರೆ. ಅವುಗಳೆಂದರೆ

  1. ‘ಫತೇ ಮಾರ್ಚ್ (ವಿಜಯೀ ಮೆರವಣಿಗೆ)ಗೆ’ ಹೂವುಗಳನ್ನು ಸುರಿಸುವುದಕ್ಕಾಗಿ ವಿಮಾನ ವ್ಯವಸ್ಥೆ ಮಾಡಬೇಕು.
  2. ಎಲ್ಲಾ ಹೆದ್ದಾರಿಗಳಲ್ಲಿ ಸ್ವಾಗತ ಫಲಕಗಳನ್ನು ಹಾಕಬೇಕು.
  3. ಫತೇ ಮಾರ್ಚ್ ಸ್ವಾಗತಿಸಲು ಪಂಜಾಬ್‌ನಲ್ಲಿ ಮೂರು ದಿನಗಳ ರಜೆ ಘೋಷಿಸಬೇಕು.
  4. ಪಂಜಾಬ್‌ನ ಪ್ರತಿ ಜಿಲ್ಲೆಯಲ್ಲಿ ಕಿಸಾನ್ ಘರ್ (ರೈತ ಸಂಪರ್ಕ ಕೇಂದ್ರ) ಸ್ಥಾಪಿಸಬೇಕು.
  5. ಕಿಸಾನ್ ಮೋರ್ಚಾದ ಮ್ಯೂಸಿಯಂ ಸ್ಥಾಪಿಸಬೇಕು.
  6. ಲುಧಿಯಾನದಲ್ಲಿ 200 ಅಡಿ ರಸ್ತೆ (ಫುಲ್ಲನ್ವಾಲ್ ಚೌಕ್‌ನಿಂದ ಗಿಲ್ ರಸ್ತೆ) ‘ಶಹೀದ್ ಕಿಸಾನ್ ರಸ್ತೆ’ ಎಂದು ಘೋಷಿಸಬೇಕು. (ಜನವರಿಯಲ್ಲಿ ಇದೇ ರಸ್ತೆಯಲ್ಲಿ ಕಿಸಾನ್ ಶಹೀದ್ ಮಾರ್ಚ್ ಆಯೋಜಿಸಲಾಗಿತ್ತು)

ಒಟ್ಟಿನಲ್ಲಿ ರೈತರು ಅದ್ವಿತೀಯ ಗೆಲುವು ಸಾಧಿಸಿ ಪಂಜಾಬ್‌ಗೆ ಮರಳಿ ಹೊರಟಿದ್ದಾರೆ. ಐತಿಹಾಸಿಕ ರೈತ ಹೋರಾಟ ಚಿರಸ್ಥಾಯಿಯಾಗಿ ಉಳಿಯುವಂತೆ ಮಾಡಿದ್ದಾರೆ.


ಇದನ್ನೂ ಓದಿ: ಬಾಬರಿ ತೀರ್ಪಿತ್ತ ದಿನ ಇತರ ನ್ಯಾಯಮೂರ್ತಿ‌ಗಳನ್ನು ಡಿನ್ನರ್‌ಗೆ ಕರೆದೊಯ್ದು, ಉತ್ತಮ ವೈನ್‌ ಕೊಡಿಸಿದ್ದೆ: ನಿವೃತ್ತ ಸಿಜೆಐ ರಂಜನ್ ಗೊಗೊಯ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...