Homeಚಳವಳಿಕೃಷಿ ಭೂಮಿ ರೈತರ ಹಕ್ಕು, ಉದ್ಯಮಿಗಳದ್ದಲ್ಲ: ಭೂಸ್ವಾಧೀನದ ವಿರುದ್ದ ತಿರುಗಿಬಿದ್ದ ರೈತರು

ಕೃಷಿ ಭೂಮಿ ರೈತರ ಹಕ್ಕು, ಉದ್ಯಮಿಗಳದ್ದಲ್ಲ: ಭೂಸ್ವಾಧೀನದ ವಿರುದ್ದ ತಿರುಗಿಬಿದ್ದ ರೈತರು

ದೇವನಹಳ್ಳಿ ತಾಲ್ಲೂಕಿನಲ್ಲಿ ಇದುವರೆಗೂ KIADB ನಾಲ್ಕನೇ ಬಾರಿ ಭೂಸ್ವಾಧೀನಕ್ಕೆ ಮುಂದಾಗಿದ್ದು ರೈತರ ಆಕ್ರೋಶಕ್ಕೆ ತುತ್ತಾಗಿದೆ.

- Advertisement -
- Advertisement -

ದೇವನಹಳ್ಳಿಯಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆರಂಭವಾದಾಗ ಸುತ್ತಲಿನ ಜನರು ಹಲವು ಕನಸುಗಳನ್ನು ಕಟ್ಟಿಕೊಂಡಿದ್ದರು. ವಿಮಾನ ನಿಲ್ದಾಣವು ಸ್ಥಳೀಯರಿಗೆ ಉದ್ಯೋಗ ಮತ್ತು ವ್ಯಾಪಾರದಲ್ಲಿ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ನೂರಾರು ಜನ ತಮ್ಮ ಜಮೀನು ಬಿಟ್ಟುಕೊಟ್ಟಿದ್ದರು. ಆದರೆ ಇಂದು ಆ ಕನಸುಗಳೆಲ್ಲ ನುಚ್ಚು ನೂರಾಗಿವೆ. ಭೂಮಿ ಬಿಟ್ಟು ಕೊಟ್ಟವರೆಲ್ಲಾ ಇಂದು ಏನಾಗಿದ್ದಾರೆ ಎಂಬ ಗುರುತು ಸಹ ಸಿಗದಷ್ಟು ಮಟ್ಟಿಗೆ ಕಣ್ಮರೆಯಾಗಿದ್ದಾರೆ. ಅವರಿಗೆ ವ್ಯಾಪಾರ ಉದ್ಯೋಗ ಸಿಗುವುದು ಇರಲಿ, ಈಗ ಅವರು ತಾವು ಇರುವ ಜಾಗದಿಂದಲೂ ಎತ್ತಂಗಡಿಯಾಗಬೇಕಾದ ಅಪಾಯ ಎದುರಿಸುತ್ತಿದ್ದಾರೆ.

“1999-2000 ರ ಸಮಯದಲ್ಲಿ ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಸುಮಾರು 4,030 ಎಕರೆ ಹೆಚ್ಚು ಜಾಗವನ್ನು ಸ್ವಾಧೀನಪಡಿಸಿಕೊಳ್ಳಲಾಗಿತ್ತು. ಅದಕ್ಕಾಗಿ ಬಾವಾಪುರ, ಅರಿಶಿನಗುಂಟೆ ಮತ್ತು ಗಂಗೋಪನಹಳ್ಳಿ ಎಂಬ ಮೂರು ಹಳ್ಳಿಗಳ ಜನರನ್ನು ಸಂಪೂರ್ಣವಾಗಿ ಸ್ಥಳಾಂತರ ಮಾಡಲಾಗಿತ್ತು. 200ಕ್ಕೂ ಹೆಚ್ಚು ಕುಟಂಬಗಳಿಗೆ ಸೂಲಿಬೆಲೆ ಪಕ್ಕದ ಬಾಲೆಪುರ ಎಂಬಲ್ಲಿ ನಿವೇಶನಗಳನ್ನು ನೀಡಲಾಗಿತ್ತು. ಅವರು ಕಳೆದುಕೊಂಡ ಜಮೀನಿಗೆ ಸೂಕ್ತ ದಾಖಲೆ ಇದ್ದವರಿಗೆ ಮಾತ್ರ ಸರ್ಕಾರ ಪ್ರತಿ ಎಕರೆಗೆ 5 ಲಕ್ಷ ರೂ ಪರಿಹಾರ ನೀಡಿತ್ತು. ಅವರಿಗೆ ಉದ್ಯೋಗ ನೀಡುವ ಭರವಸೆ ನೀಡಿತ್ತು. ಆದರೆ 2008ರಲ್ಲಿ ವಿಮಾನ ನಿಲ್ದಾಣ ಕಾರ್ಯಾರಂಭ ಮಾಡಿದಾಗ ಅವರಿಗೆ ಯಾವುದೇ ಉದ್ಯೋಗಗಳನ್ನು ನೀಡಲಿಲ್ಲ! ಹಾಗಾಗಿ ಆ ಜನ ಬಾಲೆಪುರದಲ್ಲಿಯೂ ಸಹ ನೆಲೆಗೊಳ್ಳದೆ ಮನಬಂದ ಕಡೆ ಹೋದರು” ಎನ್ನುತ್ತಾರೆ ಸುಸ್ಥಿರ ಕೃಷಿ ಕುರಿತು ಅಧ್ಯಯನ ನಡೆಸುತ್ತಿರುವ ರಮೇಶ್ ಚೀಮಾಚನಹಳ್ಳಿ.

2014-15 ರಲ್ಲಿ ಸಹ ಏರೋಸ್ಪೇಸ್ ಎಸ್‌ಇಜೆಡ್‌ಗಾಗಿ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿ ವ್ಯಾಪ್ತಿಯಲ್ಲಿ 900 ಎಕರೆ ಜಮೀನನ್ನು ವಶಪಡಿಸಿಕೊಳ್ಳಲಾಯ್ತು. ಆ ಜಮೀನು ಹಲವು ಕಾರ್ಖಾನೆಗಳಿಗೆ ನೀಡಿದ್ದರೂ ಇದುವರೆಗೂ ಯಾವುದೇ ಕೈಗಾರಿಕೆಗಳು ಸ್ಥಾಪನೆಯಾಗಿಲ್ಲ. ನಂತರ 2018-19 ರಲ್ಲಿ ಹರಳೂರು ಕೈಗಾರಿಕಾ ಅಭಿವೃದ್ದಿ ಪ್ರದೇಶಕ್ಕಾಗಿ ಮೊದಲ ಹಂತದಲ್ಲಿ 1,300 ಎಕರೆ ಜಮೀನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಅದು ಸಾಲದೆಂಬಂತೆ ಈಗ KIADB ಮತ್ತೆ ಎರಡನೇ ಹಂತದಲ್ಲಿ 1,777 ಎಕರೆ ಜಮೀನು ವಶಪಡಿಸಿಕೊಳ್ಳಲು ಮುಂದಾಗಿದೆ. ಈ ರೀತಿ ಪದೇ ಪದೇ ನಮ್ಮ ಕೃಷಿ ಭೂಮಿ ವಶಪಡಿಸಿಕೊಳ್ಳುತ್ತಿದ್ದರೆ ನಾವೆಲ್ಲಿಗೆ ಹೋಗಬೇಕು? ನಾವು ಹೇಗೆ ಬದುಕಬೇಕು ಎಂದು ಪ್ರಶ್ನಿಸುತ್ತಾರೆ ಬಚ್ಚೇನಹಳ್ಳಿ, ಪಾಳ್ಯ, ಹರಳೂರು, ಪೋಲನಹಳ್ಳಿ, ನಲ್ಲಪನಹಳ್ಳಿ, ಮಲ್ಲೇಪುರ, ನಲ್ಲೂರು, ಹ್ಯಾಡಾಳ ಮುಂತಾದ ಗ್ರಾಮದ ಜನರು.

“ಕೃಷಿ ಭೂಮಿ ರೈತರ ಹಕ್ಕು, ಉದ್ಯಮಿಗಳದ್ದಲ್ಲ” ಎಂಬ ಘೋಷಣೆಯೊಂದಿಗೆ KIADB ಭೂ ಸ್ವಾಧೀನ ವಿರೋಧಿಸಿ ಅನಿರ್ಧಿಷ್ಟವಧಿ ಧರಣಿ ನಡೆಸುತ್ತಿದ್ದಾರೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿ ಸುತ್ತಲಿನ 11 ಗ್ರಾಮದ ರೈತರು.

ಈ ನಮ್ಮ ಫಲವತ್ತಾದ ಭೂಮಿಯಲ್ಲಿ ಆಹಾರ ಧಾನ್ಯ, ತರಕಾರಿ, ದ್ರಾಕ್ಷಿ, ಮಾವು, ರೇಷ್ಮೆ ಸೇರಿದಂತೆ ಹಲವು ಬೆಳೆಗಳನ್ನು ಬೆಳೆಯುತ್ತಿದ್ದು, ನಮ್ಮ ಹಳ್ಳಿಗಳ ಜೀವನೋಪಾಯವೇ ಈ ಕೃಷಿ ಭೂಮಿಯಾಗಿದೆ. ಹತ್ತಿರದಲ್ಲೇ ಇರುವ ಕೃಷಿಭೂಮಿಯಲ್ಲಿ ಕಟ್ಟಿಕೊಂಡಿರುವ ವಾಸದ ಮನೆಗಳು, ಕೋಳಿಫಾರಂ, ಪಾಲಿಹೌಸ್ ಮುಂತಾದವು ಕೂಡ ಸರ್ಕಾರದ ಉದ್ದೇಶಿತ ಸ್ವಾಧೀನ ಪ್ರಕ್ರಿಯೆಯಲ್ಲಿ ಸೇರಲಿವೆ. ಜೊತೆಗೆ, ಭೂರಹಿತರು, ಸಣ್ಣರೈತರು ಸುಮಾರು ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ದಾಖಲೆಯಾಗದ ತುಂಡು ಜಮೀನುಗಳು ಇದರಲ್ಲಿ ಸೇರುತ್ತವೆ. ಸರ್ಕಾರ ಇದನ್ನೆಲ್ಲ ಕಿತ್ತುಕೊಂಡರೆ ನಾವೆಲ್ಲಿಗೆ ಹೋಗಬೇಕು ಎನ್ನುತ್ತಾರೆ ರೈತರಾದ ಮಾರೇಗೌಡ.

ಅಭಿವೃದ್ದಿಗಾಗಿ, ಕೈಗಾರಿಕೆಗಳಿಗಾಗಿ ಭೂಮಿ ಬಿಟ್ಟು ಕೊಡಿ ಎಂದು ಪದೇ ಪದೇ ಭೂ ಸ್ವಾಧೀನ ಪಡಿಸಿಕೊಂಡರೆ ನಮ್ಮ ಗತಿಯೇನು? ಇಲ್ಲಿನ ಅರ್ಧದಷ್ಟು ಜನರ ಬಳಿ ಸರ್ಕಾರ ಕೇಳುವ ಭೂಮಿಗೆ ಸಂಬಂಧಿಸಿದ 21 ದಾಖಲೆಗಳು ಇಲ್ಲ. ಅವರಿಗೂ ಪರಿಹಾರವೂ ಸಿಗುವುದಿಲ್ಲ. ಹಾಗೆಂದು ಅವರು ಬದುಕಬಾರದೇನು? ದೇವರಾಜು ಅರಸು ಕಾಲದಲ್ಲಿ ಉಳುವವನೆ ಭೂ ಒಡೆಯ ಕಾನೂನಿನ ಅಡಿ ಒಂದಷ್ಟು ಜನರಿಗೆ ಭೂಮಿ ದಕ್ಕಿದೆ. ಅದನ್ನು ಈಗ ಸರ್ಕಾರವೇ ವಾಪಸ್ ಕಿತ್ತುಕೊಳ್ಳುವುದು ಸರಿಯೇ ಎಂದು ಪ್ರಶ್ನಿಸುತ್ತಾರೆ ಸ್ಥಳೀಯರು.

ಇಲ್ಲಿನ 11 ಹಳ್ಳಿಗಳ ಜನರು ಯಾವುದೇ ಕಾರಣಕ್ಕೂ ತಮ್ಮ ಕೃಷಿ ಭೂಮಿ ಬಿಟ್ಟುಕೊಡುವುದಿಲ್ಲ ಎಂದು ಪಟ್ಟು ಹಿಡಿದು ಧರಣಿ ಕೂತಿದ್ದಾರೆ. ಏಪ್ರಿಲ್ 4 ರಿಂದ ಆರಂಭವಾದ ಅನಿರ್ಧಿಷ್ಟವಧಿ ಧರಣಿ ಈಗ 8ನೇ ದಿನಕ್ಕೆ ಕಾಲಿಟ್ಟಿದೆ. ರೈತರು ಈಗಾಗಲೇ ಕೈಗಾರಿಕ ಸಚಿವರಾದ ಮುರುಗೇಶ್ ನಿರಾಣಿ, ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಸುಧಾಕರ್, ಸಂಸದ ಬಚ್ಚೆಗೌಡ, ಶಾಸಕರಾದ ನಾರಾಯಣಸ್ವಾಮಿ, ಜಿಲ್ಲಾಧಿಕಾರಿಗಳು, ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರ್‌ರನ್ನು ಭೇಟಿ ಮಾಡಿ ನಮ್ಮ ಭೂಮಿ ಉಳಿಸಿಕೊಡುವಂತೆ ಮನವಿ ಮಾಡಿದ್ದಾರೆ. ಅಲ್ಲದೇ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು, ಮಾಜಿ ಪ್ರಧಾನಿಗಳಾದ ಎಚ್‌.ಡಿ ದೇವೇಗೌಡರನ್ನು ಭೇಟಿಯಾಗಿ ಹೋರಾಟಕ್ಕೆ ಬೆಂಬಲ ಕೇಳಲಾಗಿದೆ. ಕರ್ನಾಟಕ ರಾಜ್ಯ ರೈತ ಸಂಘ, ಶಾಶ್ವತ ನೀರಾವರಿ ಹೋರಾಟ ಸಮಿತಿ ಸೇರಿ ಹಲವು ಸಂಘಟನೆಗಳು ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿವೆ.

ಹರಳೂರು ಕೈಗಾರಿಕಾ ಪ್ರದೇಶಾಭಿವೃದ್ಧಿಯ ಎರಡನೇ ಹಂತದ ಭೂ ಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣ ಕೈ ಬಿಡಬೇಕು. ಬಗರ್ ಹುಕುಂ ಸಾಗುವಳಿ ಭೂಮಿಗಾಗಿ ಫಾರಂ ನಂಬರ್ 50, 53, 57ರಡಿ ಅರ್ಜಿ ಸಲ್ಲಿಸಿದ ರೈತರಿಗೆ ಭೂಮಿ ಮಂಜೂರು ಮಾಡಬೇಕು ಮತ್ತು ಹಿಂದಿನ ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ಭೂಮಿ ಕಳೆದುಕೊಂಡ ರೈತ ಕುಟುಂಬಗಳಿಗೆ ಉದ್ಯೋಗ, ಆರ್ಥಿಕ ಭದ್ರತೆ ಒದಗಿಸಬೇಕು ಎಂಬ ಮೂರು ಹಕ್ಕೊತ್ತಾಯಗಳನ್ನು ಧರಣಿ ಮುಂದುವರೆದಿದೆ. ಸರ್ಕಾರ ಕೂಡಲೇ ಇತ್ತ ಗಮನ ಹರಿಸಿ ರೈತರ ಸಮಸ್ಯೆಗಳನ್ನು ಆಲಿಸಬೇಕಿದೆ.


ಇದನ್ನೂ ಓದಿ: ಇರುವ ಮನೆಗಳ ಒಡೆದು, ಲೇಔಟ್ ಮಾಡಿ ಇನ್ನೊಬ್ಬರಿಗೆ ಸೈಟ್‌ ಹಂಚುವುದು ಯಾವ ನ್ಯಾಯ?: ಬಿಡಿಎ ವಿರುದ್ದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...