Homeಚಳವಳಿಕೃಷಿ ಭೂಮಿ ರೈತರ ಹಕ್ಕು, ಉದ್ಯಮಿಗಳದ್ದಲ್ಲ: ಭೂಸ್ವಾಧೀನದ ವಿರುದ್ದ ತಿರುಗಿಬಿದ್ದ ರೈತರು

ಕೃಷಿ ಭೂಮಿ ರೈತರ ಹಕ್ಕು, ಉದ್ಯಮಿಗಳದ್ದಲ್ಲ: ಭೂಸ್ವಾಧೀನದ ವಿರುದ್ದ ತಿರುಗಿಬಿದ್ದ ರೈತರು

ದೇವನಹಳ್ಳಿ ತಾಲ್ಲೂಕಿನಲ್ಲಿ ಇದುವರೆಗೂ KIADB ನಾಲ್ಕನೇ ಬಾರಿ ಭೂಸ್ವಾಧೀನಕ್ಕೆ ಮುಂದಾಗಿದ್ದು ರೈತರ ಆಕ್ರೋಶಕ್ಕೆ ತುತ್ತಾಗಿದೆ.

- Advertisement -
- Advertisement -

ದೇವನಹಳ್ಳಿಯಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆರಂಭವಾದಾಗ ಸುತ್ತಲಿನ ಜನರು ಹಲವು ಕನಸುಗಳನ್ನು ಕಟ್ಟಿಕೊಂಡಿದ್ದರು. ವಿಮಾನ ನಿಲ್ದಾಣವು ಸ್ಥಳೀಯರಿಗೆ ಉದ್ಯೋಗ ಮತ್ತು ವ್ಯಾಪಾರದಲ್ಲಿ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ನೂರಾರು ಜನ ತಮ್ಮ ಜಮೀನು ಬಿಟ್ಟುಕೊಟ್ಟಿದ್ದರು. ಆದರೆ ಇಂದು ಆ ಕನಸುಗಳೆಲ್ಲ ನುಚ್ಚು ನೂರಾಗಿವೆ. ಭೂಮಿ ಬಿಟ್ಟು ಕೊಟ್ಟವರೆಲ್ಲಾ ಇಂದು ಏನಾಗಿದ್ದಾರೆ ಎಂಬ ಗುರುತು ಸಹ ಸಿಗದಷ್ಟು ಮಟ್ಟಿಗೆ ಕಣ್ಮರೆಯಾಗಿದ್ದಾರೆ. ಅವರಿಗೆ ವ್ಯಾಪಾರ ಉದ್ಯೋಗ ಸಿಗುವುದು ಇರಲಿ, ಈಗ ಅವರು ತಾವು ಇರುವ ಜಾಗದಿಂದಲೂ ಎತ್ತಂಗಡಿಯಾಗಬೇಕಾದ ಅಪಾಯ ಎದುರಿಸುತ್ತಿದ್ದಾರೆ.

“1999-2000 ರ ಸಮಯದಲ್ಲಿ ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಸುಮಾರು 4,030 ಎಕರೆ ಹೆಚ್ಚು ಜಾಗವನ್ನು ಸ್ವಾಧೀನಪಡಿಸಿಕೊಳ್ಳಲಾಗಿತ್ತು. ಅದಕ್ಕಾಗಿ ಬಾವಾಪುರ, ಅರಿಶಿನಗುಂಟೆ ಮತ್ತು ಗಂಗೋಪನಹಳ್ಳಿ ಎಂಬ ಮೂರು ಹಳ್ಳಿಗಳ ಜನರನ್ನು ಸಂಪೂರ್ಣವಾಗಿ ಸ್ಥಳಾಂತರ ಮಾಡಲಾಗಿತ್ತು. 200ಕ್ಕೂ ಹೆಚ್ಚು ಕುಟಂಬಗಳಿಗೆ ಸೂಲಿಬೆಲೆ ಪಕ್ಕದ ಬಾಲೆಪುರ ಎಂಬಲ್ಲಿ ನಿವೇಶನಗಳನ್ನು ನೀಡಲಾಗಿತ್ತು. ಅವರು ಕಳೆದುಕೊಂಡ ಜಮೀನಿಗೆ ಸೂಕ್ತ ದಾಖಲೆ ಇದ್ದವರಿಗೆ ಮಾತ್ರ ಸರ್ಕಾರ ಪ್ರತಿ ಎಕರೆಗೆ 5 ಲಕ್ಷ ರೂ ಪರಿಹಾರ ನೀಡಿತ್ತು. ಅವರಿಗೆ ಉದ್ಯೋಗ ನೀಡುವ ಭರವಸೆ ನೀಡಿತ್ತು. ಆದರೆ 2008ರಲ್ಲಿ ವಿಮಾನ ನಿಲ್ದಾಣ ಕಾರ್ಯಾರಂಭ ಮಾಡಿದಾಗ ಅವರಿಗೆ ಯಾವುದೇ ಉದ್ಯೋಗಗಳನ್ನು ನೀಡಲಿಲ್ಲ! ಹಾಗಾಗಿ ಆ ಜನ ಬಾಲೆಪುರದಲ್ಲಿಯೂ ಸಹ ನೆಲೆಗೊಳ್ಳದೆ ಮನಬಂದ ಕಡೆ ಹೋದರು” ಎನ್ನುತ್ತಾರೆ ಸುಸ್ಥಿರ ಕೃಷಿ ಕುರಿತು ಅಧ್ಯಯನ ನಡೆಸುತ್ತಿರುವ ರಮೇಶ್ ಚೀಮಾಚನಹಳ್ಳಿ.

2014-15 ರಲ್ಲಿ ಸಹ ಏರೋಸ್ಪೇಸ್ ಎಸ್‌ಇಜೆಡ್‌ಗಾಗಿ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿ ವ್ಯಾಪ್ತಿಯಲ್ಲಿ 900 ಎಕರೆ ಜಮೀನನ್ನು ವಶಪಡಿಸಿಕೊಳ್ಳಲಾಯ್ತು. ಆ ಜಮೀನು ಹಲವು ಕಾರ್ಖಾನೆಗಳಿಗೆ ನೀಡಿದ್ದರೂ ಇದುವರೆಗೂ ಯಾವುದೇ ಕೈಗಾರಿಕೆಗಳು ಸ್ಥಾಪನೆಯಾಗಿಲ್ಲ. ನಂತರ 2018-19 ರಲ್ಲಿ ಹರಳೂರು ಕೈಗಾರಿಕಾ ಅಭಿವೃದ್ದಿ ಪ್ರದೇಶಕ್ಕಾಗಿ ಮೊದಲ ಹಂತದಲ್ಲಿ 1,300 ಎಕರೆ ಜಮೀನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಅದು ಸಾಲದೆಂಬಂತೆ ಈಗ KIADB ಮತ್ತೆ ಎರಡನೇ ಹಂತದಲ್ಲಿ 1,777 ಎಕರೆ ಜಮೀನು ವಶಪಡಿಸಿಕೊಳ್ಳಲು ಮುಂದಾಗಿದೆ. ಈ ರೀತಿ ಪದೇ ಪದೇ ನಮ್ಮ ಕೃಷಿ ಭೂಮಿ ವಶಪಡಿಸಿಕೊಳ್ಳುತ್ತಿದ್ದರೆ ನಾವೆಲ್ಲಿಗೆ ಹೋಗಬೇಕು? ನಾವು ಹೇಗೆ ಬದುಕಬೇಕು ಎಂದು ಪ್ರಶ್ನಿಸುತ್ತಾರೆ ಬಚ್ಚೇನಹಳ್ಳಿ, ಪಾಳ್ಯ, ಹರಳೂರು, ಪೋಲನಹಳ್ಳಿ, ನಲ್ಲಪನಹಳ್ಳಿ, ಮಲ್ಲೇಪುರ, ನಲ್ಲೂರು, ಹ್ಯಾಡಾಳ ಮುಂತಾದ ಗ್ರಾಮದ ಜನರು.

“ಕೃಷಿ ಭೂಮಿ ರೈತರ ಹಕ್ಕು, ಉದ್ಯಮಿಗಳದ್ದಲ್ಲ” ಎಂಬ ಘೋಷಣೆಯೊಂದಿಗೆ KIADB ಭೂ ಸ್ವಾಧೀನ ವಿರೋಧಿಸಿ ಅನಿರ್ಧಿಷ್ಟವಧಿ ಧರಣಿ ನಡೆಸುತ್ತಿದ್ದಾರೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿ ಸುತ್ತಲಿನ 11 ಗ್ರಾಮದ ರೈತರು.

ಈ ನಮ್ಮ ಫಲವತ್ತಾದ ಭೂಮಿಯಲ್ಲಿ ಆಹಾರ ಧಾನ್ಯ, ತರಕಾರಿ, ದ್ರಾಕ್ಷಿ, ಮಾವು, ರೇಷ್ಮೆ ಸೇರಿದಂತೆ ಹಲವು ಬೆಳೆಗಳನ್ನು ಬೆಳೆಯುತ್ತಿದ್ದು, ನಮ್ಮ ಹಳ್ಳಿಗಳ ಜೀವನೋಪಾಯವೇ ಈ ಕೃಷಿ ಭೂಮಿಯಾಗಿದೆ. ಹತ್ತಿರದಲ್ಲೇ ಇರುವ ಕೃಷಿಭೂಮಿಯಲ್ಲಿ ಕಟ್ಟಿಕೊಂಡಿರುವ ವಾಸದ ಮನೆಗಳು, ಕೋಳಿಫಾರಂ, ಪಾಲಿಹೌಸ್ ಮುಂತಾದವು ಕೂಡ ಸರ್ಕಾರದ ಉದ್ದೇಶಿತ ಸ್ವಾಧೀನ ಪ್ರಕ್ರಿಯೆಯಲ್ಲಿ ಸೇರಲಿವೆ. ಜೊತೆಗೆ, ಭೂರಹಿತರು, ಸಣ್ಣರೈತರು ಸುಮಾರು ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ದಾಖಲೆಯಾಗದ ತುಂಡು ಜಮೀನುಗಳು ಇದರಲ್ಲಿ ಸೇರುತ್ತವೆ. ಸರ್ಕಾರ ಇದನ್ನೆಲ್ಲ ಕಿತ್ತುಕೊಂಡರೆ ನಾವೆಲ್ಲಿಗೆ ಹೋಗಬೇಕು ಎನ್ನುತ್ತಾರೆ ರೈತರಾದ ಮಾರೇಗೌಡ.

ಅಭಿವೃದ್ದಿಗಾಗಿ, ಕೈಗಾರಿಕೆಗಳಿಗಾಗಿ ಭೂಮಿ ಬಿಟ್ಟು ಕೊಡಿ ಎಂದು ಪದೇ ಪದೇ ಭೂ ಸ್ವಾಧೀನ ಪಡಿಸಿಕೊಂಡರೆ ನಮ್ಮ ಗತಿಯೇನು? ಇಲ್ಲಿನ ಅರ್ಧದಷ್ಟು ಜನರ ಬಳಿ ಸರ್ಕಾರ ಕೇಳುವ ಭೂಮಿಗೆ ಸಂಬಂಧಿಸಿದ 21 ದಾಖಲೆಗಳು ಇಲ್ಲ. ಅವರಿಗೂ ಪರಿಹಾರವೂ ಸಿಗುವುದಿಲ್ಲ. ಹಾಗೆಂದು ಅವರು ಬದುಕಬಾರದೇನು? ದೇವರಾಜು ಅರಸು ಕಾಲದಲ್ಲಿ ಉಳುವವನೆ ಭೂ ಒಡೆಯ ಕಾನೂನಿನ ಅಡಿ ಒಂದಷ್ಟು ಜನರಿಗೆ ಭೂಮಿ ದಕ್ಕಿದೆ. ಅದನ್ನು ಈಗ ಸರ್ಕಾರವೇ ವಾಪಸ್ ಕಿತ್ತುಕೊಳ್ಳುವುದು ಸರಿಯೇ ಎಂದು ಪ್ರಶ್ನಿಸುತ್ತಾರೆ ಸ್ಥಳೀಯರು.

ಇಲ್ಲಿನ 11 ಹಳ್ಳಿಗಳ ಜನರು ಯಾವುದೇ ಕಾರಣಕ್ಕೂ ತಮ್ಮ ಕೃಷಿ ಭೂಮಿ ಬಿಟ್ಟುಕೊಡುವುದಿಲ್ಲ ಎಂದು ಪಟ್ಟು ಹಿಡಿದು ಧರಣಿ ಕೂತಿದ್ದಾರೆ. ಏಪ್ರಿಲ್ 4 ರಿಂದ ಆರಂಭವಾದ ಅನಿರ್ಧಿಷ್ಟವಧಿ ಧರಣಿ ಈಗ 8ನೇ ದಿನಕ್ಕೆ ಕಾಲಿಟ್ಟಿದೆ. ರೈತರು ಈಗಾಗಲೇ ಕೈಗಾರಿಕ ಸಚಿವರಾದ ಮುರುಗೇಶ್ ನಿರಾಣಿ, ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಸುಧಾಕರ್, ಸಂಸದ ಬಚ್ಚೆಗೌಡ, ಶಾಸಕರಾದ ನಾರಾಯಣಸ್ವಾಮಿ, ಜಿಲ್ಲಾಧಿಕಾರಿಗಳು, ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರ್‌ರನ್ನು ಭೇಟಿ ಮಾಡಿ ನಮ್ಮ ಭೂಮಿ ಉಳಿಸಿಕೊಡುವಂತೆ ಮನವಿ ಮಾಡಿದ್ದಾರೆ. ಅಲ್ಲದೇ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು, ಮಾಜಿ ಪ್ರಧಾನಿಗಳಾದ ಎಚ್‌.ಡಿ ದೇವೇಗೌಡರನ್ನು ಭೇಟಿಯಾಗಿ ಹೋರಾಟಕ್ಕೆ ಬೆಂಬಲ ಕೇಳಲಾಗಿದೆ. ಕರ್ನಾಟಕ ರಾಜ್ಯ ರೈತ ಸಂಘ, ಶಾಶ್ವತ ನೀರಾವರಿ ಹೋರಾಟ ಸಮಿತಿ ಸೇರಿ ಹಲವು ಸಂಘಟನೆಗಳು ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿವೆ.

ಹರಳೂರು ಕೈಗಾರಿಕಾ ಪ್ರದೇಶಾಭಿವೃದ್ಧಿಯ ಎರಡನೇ ಹಂತದ ಭೂ ಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣ ಕೈ ಬಿಡಬೇಕು. ಬಗರ್ ಹುಕುಂ ಸಾಗುವಳಿ ಭೂಮಿಗಾಗಿ ಫಾರಂ ನಂಬರ್ 50, 53, 57ರಡಿ ಅರ್ಜಿ ಸಲ್ಲಿಸಿದ ರೈತರಿಗೆ ಭೂಮಿ ಮಂಜೂರು ಮಾಡಬೇಕು ಮತ್ತು ಹಿಂದಿನ ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ಭೂಮಿ ಕಳೆದುಕೊಂಡ ರೈತ ಕುಟುಂಬಗಳಿಗೆ ಉದ್ಯೋಗ, ಆರ್ಥಿಕ ಭದ್ರತೆ ಒದಗಿಸಬೇಕು ಎಂಬ ಮೂರು ಹಕ್ಕೊತ್ತಾಯಗಳನ್ನು ಧರಣಿ ಮುಂದುವರೆದಿದೆ. ಸರ್ಕಾರ ಕೂಡಲೇ ಇತ್ತ ಗಮನ ಹರಿಸಿ ರೈತರ ಸಮಸ್ಯೆಗಳನ್ನು ಆಲಿಸಬೇಕಿದೆ.


ಇದನ್ನೂ ಓದಿ: ಇರುವ ಮನೆಗಳ ಒಡೆದು, ಲೇಔಟ್ ಮಾಡಿ ಇನ್ನೊಬ್ಬರಿಗೆ ಸೈಟ್‌ ಹಂಚುವುದು ಯಾವ ನ್ಯಾಯ?: ಬಿಡಿಎ ವಿರುದ್ದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಗೇಂದ್ರ ರಾಜೀನಾಮೆ: ಬಡಿಗೆ ಕೊಟ್ಟು ಹೊಡೆಸಿಕೊಂಡಂತಾಯ್ತು ಕಾಂಗ್ರೆಸ್ ಪರಿಸ್ಥಿತಿ

2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ದಕ್ಕಿದ 136 ಸ್ಥಾನಗಳ ಅಭೂತಪೂರ್ವ ಬಹುಮತಕ್ಕೆ ಪ್ರಮುಖ ಕಾರಣ '40% ಸರ್ಕಾರ' ಮತ್ತು 'ಪೇ ಸಿಎಂ' ಅಭಿಯಾನಗಳು. ಬಿಜೆಪಿಯ ಭ್ರಷ್ಟಾಚಾರವನ್ನು ಅಸ್ತ್ರವಾಗಿಸಿಕೊಂಡು ಆಡಳಿತ ಹಿಡಿದ ಕಾಂಗ್ರೆಸ್‌ಗೆ,...

SIR ಕುತಂತ್ರ: 43.81 ಲಕ್ಷ ಜನರ ಮನೆ ಬಾಗಿಲಿಗೆ ನೋಟಿಸ್‌ ಬಿಸಿ, ಪೌರತ್ವ ಸಾಬೀತುಪಡಿಸಲು ನಾಗರಿಕರು ಅಲೆಯಬೇಕೇ ?

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಇದೀಗ ಲಕ್ಷಾಂತರ ನಾಗರಿಕರನ್ನು ಅತಂತ್ರ ಸ್ಥಿತಿಗೆ ತಳ್ಳಿದೆ.ಚುನಾವಣಾ ಆಯೋಗವು ರಾಜ್ಯದಲ್ಲಿದ್ದ ಒಟ್ಟು 5.54 ಕೋಟಿ ಮತದಾರರ ಪೈಕಿ ಸುಮಾರು 1.08...

ದಿಮಾಗಿ ನಕ್ಸಲ್: ರೈತ, ವಿದ್ಯಾರ್ಥಿ ಹೋರಾಟಗಳೂ ದೇಶದ್ರೋಹವೇ? RSS ಪತ್ರಿಕೆಯ ವಿವಾದಾತ್ಮಕ ಪ್ರತಿಪಾದನೆ

ಶಿಕ್ಷಣ, ಆರೋಗ್ಯ ಮತ್ತು ಒಟ್ಟಾರೆ ಅಭಿವೃದ್ಧಿ ಮಾದರಿಗೆ ತೀವ್ರ ಸ್ವರೂಪದ ಸುಧಾರಣೆಗಳ ಅಗತ್ಯವಿದೆ. ಆದರೆ ಈ ಸಮಸ್ಯೆಗಳು ಕಳೆದ ಹನ್ನೆರಡು ವರ್ಷಗಳಲ್ಲಿ ಹುಟ್ಟಿಕೊಂಡಿದ್ದಲ್ಲ ಅಥವಾ ಬಿಜೆಪಿ ಆಡಳಿತವಿರುವ ರಾಜ್ಯಗಳಿಗಷ್ಟೇ ಸೀಮಿತವಾಗಿಲ್ಲ. ಹಿಂದುತ್ವವನ್ನು ದಮನಕಾರಿ...

ಅಹಮದಾಬಾದ್‌ನಲ್ಲಿ ಪುಸ್ತಕ ಓದುಗರ ಮೇಲೆ ಭಜರಂಗದಳ ದೌರ್ಜನ್ಯ: ಮಲಾಲಾ, ಆನ್ ಫ್ರಾಂಕ್ ಕೃತಿಗಳಿಗೆ ವಿರೋಧಿಸಿ ಬೆದರಿಕೆ!

ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಾಹಿತ್ಯಾಭಿಮಾನಿಗಳ ಮೇಲೆ ಭಜರಂಗದಳ ಕಾರ್ಯಕರ್ತರು ಭೀಕರ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ನಗರದ ಸಾರ್ವಜನಿಕ ಉದ್ಯಾನವನವೊಂದರಲ್ಲಿ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಮಲಾಲಾ ಯೂಸಫ್‌ಜೈ ಹಾಗೂ ವಿಶ್ವಪ್ರಸಿದ್ಧ ಲೇಖಕಿ ಆನ್...

ಉಮರ್ ಖಾಲಿದ್ – ಶಾರ್ಜೀಲ್ ಇಮಾಮ್ ಜಾಮೀನಿಗೆ ದೆಹಲಿ ಪೊಲೀಸರ ವಿರೋಧ

2020ರ ಈಶಾನ್ಯ ದೆಹಲಿ ಕೋಮು ಗಲಭೆಯ ಹಿಂದಿನ ಪ್ರಮುಖ ಸಂಚುಕೋರರು ಎಂದು ಆರೋಪಿಸಿರುವ ದೆಹಲಿ ಪೊಲೀಸರು, ಕಾರಾಗೃಹದಲ್ಲಿರುವ ವಿದ್ಯಾರ್ಥಿ ಕಾರ್ಯಕರ್ತರಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ಜಾಮೀನು ಅರ್ಜಿಗಳನ್ನು ದೆಹಲಿ...

‘ಆರ್‌ಎಸ್‌ಎಸ್-ಬಿಜೆಪಿಯ ರಕ್ತನಾಳಗಳಲ್ಲಿ ತಾರತಮ್ಯ ಹರಿಯುತ್ತಿದೆ’: ಖರ್ಗೆ ರ್ಯಾಲಿ ಸ್ಥಳದ ‘ಶುದ್ಧೀಕರಣ’ ಸಮರ್ಥಿಸಿಕೊಂಡ ಉತ್ತರಾಖಂಡ ಬಿಜೆಪಿ ರಾಜ್ಯಾಧ್ಯಕ್ಷನ ವಿರುದ್ಧ ಕಾಂಗ್ರೆಸ್ ಕಿಡಿ

ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆಯ ನಂತರ ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಡೆದ ಸ್ಥಳೀಯ ‘ಶುದ್ಧೀಕರಣ’ ಸಮಾರಂಭದ ಸುತ್ತಲಿನ ರಾಜಕೀಯ ವಿವಾದವು ತೀವ್ರ ಸ್ವರೂಪ...

ಯುಜಿಸಿಇಟಿ ಸೀಟು ರದ್ದುಗೊಳಿಸಲು ರೂ.5,000 ಶುಲ್ಕ; ಕೆಇಎ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

ಯುಜಿಸಿಇಟಿ 2026ರ ಎರಡನೇ ಹಂತದ ಕೌನ್ಸಿಲಿಂಗ್‌ನಲ್ಲಿ ಹಂಚಿಕೆಯಾದ ಸೀಟುಗಳನ್ನು ರದ್ದುಗೊಳಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ ರೂ.5,000 ದಂಡ ವಿಧಿಸುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ನಿರ್ಧಾರವನ್ನು ವಿರೋಧಿಸಿ ವಿದ್ಯಾರ್ಥಿಗಳು ಮತ್ತು ಪೋಷಕರು ಮಲ್ಲೇಶ್ವರದಲ್ಲಿರುವ ಕೆಇಎ...

162 ವರ್ಷಗಳ ಇತಿಹಾಸದಲ್ಲೇ ಪ್ರಥಮ: ಬಾಂಬೆ ಹೈಕೋರ್ಟ್ ವಕೀಲರ ಸಂಘಕ್ಕೆ ಮಹಿಳಾ ಅಧ್ಯಕ್ಷೆ! 

ಮುಂಬೈ: ಭಾರತೀಯ ನ್ಯಾಯಾಂಗ ರಂಗದ ಇತಿಹಾಸದಲ್ಲಿ ಅತ್ಯಂತ ಮಹತ್ವದ ಮತ್ತು ಕ್ರಾಂತಿಕಾರಿ ನಿರ್ಧಾರವೊಂದನ್ನು ಬಾಂಬೆ ಹೈಕೋರ್ಟ್‌ನ ಪ್ರತಿಷ್ಠಿತ ವಕೀಲರ ಸಂಘಟನೆಯಾದ 'ಅಸೋಸಿಯೇಷನ್‌ ಆಫ್‌ ಅಡ್ವೊಕೇಟ್ಸ್‌ ಆಫ್‌ ವೆಸ್ಟರ್ನ್ ಇಂಡಿಯಾ' (AAWI) ಕೈಗೊಂಡಿದೆ ಎಂದು...

ಫ್ರೀಡಂ ಪಾರ್ಕ್‌: ಧರಣಿಗೆ 1 ಲಕ್ಷ ರೂ. ಶುಲ್ಕ? ಜಿಬಿಎ ನಡೆಗೆ ಹೋರಾಟಗಾರರ ಆಕ್ರೋಶ

ಬೆಂಗಳೂರಿನ ಐತಿಹಾಸಿಕ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಹಾಗೂ ಧರಣಿ ನಡೆಸಲು ದಿನಕ್ಕೆ 1 ಲಕ್ಷ ರೂ. ಶುಲ್ಕ ಮತ್ತು 10,000 ರೂ. ಮುಂಗಡ ಠೇವಣಿ ವಿಧಿಸಲಾಗುತ್ತಿದೆ ಎಂಬ ಸುದ್ದಿ ಸಾರ್ವಜನಿಕ ಹಾಗೂ ಹೋರಾಟಗಾರರ...

ಅಧಿಕಾರದಲ್ಲಿರುವವರ ವಿರುದ್ಧ ಮಾತನಾಡುವ ಭಯವನ್ನು ನೀಟ್ ಚಳವಳಿ ಹೋಗಲಾಡಿಸಿದೆ: ನೇಹಾ ಬೋರಾ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ 'ಜೆನ್ ಜಿ' ಚಳವಳಿಯು ಜನರಲ್ಲಿದ್ದ ಭಯವನ್ನು ಹೋಗಲಾಡಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಹಾಗೂ ಆರ್‌ಎಸ್‌ಎಸ್‌ನವರು ವಿದ್ಯಾರ್ಥಿ ಮತ್ತು ಯುವಜನರನ್ನು ತಲುಪುವಂತೆ ಮಾಡಿದೆ ಎಂದು ಆಲ್...