Homeಚಳವಳಿಕೃಷಿ ಭೂಮಿ ರೈತರ ಹಕ್ಕು, ಉದ್ಯಮಿಗಳದ್ದಲ್ಲ: ಭೂಸ್ವಾಧೀನದ ವಿರುದ್ದ ತಿರುಗಿಬಿದ್ದ ರೈತರು

ಕೃಷಿ ಭೂಮಿ ರೈತರ ಹಕ್ಕು, ಉದ್ಯಮಿಗಳದ್ದಲ್ಲ: ಭೂಸ್ವಾಧೀನದ ವಿರುದ್ದ ತಿರುಗಿಬಿದ್ದ ರೈತರು

ದೇವನಹಳ್ಳಿ ತಾಲ್ಲೂಕಿನಲ್ಲಿ ಇದುವರೆಗೂ KIADB ನಾಲ್ಕನೇ ಬಾರಿ ಭೂಸ್ವಾಧೀನಕ್ಕೆ ಮುಂದಾಗಿದ್ದು ರೈತರ ಆಕ್ರೋಶಕ್ಕೆ ತುತ್ತಾಗಿದೆ.

- Advertisement -
- Advertisement -

ದೇವನಹಳ್ಳಿಯಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆರಂಭವಾದಾಗ ಸುತ್ತಲಿನ ಜನರು ಹಲವು ಕನಸುಗಳನ್ನು ಕಟ್ಟಿಕೊಂಡಿದ್ದರು. ವಿಮಾನ ನಿಲ್ದಾಣವು ಸ್ಥಳೀಯರಿಗೆ ಉದ್ಯೋಗ ಮತ್ತು ವ್ಯಾಪಾರದಲ್ಲಿ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ನೂರಾರು ಜನ ತಮ್ಮ ಜಮೀನು ಬಿಟ್ಟುಕೊಟ್ಟಿದ್ದರು. ಆದರೆ ಇಂದು ಆ ಕನಸುಗಳೆಲ್ಲ ನುಚ್ಚು ನೂರಾಗಿವೆ. ಭೂಮಿ ಬಿಟ್ಟು ಕೊಟ್ಟವರೆಲ್ಲಾ ಇಂದು ಏನಾಗಿದ್ದಾರೆ ಎಂಬ ಗುರುತು ಸಹ ಸಿಗದಷ್ಟು ಮಟ್ಟಿಗೆ ಕಣ್ಮರೆಯಾಗಿದ್ದಾರೆ. ಅವರಿಗೆ ವ್ಯಾಪಾರ ಉದ್ಯೋಗ ಸಿಗುವುದು ಇರಲಿ, ಈಗ ಅವರು ತಾವು ಇರುವ ಜಾಗದಿಂದಲೂ ಎತ್ತಂಗಡಿಯಾಗಬೇಕಾದ ಅಪಾಯ ಎದುರಿಸುತ್ತಿದ್ದಾರೆ.

“1999-2000 ರ ಸಮಯದಲ್ಲಿ ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಸುಮಾರು 4,030 ಎಕರೆ ಹೆಚ್ಚು ಜಾಗವನ್ನು ಸ್ವಾಧೀನಪಡಿಸಿಕೊಳ್ಳಲಾಗಿತ್ತು. ಅದಕ್ಕಾಗಿ ಬಾವಾಪುರ, ಅರಿಶಿನಗುಂಟೆ ಮತ್ತು ಗಂಗೋಪನಹಳ್ಳಿ ಎಂಬ ಮೂರು ಹಳ್ಳಿಗಳ ಜನರನ್ನು ಸಂಪೂರ್ಣವಾಗಿ ಸ್ಥಳಾಂತರ ಮಾಡಲಾಗಿತ್ತು. 200ಕ್ಕೂ ಹೆಚ್ಚು ಕುಟಂಬಗಳಿಗೆ ಸೂಲಿಬೆಲೆ ಪಕ್ಕದ ಬಾಲೆಪುರ ಎಂಬಲ್ಲಿ ನಿವೇಶನಗಳನ್ನು ನೀಡಲಾಗಿತ್ತು. ಅವರು ಕಳೆದುಕೊಂಡ ಜಮೀನಿಗೆ ಸೂಕ್ತ ದಾಖಲೆ ಇದ್ದವರಿಗೆ ಮಾತ್ರ ಸರ್ಕಾರ ಪ್ರತಿ ಎಕರೆಗೆ 5 ಲಕ್ಷ ರೂ ಪರಿಹಾರ ನೀಡಿತ್ತು. ಅವರಿಗೆ ಉದ್ಯೋಗ ನೀಡುವ ಭರವಸೆ ನೀಡಿತ್ತು. ಆದರೆ 2008ರಲ್ಲಿ ವಿಮಾನ ನಿಲ್ದಾಣ ಕಾರ್ಯಾರಂಭ ಮಾಡಿದಾಗ ಅವರಿಗೆ ಯಾವುದೇ ಉದ್ಯೋಗಗಳನ್ನು ನೀಡಲಿಲ್ಲ! ಹಾಗಾಗಿ ಆ ಜನ ಬಾಲೆಪುರದಲ್ಲಿಯೂ ಸಹ ನೆಲೆಗೊಳ್ಳದೆ ಮನಬಂದ ಕಡೆ ಹೋದರು” ಎನ್ನುತ್ತಾರೆ ಸುಸ್ಥಿರ ಕೃಷಿ ಕುರಿತು ಅಧ್ಯಯನ ನಡೆಸುತ್ತಿರುವ ರಮೇಶ್ ಚೀಮಾಚನಹಳ್ಳಿ.

2014-15 ರಲ್ಲಿ ಸಹ ಏರೋಸ್ಪೇಸ್ ಎಸ್‌ಇಜೆಡ್‌ಗಾಗಿ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿ ವ್ಯಾಪ್ತಿಯಲ್ಲಿ 900 ಎಕರೆ ಜಮೀನನ್ನು ವಶಪಡಿಸಿಕೊಳ್ಳಲಾಯ್ತು. ಆ ಜಮೀನು ಹಲವು ಕಾರ್ಖಾನೆಗಳಿಗೆ ನೀಡಿದ್ದರೂ ಇದುವರೆಗೂ ಯಾವುದೇ ಕೈಗಾರಿಕೆಗಳು ಸ್ಥಾಪನೆಯಾಗಿಲ್ಲ. ನಂತರ 2018-19 ರಲ್ಲಿ ಹರಳೂರು ಕೈಗಾರಿಕಾ ಅಭಿವೃದ್ದಿ ಪ್ರದೇಶಕ್ಕಾಗಿ ಮೊದಲ ಹಂತದಲ್ಲಿ 1,300 ಎಕರೆ ಜಮೀನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಅದು ಸಾಲದೆಂಬಂತೆ ಈಗ KIADB ಮತ್ತೆ ಎರಡನೇ ಹಂತದಲ್ಲಿ 1,777 ಎಕರೆ ಜಮೀನು ವಶಪಡಿಸಿಕೊಳ್ಳಲು ಮುಂದಾಗಿದೆ. ಈ ರೀತಿ ಪದೇ ಪದೇ ನಮ್ಮ ಕೃಷಿ ಭೂಮಿ ವಶಪಡಿಸಿಕೊಳ್ಳುತ್ತಿದ್ದರೆ ನಾವೆಲ್ಲಿಗೆ ಹೋಗಬೇಕು? ನಾವು ಹೇಗೆ ಬದುಕಬೇಕು ಎಂದು ಪ್ರಶ್ನಿಸುತ್ತಾರೆ ಬಚ್ಚೇನಹಳ್ಳಿ, ಪಾಳ್ಯ, ಹರಳೂರು, ಪೋಲನಹಳ್ಳಿ, ನಲ್ಲಪನಹಳ್ಳಿ, ಮಲ್ಲೇಪುರ, ನಲ್ಲೂರು, ಹ್ಯಾಡಾಳ ಮುಂತಾದ ಗ್ರಾಮದ ಜನರು.

“ಕೃಷಿ ಭೂಮಿ ರೈತರ ಹಕ್ಕು, ಉದ್ಯಮಿಗಳದ್ದಲ್ಲ” ಎಂಬ ಘೋಷಣೆಯೊಂದಿಗೆ KIADB ಭೂ ಸ್ವಾಧೀನ ವಿರೋಧಿಸಿ ಅನಿರ್ಧಿಷ್ಟವಧಿ ಧರಣಿ ನಡೆಸುತ್ತಿದ್ದಾರೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿ ಸುತ್ತಲಿನ 11 ಗ್ರಾಮದ ರೈತರು.

ಈ ನಮ್ಮ ಫಲವತ್ತಾದ ಭೂಮಿಯಲ್ಲಿ ಆಹಾರ ಧಾನ್ಯ, ತರಕಾರಿ, ದ್ರಾಕ್ಷಿ, ಮಾವು, ರೇಷ್ಮೆ ಸೇರಿದಂತೆ ಹಲವು ಬೆಳೆಗಳನ್ನು ಬೆಳೆಯುತ್ತಿದ್ದು, ನಮ್ಮ ಹಳ್ಳಿಗಳ ಜೀವನೋಪಾಯವೇ ಈ ಕೃಷಿ ಭೂಮಿಯಾಗಿದೆ. ಹತ್ತಿರದಲ್ಲೇ ಇರುವ ಕೃಷಿಭೂಮಿಯಲ್ಲಿ ಕಟ್ಟಿಕೊಂಡಿರುವ ವಾಸದ ಮನೆಗಳು, ಕೋಳಿಫಾರಂ, ಪಾಲಿಹೌಸ್ ಮುಂತಾದವು ಕೂಡ ಸರ್ಕಾರದ ಉದ್ದೇಶಿತ ಸ್ವಾಧೀನ ಪ್ರಕ್ರಿಯೆಯಲ್ಲಿ ಸೇರಲಿವೆ. ಜೊತೆಗೆ, ಭೂರಹಿತರು, ಸಣ್ಣರೈತರು ಸುಮಾರು ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ದಾಖಲೆಯಾಗದ ತುಂಡು ಜಮೀನುಗಳು ಇದರಲ್ಲಿ ಸೇರುತ್ತವೆ. ಸರ್ಕಾರ ಇದನ್ನೆಲ್ಲ ಕಿತ್ತುಕೊಂಡರೆ ನಾವೆಲ್ಲಿಗೆ ಹೋಗಬೇಕು ಎನ್ನುತ್ತಾರೆ ರೈತರಾದ ಮಾರೇಗೌಡ.

ಅಭಿವೃದ್ದಿಗಾಗಿ, ಕೈಗಾರಿಕೆಗಳಿಗಾಗಿ ಭೂಮಿ ಬಿಟ್ಟು ಕೊಡಿ ಎಂದು ಪದೇ ಪದೇ ಭೂ ಸ್ವಾಧೀನ ಪಡಿಸಿಕೊಂಡರೆ ನಮ್ಮ ಗತಿಯೇನು? ಇಲ್ಲಿನ ಅರ್ಧದಷ್ಟು ಜನರ ಬಳಿ ಸರ್ಕಾರ ಕೇಳುವ ಭೂಮಿಗೆ ಸಂಬಂಧಿಸಿದ 21 ದಾಖಲೆಗಳು ಇಲ್ಲ. ಅವರಿಗೂ ಪರಿಹಾರವೂ ಸಿಗುವುದಿಲ್ಲ. ಹಾಗೆಂದು ಅವರು ಬದುಕಬಾರದೇನು? ದೇವರಾಜು ಅರಸು ಕಾಲದಲ್ಲಿ ಉಳುವವನೆ ಭೂ ಒಡೆಯ ಕಾನೂನಿನ ಅಡಿ ಒಂದಷ್ಟು ಜನರಿಗೆ ಭೂಮಿ ದಕ್ಕಿದೆ. ಅದನ್ನು ಈಗ ಸರ್ಕಾರವೇ ವಾಪಸ್ ಕಿತ್ತುಕೊಳ್ಳುವುದು ಸರಿಯೇ ಎಂದು ಪ್ರಶ್ನಿಸುತ್ತಾರೆ ಸ್ಥಳೀಯರು.

ಇಲ್ಲಿನ 11 ಹಳ್ಳಿಗಳ ಜನರು ಯಾವುದೇ ಕಾರಣಕ್ಕೂ ತಮ್ಮ ಕೃಷಿ ಭೂಮಿ ಬಿಟ್ಟುಕೊಡುವುದಿಲ್ಲ ಎಂದು ಪಟ್ಟು ಹಿಡಿದು ಧರಣಿ ಕೂತಿದ್ದಾರೆ. ಏಪ್ರಿಲ್ 4 ರಿಂದ ಆರಂಭವಾದ ಅನಿರ್ಧಿಷ್ಟವಧಿ ಧರಣಿ ಈಗ 8ನೇ ದಿನಕ್ಕೆ ಕಾಲಿಟ್ಟಿದೆ. ರೈತರು ಈಗಾಗಲೇ ಕೈಗಾರಿಕ ಸಚಿವರಾದ ಮುರುಗೇಶ್ ನಿರಾಣಿ, ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಸುಧಾಕರ್, ಸಂಸದ ಬಚ್ಚೆಗೌಡ, ಶಾಸಕರಾದ ನಾರಾಯಣಸ್ವಾಮಿ, ಜಿಲ್ಲಾಧಿಕಾರಿಗಳು, ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರ್‌ರನ್ನು ಭೇಟಿ ಮಾಡಿ ನಮ್ಮ ಭೂಮಿ ಉಳಿಸಿಕೊಡುವಂತೆ ಮನವಿ ಮಾಡಿದ್ದಾರೆ. ಅಲ್ಲದೇ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು, ಮಾಜಿ ಪ್ರಧಾನಿಗಳಾದ ಎಚ್‌.ಡಿ ದೇವೇಗೌಡರನ್ನು ಭೇಟಿಯಾಗಿ ಹೋರಾಟಕ್ಕೆ ಬೆಂಬಲ ಕೇಳಲಾಗಿದೆ. ಕರ್ನಾಟಕ ರಾಜ್ಯ ರೈತ ಸಂಘ, ಶಾಶ್ವತ ನೀರಾವರಿ ಹೋರಾಟ ಸಮಿತಿ ಸೇರಿ ಹಲವು ಸಂಘಟನೆಗಳು ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿವೆ.

ಹರಳೂರು ಕೈಗಾರಿಕಾ ಪ್ರದೇಶಾಭಿವೃದ್ಧಿಯ ಎರಡನೇ ಹಂತದ ಭೂ ಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣ ಕೈ ಬಿಡಬೇಕು. ಬಗರ್ ಹುಕುಂ ಸಾಗುವಳಿ ಭೂಮಿಗಾಗಿ ಫಾರಂ ನಂಬರ್ 50, 53, 57ರಡಿ ಅರ್ಜಿ ಸಲ್ಲಿಸಿದ ರೈತರಿಗೆ ಭೂಮಿ ಮಂಜೂರು ಮಾಡಬೇಕು ಮತ್ತು ಹಿಂದಿನ ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ಭೂಮಿ ಕಳೆದುಕೊಂಡ ರೈತ ಕುಟುಂಬಗಳಿಗೆ ಉದ್ಯೋಗ, ಆರ್ಥಿಕ ಭದ್ರತೆ ಒದಗಿಸಬೇಕು ಎಂಬ ಮೂರು ಹಕ್ಕೊತ್ತಾಯಗಳನ್ನು ಧರಣಿ ಮುಂದುವರೆದಿದೆ. ಸರ್ಕಾರ ಕೂಡಲೇ ಇತ್ತ ಗಮನ ಹರಿಸಿ ರೈತರ ಸಮಸ್ಯೆಗಳನ್ನು ಆಲಿಸಬೇಕಿದೆ.


ಇದನ್ನೂ ಓದಿ: ಇರುವ ಮನೆಗಳ ಒಡೆದು, ಲೇಔಟ್ ಮಾಡಿ ಇನ್ನೊಬ್ಬರಿಗೆ ಸೈಟ್‌ ಹಂಚುವುದು ಯಾವ ನ್ಯಾಯ?: ಬಿಡಿಎ ವಿರುದ್ದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...

ಆರ್‌ಎಸ್‌ಎಸ್‌ಗೆ 100 ವರ್ಷ; ಮುದ್ರಣ ಮಾಧ್ಯಮ ಜಾಹೀರಾತಿಗೆ 76.13 ಲಕ್ಷ ರೂ. ಖರ್ಚು ಮಾಡಿದ ಕೇಂದ್ರ ಸರ್ಕಾರ

ಅಧಿಕೃತವಾಗಿ ನೊಂದಣಿಯಾಗದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದ 100ನೇ ವರ್ಷಾಚರಣೆಯ ಜಾಹೀರಾತುಗಳಿಗಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು 76.13 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಿಂದ ತಿಳಿದುಬಂದಿದೆ. ಹಿಂದೂ...

ಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ ‘ಮಹಿಳಾ ಮೀಸಲಾತಿ’ ಜಾರಿ ಮಾಡಿ: ಗೌರವ್ ಗೊಗೊಯ್

"ಮಹಿಳಾ ಮೀಸಲಾತಿಯನ್ನು ಪ್ರಸ್ತುತ ಲೋಕಸಭೆಯ 543 ಸದಸ್ಯರ ಬಲದ ಮೇಲೆ ಜಾರಿಗೆ ತರಬೇಕು, ಅದನ್ನು ಡಿಲಿಮಿಟೇಷನ್ (ಕ್ಷೇತ್ರ ಪುನರ್‌ ವಿಂಗಡಣೆ) ಸೀಮಿತಗೊಳಿಸಬಾರದು" ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದರು. "ಸರ್ಕಾರವು ಮಸೂದೆಗಳನ್ನು...

ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ : ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳ ಮಂಡನೆ

ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಕ್ಷೇತ್ರ ಮರುವಿಂಗಡಣಾ ಆಯೋಗವನ್ನು ಸ್ಥಾಪಿಸಲು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಅಮಿತ್ ಶಾ ಅವರು ಗುರುವಾರ (ಏ.16) ಲೋಕಸಭೆಯಲ್ಲಿ ಮೂರು ವಿಧೇಯಕಗಳನ್ನು...

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...

ಸಂಸತ್ತಿನ 3 ದಿನಗಳ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಕುರಿತ ಮಸೂದೆಗಳ ಮಂಡನೆ ಸಾಧ್ಯತೆ

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನ ಗುರುವಾರದಿಂದ (ಏ.16) ಪ್ರಾರಂಭಗೊಂಡಿದೆ. ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ ಸೇರಿದಂತೆ ಪ್ರಮುಖ ಮೂರು ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ. ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಪ್ರಸ್ತುತ...