Homeಚಳವಳಿಕೃಷಿ ಭೂಮಿ ರೈತರ ಹಕ್ಕು, ಉದ್ಯಮಿಗಳದ್ದಲ್ಲ: ಭೂಸ್ವಾಧೀನದ ವಿರುದ್ದ ತಿರುಗಿಬಿದ್ದ ರೈತರು

ಕೃಷಿ ಭೂಮಿ ರೈತರ ಹಕ್ಕು, ಉದ್ಯಮಿಗಳದ್ದಲ್ಲ: ಭೂಸ್ವಾಧೀನದ ವಿರುದ್ದ ತಿರುಗಿಬಿದ್ದ ರೈತರು

ದೇವನಹಳ್ಳಿ ತಾಲ್ಲೂಕಿನಲ್ಲಿ ಇದುವರೆಗೂ KIADB ನಾಲ್ಕನೇ ಬಾರಿ ಭೂಸ್ವಾಧೀನಕ್ಕೆ ಮುಂದಾಗಿದ್ದು ರೈತರ ಆಕ್ರೋಶಕ್ಕೆ ತುತ್ತಾಗಿದೆ.

- Advertisement -
- Advertisement -

ದೇವನಹಳ್ಳಿಯಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆರಂಭವಾದಾಗ ಸುತ್ತಲಿನ ಜನರು ಹಲವು ಕನಸುಗಳನ್ನು ಕಟ್ಟಿಕೊಂಡಿದ್ದರು. ವಿಮಾನ ನಿಲ್ದಾಣವು ಸ್ಥಳೀಯರಿಗೆ ಉದ್ಯೋಗ ಮತ್ತು ವ್ಯಾಪಾರದಲ್ಲಿ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ನೂರಾರು ಜನ ತಮ್ಮ ಜಮೀನು ಬಿಟ್ಟುಕೊಟ್ಟಿದ್ದರು. ಆದರೆ ಇಂದು ಆ ಕನಸುಗಳೆಲ್ಲ ನುಚ್ಚು ನೂರಾಗಿವೆ. ಭೂಮಿ ಬಿಟ್ಟು ಕೊಟ್ಟವರೆಲ್ಲಾ ಇಂದು ಏನಾಗಿದ್ದಾರೆ ಎಂಬ ಗುರುತು ಸಹ ಸಿಗದಷ್ಟು ಮಟ್ಟಿಗೆ ಕಣ್ಮರೆಯಾಗಿದ್ದಾರೆ. ಅವರಿಗೆ ವ್ಯಾಪಾರ ಉದ್ಯೋಗ ಸಿಗುವುದು ಇರಲಿ, ಈಗ ಅವರು ತಾವು ಇರುವ ಜಾಗದಿಂದಲೂ ಎತ್ತಂಗಡಿಯಾಗಬೇಕಾದ ಅಪಾಯ ಎದುರಿಸುತ್ತಿದ್ದಾರೆ.

“1999-2000 ರ ಸಮಯದಲ್ಲಿ ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಸುಮಾರು 4,030 ಎಕರೆ ಹೆಚ್ಚು ಜಾಗವನ್ನು ಸ್ವಾಧೀನಪಡಿಸಿಕೊಳ್ಳಲಾಗಿತ್ತು. ಅದಕ್ಕಾಗಿ ಬಾವಾಪುರ, ಅರಿಶಿನಗುಂಟೆ ಮತ್ತು ಗಂಗೋಪನಹಳ್ಳಿ ಎಂಬ ಮೂರು ಹಳ್ಳಿಗಳ ಜನರನ್ನು ಸಂಪೂರ್ಣವಾಗಿ ಸ್ಥಳಾಂತರ ಮಾಡಲಾಗಿತ್ತು. 200ಕ್ಕೂ ಹೆಚ್ಚು ಕುಟಂಬಗಳಿಗೆ ಸೂಲಿಬೆಲೆ ಪಕ್ಕದ ಬಾಲೆಪುರ ಎಂಬಲ್ಲಿ ನಿವೇಶನಗಳನ್ನು ನೀಡಲಾಗಿತ್ತು. ಅವರು ಕಳೆದುಕೊಂಡ ಜಮೀನಿಗೆ ಸೂಕ್ತ ದಾಖಲೆ ಇದ್ದವರಿಗೆ ಮಾತ್ರ ಸರ್ಕಾರ ಪ್ರತಿ ಎಕರೆಗೆ 5 ಲಕ್ಷ ರೂ ಪರಿಹಾರ ನೀಡಿತ್ತು. ಅವರಿಗೆ ಉದ್ಯೋಗ ನೀಡುವ ಭರವಸೆ ನೀಡಿತ್ತು. ಆದರೆ 2008ರಲ್ಲಿ ವಿಮಾನ ನಿಲ್ದಾಣ ಕಾರ್ಯಾರಂಭ ಮಾಡಿದಾಗ ಅವರಿಗೆ ಯಾವುದೇ ಉದ್ಯೋಗಗಳನ್ನು ನೀಡಲಿಲ್ಲ! ಹಾಗಾಗಿ ಆ ಜನ ಬಾಲೆಪುರದಲ್ಲಿಯೂ ಸಹ ನೆಲೆಗೊಳ್ಳದೆ ಮನಬಂದ ಕಡೆ ಹೋದರು” ಎನ್ನುತ್ತಾರೆ ಸುಸ್ಥಿರ ಕೃಷಿ ಕುರಿತು ಅಧ್ಯಯನ ನಡೆಸುತ್ತಿರುವ ರಮೇಶ್ ಚೀಮಾಚನಹಳ್ಳಿ.

2014-15 ರಲ್ಲಿ ಸಹ ಏರೋಸ್ಪೇಸ್ ಎಸ್‌ಇಜೆಡ್‌ಗಾಗಿ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿ ವ್ಯಾಪ್ತಿಯಲ್ಲಿ 900 ಎಕರೆ ಜಮೀನನ್ನು ವಶಪಡಿಸಿಕೊಳ್ಳಲಾಯ್ತು. ಆ ಜಮೀನು ಹಲವು ಕಾರ್ಖಾನೆಗಳಿಗೆ ನೀಡಿದ್ದರೂ ಇದುವರೆಗೂ ಯಾವುದೇ ಕೈಗಾರಿಕೆಗಳು ಸ್ಥಾಪನೆಯಾಗಿಲ್ಲ. ನಂತರ 2018-19 ರಲ್ಲಿ ಹರಳೂರು ಕೈಗಾರಿಕಾ ಅಭಿವೃದ್ದಿ ಪ್ರದೇಶಕ್ಕಾಗಿ ಮೊದಲ ಹಂತದಲ್ಲಿ 1,300 ಎಕರೆ ಜಮೀನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಅದು ಸಾಲದೆಂಬಂತೆ ಈಗ KIADB ಮತ್ತೆ ಎರಡನೇ ಹಂತದಲ್ಲಿ 1,777 ಎಕರೆ ಜಮೀನು ವಶಪಡಿಸಿಕೊಳ್ಳಲು ಮುಂದಾಗಿದೆ. ಈ ರೀತಿ ಪದೇ ಪದೇ ನಮ್ಮ ಕೃಷಿ ಭೂಮಿ ವಶಪಡಿಸಿಕೊಳ್ಳುತ್ತಿದ್ದರೆ ನಾವೆಲ್ಲಿಗೆ ಹೋಗಬೇಕು? ನಾವು ಹೇಗೆ ಬದುಕಬೇಕು ಎಂದು ಪ್ರಶ್ನಿಸುತ್ತಾರೆ ಬಚ್ಚೇನಹಳ್ಳಿ, ಪಾಳ್ಯ, ಹರಳೂರು, ಪೋಲನಹಳ್ಳಿ, ನಲ್ಲಪನಹಳ್ಳಿ, ಮಲ್ಲೇಪುರ, ನಲ್ಲೂರು, ಹ್ಯಾಡಾಳ ಮುಂತಾದ ಗ್ರಾಮದ ಜನರು.

“ಕೃಷಿ ಭೂಮಿ ರೈತರ ಹಕ್ಕು, ಉದ್ಯಮಿಗಳದ್ದಲ್ಲ” ಎಂಬ ಘೋಷಣೆಯೊಂದಿಗೆ KIADB ಭೂ ಸ್ವಾಧೀನ ವಿರೋಧಿಸಿ ಅನಿರ್ಧಿಷ್ಟವಧಿ ಧರಣಿ ನಡೆಸುತ್ತಿದ್ದಾರೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿ ಸುತ್ತಲಿನ 11 ಗ್ರಾಮದ ರೈತರು.

ಈ ನಮ್ಮ ಫಲವತ್ತಾದ ಭೂಮಿಯಲ್ಲಿ ಆಹಾರ ಧಾನ್ಯ, ತರಕಾರಿ, ದ್ರಾಕ್ಷಿ, ಮಾವು, ರೇಷ್ಮೆ ಸೇರಿದಂತೆ ಹಲವು ಬೆಳೆಗಳನ್ನು ಬೆಳೆಯುತ್ತಿದ್ದು, ನಮ್ಮ ಹಳ್ಳಿಗಳ ಜೀವನೋಪಾಯವೇ ಈ ಕೃಷಿ ಭೂಮಿಯಾಗಿದೆ. ಹತ್ತಿರದಲ್ಲೇ ಇರುವ ಕೃಷಿಭೂಮಿಯಲ್ಲಿ ಕಟ್ಟಿಕೊಂಡಿರುವ ವಾಸದ ಮನೆಗಳು, ಕೋಳಿಫಾರಂ, ಪಾಲಿಹೌಸ್ ಮುಂತಾದವು ಕೂಡ ಸರ್ಕಾರದ ಉದ್ದೇಶಿತ ಸ್ವಾಧೀನ ಪ್ರಕ್ರಿಯೆಯಲ್ಲಿ ಸೇರಲಿವೆ. ಜೊತೆಗೆ, ಭೂರಹಿತರು, ಸಣ್ಣರೈತರು ಸುಮಾರು ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ದಾಖಲೆಯಾಗದ ತುಂಡು ಜಮೀನುಗಳು ಇದರಲ್ಲಿ ಸೇರುತ್ತವೆ. ಸರ್ಕಾರ ಇದನ್ನೆಲ್ಲ ಕಿತ್ತುಕೊಂಡರೆ ನಾವೆಲ್ಲಿಗೆ ಹೋಗಬೇಕು ಎನ್ನುತ್ತಾರೆ ರೈತರಾದ ಮಾರೇಗೌಡ.

ಅಭಿವೃದ್ದಿಗಾಗಿ, ಕೈಗಾರಿಕೆಗಳಿಗಾಗಿ ಭೂಮಿ ಬಿಟ್ಟು ಕೊಡಿ ಎಂದು ಪದೇ ಪದೇ ಭೂ ಸ್ವಾಧೀನ ಪಡಿಸಿಕೊಂಡರೆ ನಮ್ಮ ಗತಿಯೇನು? ಇಲ್ಲಿನ ಅರ್ಧದಷ್ಟು ಜನರ ಬಳಿ ಸರ್ಕಾರ ಕೇಳುವ ಭೂಮಿಗೆ ಸಂಬಂಧಿಸಿದ 21 ದಾಖಲೆಗಳು ಇಲ್ಲ. ಅವರಿಗೂ ಪರಿಹಾರವೂ ಸಿಗುವುದಿಲ್ಲ. ಹಾಗೆಂದು ಅವರು ಬದುಕಬಾರದೇನು? ದೇವರಾಜು ಅರಸು ಕಾಲದಲ್ಲಿ ಉಳುವವನೆ ಭೂ ಒಡೆಯ ಕಾನೂನಿನ ಅಡಿ ಒಂದಷ್ಟು ಜನರಿಗೆ ಭೂಮಿ ದಕ್ಕಿದೆ. ಅದನ್ನು ಈಗ ಸರ್ಕಾರವೇ ವಾಪಸ್ ಕಿತ್ತುಕೊಳ್ಳುವುದು ಸರಿಯೇ ಎಂದು ಪ್ರಶ್ನಿಸುತ್ತಾರೆ ಸ್ಥಳೀಯರು.

ಇಲ್ಲಿನ 11 ಹಳ್ಳಿಗಳ ಜನರು ಯಾವುದೇ ಕಾರಣಕ್ಕೂ ತಮ್ಮ ಕೃಷಿ ಭೂಮಿ ಬಿಟ್ಟುಕೊಡುವುದಿಲ್ಲ ಎಂದು ಪಟ್ಟು ಹಿಡಿದು ಧರಣಿ ಕೂತಿದ್ದಾರೆ. ಏಪ್ರಿಲ್ 4 ರಿಂದ ಆರಂಭವಾದ ಅನಿರ್ಧಿಷ್ಟವಧಿ ಧರಣಿ ಈಗ 8ನೇ ದಿನಕ್ಕೆ ಕಾಲಿಟ್ಟಿದೆ. ರೈತರು ಈಗಾಗಲೇ ಕೈಗಾರಿಕ ಸಚಿವರಾದ ಮುರುಗೇಶ್ ನಿರಾಣಿ, ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಸುಧಾಕರ್, ಸಂಸದ ಬಚ್ಚೆಗೌಡ, ಶಾಸಕರಾದ ನಾರಾಯಣಸ್ವಾಮಿ, ಜಿಲ್ಲಾಧಿಕಾರಿಗಳು, ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರ್‌ರನ್ನು ಭೇಟಿ ಮಾಡಿ ನಮ್ಮ ಭೂಮಿ ಉಳಿಸಿಕೊಡುವಂತೆ ಮನವಿ ಮಾಡಿದ್ದಾರೆ. ಅಲ್ಲದೇ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು, ಮಾಜಿ ಪ್ರಧಾನಿಗಳಾದ ಎಚ್‌.ಡಿ ದೇವೇಗೌಡರನ್ನು ಭೇಟಿಯಾಗಿ ಹೋರಾಟಕ್ಕೆ ಬೆಂಬಲ ಕೇಳಲಾಗಿದೆ. ಕರ್ನಾಟಕ ರಾಜ್ಯ ರೈತ ಸಂಘ, ಶಾಶ್ವತ ನೀರಾವರಿ ಹೋರಾಟ ಸಮಿತಿ ಸೇರಿ ಹಲವು ಸಂಘಟನೆಗಳು ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿವೆ.

ಹರಳೂರು ಕೈಗಾರಿಕಾ ಪ್ರದೇಶಾಭಿವೃದ್ಧಿಯ ಎರಡನೇ ಹಂತದ ಭೂ ಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣ ಕೈ ಬಿಡಬೇಕು. ಬಗರ್ ಹುಕುಂ ಸಾಗುವಳಿ ಭೂಮಿಗಾಗಿ ಫಾರಂ ನಂಬರ್ 50, 53, 57ರಡಿ ಅರ್ಜಿ ಸಲ್ಲಿಸಿದ ರೈತರಿಗೆ ಭೂಮಿ ಮಂಜೂರು ಮಾಡಬೇಕು ಮತ್ತು ಹಿಂದಿನ ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ಭೂಮಿ ಕಳೆದುಕೊಂಡ ರೈತ ಕುಟುಂಬಗಳಿಗೆ ಉದ್ಯೋಗ, ಆರ್ಥಿಕ ಭದ್ರತೆ ಒದಗಿಸಬೇಕು ಎಂಬ ಮೂರು ಹಕ್ಕೊತ್ತಾಯಗಳನ್ನು ಧರಣಿ ಮುಂದುವರೆದಿದೆ. ಸರ್ಕಾರ ಕೂಡಲೇ ಇತ್ತ ಗಮನ ಹರಿಸಿ ರೈತರ ಸಮಸ್ಯೆಗಳನ್ನು ಆಲಿಸಬೇಕಿದೆ.


ಇದನ್ನೂ ಓದಿ: ಇರುವ ಮನೆಗಳ ಒಡೆದು, ಲೇಔಟ್ ಮಾಡಿ ಇನ್ನೊಬ್ಬರಿಗೆ ಸೈಟ್‌ ಹಂಚುವುದು ಯಾವ ನ್ಯಾಯ?: ಬಿಡಿಎ ವಿರುದ್ದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮತ ಉಳಿಸಿ ಎಂದು ಜನ ಬೇಡಿಕೊಳ್ಳುವಂತೆ ಮಾಡಬೇಡಿ’: ಇದು ನನ್ನ ವೈಯಕ್ತಿಕ ಸಮಸ್ಯೆ ಅಲ್ಲ, ಇಡೀ ದೇಶದ ಸಮಸ್ಯೆ: ಬಹುಭಾಷಾ ನಟ ಪ್ರಕಾಶ್ ರಾಜ್

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವಿಧಾನದ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಕರೆದಿದ್ದ ಮಹತ್ವದ ಪತ್ರಿಕಾಗೋಷ್ಠಿ ಆಗಸ್ಟ್ 14, 2026ರಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ...

‘ನಲ್ಸಾರ್’ ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಅಡ್ಡಬಂದ BCI ನಡೆಗೆ CJI ಗರಂ

ಹೈದರಾಬಾದ್‌ನ 'ನಲ್ಸಾರ್' (NALSAR) ಕಾನೂನು ವಿಶ್ವವಿದ್ಯಾಲಯದ ಪದವೀಧರರ ಸನ್ನದು (ಎನ್‌ರೋಲ್‌ಮೆಂಟ್) ನೋಂದಣಿಯನ್ನು ಅಮಾನತಿನಲ್ಲಿಡುವಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ನೀಡಿದ್ದ ವಿವಾದಾತ್ಮಕ ನಿರ್ದೇಶನದ ವಿರುದ್ಧ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್,...

ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯ: ಯೋಗಿ ಆದಿತ್ಯನಾಥ್ ಸೇರಿ 8 ಅಧಿಕಾರಿಗಳ ನಿರ್ಬಂಧಕ್ಕೆ ಕೆನಡಾ ಮಾನವ ಹಕ್ಕುಗಳ ಸಂಸ್ಥೆ ಆಗ್ರಹ

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ನಡೆಸಲಾಗುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ರಾಜ್ಯ ಬೆಂಬಲಿತ ದೌರ್ಜನ್ಯಗಳನ್ನು ಖಂಡಿಸಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಎಂಟು ಪ್ರಮುಖ...

SIR: ಬೆಂಗಳೂರಿನ ಸರ್ವಜ್ಞನಗರದ ಒಂದೇ ಬೂತ್‌ನಲ್ಲಿ ಶೇ.93.71ರಷ್ಟು ಮತದಾರರ ಹೆಸರು ನಾಪತ್ತೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ರಾಜಧಾನಿ ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದ ಒಂದೇ ಮತಗಟ್ಟೆಯಲ್ಲಿ ಬರೋಬ್ಬರಿ ಶೇ. 93.71ರಷ್ಟು ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆಯಲಾಗಿದೆ ಎಂಬ ಆಘಾತಕಾರಿ ಸಂಗತಿಯೊಂದು...

ASDDO ಪಟ್ಟಿ ಸಾರ್ವಜನಿಕ ಪ್ರಕಟಣೆ ಬಗ್ಗೆ ಚುನಾವಣಾ ಆಯೋಗ ನಿರ್ಲಕ್ಷ್ಯ! ಆರೋಪ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 1.08 ಕೋಟಿ ಮತದಾರರ ಹೆಸರನ್ನು ಎಎಸ್‌ಡಿಡಿಒ (ASDDO) ಪಟ್ಟಿಗೆ ಸೇರಿಸಿ ಆತಂಕ ಸೃಷ್ಟಿಸಿದ್ದ ಚುನಾವಣಾ ಆಯೋಗ, ಈಗ ಆ ಪಟ್ಟಿಯ ಸಾರ್ವಜನಿಕ ಪ್ರಕಟಣೆಯ...

SIR: 62 ವರ್ಷದ ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು ಪಟ್ಟಿ ಮಾಡಿದ ಆಯೋಗದ ಕುತಂತ್ರ ಬಯಲು

ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಕ್ಕೇ ಮಾರಕವಾಗಿ ಪರಿಣಮಿಸುತ್ತಿದೆ. ದೋಷಮುಕ್ತ ಪಟ್ಟಿ ಸಿದ್ಧಪಡಿಸುವ ನೆಪದಲ್ಲಿ ಚುನಾವಣಾ ಆಯೋಗವು ಬರೋಬ್ಬರಿ 1.08 ಕೋಟಿ ಮತದಾರರನ್ನು...

‘ಸಿದ್ದಾರ್ಥ ವಿಹಾರ ಟ್ರಸ್ಟ್’ ನ ದಾಖಲೆ ನೀಡುತ್ತೇನೆ: ಆರ್‌ಎಸ್‌ಎಸ್, ರಾಮಮಂದಿರದ ಲೆಕ್ಕ ನೀಡಲು ಸಿದ್ಧವಿದ್ದೀರಾ?: ಬಿಜೆಪಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು: ‘ಸಿದ್ದಾರ್ಥ ವಿಹಾರ ಟ್ರಸ್ಟ್‌’ ವಿರುದ್ಧ ಭೂ ಅಕ್ರಮದ ಆರೋಪ ಮಾಡಿ ತಮ್ಮ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ...

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...