Homeಚಳವಳಿಕೃಷಿ ಭೂಮಿ ರೈತರ ಹಕ್ಕು, ಉದ್ಯಮಿಗಳದ್ದಲ್ಲ: ಭೂಸ್ವಾಧೀನದ ವಿರುದ್ದ ತಿರುಗಿಬಿದ್ದ ರೈತರು

ಕೃಷಿ ಭೂಮಿ ರೈತರ ಹಕ್ಕು, ಉದ್ಯಮಿಗಳದ್ದಲ್ಲ: ಭೂಸ್ವಾಧೀನದ ವಿರುದ್ದ ತಿರುಗಿಬಿದ್ದ ರೈತರು

ದೇವನಹಳ್ಳಿ ತಾಲ್ಲೂಕಿನಲ್ಲಿ ಇದುವರೆಗೂ KIADB ನಾಲ್ಕನೇ ಬಾರಿ ಭೂಸ್ವಾಧೀನಕ್ಕೆ ಮುಂದಾಗಿದ್ದು ರೈತರ ಆಕ್ರೋಶಕ್ಕೆ ತುತ್ತಾಗಿದೆ.

- Advertisement -
- Advertisement -

ದೇವನಹಳ್ಳಿಯಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆರಂಭವಾದಾಗ ಸುತ್ತಲಿನ ಜನರು ಹಲವು ಕನಸುಗಳನ್ನು ಕಟ್ಟಿಕೊಂಡಿದ್ದರು. ವಿಮಾನ ನಿಲ್ದಾಣವು ಸ್ಥಳೀಯರಿಗೆ ಉದ್ಯೋಗ ಮತ್ತು ವ್ಯಾಪಾರದಲ್ಲಿ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ನೂರಾರು ಜನ ತಮ್ಮ ಜಮೀನು ಬಿಟ್ಟುಕೊಟ್ಟಿದ್ದರು. ಆದರೆ ಇಂದು ಆ ಕನಸುಗಳೆಲ್ಲ ನುಚ್ಚು ನೂರಾಗಿವೆ. ಭೂಮಿ ಬಿಟ್ಟು ಕೊಟ್ಟವರೆಲ್ಲಾ ಇಂದು ಏನಾಗಿದ್ದಾರೆ ಎಂಬ ಗುರುತು ಸಹ ಸಿಗದಷ್ಟು ಮಟ್ಟಿಗೆ ಕಣ್ಮರೆಯಾಗಿದ್ದಾರೆ. ಅವರಿಗೆ ವ್ಯಾಪಾರ ಉದ್ಯೋಗ ಸಿಗುವುದು ಇರಲಿ, ಈಗ ಅವರು ತಾವು ಇರುವ ಜಾಗದಿಂದಲೂ ಎತ್ತಂಗಡಿಯಾಗಬೇಕಾದ ಅಪಾಯ ಎದುರಿಸುತ್ತಿದ್ದಾರೆ.

“1999-2000 ರ ಸಮಯದಲ್ಲಿ ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಸುಮಾರು 4,030 ಎಕರೆ ಹೆಚ್ಚು ಜಾಗವನ್ನು ಸ್ವಾಧೀನಪಡಿಸಿಕೊಳ್ಳಲಾಗಿತ್ತು. ಅದಕ್ಕಾಗಿ ಬಾವಾಪುರ, ಅರಿಶಿನಗುಂಟೆ ಮತ್ತು ಗಂಗೋಪನಹಳ್ಳಿ ಎಂಬ ಮೂರು ಹಳ್ಳಿಗಳ ಜನರನ್ನು ಸಂಪೂರ್ಣವಾಗಿ ಸ್ಥಳಾಂತರ ಮಾಡಲಾಗಿತ್ತು. 200ಕ್ಕೂ ಹೆಚ್ಚು ಕುಟಂಬಗಳಿಗೆ ಸೂಲಿಬೆಲೆ ಪಕ್ಕದ ಬಾಲೆಪುರ ಎಂಬಲ್ಲಿ ನಿವೇಶನಗಳನ್ನು ನೀಡಲಾಗಿತ್ತು. ಅವರು ಕಳೆದುಕೊಂಡ ಜಮೀನಿಗೆ ಸೂಕ್ತ ದಾಖಲೆ ಇದ್ದವರಿಗೆ ಮಾತ್ರ ಸರ್ಕಾರ ಪ್ರತಿ ಎಕರೆಗೆ 5 ಲಕ್ಷ ರೂ ಪರಿಹಾರ ನೀಡಿತ್ತು. ಅವರಿಗೆ ಉದ್ಯೋಗ ನೀಡುವ ಭರವಸೆ ನೀಡಿತ್ತು. ಆದರೆ 2008ರಲ್ಲಿ ವಿಮಾನ ನಿಲ್ದಾಣ ಕಾರ್ಯಾರಂಭ ಮಾಡಿದಾಗ ಅವರಿಗೆ ಯಾವುದೇ ಉದ್ಯೋಗಗಳನ್ನು ನೀಡಲಿಲ್ಲ! ಹಾಗಾಗಿ ಆ ಜನ ಬಾಲೆಪುರದಲ್ಲಿಯೂ ಸಹ ನೆಲೆಗೊಳ್ಳದೆ ಮನಬಂದ ಕಡೆ ಹೋದರು” ಎನ್ನುತ್ತಾರೆ ಸುಸ್ಥಿರ ಕೃಷಿ ಕುರಿತು ಅಧ್ಯಯನ ನಡೆಸುತ್ತಿರುವ ರಮೇಶ್ ಚೀಮಾಚನಹಳ್ಳಿ.

2014-15 ರಲ್ಲಿ ಸಹ ಏರೋಸ್ಪೇಸ್ ಎಸ್‌ಇಜೆಡ್‌ಗಾಗಿ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿ ವ್ಯಾಪ್ತಿಯಲ್ಲಿ 900 ಎಕರೆ ಜಮೀನನ್ನು ವಶಪಡಿಸಿಕೊಳ್ಳಲಾಯ್ತು. ಆ ಜಮೀನು ಹಲವು ಕಾರ್ಖಾನೆಗಳಿಗೆ ನೀಡಿದ್ದರೂ ಇದುವರೆಗೂ ಯಾವುದೇ ಕೈಗಾರಿಕೆಗಳು ಸ್ಥಾಪನೆಯಾಗಿಲ್ಲ. ನಂತರ 2018-19 ರಲ್ಲಿ ಹರಳೂರು ಕೈಗಾರಿಕಾ ಅಭಿವೃದ್ದಿ ಪ್ರದೇಶಕ್ಕಾಗಿ ಮೊದಲ ಹಂತದಲ್ಲಿ 1,300 ಎಕರೆ ಜಮೀನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಅದು ಸಾಲದೆಂಬಂತೆ ಈಗ KIADB ಮತ್ತೆ ಎರಡನೇ ಹಂತದಲ್ಲಿ 1,777 ಎಕರೆ ಜಮೀನು ವಶಪಡಿಸಿಕೊಳ್ಳಲು ಮುಂದಾಗಿದೆ. ಈ ರೀತಿ ಪದೇ ಪದೇ ನಮ್ಮ ಕೃಷಿ ಭೂಮಿ ವಶಪಡಿಸಿಕೊಳ್ಳುತ್ತಿದ್ದರೆ ನಾವೆಲ್ಲಿಗೆ ಹೋಗಬೇಕು? ನಾವು ಹೇಗೆ ಬದುಕಬೇಕು ಎಂದು ಪ್ರಶ್ನಿಸುತ್ತಾರೆ ಬಚ್ಚೇನಹಳ್ಳಿ, ಪಾಳ್ಯ, ಹರಳೂರು, ಪೋಲನಹಳ್ಳಿ, ನಲ್ಲಪನಹಳ್ಳಿ, ಮಲ್ಲೇಪುರ, ನಲ್ಲೂರು, ಹ್ಯಾಡಾಳ ಮುಂತಾದ ಗ್ರಾಮದ ಜನರು.

“ಕೃಷಿ ಭೂಮಿ ರೈತರ ಹಕ್ಕು, ಉದ್ಯಮಿಗಳದ್ದಲ್ಲ” ಎಂಬ ಘೋಷಣೆಯೊಂದಿಗೆ KIADB ಭೂ ಸ್ವಾಧೀನ ವಿರೋಧಿಸಿ ಅನಿರ್ಧಿಷ್ಟವಧಿ ಧರಣಿ ನಡೆಸುತ್ತಿದ್ದಾರೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿ ಸುತ್ತಲಿನ 11 ಗ್ರಾಮದ ರೈತರು.

ಈ ನಮ್ಮ ಫಲವತ್ತಾದ ಭೂಮಿಯಲ್ಲಿ ಆಹಾರ ಧಾನ್ಯ, ತರಕಾರಿ, ದ್ರಾಕ್ಷಿ, ಮಾವು, ರೇಷ್ಮೆ ಸೇರಿದಂತೆ ಹಲವು ಬೆಳೆಗಳನ್ನು ಬೆಳೆಯುತ್ತಿದ್ದು, ನಮ್ಮ ಹಳ್ಳಿಗಳ ಜೀವನೋಪಾಯವೇ ಈ ಕೃಷಿ ಭೂಮಿಯಾಗಿದೆ. ಹತ್ತಿರದಲ್ಲೇ ಇರುವ ಕೃಷಿಭೂಮಿಯಲ್ಲಿ ಕಟ್ಟಿಕೊಂಡಿರುವ ವಾಸದ ಮನೆಗಳು, ಕೋಳಿಫಾರಂ, ಪಾಲಿಹೌಸ್ ಮುಂತಾದವು ಕೂಡ ಸರ್ಕಾರದ ಉದ್ದೇಶಿತ ಸ್ವಾಧೀನ ಪ್ರಕ್ರಿಯೆಯಲ್ಲಿ ಸೇರಲಿವೆ. ಜೊತೆಗೆ, ಭೂರಹಿತರು, ಸಣ್ಣರೈತರು ಸುಮಾರು ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ದಾಖಲೆಯಾಗದ ತುಂಡು ಜಮೀನುಗಳು ಇದರಲ್ಲಿ ಸೇರುತ್ತವೆ. ಸರ್ಕಾರ ಇದನ್ನೆಲ್ಲ ಕಿತ್ತುಕೊಂಡರೆ ನಾವೆಲ್ಲಿಗೆ ಹೋಗಬೇಕು ಎನ್ನುತ್ತಾರೆ ರೈತರಾದ ಮಾರೇಗೌಡ.

ಅಭಿವೃದ್ದಿಗಾಗಿ, ಕೈಗಾರಿಕೆಗಳಿಗಾಗಿ ಭೂಮಿ ಬಿಟ್ಟು ಕೊಡಿ ಎಂದು ಪದೇ ಪದೇ ಭೂ ಸ್ವಾಧೀನ ಪಡಿಸಿಕೊಂಡರೆ ನಮ್ಮ ಗತಿಯೇನು? ಇಲ್ಲಿನ ಅರ್ಧದಷ್ಟು ಜನರ ಬಳಿ ಸರ್ಕಾರ ಕೇಳುವ ಭೂಮಿಗೆ ಸಂಬಂಧಿಸಿದ 21 ದಾಖಲೆಗಳು ಇಲ್ಲ. ಅವರಿಗೂ ಪರಿಹಾರವೂ ಸಿಗುವುದಿಲ್ಲ. ಹಾಗೆಂದು ಅವರು ಬದುಕಬಾರದೇನು? ದೇವರಾಜು ಅರಸು ಕಾಲದಲ್ಲಿ ಉಳುವವನೆ ಭೂ ಒಡೆಯ ಕಾನೂನಿನ ಅಡಿ ಒಂದಷ್ಟು ಜನರಿಗೆ ಭೂಮಿ ದಕ್ಕಿದೆ. ಅದನ್ನು ಈಗ ಸರ್ಕಾರವೇ ವಾಪಸ್ ಕಿತ್ತುಕೊಳ್ಳುವುದು ಸರಿಯೇ ಎಂದು ಪ್ರಶ್ನಿಸುತ್ತಾರೆ ಸ್ಥಳೀಯರು.

ಇಲ್ಲಿನ 11 ಹಳ್ಳಿಗಳ ಜನರು ಯಾವುದೇ ಕಾರಣಕ್ಕೂ ತಮ್ಮ ಕೃಷಿ ಭೂಮಿ ಬಿಟ್ಟುಕೊಡುವುದಿಲ್ಲ ಎಂದು ಪಟ್ಟು ಹಿಡಿದು ಧರಣಿ ಕೂತಿದ್ದಾರೆ. ಏಪ್ರಿಲ್ 4 ರಿಂದ ಆರಂಭವಾದ ಅನಿರ್ಧಿಷ್ಟವಧಿ ಧರಣಿ ಈಗ 8ನೇ ದಿನಕ್ಕೆ ಕಾಲಿಟ್ಟಿದೆ. ರೈತರು ಈಗಾಗಲೇ ಕೈಗಾರಿಕ ಸಚಿವರಾದ ಮುರುಗೇಶ್ ನಿರಾಣಿ, ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಸುಧಾಕರ್, ಸಂಸದ ಬಚ್ಚೆಗೌಡ, ಶಾಸಕರಾದ ನಾರಾಯಣಸ್ವಾಮಿ, ಜಿಲ್ಲಾಧಿಕಾರಿಗಳು, ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರ್‌ರನ್ನು ಭೇಟಿ ಮಾಡಿ ನಮ್ಮ ಭೂಮಿ ಉಳಿಸಿಕೊಡುವಂತೆ ಮನವಿ ಮಾಡಿದ್ದಾರೆ. ಅಲ್ಲದೇ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು, ಮಾಜಿ ಪ್ರಧಾನಿಗಳಾದ ಎಚ್‌.ಡಿ ದೇವೇಗೌಡರನ್ನು ಭೇಟಿಯಾಗಿ ಹೋರಾಟಕ್ಕೆ ಬೆಂಬಲ ಕೇಳಲಾಗಿದೆ. ಕರ್ನಾಟಕ ರಾಜ್ಯ ರೈತ ಸಂಘ, ಶಾಶ್ವತ ನೀರಾವರಿ ಹೋರಾಟ ಸಮಿತಿ ಸೇರಿ ಹಲವು ಸಂಘಟನೆಗಳು ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿವೆ.

ಹರಳೂರು ಕೈಗಾರಿಕಾ ಪ್ರದೇಶಾಭಿವೃದ್ಧಿಯ ಎರಡನೇ ಹಂತದ ಭೂ ಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣ ಕೈ ಬಿಡಬೇಕು. ಬಗರ್ ಹುಕುಂ ಸಾಗುವಳಿ ಭೂಮಿಗಾಗಿ ಫಾರಂ ನಂಬರ್ 50, 53, 57ರಡಿ ಅರ್ಜಿ ಸಲ್ಲಿಸಿದ ರೈತರಿಗೆ ಭೂಮಿ ಮಂಜೂರು ಮಾಡಬೇಕು ಮತ್ತು ಹಿಂದಿನ ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ಭೂಮಿ ಕಳೆದುಕೊಂಡ ರೈತ ಕುಟುಂಬಗಳಿಗೆ ಉದ್ಯೋಗ, ಆರ್ಥಿಕ ಭದ್ರತೆ ಒದಗಿಸಬೇಕು ಎಂಬ ಮೂರು ಹಕ್ಕೊತ್ತಾಯಗಳನ್ನು ಧರಣಿ ಮುಂದುವರೆದಿದೆ. ಸರ್ಕಾರ ಕೂಡಲೇ ಇತ್ತ ಗಮನ ಹರಿಸಿ ರೈತರ ಸಮಸ್ಯೆಗಳನ್ನು ಆಲಿಸಬೇಕಿದೆ.


ಇದನ್ನೂ ಓದಿ: ಇರುವ ಮನೆಗಳ ಒಡೆದು, ಲೇಔಟ್ ಮಾಡಿ ಇನ್ನೊಬ್ಬರಿಗೆ ಸೈಟ್‌ ಹಂಚುವುದು ಯಾವ ನ್ಯಾಯ?: ಬಿಡಿಎ ವಿರುದ್ದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...