Homeಚಳವಳಿಕೃಷಿ ಭೂಮಿ ರೈತರ ಹಕ್ಕು, ಉದ್ಯಮಿಗಳದ್ದಲ್ಲ: ಭೂಸ್ವಾಧೀನದ ವಿರುದ್ದ ತಿರುಗಿಬಿದ್ದ ರೈತರು

ಕೃಷಿ ಭೂಮಿ ರೈತರ ಹಕ್ಕು, ಉದ್ಯಮಿಗಳದ್ದಲ್ಲ: ಭೂಸ್ವಾಧೀನದ ವಿರುದ್ದ ತಿರುಗಿಬಿದ್ದ ರೈತರು

ದೇವನಹಳ್ಳಿ ತಾಲ್ಲೂಕಿನಲ್ಲಿ ಇದುವರೆಗೂ KIADB ನಾಲ್ಕನೇ ಬಾರಿ ಭೂಸ್ವಾಧೀನಕ್ಕೆ ಮುಂದಾಗಿದ್ದು ರೈತರ ಆಕ್ರೋಶಕ್ಕೆ ತುತ್ತಾಗಿದೆ.

- Advertisement -
- Advertisement -

ದೇವನಹಳ್ಳಿಯಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆರಂಭವಾದಾಗ ಸುತ್ತಲಿನ ಜನರು ಹಲವು ಕನಸುಗಳನ್ನು ಕಟ್ಟಿಕೊಂಡಿದ್ದರು. ವಿಮಾನ ನಿಲ್ದಾಣವು ಸ್ಥಳೀಯರಿಗೆ ಉದ್ಯೋಗ ಮತ್ತು ವ್ಯಾಪಾರದಲ್ಲಿ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ನೂರಾರು ಜನ ತಮ್ಮ ಜಮೀನು ಬಿಟ್ಟುಕೊಟ್ಟಿದ್ದರು. ಆದರೆ ಇಂದು ಆ ಕನಸುಗಳೆಲ್ಲ ನುಚ್ಚು ನೂರಾಗಿವೆ. ಭೂಮಿ ಬಿಟ್ಟು ಕೊಟ್ಟವರೆಲ್ಲಾ ಇಂದು ಏನಾಗಿದ್ದಾರೆ ಎಂಬ ಗುರುತು ಸಹ ಸಿಗದಷ್ಟು ಮಟ್ಟಿಗೆ ಕಣ್ಮರೆಯಾಗಿದ್ದಾರೆ. ಅವರಿಗೆ ವ್ಯಾಪಾರ ಉದ್ಯೋಗ ಸಿಗುವುದು ಇರಲಿ, ಈಗ ಅವರು ತಾವು ಇರುವ ಜಾಗದಿಂದಲೂ ಎತ್ತಂಗಡಿಯಾಗಬೇಕಾದ ಅಪಾಯ ಎದುರಿಸುತ್ತಿದ್ದಾರೆ.

“1999-2000 ರ ಸಮಯದಲ್ಲಿ ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಸುಮಾರು 4,030 ಎಕರೆ ಹೆಚ್ಚು ಜಾಗವನ್ನು ಸ್ವಾಧೀನಪಡಿಸಿಕೊಳ್ಳಲಾಗಿತ್ತು. ಅದಕ್ಕಾಗಿ ಬಾವಾಪುರ, ಅರಿಶಿನಗುಂಟೆ ಮತ್ತು ಗಂಗೋಪನಹಳ್ಳಿ ಎಂಬ ಮೂರು ಹಳ್ಳಿಗಳ ಜನರನ್ನು ಸಂಪೂರ್ಣವಾಗಿ ಸ್ಥಳಾಂತರ ಮಾಡಲಾಗಿತ್ತು. 200ಕ್ಕೂ ಹೆಚ್ಚು ಕುಟಂಬಗಳಿಗೆ ಸೂಲಿಬೆಲೆ ಪಕ್ಕದ ಬಾಲೆಪುರ ಎಂಬಲ್ಲಿ ನಿವೇಶನಗಳನ್ನು ನೀಡಲಾಗಿತ್ತು. ಅವರು ಕಳೆದುಕೊಂಡ ಜಮೀನಿಗೆ ಸೂಕ್ತ ದಾಖಲೆ ಇದ್ದವರಿಗೆ ಮಾತ್ರ ಸರ್ಕಾರ ಪ್ರತಿ ಎಕರೆಗೆ 5 ಲಕ್ಷ ರೂ ಪರಿಹಾರ ನೀಡಿತ್ತು. ಅವರಿಗೆ ಉದ್ಯೋಗ ನೀಡುವ ಭರವಸೆ ನೀಡಿತ್ತು. ಆದರೆ 2008ರಲ್ಲಿ ವಿಮಾನ ನಿಲ್ದಾಣ ಕಾರ್ಯಾರಂಭ ಮಾಡಿದಾಗ ಅವರಿಗೆ ಯಾವುದೇ ಉದ್ಯೋಗಗಳನ್ನು ನೀಡಲಿಲ್ಲ! ಹಾಗಾಗಿ ಆ ಜನ ಬಾಲೆಪುರದಲ್ಲಿಯೂ ಸಹ ನೆಲೆಗೊಳ್ಳದೆ ಮನಬಂದ ಕಡೆ ಹೋದರು” ಎನ್ನುತ್ತಾರೆ ಸುಸ್ಥಿರ ಕೃಷಿ ಕುರಿತು ಅಧ್ಯಯನ ನಡೆಸುತ್ತಿರುವ ರಮೇಶ್ ಚೀಮಾಚನಹಳ್ಳಿ.

2014-15 ರಲ್ಲಿ ಸಹ ಏರೋಸ್ಪೇಸ್ ಎಸ್‌ಇಜೆಡ್‌ಗಾಗಿ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿ ವ್ಯಾಪ್ತಿಯಲ್ಲಿ 900 ಎಕರೆ ಜಮೀನನ್ನು ವಶಪಡಿಸಿಕೊಳ್ಳಲಾಯ್ತು. ಆ ಜಮೀನು ಹಲವು ಕಾರ್ಖಾನೆಗಳಿಗೆ ನೀಡಿದ್ದರೂ ಇದುವರೆಗೂ ಯಾವುದೇ ಕೈಗಾರಿಕೆಗಳು ಸ್ಥಾಪನೆಯಾಗಿಲ್ಲ. ನಂತರ 2018-19 ರಲ್ಲಿ ಹರಳೂರು ಕೈಗಾರಿಕಾ ಅಭಿವೃದ್ದಿ ಪ್ರದೇಶಕ್ಕಾಗಿ ಮೊದಲ ಹಂತದಲ್ಲಿ 1,300 ಎಕರೆ ಜಮೀನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಅದು ಸಾಲದೆಂಬಂತೆ ಈಗ KIADB ಮತ್ತೆ ಎರಡನೇ ಹಂತದಲ್ಲಿ 1,777 ಎಕರೆ ಜಮೀನು ವಶಪಡಿಸಿಕೊಳ್ಳಲು ಮುಂದಾಗಿದೆ. ಈ ರೀತಿ ಪದೇ ಪದೇ ನಮ್ಮ ಕೃಷಿ ಭೂಮಿ ವಶಪಡಿಸಿಕೊಳ್ಳುತ್ತಿದ್ದರೆ ನಾವೆಲ್ಲಿಗೆ ಹೋಗಬೇಕು? ನಾವು ಹೇಗೆ ಬದುಕಬೇಕು ಎಂದು ಪ್ರಶ್ನಿಸುತ್ತಾರೆ ಬಚ್ಚೇನಹಳ್ಳಿ, ಪಾಳ್ಯ, ಹರಳೂರು, ಪೋಲನಹಳ್ಳಿ, ನಲ್ಲಪನಹಳ್ಳಿ, ಮಲ್ಲೇಪುರ, ನಲ್ಲೂರು, ಹ್ಯಾಡಾಳ ಮುಂತಾದ ಗ್ರಾಮದ ಜನರು.

“ಕೃಷಿ ಭೂಮಿ ರೈತರ ಹಕ್ಕು, ಉದ್ಯಮಿಗಳದ್ದಲ್ಲ” ಎಂಬ ಘೋಷಣೆಯೊಂದಿಗೆ KIADB ಭೂ ಸ್ವಾಧೀನ ವಿರೋಧಿಸಿ ಅನಿರ್ಧಿಷ್ಟವಧಿ ಧರಣಿ ನಡೆಸುತ್ತಿದ್ದಾರೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿ ಸುತ್ತಲಿನ 11 ಗ್ರಾಮದ ರೈತರು.

ಈ ನಮ್ಮ ಫಲವತ್ತಾದ ಭೂಮಿಯಲ್ಲಿ ಆಹಾರ ಧಾನ್ಯ, ತರಕಾರಿ, ದ್ರಾಕ್ಷಿ, ಮಾವು, ರೇಷ್ಮೆ ಸೇರಿದಂತೆ ಹಲವು ಬೆಳೆಗಳನ್ನು ಬೆಳೆಯುತ್ತಿದ್ದು, ನಮ್ಮ ಹಳ್ಳಿಗಳ ಜೀವನೋಪಾಯವೇ ಈ ಕೃಷಿ ಭೂಮಿಯಾಗಿದೆ. ಹತ್ತಿರದಲ್ಲೇ ಇರುವ ಕೃಷಿಭೂಮಿಯಲ್ಲಿ ಕಟ್ಟಿಕೊಂಡಿರುವ ವಾಸದ ಮನೆಗಳು, ಕೋಳಿಫಾರಂ, ಪಾಲಿಹೌಸ್ ಮುಂತಾದವು ಕೂಡ ಸರ್ಕಾರದ ಉದ್ದೇಶಿತ ಸ್ವಾಧೀನ ಪ್ರಕ್ರಿಯೆಯಲ್ಲಿ ಸೇರಲಿವೆ. ಜೊತೆಗೆ, ಭೂರಹಿತರು, ಸಣ್ಣರೈತರು ಸುಮಾರು ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ದಾಖಲೆಯಾಗದ ತುಂಡು ಜಮೀನುಗಳು ಇದರಲ್ಲಿ ಸೇರುತ್ತವೆ. ಸರ್ಕಾರ ಇದನ್ನೆಲ್ಲ ಕಿತ್ತುಕೊಂಡರೆ ನಾವೆಲ್ಲಿಗೆ ಹೋಗಬೇಕು ಎನ್ನುತ್ತಾರೆ ರೈತರಾದ ಮಾರೇಗೌಡ.

ಅಭಿವೃದ್ದಿಗಾಗಿ, ಕೈಗಾರಿಕೆಗಳಿಗಾಗಿ ಭೂಮಿ ಬಿಟ್ಟು ಕೊಡಿ ಎಂದು ಪದೇ ಪದೇ ಭೂ ಸ್ವಾಧೀನ ಪಡಿಸಿಕೊಂಡರೆ ನಮ್ಮ ಗತಿಯೇನು? ಇಲ್ಲಿನ ಅರ್ಧದಷ್ಟು ಜನರ ಬಳಿ ಸರ್ಕಾರ ಕೇಳುವ ಭೂಮಿಗೆ ಸಂಬಂಧಿಸಿದ 21 ದಾಖಲೆಗಳು ಇಲ್ಲ. ಅವರಿಗೂ ಪರಿಹಾರವೂ ಸಿಗುವುದಿಲ್ಲ. ಹಾಗೆಂದು ಅವರು ಬದುಕಬಾರದೇನು? ದೇವರಾಜು ಅರಸು ಕಾಲದಲ್ಲಿ ಉಳುವವನೆ ಭೂ ಒಡೆಯ ಕಾನೂನಿನ ಅಡಿ ಒಂದಷ್ಟು ಜನರಿಗೆ ಭೂಮಿ ದಕ್ಕಿದೆ. ಅದನ್ನು ಈಗ ಸರ್ಕಾರವೇ ವಾಪಸ್ ಕಿತ್ತುಕೊಳ್ಳುವುದು ಸರಿಯೇ ಎಂದು ಪ್ರಶ್ನಿಸುತ್ತಾರೆ ಸ್ಥಳೀಯರು.

ಇಲ್ಲಿನ 11 ಹಳ್ಳಿಗಳ ಜನರು ಯಾವುದೇ ಕಾರಣಕ್ಕೂ ತಮ್ಮ ಕೃಷಿ ಭೂಮಿ ಬಿಟ್ಟುಕೊಡುವುದಿಲ್ಲ ಎಂದು ಪಟ್ಟು ಹಿಡಿದು ಧರಣಿ ಕೂತಿದ್ದಾರೆ. ಏಪ್ರಿಲ್ 4 ರಿಂದ ಆರಂಭವಾದ ಅನಿರ್ಧಿಷ್ಟವಧಿ ಧರಣಿ ಈಗ 8ನೇ ದಿನಕ್ಕೆ ಕಾಲಿಟ್ಟಿದೆ. ರೈತರು ಈಗಾಗಲೇ ಕೈಗಾರಿಕ ಸಚಿವರಾದ ಮುರುಗೇಶ್ ನಿರಾಣಿ, ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಸುಧಾಕರ್, ಸಂಸದ ಬಚ್ಚೆಗೌಡ, ಶಾಸಕರಾದ ನಾರಾಯಣಸ್ವಾಮಿ, ಜಿಲ್ಲಾಧಿಕಾರಿಗಳು, ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರ್‌ರನ್ನು ಭೇಟಿ ಮಾಡಿ ನಮ್ಮ ಭೂಮಿ ಉಳಿಸಿಕೊಡುವಂತೆ ಮನವಿ ಮಾಡಿದ್ದಾರೆ. ಅಲ್ಲದೇ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು, ಮಾಜಿ ಪ್ರಧಾನಿಗಳಾದ ಎಚ್‌.ಡಿ ದೇವೇಗೌಡರನ್ನು ಭೇಟಿಯಾಗಿ ಹೋರಾಟಕ್ಕೆ ಬೆಂಬಲ ಕೇಳಲಾಗಿದೆ. ಕರ್ನಾಟಕ ರಾಜ್ಯ ರೈತ ಸಂಘ, ಶಾಶ್ವತ ನೀರಾವರಿ ಹೋರಾಟ ಸಮಿತಿ ಸೇರಿ ಹಲವು ಸಂಘಟನೆಗಳು ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿವೆ.

ಹರಳೂರು ಕೈಗಾರಿಕಾ ಪ್ರದೇಶಾಭಿವೃದ್ಧಿಯ ಎರಡನೇ ಹಂತದ ಭೂ ಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣ ಕೈ ಬಿಡಬೇಕು. ಬಗರ್ ಹುಕುಂ ಸಾಗುವಳಿ ಭೂಮಿಗಾಗಿ ಫಾರಂ ನಂಬರ್ 50, 53, 57ರಡಿ ಅರ್ಜಿ ಸಲ್ಲಿಸಿದ ರೈತರಿಗೆ ಭೂಮಿ ಮಂಜೂರು ಮಾಡಬೇಕು ಮತ್ತು ಹಿಂದಿನ ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ಭೂಮಿ ಕಳೆದುಕೊಂಡ ರೈತ ಕುಟುಂಬಗಳಿಗೆ ಉದ್ಯೋಗ, ಆರ್ಥಿಕ ಭದ್ರತೆ ಒದಗಿಸಬೇಕು ಎಂಬ ಮೂರು ಹಕ್ಕೊತ್ತಾಯಗಳನ್ನು ಧರಣಿ ಮುಂದುವರೆದಿದೆ. ಸರ್ಕಾರ ಕೂಡಲೇ ಇತ್ತ ಗಮನ ಹರಿಸಿ ರೈತರ ಸಮಸ್ಯೆಗಳನ್ನು ಆಲಿಸಬೇಕಿದೆ.


ಇದನ್ನೂ ಓದಿ: ಇರುವ ಮನೆಗಳ ಒಡೆದು, ಲೇಔಟ್ ಮಾಡಿ ಇನ್ನೊಬ್ಬರಿಗೆ ಸೈಟ್‌ ಹಂಚುವುದು ಯಾವ ನ್ಯಾಯ?: ಬಿಡಿಎ ವಿರುದ್ದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...