Homeಚಳವಳಿಕೃಷಿ ಭೂಮಿ ರೈತರ ಹಕ್ಕು, ಉದ್ಯಮಿಗಳದ್ದಲ್ಲ: ಭೂಸ್ವಾಧೀನದ ವಿರುದ್ದ ತಿರುಗಿಬಿದ್ದ ರೈತರು

ಕೃಷಿ ಭೂಮಿ ರೈತರ ಹಕ್ಕು, ಉದ್ಯಮಿಗಳದ್ದಲ್ಲ: ಭೂಸ್ವಾಧೀನದ ವಿರುದ್ದ ತಿರುಗಿಬಿದ್ದ ರೈತರು

ದೇವನಹಳ್ಳಿ ತಾಲ್ಲೂಕಿನಲ್ಲಿ ಇದುವರೆಗೂ KIADB ನಾಲ್ಕನೇ ಬಾರಿ ಭೂಸ್ವಾಧೀನಕ್ಕೆ ಮುಂದಾಗಿದ್ದು ರೈತರ ಆಕ್ರೋಶಕ್ಕೆ ತುತ್ತಾಗಿದೆ.

- Advertisement -
- Advertisement -

ದೇವನಹಳ್ಳಿಯಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆರಂಭವಾದಾಗ ಸುತ್ತಲಿನ ಜನರು ಹಲವು ಕನಸುಗಳನ್ನು ಕಟ್ಟಿಕೊಂಡಿದ್ದರು. ವಿಮಾನ ನಿಲ್ದಾಣವು ಸ್ಥಳೀಯರಿಗೆ ಉದ್ಯೋಗ ಮತ್ತು ವ್ಯಾಪಾರದಲ್ಲಿ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ನೂರಾರು ಜನ ತಮ್ಮ ಜಮೀನು ಬಿಟ್ಟುಕೊಟ್ಟಿದ್ದರು. ಆದರೆ ಇಂದು ಆ ಕನಸುಗಳೆಲ್ಲ ನುಚ್ಚು ನೂರಾಗಿವೆ. ಭೂಮಿ ಬಿಟ್ಟು ಕೊಟ್ಟವರೆಲ್ಲಾ ಇಂದು ಏನಾಗಿದ್ದಾರೆ ಎಂಬ ಗುರುತು ಸಹ ಸಿಗದಷ್ಟು ಮಟ್ಟಿಗೆ ಕಣ್ಮರೆಯಾಗಿದ್ದಾರೆ. ಅವರಿಗೆ ವ್ಯಾಪಾರ ಉದ್ಯೋಗ ಸಿಗುವುದು ಇರಲಿ, ಈಗ ಅವರು ತಾವು ಇರುವ ಜಾಗದಿಂದಲೂ ಎತ್ತಂಗಡಿಯಾಗಬೇಕಾದ ಅಪಾಯ ಎದುರಿಸುತ್ತಿದ್ದಾರೆ.

“1999-2000 ರ ಸಮಯದಲ್ಲಿ ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಸುಮಾರು 4,030 ಎಕರೆ ಹೆಚ್ಚು ಜಾಗವನ್ನು ಸ್ವಾಧೀನಪಡಿಸಿಕೊಳ್ಳಲಾಗಿತ್ತು. ಅದಕ್ಕಾಗಿ ಬಾವಾಪುರ, ಅರಿಶಿನಗುಂಟೆ ಮತ್ತು ಗಂಗೋಪನಹಳ್ಳಿ ಎಂಬ ಮೂರು ಹಳ್ಳಿಗಳ ಜನರನ್ನು ಸಂಪೂರ್ಣವಾಗಿ ಸ್ಥಳಾಂತರ ಮಾಡಲಾಗಿತ್ತು. 200ಕ್ಕೂ ಹೆಚ್ಚು ಕುಟಂಬಗಳಿಗೆ ಸೂಲಿಬೆಲೆ ಪಕ್ಕದ ಬಾಲೆಪುರ ಎಂಬಲ್ಲಿ ನಿವೇಶನಗಳನ್ನು ನೀಡಲಾಗಿತ್ತು. ಅವರು ಕಳೆದುಕೊಂಡ ಜಮೀನಿಗೆ ಸೂಕ್ತ ದಾಖಲೆ ಇದ್ದವರಿಗೆ ಮಾತ್ರ ಸರ್ಕಾರ ಪ್ರತಿ ಎಕರೆಗೆ 5 ಲಕ್ಷ ರೂ ಪರಿಹಾರ ನೀಡಿತ್ತು. ಅವರಿಗೆ ಉದ್ಯೋಗ ನೀಡುವ ಭರವಸೆ ನೀಡಿತ್ತು. ಆದರೆ 2008ರಲ್ಲಿ ವಿಮಾನ ನಿಲ್ದಾಣ ಕಾರ್ಯಾರಂಭ ಮಾಡಿದಾಗ ಅವರಿಗೆ ಯಾವುದೇ ಉದ್ಯೋಗಗಳನ್ನು ನೀಡಲಿಲ್ಲ! ಹಾಗಾಗಿ ಆ ಜನ ಬಾಲೆಪುರದಲ್ಲಿಯೂ ಸಹ ನೆಲೆಗೊಳ್ಳದೆ ಮನಬಂದ ಕಡೆ ಹೋದರು” ಎನ್ನುತ್ತಾರೆ ಸುಸ್ಥಿರ ಕೃಷಿ ಕುರಿತು ಅಧ್ಯಯನ ನಡೆಸುತ್ತಿರುವ ರಮೇಶ್ ಚೀಮಾಚನಹಳ್ಳಿ.

2014-15 ರಲ್ಲಿ ಸಹ ಏರೋಸ್ಪೇಸ್ ಎಸ್‌ಇಜೆಡ್‌ಗಾಗಿ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿ ವ್ಯಾಪ್ತಿಯಲ್ಲಿ 900 ಎಕರೆ ಜಮೀನನ್ನು ವಶಪಡಿಸಿಕೊಳ್ಳಲಾಯ್ತು. ಆ ಜಮೀನು ಹಲವು ಕಾರ್ಖಾನೆಗಳಿಗೆ ನೀಡಿದ್ದರೂ ಇದುವರೆಗೂ ಯಾವುದೇ ಕೈಗಾರಿಕೆಗಳು ಸ್ಥಾಪನೆಯಾಗಿಲ್ಲ. ನಂತರ 2018-19 ರಲ್ಲಿ ಹರಳೂರು ಕೈಗಾರಿಕಾ ಅಭಿವೃದ್ದಿ ಪ್ರದೇಶಕ್ಕಾಗಿ ಮೊದಲ ಹಂತದಲ್ಲಿ 1,300 ಎಕರೆ ಜಮೀನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಅದು ಸಾಲದೆಂಬಂತೆ ಈಗ KIADB ಮತ್ತೆ ಎರಡನೇ ಹಂತದಲ್ಲಿ 1,777 ಎಕರೆ ಜಮೀನು ವಶಪಡಿಸಿಕೊಳ್ಳಲು ಮುಂದಾಗಿದೆ. ಈ ರೀತಿ ಪದೇ ಪದೇ ನಮ್ಮ ಕೃಷಿ ಭೂಮಿ ವಶಪಡಿಸಿಕೊಳ್ಳುತ್ತಿದ್ದರೆ ನಾವೆಲ್ಲಿಗೆ ಹೋಗಬೇಕು? ನಾವು ಹೇಗೆ ಬದುಕಬೇಕು ಎಂದು ಪ್ರಶ್ನಿಸುತ್ತಾರೆ ಬಚ್ಚೇನಹಳ್ಳಿ, ಪಾಳ್ಯ, ಹರಳೂರು, ಪೋಲನಹಳ್ಳಿ, ನಲ್ಲಪನಹಳ್ಳಿ, ಮಲ್ಲೇಪುರ, ನಲ್ಲೂರು, ಹ್ಯಾಡಾಳ ಮುಂತಾದ ಗ್ರಾಮದ ಜನರು.

“ಕೃಷಿ ಭೂಮಿ ರೈತರ ಹಕ್ಕು, ಉದ್ಯಮಿಗಳದ್ದಲ್ಲ” ಎಂಬ ಘೋಷಣೆಯೊಂದಿಗೆ KIADB ಭೂ ಸ್ವಾಧೀನ ವಿರೋಧಿಸಿ ಅನಿರ್ಧಿಷ್ಟವಧಿ ಧರಣಿ ನಡೆಸುತ್ತಿದ್ದಾರೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿ ಸುತ್ತಲಿನ 11 ಗ್ರಾಮದ ರೈತರು.

ಈ ನಮ್ಮ ಫಲವತ್ತಾದ ಭೂಮಿಯಲ್ಲಿ ಆಹಾರ ಧಾನ್ಯ, ತರಕಾರಿ, ದ್ರಾಕ್ಷಿ, ಮಾವು, ರೇಷ್ಮೆ ಸೇರಿದಂತೆ ಹಲವು ಬೆಳೆಗಳನ್ನು ಬೆಳೆಯುತ್ತಿದ್ದು, ನಮ್ಮ ಹಳ್ಳಿಗಳ ಜೀವನೋಪಾಯವೇ ಈ ಕೃಷಿ ಭೂಮಿಯಾಗಿದೆ. ಹತ್ತಿರದಲ್ಲೇ ಇರುವ ಕೃಷಿಭೂಮಿಯಲ್ಲಿ ಕಟ್ಟಿಕೊಂಡಿರುವ ವಾಸದ ಮನೆಗಳು, ಕೋಳಿಫಾರಂ, ಪಾಲಿಹೌಸ್ ಮುಂತಾದವು ಕೂಡ ಸರ್ಕಾರದ ಉದ್ದೇಶಿತ ಸ್ವಾಧೀನ ಪ್ರಕ್ರಿಯೆಯಲ್ಲಿ ಸೇರಲಿವೆ. ಜೊತೆಗೆ, ಭೂರಹಿತರು, ಸಣ್ಣರೈತರು ಸುಮಾರು ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ದಾಖಲೆಯಾಗದ ತುಂಡು ಜಮೀನುಗಳು ಇದರಲ್ಲಿ ಸೇರುತ್ತವೆ. ಸರ್ಕಾರ ಇದನ್ನೆಲ್ಲ ಕಿತ್ತುಕೊಂಡರೆ ನಾವೆಲ್ಲಿಗೆ ಹೋಗಬೇಕು ಎನ್ನುತ್ತಾರೆ ರೈತರಾದ ಮಾರೇಗೌಡ.

ಅಭಿವೃದ್ದಿಗಾಗಿ, ಕೈಗಾರಿಕೆಗಳಿಗಾಗಿ ಭೂಮಿ ಬಿಟ್ಟು ಕೊಡಿ ಎಂದು ಪದೇ ಪದೇ ಭೂ ಸ್ವಾಧೀನ ಪಡಿಸಿಕೊಂಡರೆ ನಮ್ಮ ಗತಿಯೇನು? ಇಲ್ಲಿನ ಅರ್ಧದಷ್ಟು ಜನರ ಬಳಿ ಸರ್ಕಾರ ಕೇಳುವ ಭೂಮಿಗೆ ಸಂಬಂಧಿಸಿದ 21 ದಾಖಲೆಗಳು ಇಲ್ಲ. ಅವರಿಗೂ ಪರಿಹಾರವೂ ಸಿಗುವುದಿಲ್ಲ. ಹಾಗೆಂದು ಅವರು ಬದುಕಬಾರದೇನು? ದೇವರಾಜು ಅರಸು ಕಾಲದಲ್ಲಿ ಉಳುವವನೆ ಭೂ ಒಡೆಯ ಕಾನೂನಿನ ಅಡಿ ಒಂದಷ್ಟು ಜನರಿಗೆ ಭೂಮಿ ದಕ್ಕಿದೆ. ಅದನ್ನು ಈಗ ಸರ್ಕಾರವೇ ವಾಪಸ್ ಕಿತ್ತುಕೊಳ್ಳುವುದು ಸರಿಯೇ ಎಂದು ಪ್ರಶ್ನಿಸುತ್ತಾರೆ ಸ್ಥಳೀಯರು.

ಇಲ್ಲಿನ 11 ಹಳ್ಳಿಗಳ ಜನರು ಯಾವುದೇ ಕಾರಣಕ್ಕೂ ತಮ್ಮ ಕೃಷಿ ಭೂಮಿ ಬಿಟ್ಟುಕೊಡುವುದಿಲ್ಲ ಎಂದು ಪಟ್ಟು ಹಿಡಿದು ಧರಣಿ ಕೂತಿದ್ದಾರೆ. ಏಪ್ರಿಲ್ 4 ರಿಂದ ಆರಂಭವಾದ ಅನಿರ್ಧಿಷ್ಟವಧಿ ಧರಣಿ ಈಗ 8ನೇ ದಿನಕ್ಕೆ ಕಾಲಿಟ್ಟಿದೆ. ರೈತರು ಈಗಾಗಲೇ ಕೈಗಾರಿಕ ಸಚಿವರಾದ ಮುರುಗೇಶ್ ನಿರಾಣಿ, ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಸುಧಾಕರ್, ಸಂಸದ ಬಚ್ಚೆಗೌಡ, ಶಾಸಕರಾದ ನಾರಾಯಣಸ್ವಾಮಿ, ಜಿಲ್ಲಾಧಿಕಾರಿಗಳು, ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರ್‌ರನ್ನು ಭೇಟಿ ಮಾಡಿ ನಮ್ಮ ಭೂಮಿ ಉಳಿಸಿಕೊಡುವಂತೆ ಮನವಿ ಮಾಡಿದ್ದಾರೆ. ಅಲ್ಲದೇ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು, ಮಾಜಿ ಪ್ರಧಾನಿಗಳಾದ ಎಚ್‌.ಡಿ ದೇವೇಗೌಡರನ್ನು ಭೇಟಿಯಾಗಿ ಹೋರಾಟಕ್ಕೆ ಬೆಂಬಲ ಕೇಳಲಾಗಿದೆ. ಕರ್ನಾಟಕ ರಾಜ್ಯ ರೈತ ಸಂಘ, ಶಾಶ್ವತ ನೀರಾವರಿ ಹೋರಾಟ ಸಮಿತಿ ಸೇರಿ ಹಲವು ಸಂಘಟನೆಗಳು ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿವೆ.

ಹರಳೂರು ಕೈಗಾರಿಕಾ ಪ್ರದೇಶಾಭಿವೃದ್ಧಿಯ ಎರಡನೇ ಹಂತದ ಭೂ ಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣ ಕೈ ಬಿಡಬೇಕು. ಬಗರ್ ಹುಕುಂ ಸಾಗುವಳಿ ಭೂಮಿಗಾಗಿ ಫಾರಂ ನಂಬರ್ 50, 53, 57ರಡಿ ಅರ್ಜಿ ಸಲ್ಲಿಸಿದ ರೈತರಿಗೆ ಭೂಮಿ ಮಂಜೂರು ಮಾಡಬೇಕು ಮತ್ತು ಹಿಂದಿನ ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ಭೂಮಿ ಕಳೆದುಕೊಂಡ ರೈತ ಕುಟುಂಬಗಳಿಗೆ ಉದ್ಯೋಗ, ಆರ್ಥಿಕ ಭದ್ರತೆ ಒದಗಿಸಬೇಕು ಎಂಬ ಮೂರು ಹಕ್ಕೊತ್ತಾಯಗಳನ್ನು ಧರಣಿ ಮುಂದುವರೆದಿದೆ. ಸರ್ಕಾರ ಕೂಡಲೇ ಇತ್ತ ಗಮನ ಹರಿಸಿ ರೈತರ ಸಮಸ್ಯೆಗಳನ್ನು ಆಲಿಸಬೇಕಿದೆ.


ಇದನ್ನೂ ಓದಿ: ಇರುವ ಮನೆಗಳ ಒಡೆದು, ಲೇಔಟ್ ಮಾಡಿ ಇನ್ನೊಬ್ಬರಿಗೆ ಸೈಟ್‌ ಹಂಚುವುದು ಯಾವ ನ್ಯಾಯ?: ಬಿಡಿಎ ವಿರುದ್ದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...