Homeಕರ್ನಾಟಕಉತ್ತಮ ಬೆಳೆಯಾದರೂ ಖರೀದಿ ಕೇಂದ್ರ ತೆರೆಯದ ಸರ್ಕಾರದ ವಿರುದ್ಧ ರೈತರ ಆಕ್ರೋಶ

ಉತ್ತಮ ಬೆಳೆಯಾದರೂ ಖರೀದಿ ಕೇಂದ್ರ ತೆರೆಯದ ಸರ್ಕಾರದ ವಿರುದ್ಧ ರೈತರ ಆಕ್ರೋಶ

ರಾಜ್ಯದಲ್ಲಿ ಬೆಳೆಯುವ ಪ್ರಮುಖ ಬೆಳೆಗಳಿಗೆ ಬೆಂಬಲ ಬೆಲೆ, ಉಗ್ರಾಣ, ಸಾರಿಗೆ, ಅವುಗಳ ಮೇಲಿನ ಬಡ್ಡಿ ರಹಿತ ಸಾಲ ಸೇರಿದಂತೆ ಖರೀದಿ ಕೇಂದ್ರಗಳಲ್ಲಿ ಖರೀದಿ ಮಾಡಲು 5-10 ಸಾವಿರ ಕೋಟಿ ಹಣಕಾಸು ಬೇಡುತ್ತದೆ. ಈ ಹಣಕಾಸು ರಾಜ್ಯ ಸರ್ಕಾರಕ್ಕೆ ಯಾವ ರೀತಿಯಿಂದಲೂ ಹೊರೆಯಲ್ಲ

- Advertisement -
- Advertisement -

ಉದ್ಯೋಗ ಅರಸುತ್ತಾ ಹಳ್ಳಿಯಿಂದ ನಗರದ ಕಡೆಗೆ ವಲಸೆ ಬಂದಿದ್ದ ಕೋಟ್ಯಾಂತರ ಜನರು ಯಾವುದೇ ಸಿದ್ದತೆಗಳಿಲ್ಲದೆ ಸರ್ಕಾರಗಳು ಹೇರಿದ್ದ ಲಾಕ್‌ಡೌನ್‌ನಿಂದಾಗಿ ನಗರದಲ್ಲಿಯೂ ಉದ್ಯೋಗಗಳಿಲ್ಲದೆ ಮತ್ತೇ ತಮ್ಮ ಹಳ್ಳಿಗಳಿಗೆ ಮರಳಿದ್ದಾರೆ. ಇದೆ ಸಮಯದಲ್ಲಿ ಉತ್ತಮ ಮುಂಗಾರು ಮಳೆಯಾದ್ದರಿಂದ ಉತ್ತಮ ಬೆಳೆಯಾಗಿದ್ದು, ಇದೀಗ ಮುಂಗಾರು ಬೆಳೆಗಳು ಮಾರುಕಟ್ಟೆಗೆ ಬರಲು ಪ್ರಾರಂಭವಾಗಿದೆ.

ರಾಜ್ಯದ ಕೆಲವೆಡೆ ಪ್ರವಾಹ ಬಂದು ಬೆಳೆಗಳು ಕೊಚ್ಚಿಕೊಂಡು ಹೋಗಿದೆಯದರೂ, ಉಳಿದ ಕಡೆ ರೈತರಿಗೆ ಉತ್ತಮ ಇಳುವರಿ ಬಂದಿದೆ. ಉತ್ತಮ ಬೆಳೆಯಾದರೆ ಸಾಮಾನ್ಯವಾಗಿ ಬೆಲೆಗಳು ಸಹಜವಾಗಿಯೇ ಇಳಿಯುತ್ತದೆ. ಆದರೆ ತಾನು ಕಷ್ಟ ಪಟ್ಟ ಬೆಳೆದ ಬೆಳೆಗಳನ್ನು ನಷ್ಟಕ್ಕೆ ಮಾರಾಟ ಮಾಡಲಾಗದೆ, ಬೆಳೆಗಳನ್ನು ತನ್ನಲ್ಲಿ ಇಟ್ಟುಕೊಳ್ಳಲೂ ಆಗದೆ ರೈತರು ಕಷ್ಟಕ್ಕ ಸಿಲುಕಿದ್ದಾರೆ. ಈ ಸಮಯದಲ್ಲಿ ಸರ್ಕಾರಗಳು ಖರೀದಿ ಕೇಂದ್ರಗಳನ್ನು ತೆರೆದು ರೈತರ ಬೆಳೆಗಳನ್ನು ಖರೀದಿ ಮಾಡಬೇಕು ಎಂದು ಹೋರಾಟಗಳು ನಡೆಯುತ್ತಿವೆ.

ಇದನ್ನೂ ಓದಿ: ಕೇಂದ್ರ ಸರ್ಕಾರದೊಂದಿಗೆ ರೈತ ಮುಖಂಡರ ಮಾತುಕತೆ ವಿಫಲ: ನ.26,27ಕ್ಕೆ ದೆಹಲಿ ಚಲೋ

ರೈತ ವಿರೋಧಿ
ಫೋಟೋ ಕೃಪೆ: ಸಿದ್ದೇಶ್ ಎಮ್‌.ಇ

ಅಲ್ಲದೆ ಇದೀಗ ಕೇಂದ್ರ ಹಾಗೂ ರಾಜ್ಯ ಸಕಾರಗಳು ಹಲವಾರು ರೈತ ವಿರೋಧಿ ಕಾಯ್ದೆಗಳನ್ನು ತಂದು ಬೆಂಬಲ ಬೆಲೆಗಳನ್ನು ಇಲ್ಲವಾಗಿಸುತ್ತಿದೆ. ರಾಜ್ಯ ಸೇರಿದಂತೆ ಕೇಂದ್ರ ಸರ್ಕಾರಗಳು ಖರೀದಿ ಕೇಂದ್ರದ ಬಗ್ಗೆ ಯಾವುದೆ ಮಾತೆತ್ತುತ್ತಿಲ್ಲ ಎಂದು ರೈತರು ದೂರುತ್ತಿದ್ದಾರೆ.

ಖರೀದಿ ಕೇಂದ್ರಗಳು ಎಂದರೇನು?

ಮಾರುಕಟ್ಟೆಯಲ್ಲಿ ಬೆಳೆಗಳು ಅಧಿಕವಾಗಿ ಬಂದಾಗ ಸಹಜವಾಗಿ ಬೆಲೆ ಇಳಿದು ಹೋಗುತ್ತದೆ. ಈ ಸಮಯದಲ್ಲಿ ರೈತರಿಗೆ ತಾವು ಬೆಳೆಗಳಿಗೆ ಸರಿಯಾದ ಬೆಲೆ ಸಿಗದೆ ಸಂಕಷ್ಟಕ್ಕೆ ಒಳಗಾಗುತ್ತಾರೆ. ಈ ಸಮಯದಲ್ಲಿ ಸರ್ಕಾರವೆ ಮುಂದೆ ನಿಂತು ಎಪಿಎಂಸಿ ಸೇರಿದಂತೆ ಸರ್ಕಾರಿ ನಿಯಂತ್ರಿತ ಮಾರುಕಟ್ಟೆಗಳಲ್ಲಿ ಬೆಳೆಗಳಿಗೆ ನಿಗದಿತ ಬೆಲೆಯನ್ನು ನೀಡಿ ಖರೀದಿ ಮಾಡುತ್ತದೆ. ಈ ಖರೀದಿ ಕೇಂದ್ರಗಳಲ್ಲಿ ಈ ಬೆಲೆಯೂ ತನ್ನದೆಂದು ದೃಡೀಕರಿಸಲು ರೈತನೂ ತನ್ನ ಬೆಳೆಗಳ ಜೊತೆಗೆ ತನ್ನ ಭೂಮಿಯ ಪತ್ರಗಳನ್ನು ತರಬೇಕಾಗುತ್ತದೆ.

PC : The United Nations

ಭೂಮಿ ಪತ್ರಗಳನ್ನು ತರಬೇಕು ಎನ್ನುವ ನಿಯಮ ಕೆಲವೊಮ್ಮ ರೈತರಿಗೆ ಮಾರಕವಾಗಿಯೂ ಪರಿಣಮಿಸುತ್ತದೆ. ಯಾಕೆಂದರೆ ತನ್ನ ಜಮೀನಲ್ಲದೆ ಇತರರಿಂದ ಗೇಣಿಗೆ ಪಡೆದು ಬೆಳೆದವನು ಅದನ್ನು ಖರೀದಿ ಕೇಂದ್ರದಲ್ಲಿ ಮಾರಲಾಗದೆ ಖಾಸಗಿಯಾಗಿ ಕಡಿಮೆ ಬೆಲೆಗೆ ಮಾರಾಟ ಮಾಡಿ ನಷ್ಟ ಅನುಭವಿಸುತ್ತಾನೆ. ಅಷ್ಟೆ ಅಲ್ಲದೆ ಭೂಮಿ ಪತ್ರವನ್ನು ವ್ಯಾಪಾರಿಗಳು ತಮಗೆ ಬೇಕಾದಂತೆ ಪಡೆದು, ರೈತರಿಂದ ಕಡಿಮೆ ಬೆಳೆಗಳನ್ನು ಖರೀದಿ ಮಾಡಿ ಅದನ್ನು ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡುವು ಸಾಧ್ಯತೆ ಕೂಡಾ ಇರುತ್ತೆ.

ಪ್ರಕಾಶ್ ಕಮ್ಮರಡಿ

“ಪ್ರತಿ ಬೆಳೆಗೂ ವೈಜ್ಞಾನಿಕ ದರ ನಿಗದಿಪಡಿಸಿ ಅದಕ್ಕಿಂತ ಕಡಿಮೆ ಬೆಲೆಗೆ ಖಾಸಗಿ ಹಾಗೂ ಸರ್ಕಾರಿ ಮಾರುಕಟ್ಟೆಯಲ್ಲಿ ಖರೀದಿ ಮಾಡುವಂತಿಲ್ಲ, ಅದಾಗಿಯೂ ಕಡಿಮೆ ಬೆಲೆ ನಿಗದಿ ಪಡಿಸಿದರೆ ಶಿಕ್ಷೆಗೆ ಒಳಪಡಿಸುವ ಕಾನೂನು ಬಂದರೆ ಈ ಸಮಸ್ಯೆಯ ಪರಿಹಾರವಾಗುತ್ತದೆ” ಎಂದು ಕರ್ನಾಟಕದ ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷರಾಗಿರುವ ಪ್ರಕಾಶ್ ಕಮ್ಮರಡಿ ಹೇಳುತ್ತಾರೆ. ಇಂತಹ ಕಾನೂನುಗಳು ರಾಜಸ್ಥಾನ ಹಾಗೂ ಕೇರಳ ಸರ್ಕಾರಗಳು ಮಾಡಿದೆ ಎಂದು ಅವರು ಉಲ್ಲೇಖಿಸುತ್ತಾರೆ.

ಇದನ್ನೂ ಓದಿ: ರೈತಬಂಧು ಪ್ರವಾದಿ ಮುಹಮ್ಮದ್ (ಸ) : ಮಿಸ್ರಿಯಾ ಐ ಪಜೀರ್

ಖರೀದಿ ಕೇಂದ್ರಗಳು ಈ ಸಮಯದಲ್ಲಿ ಯಾಕಿರಬೇಕು?

ಬೆಳೆಗಳು ಕೊಯ್ಲಿಗೆ ಬಂದು ಎಲ್ಲಾ ಕಡೆಯಿಂದಲೂ ಮಾರುಕಟ್ಟೆಗೆ ಬರುತ್ತಿರುವಾಗ ಸಹಜವಾಗಿಯೆ ಬೆಲೆಗಳು ಇಳಿಕೆಯಾಗುತ್ತದೆ. ಇದರ ಲಾಭವನ್ನು ಖಾಸಗಿ ವ್ಯಾಪಾರಿಗಳು ಪಡೆದು ಕೊಳ್ಳುತ್ತಾರೆ. ಕೆಲವೊಮ್ಮ ದರಗಳು ಎಷ್ಟು ಇಳಿದು ಹೋಗತ್ತದೆಯೆಂದರೆ ರೈತನೂ ತನ್ನ ಬೆಳೆಗಳನ್ನು ಇಳಿಸಿದ ಹಮಾಲಿಗೆ ಕೂಡಾ ಕೊಡಲು ದುಡ್ಡು ಇಲ್ಲದಷ್ಟು. ಈ ರೀತಿಯ ಸಮಸ್ಯೆಗಳು ಬರದಂತೆ ತಡೆಯಲು ಸರ್ಕಾರವೆ ಮುಂದೆ ನಿಂತು ರೈತರ ಬೆಳೆಗಳಿಗೆ ಬೆಂಬಲ ಬೆಲೆಯನ್ನು ನೀಡಿ ಖರೀದಿಸುತ್ತದೆ.

ಸುರೇಶ್ ಕಂಜರ್ಪಣೆ

ಪ್ರತಿ ಕೊಯ್ಲಿನ ಸಮಯದಲ್ಲಿ ಸರ್ಕಾರ ಬೆಲೆಗಳಿಗೆ ಸರಿಯಾದ ದರ ನಿಗದಿಪಡಿಸಿ ಅವುಗಳನ್ನು ಖರೀದಿ ಮಾಡಿದರೆ, ರೈತರನ್ನು ವ್ಯಾಪಾರಿಗಳಿಂದ ಕಾಪಾಡಿದಂತಾಗುತ್ತದೆ. “ಬಿತ್ತನೆ ಎಷ್ಟಾಗಿದೆ, ಅಂದಾಜು ಎಷ್ಟು ಬೆಳೆಗಳು, ಎಷ್ಟು ಪ್ರಮಾಣದಲ್ಲಿ, ಯಾವಾಗ ಮಾರುಕಟ್ಟೆಗೆ ಬರುತ್ತದೆ ಎಂದು ಸರ್ಕಾರಕ್ಕೆ ತಿಳಿದಿರುತ್ತದೆ. ಆವಾಗಲೇ ಖರೀದಿ ಕೇಂದ್ರಗಳಿಗೆ ತಯಾರಿ ಮಾಡುವ ಸಮಯಾವಕಾಶಗಳು ಅದಕ್ಕೆ ಇರುತ್ತದೆ. ಆದರೆ ಸರ್ಕಾರಕ್ಕೆ ಆ ಇಚ್ಛಾಶಕ್ತಿ ಇಲ್ಲದೆ ಇರುವುದು ದುರಂತವಾಗಿದೆ” ಎಂದು ಕೃಷಿ ತಜ್ಞ ಸುರೇಶ್ ಕಂಜರ್ಪಣೆ ಹೇಳುತ್ತಾರೆ.

ಸರ್ಕಾರ ಮಾಡುತ್ತಿರುವುದೇನು? ಮಾಡಬೇಕಿರುವುದೇನು?

ಇದುವರೆಗೂ ಸರ್ಕಾರ ಕೇವಲ 26 ಪ್ರಮುಖ ಬೆಲೆಗಳಿಗಷ್ಟೆ ಬೆಂಬಲ ಬೆಲೆ ನೀಡುತ್ತಿತ್ತು. ಇದೀಗ ಹೊಸತಾಗಿ ತರುತ್ತಿರುವ ಕಾಯ್ದೆಯಲ್ಲಿ ಅವುಗಳ ಸಂಖ್ಯೆಯನ್ನು ಇನ್ನೂ ಇಳಿಸುತ್ತಿದೆ. ಅಲ್ಲದೆ ಎಪಿಎಂಸಿ ಸೇರಿದಂತೆ ಕೆಲವು ಮಾರುಕಟ್ಟೆಗಳಲ್ಲಿ ಮಾತ್ರ ಖರೀದಿ ಕೇಂದ್ರಗಳಿವೆ. ಅವುಗಳು ಹೆಚ್ಚಿನವು ಜಿಲ್ಲಾ ಕೇಂದ್ರಗಳಲ್ಲಿ ಇದರಿಂದಾಗಿ ಸಣ್ಣಪುಟ್ಟ ರೈತರಿಗೆ ತಾವು ಬೆಳೆದ ಬೆಳೆಗಳನ್ನು ಅಲ್ಲಿವರೆಗೆ ಸಾಗಾಟ ಮಾಡುವುದು ದುಬಾರಿ ಎಣಿಸುತ್ತದೆ. ಅಷ್ಟೇ ಅಲ್ಲದೆ ಸರ್ಕಾರ ಕೂಡಾ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲು ಮೀನಾಮೇಷ ಎಣಿಸುತ್ತದೆ. ಇವುಗಳಿಂದಾಗಿ ರೈತನು ಮತ್ತಷ್ಟು ಕಷ್ಟಕ್ಕೆ ಒಳಗಾಗುತ್ತಾನೆ.

ಇದನ್ನೂ ಓದಿ: ರಾಜಸ್ಥಾನ: ವಿಮಾ ಕಂಪನಿ, ಬ್ಯಾಂಕ್ ವಿರುದ್ಧ ಸತತ 3 ವರ್ಷ ಹೋರಾಡಿ ವಿಮಾ ಹಕ್ಕು ಪಡೆದ ರೈತರು!

ಕೋಡಿಹಳ್ಳಿ ಚಂದ್ರಶೇಖರ್‌‌

“ಕಟಾವಿಗೆ ಬಂದಂತಹ ಎಲ್ಲಾ ಬೆಳೆಗಳು ’ಕನಿಷ್ಠ ಮಾರಾಟ ದರ’ದ ಒಳಗಡೆ ಖರೀದಿಯಾಗಬೇಕು. ಈ ಕನಿಷ್ಠ ಮಾರಾಟ ದರದ ನೀಡದಿದ್ದರೆ ಎರಡು ವರ್ಷ ಜೈಲು ಶಿಕ್ಷೆಯ ಕಾನೂನು ಆಗಬೇಕು. ಅಷ್ಟೇ ಅಲ್ಲದೆ ಜಿಲ್ಲಾ ಕೇಂದ್ರದಲ್ಲಿ ಇರುವ ಖರೀದಿ ಕೇಂದ್ರಗಳನ್ನು ಹೋಬಳಿ ಮಟ್ಟದಲ್ಲಿ ತೆರೆಯಬೇಕು” ಎಂದು ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್‌ ಹೇಳುತ್ತಾರೆ.

ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷ ಪ್ರಕಾಶ್ ಕಮ್ಮರಡಿ ಹೇಳುವಂತೆ, “ರಾಜ್ಯ ಸರ್ಕಾರ ಖರೀದಿ ಕೇಂದ್ರ ಸರ್ಕಾರ ತೆರೆಯಲು ಈಗಲೇ ಸಿದ್ದತೆ ನಡೆಸಬೇಕು. ರೈತನು ತನ್ನ ಬೆಳೆಯನ್ನು ಸಾಗಿಸುವ ಸಾರಿಗೆ ವೆಚ್ಚವನ್ನು ಸರ್ಕಾರವೆ ಹೊರಬೇಕು. ಆಗ ಖರೀದಿ ಕೇಂದ್ರಗಳಿಗೆ ತನ್ನ ಬೆಳೆಗಳನ್ನು ಸಾಗಿಸಲು ಸಾಧ್ಯವಾಗುತ್ತದೆ. ರೈತ ತಂದ ಬೆಳೆಗಳನ್ನು ಕೂಡಿಡುವ ವ್ಯವಸ್ಥೆಯನ್ನು ಕೂಡಾ ಸರ್ಕಾರ ಮಾಡಬೇಕು. ಈ ಕೂಡಿಟ್ಟ ಬೆಳೆಗಳ ಆಧಾರದಲ್ಲಿ ಅಡಮಾನ ಸಾಲವನ್ನು ಶೂನ್ಯ ಬಡ್ಡ ದರದಲ್ಲಿ ಸರ್ಕಾರ ನೀಡಬೇಕು” ಎಂದು ಹೇಳುತ್ತಾರೆ.

PC: Tribune India

ರಾಜ್ಯದಲ್ಲಿ ಬೆಳೆಯುವ ಪ್ರಮುಖ ಬೆಳೆಗಳಿಗೆ ಬೆಂಬಲ ಬೆಲೆ, ಉಗ್ರಾಣ, ಸಾರಿಗೆ, ಅವುಗಳ ಮೇಲಿನ ಬಡ್ಡಿ ರಹಿತ ಸಾಲ ಸೇರಿದಂತೆ ಖರೀದಿ ಕೇಂದ್ರಗಳಲ್ಲಿ ಖರೀದಿ ಮಾಡಲು 5-10 ಸಾವಿರ ಕೋಟಿ ಹಣಕಾಸು ಬೇಡುತ್ತದೆ. “ಈ ಹಣಕಾಸು ಒದಗಿಸುವುದು ರಾಜ್ಯ ಸರ್ಕಾರಕ್ಕೆ ಯಾವ ರೀತಿಯಿಂದಲೂ ಹೊರೆಯಾಗುವುದಿಲ್ಲ, ಆದರೆ ಸರ್ಕಾರ ಇಚ್ಚಾಶಕ್ತಿ ತೋರಿಸಬೇಕಷ್ಟೆ” ಎಂದು ಅವರು ಪ್ರಕಾಶ್ ಕಮ್ಮರಡಿ ಹೇಳುತ್ತಾರೆ.


ಇದನ್ನೂ ಓದಿ: ಡೇರಿ ಫಾರಂ, ಗೋಶಾಲೆಗಳಿಗೆ ಅನುಮತಿ ಕಡ್ಡಾಯ: ಮಾಲಿನ್ಯ ನಿಯಂತ್ರಣದ ಹೆಸರಿನಲ್ಲಿ ರೈತರ ಬದುಕಿಗೆ ಕೊಳ್ಳಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...