Homeಕರ್ನಾಟಕಉತ್ತಮ ಬೆಳೆಯಾದರೂ ಖರೀದಿ ಕೇಂದ್ರ ತೆರೆಯದ ಸರ್ಕಾರದ ವಿರುದ್ಧ ರೈತರ ಆಕ್ರೋಶ

ಉತ್ತಮ ಬೆಳೆಯಾದರೂ ಖರೀದಿ ಕೇಂದ್ರ ತೆರೆಯದ ಸರ್ಕಾರದ ವಿರುದ್ಧ ರೈತರ ಆಕ್ರೋಶ

ರಾಜ್ಯದಲ್ಲಿ ಬೆಳೆಯುವ ಪ್ರಮುಖ ಬೆಳೆಗಳಿಗೆ ಬೆಂಬಲ ಬೆಲೆ, ಉಗ್ರಾಣ, ಸಾರಿಗೆ, ಅವುಗಳ ಮೇಲಿನ ಬಡ್ಡಿ ರಹಿತ ಸಾಲ ಸೇರಿದಂತೆ ಖರೀದಿ ಕೇಂದ್ರಗಳಲ್ಲಿ ಖರೀದಿ ಮಾಡಲು 5-10 ಸಾವಿರ ಕೋಟಿ ಹಣಕಾಸು ಬೇಡುತ್ತದೆ. ಈ ಹಣಕಾಸು ರಾಜ್ಯ ಸರ್ಕಾರಕ್ಕೆ ಯಾವ ರೀತಿಯಿಂದಲೂ ಹೊರೆಯಲ್ಲ

- Advertisement -
- Advertisement -

ಉದ್ಯೋಗ ಅರಸುತ್ತಾ ಹಳ್ಳಿಯಿಂದ ನಗರದ ಕಡೆಗೆ ವಲಸೆ ಬಂದಿದ್ದ ಕೋಟ್ಯಾಂತರ ಜನರು ಯಾವುದೇ ಸಿದ್ದತೆಗಳಿಲ್ಲದೆ ಸರ್ಕಾರಗಳು ಹೇರಿದ್ದ ಲಾಕ್‌ಡೌನ್‌ನಿಂದಾಗಿ ನಗರದಲ್ಲಿಯೂ ಉದ್ಯೋಗಗಳಿಲ್ಲದೆ ಮತ್ತೇ ತಮ್ಮ ಹಳ್ಳಿಗಳಿಗೆ ಮರಳಿದ್ದಾರೆ. ಇದೆ ಸಮಯದಲ್ಲಿ ಉತ್ತಮ ಮುಂಗಾರು ಮಳೆಯಾದ್ದರಿಂದ ಉತ್ತಮ ಬೆಳೆಯಾಗಿದ್ದು, ಇದೀಗ ಮುಂಗಾರು ಬೆಳೆಗಳು ಮಾರುಕಟ್ಟೆಗೆ ಬರಲು ಪ್ರಾರಂಭವಾಗಿದೆ.

ರಾಜ್ಯದ ಕೆಲವೆಡೆ ಪ್ರವಾಹ ಬಂದು ಬೆಳೆಗಳು ಕೊಚ್ಚಿಕೊಂಡು ಹೋಗಿದೆಯದರೂ, ಉಳಿದ ಕಡೆ ರೈತರಿಗೆ ಉತ್ತಮ ಇಳುವರಿ ಬಂದಿದೆ. ಉತ್ತಮ ಬೆಳೆಯಾದರೆ ಸಾಮಾನ್ಯವಾಗಿ ಬೆಲೆಗಳು ಸಹಜವಾಗಿಯೇ ಇಳಿಯುತ್ತದೆ. ಆದರೆ ತಾನು ಕಷ್ಟ ಪಟ್ಟ ಬೆಳೆದ ಬೆಳೆಗಳನ್ನು ನಷ್ಟಕ್ಕೆ ಮಾರಾಟ ಮಾಡಲಾಗದೆ, ಬೆಳೆಗಳನ್ನು ತನ್ನಲ್ಲಿ ಇಟ್ಟುಕೊಳ್ಳಲೂ ಆಗದೆ ರೈತರು ಕಷ್ಟಕ್ಕ ಸಿಲುಕಿದ್ದಾರೆ. ಈ ಸಮಯದಲ್ಲಿ ಸರ್ಕಾರಗಳು ಖರೀದಿ ಕೇಂದ್ರಗಳನ್ನು ತೆರೆದು ರೈತರ ಬೆಳೆಗಳನ್ನು ಖರೀದಿ ಮಾಡಬೇಕು ಎಂದು ಹೋರಾಟಗಳು ನಡೆಯುತ್ತಿವೆ.

ಇದನ್ನೂ ಓದಿ: ಕೇಂದ್ರ ಸರ್ಕಾರದೊಂದಿಗೆ ರೈತ ಮುಖಂಡರ ಮಾತುಕತೆ ವಿಫಲ: ನ.26,27ಕ್ಕೆ ದೆಹಲಿ ಚಲೋ

ರೈತ ವಿರೋಧಿ
ಫೋಟೋ ಕೃಪೆ: ಸಿದ್ದೇಶ್ ಎಮ್‌.ಇ

ಅಲ್ಲದೆ ಇದೀಗ ಕೇಂದ್ರ ಹಾಗೂ ರಾಜ್ಯ ಸಕಾರಗಳು ಹಲವಾರು ರೈತ ವಿರೋಧಿ ಕಾಯ್ದೆಗಳನ್ನು ತಂದು ಬೆಂಬಲ ಬೆಲೆಗಳನ್ನು ಇಲ್ಲವಾಗಿಸುತ್ತಿದೆ. ರಾಜ್ಯ ಸೇರಿದಂತೆ ಕೇಂದ್ರ ಸರ್ಕಾರಗಳು ಖರೀದಿ ಕೇಂದ್ರದ ಬಗ್ಗೆ ಯಾವುದೆ ಮಾತೆತ್ತುತ್ತಿಲ್ಲ ಎಂದು ರೈತರು ದೂರುತ್ತಿದ್ದಾರೆ.

ಖರೀದಿ ಕೇಂದ್ರಗಳು ಎಂದರೇನು?

ಮಾರುಕಟ್ಟೆಯಲ್ಲಿ ಬೆಳೆಗಳು ಅಧಿಕವಾಗಿ ಬಂದಾಗ ಸಹಜವಾಗಿ ಬೆಲೆ ಇಳಿದು ಹೋಗುತ್ತದೆ. ಈ ಸಮಯದಲ್ಲಿ ರೈತರಿಗೆ ತಾವು ಬೆಳೆಗಳಿಗೆ ಸರಿಯಾದ ಬೆಲೆ ಸಿಗದೆ ಸಂಕಷ್ಟಕ್ಕೆ ಒಳಗಾಗುತ್ತಾರೆ. ಈ ಸಮಯದಲ್ಲಿ ಸರ್ಕಾರವೆ ಮುಂದೆ ನಿಂತು ಎಪಿಎಂಸಿ ಸೇರಿದಂತೆ ಸರ್ಕಾರಿ ನಿಯಂತ್ರಿತ ಮಾರುಕಟ್ಟೆಗಳಲ್ಲಿ ಬೆಳೆಗಳಿಗೆ ನಿಗದಿತ ಬೆಲೆಯನ್ನು ನೀಡಿ ಖರೀದಿ ಮಾಡುತ್ತದೆ. ಈ ಖರೀದಿ ಕೇಂದ್ರಗಳಲ್ಲಿ ಈ ಬೆಲೆಯೂ ತನ್ನದೆಂದು ದೃಡೀಕರಿಸಲು ರೈತನೂ ತನ್ನ ಬೆಳೆಗಳ ಜೊತೆಗೆ ತನ್ನ ಭೂಮಿಯ ಪತ್ರಗಳನ್ನು ತರಬೇಕಾಗುತ್ತದೆ.

PC : The United Nations

ಭೂಮಿ ಪತ್ರಗಳನ್ನು ತರಬೇಕು ಎನ್ನುವ ನಿಯಮ ಕೆಲವೊಮ್ಮ ರೈತರಿಗೆ ಮಾರಕವಾಗಿಯೂ ಪರಿಣಮಿಸುತ್ತದೆ. ಯಾಕೆಂದರೆ ತನ್ನ ಜಮೀನಲ್ಲದೆ ಇತರರಿಂದ ಗೇಣಿಗೆ ಪಡೆದು ಬೆಳೆದವನು ಅದನ್ನು ಖರೀದಿ ಕೇಂದ್ರದಲ್ಲಿ ಮಾರಲಾಗದೆ ಖಾಸಗಿಯಾಗಿ ಕಡಿಮೆ ಬೆಲೆಗೆ ಮಾರಾಟ ಮಾಡಿ ನಷ್ಟ ಅನುಭವಿಸುತ್ತಾನೆ. ಅಷ್ಟೆ ಅಲ್ಲದೆ ಭೂಮಿ ಪತ್ರವನ್ನು ವ್ಯಾಪಾರಿಗಳು ತಮಗೆ ಬೇಕಾದಂತೆ ಪಡೆದು, ರೈತರಿಂದ ಕಡಿಮೆ ಬೆಳೆಗಳನ್ನು ಖರೀದಿ ಮಾಡಿ ಅದನ್ನು ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡುವು ಸಾಧ್ಯತೆ ಕೂಡಾ ಇರುತ್ತೆ.

ಪ್ರಕಾಶ್ ಕಮ್ಮರಡಿ

“ಪ್ರತಿ ಬೆಳೆಗೂ ವೈಜ್ಞಾನಿಕ ದರ ನಿಗದಿಪಡಿಸಿ ಅದಕ್ಕಿಂತ ಕಡಿಮೆ ಬೆಲೆಗೆ ಖಾಸಗಿ ಹಾಗೂ ಸರ್ಕಾರಿ ಮಾರುಕಟ್ಟೆಯಲ್ಲಿ ಖರೀದಿ ಮಾಡುವಂತಿಲ್ಲ, ಅದಾಗಿಯೂ ಕಡಿಮೆ ಬೆಲೆ ನಿಗದಿ ಪಡಿಸಿದರೆ ಶಿಕ್ಷೆಗೆ ಒಳಪಡಿಸುವ ಕಾನೂನು ಬಂದರೆ ಈ ಸಮಸ್ಯೆಯ ಪರಿಹಾರವಾಗುತ್ತದೆ” ಎಂದು ಕರ್ನಾಟಕದ ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷರಾಗಿರುವ ಪ್ರಕಾಶ್ ಕಮ್ಮರಡಿ ಹೇಳುತ್ತಾರೆ. ಇಂತಹ ಕಾನೂನುಗಳು ರಾಜಸ್ಥಾನ ಹಾಗೂ ಕೇರಳ ಸರ್ಕಾರಗಳು ಮಾಡಿದೆ ಎಂದು ಅವರು ಉಲ್ಲೇಖಿಸುತ್ತಾರೆ.

ಇದನ್ನೂ ಓದಿ: ರೈತಬಂಧು ಪ್ರವಾದಿ ಮುಹಮ್ಮದ್ (ಸ) : ಮಿಸ್ರಿಯಾ ಐ ಪಜೀರ್

ಖರೀದಿ ಕೇಂದ್ರಗಳು ಈ ಸಮಯದಲ್ಲಿ ಯಾಕಿರಬೇಕು?

ಬೆಳೆಗಳು ಕೊಯ್ಲಿಗೆ ಬಂದು ಎಲ್ಲಾ ಕಡೆಯಿಂದಲೂ ಮಾರುಕಟ್ಟೆಗೆ ಬರುತ್ತಿರುವಾಗ ಸಹಜವಾಗಿಯೆ ಬೆಲೆಗಳು ಇಳಿಕೆಯಾಗುತ್ತದೆ. ಇದರ ಲಾಭವನ್ನು ಖಾಸಗಿ ವ್ಯಾಪಾರಿಗಳು ಪಡೆದು ಕೊಳ್ಳುತ್ತಾರೆ. ಕೆಲವೊಮ್ಮ ದರಗಳು ಎಷ್ಟು ಇಳಿದು ಹೋಗತ್ತದೆಯೆಂದರೆ ರೈತನೂ ತನ್ನ ಬೆಳೆಗಳನ್ನು ಇಳಿಸಿದ ಹಮಾಲಿಗೆ ಕೂಡಾ ಕೊಡಲು ದುಡ್ಡು ಇಲ್ಲದಷ್ಟು. ಈ ರೀತಿಯ ಸಮಸ್ಯೆಗಳು ಬರದಂತೆ ತಡೆಯಲು ಸರ್ಕಾರವೆ ಮುಂದೆ ನಿಂತು ರೈತರ ಬೆಳೆಗಳಿಗೆ ಬೆಂಬಲ ಬೆಲೆಯನ್ನು ನೀಡಿ ಖರೀದಿಸುತ್ತದೆ.

ಸುರೇಶ್ ಕಂಜರ್ಪಣೆ

ಪ್ರತಿ ಕೊಯ್ಲಿನ ಸಮಯದಲ್ಲಿ ಸರ್ಕಾರ ಬೆಲೆಗಳಿಗೆ ಸರಿಯಾದ ದರ ನಿಗದಿಪಡಿಸಿ ಅವುಗಳನ್ನು ಖರೀದಿ ಮಾಡಿದರೆ, ರೈತರನ್ನು ವ್ಯಾಪಾರಿಗಳಿಂದ ಕಾಪಾಡಿದಂತಾಗುತ್ತದೆ. “ಬಿತ್ತನೆ ಎಷ್ಟಾಗಿದೆ, ಅಂದಾಜು ಎಷ್ಟು ಬೆಳೆಗಳು, ಎಷ್ಟು ಪ್ರಮಾಣದಲ್ಲಿ, ಯಾವಾಗ ಮಾರುಕಟ್ಟೆಗೆ ಬರುತ್ತದೆ ಎಂದು ಸರ್ಕಾರಕ್ಕೆ ತಿಳಿದಿರುತ್ತದೆ. ಆವಾಗಲೇ ಖರೀದಿ ಕೇಂದ್ರಗಳಿಗೆ ತಯಾರಿ ಮಾಡುವ ಸಮಯಾವಕಾಶಗಳು ಅದಕ್ಕೆ ಇರುತ್ತದೆ. ಆದರೆ ಸರ್ಕಾರಕ್ಕೆ ಆ ಇಚ್ಛಾಶಕ್ತಿ ಇಲ್ಲದೆ ಇರುವುದು ದುರಂತವಾಗಿದೆ” ಎಂದು ಕೃಷಿ ತಜ್ಞ ಸುರೇಶ್ ಕಂಜರ್ಪಣೆ ಹೇಳುತ್ತಾರೆ.

ಸರ್ಕಾರ ಮಾಡುತ್ತಿರುವುದೇನು? ಮಾಡಬೇಕಿರುವುದೇನು?

ಇದುವರೆಗೂ ಸರ್ಕಾರ ಕೇವಲ 26 ಪ್ರಮುಖ ಬೆಲೆಗಳಿಗಷ್ಟೆ ಬೆಂಬಲ ಬೆಲೆ ನೀಡುತ್ತಿತ್ತು. ಇದೀಗ ಹೊಸತಾಗಿ ತರುತ್ತಿರುವ ಕಾಯ್ದೆಯಲ್ಲಿ ಅವುಗಳ ಸಂಖ್ಯೆಯನ್ನು ಇನ್ನೂ ಇಳಿಸುತ್ತಿದೆ. ಅಲ್ಲದೆ ಎಪಿಎಂಸಿ ಸೇರಿದಂತೆ ಕೆಲವು ಮಾರುಕಟ್ಟೆಗಳಲ್ಲಿ ಮಾತ್ರ ಖರೀದಿ ಕೇಂದ್ರಗಳಿವೆ. ಅವುಗಳು ಹೆಚ್ಚಿನವು ಜಿಲ್ಲಾ ಕೇಂದ್ರಗಳಲ್ಲಿ ಇದರಿಂದಾಗಿ ಸಣ್ಣಪುಟ್ಟ ರೈತರಿಗೆ ತಾವು ಬೆಳೆದ ಬೆಳೆಗಳನ್ನು ಅಲ್ಲಿವರೆಗೆ ಸಾಗಾಟ ಮಾಡುವುದು ದುಬಾರಿ ಎಣಿಸುತ್ತದೆ. ಅಷ್ಟೇ ಅಲ್ಲದೆ ಸರ್ಕಾರ ಕೂಡಾ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲು ಮೀನಾಮೇಷ ಎಣಿಸುತ್ತದೆ. ಇವುಗಳಿಂದಾಗಿ ರೈತನು ಮತ್ತಷ್ಟು ಕಷ್ಟಕ್ಕೆ ಒಳಗಾಗುತ್ತಾನೆ.

ಇದನ್ನೂ ಓದಿ: ರಾಜಸ್ಥಾನ: ವಿಮಾ ಕಂಪನಿ, ಬ್ಯಾಂಕ್ ವಿರುದ್ಧ ಸತತ 3 ವರ್ಷ ಹೋರಾಡಿ ವಿಮಾ ಹಕ್ಕು ಪಡೆದ ರೈತರು!

ಕೋಡಿಹಳ್ಳಿ ಚಂದ್ರಶೇಖರ್‌‌

“ಕಟಾವಿಗೆ ಬಂದಂತಹ ಎಲ್ಲಾ ಬೆಳೆಗಳು ’ಕನಿಷ್ಠ ಮಾರಾಟ ದರ’ದ ಒಳಗಡೆ ಖರೀದಿಯಾಗಬೇಕು. ಈ ಕನಿಷ್ಠ ಮಾರಾಟ ದರದ ನೀಡದಿದ್ದರೆ ಎರಡು ವರ್ಷ ಜೈಲು ಶಿಕ್ಷೆಯ ಕಾನೂನು ಆಗಬೇಕು. ಅಷ್ಟೇ ಅಲ್ಲದೆ ಜಿಲ್ಲಾ ಕೇಂದ್ರದಲ್ಲಿ ಇರುವ ಖರೀದಿ ಕೇಂದ್ರಗಳನ್ನು ಹೋಬಳಿ ಮಟ್ಟದಲ್ಲಿ ತೆರೆಯಬೇಕು” ಎಂದು ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್‌ ಹೇಳುತ್ತಾರೆ.

ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷ ಪ್ರಕಾಶ್ ಕಮ್ಮರಡಿ ಹೇಳುವಂತೆ, “ರಾಜ್ಯ ಸರ್ಕಾರ ಖರೀದಿ ಕೇಂದ್ರ ಸರ್ಕಾರ ತೆರೆಯಲು ಈಗಲೇ ಸಿದ್ದತೆ ನಡೆಸಬೇಕು. ರೈತನು ತನ್ನ ಬೆಳೆಯನ್ನು ಸಾಗಿಸುವ ಸಾರಿಗೆ ವೆಚ್ಚವನ್ನು ಸರ್ಕಾರವೆ ಹೊರಬೇಕು. ಆಗ ಖರೀದಿ ಕೇಂದ್ರಗಳಿಗೆ ತನ್ನ ಬೆಳೆಗಳನ್ನು ಸಾಗಿಸಲು ಸಾಧ್ಯವಾಗುತ್ತದೆ. ರೈತ ತಂದ ಬೆಳೆಗಳನ್ನು ಕೂಡಿಡುವ ವ್ಯವಸ್ಥೆಯನ್ನು ಕೂಡಾ ಸರ್ಕಾರ ಮಾಡಬೇಕು. ಈ ಕೂಡಿಟ್ಟ ಬೆಳೆಗಳ ಆಧಾರದಲ್ಲಿ ಅಡಮಾನ ಸಾಲವನ್ನು ಶೂನ್ಯ ಬಡ್ಡ ದರದಲ್ಲಿ ಸರ್ಕಾರ ನೀಡಬೇಕು” ಎಂದು ಹೇಳುತ್ತಾರೆ.

PC: Tribune India

ರಾಜ್ಯದಲ್ಲಿ ಬೆಳೆಯುವ ಪ್ರಮುಖ ಬೆಳೆಗಳಿಗೆ ಬೆಂಬಲ ಬೆಲೆ, ಉಗ್ರಾಣ, ಸಾರಿಗೆ, ಅವುಗಳ ಮೇಲಿನ ಬಡ್ಡಿ ರಹಿತ ಸಾಲ ಸೇರಿದಂತೆ ಖರೀದಿ ಕೇಂದ್ರಗಳಲ್ಲಿ ಖರೀದಿ ಮಾಡಲು 5-10 ಸಾವಿರ ಕೋಟಿ ಹಣಕಾಸು ಬೇಡುತ್ತದೆ. “ಈ ಹಣಕಾಸು ಒದಗಿಸುವುದು ರಾಜ್ಯ ಸರ್ಕಾರಕ್ಕೆ ಯಾವ ರೀತಿಯಿಂದಲೂ ಹೊರೆಯಾಗುವುದಿಲ್ಲ, ಆದರೆ ಸರ್ಕಾರ ಇಚ್ಚಾಶಕ್ತಿ ತೋರಿಸಬೇಕಷ್ಟೆ” ಎಂದು ಅವರು ಪ್ರಕಾಶ್ ಕಮ್ಮರಡಿ ಹೇಳುತ್ತಾರೆ.


ಇದನ್ನೂ ಓದಿ: ಡೇರಿ ಫಾರಂ, ಗೋಶಾಲೆಗಳಿಗೆ ಅನುಮತಿ ಕಡ್ಡಾಯ: ಮಾಲಿನ್ಯ ನಿಯಂತ್ರಣದ ಹೆಸರಿನಲ್ಲಿ ರೈತರ ಬದುಕಿಗೆ ಕೊಳ್ಳಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....