Homeಕರ್ನಾಟಕಉತ್ತಮ ಬೆಳೆಯಾದರೂ ಖರೀದಿ ಕೇಂದ್ರ ತೆರೆಯದ ಸರ್ಕಾರದ ವಿರುದ್ಧ ರೈತರ ಆಕ್ರೋಶ

ಉತ್ತಮ ಬೆಳೆಯಾದರೂ ಖರೀದಿ ಕೇಂದ್ರ ತೆರೆಯದ ಸರ್ಕಾರದ ವಿರುದ್ಧ ರೈತರ ಆಕ್ರೋಶ

ರಾಜ್ಯದಲ್ಲಿ ಬೆಳೆಯುವ ಪ್ರಮುಖ ಬೆಳೆಗಳಿಗೆ ಬೆಂಬಲ ಬೆಲೆ, ಉಗ್ರಾಣ, ಸಾರಿಗೆ, ಅವುಗಳ ಮೇಲಿನ ಬಡ್ಡಿ ರಹಿತ ಸಾಲ ಸೇರಿದಂತೆ ಖರೀದಿ ಕೇಂದ್ರಗಳಲ್ಲಿ ಖರೀದಿ ಮಾಡಲು 5-10 ಸಾವಿರ ಕೋಟಿ ಹಣಕಾಸು ಬೇಡುತ್ತದೆ. ಈ ಹಣಕಾಸು ರಾಜ್ಯ ಸರ್ಕಾರಕ್ಕೆ ಯಾವ ರೀತಿಯಿಂದಲೂ ಹೊರೆಯಲ್ಲ

- Advertisement -
- Advertisement -

ಉದ್ಯೋಗ ಅರಸುತ್ತಾ ಹಳ್ಳಿಯಿಂದ ನಗರದ ಕಡೆಗೆ ವಲಸೆ ಬಂದಿದ್ದ ಕೋಟ್ಯಾಂತರ ಜನರು ಯಾವುದೇ ಸಿದ್ದತೆಗಳಿಲ್ಲದೆ ಸರ್ಕಾರಗಳು ಹೇರಿದ್ದ ಲಾಕ್‌ಡೌನ್‌ನಿಂದಾಗಿ ನಗರದಲ್ಲಿಯೂ ಉದ್ಯೋಗಗಳಿಲ್ಲದೆ ಮತ್ತೇ ತಮ್ಮ ಹಳ್ಳಿಗಳಿಗೆ ಮರಳಿದ್ದಾರೆ. ಇದೆ ಸಮಯದಲ್ಲಿ ಉತ್ತಮ ಮುಂಗಾರು ಮಳೆಯಾದ್ದರಿಂದ ಉತ್ತಮ ಬೆಳೆಯಾಗಿದ್ದು, ಇದೀಗ ಮುಂಗಾರು ಬೆಳೆಗಳು ಮಾರುಕಟ್ಟೆಗೆ ಬರಲು ಪ್ರಾರಂಭವಾಗಿದೆ.

ರಾಜ್ಯದ ಕೆಲವೆಡೆ ಪ್ರವಾಹ ಬಂದು ಬೆಳೆಗಳು ಕೊಚ್ಚಿಕೊಂಡು ಹೋಗಿದೆಯದರೂ, ಉಳಿದ ಕಡೆ ರೈತರಿಗೆ ಉತ್ತಮ ಇಳುವರಿ ಬಂದಿದೆ. ಉತ್ತಮ ಬೆಳೆಯಾದರೆ ಸಾಮಾನ್ಯವಾಗಿ ಬೆಲೆಗಳು ಸಹಜವಾಗಿಯೇ ಇಳಿಯುತ್ತದೆ. ಆದರೆ ತಾನು ಕಷ್ಟ ಪಟ್ಟ ಬೆಳೆದ ಬೆಳೆಗಳನ್ನು ನಷ್ಟಕ್ಕೆ ಮಾರಾಟ ಮಾಡಲಾಗದೆ, ಬೆಳೆಗಳನ್ನು ತನ್ನಲ್ಲಿ ಇಟ್ಟುಕೊಳ್ಳಲೂ ಆಗದೆ ರೈತರು ಕಷ್ಟಕ್ಕ ಸಿಲುಕಿದ್ದಾರೆ. ಈ ಸಮಯದಲ್ಲಿ ಸರ್ಕಾರಗಳು ಖರೀದಿ ಕೇಂದ್ರಗಳನ್ನು ತೆರೆದು ರೈತರ ಬೆಳೆಗಳನ್ನು ಖರೀದಿ ಮಾಡಬೇಕು ಎಂದು ಹೋರಾಟಗಳು ನಡೆಯುತ್ತಿವೆ.

ಇದನ್ನೂ ಓದಿ: ಕೇಂದ್ರ ಸರ್ಕಾರದೊಂದಿಗೆ ರೈತ ಮುಖಂಡರ ಮಾತುಕತೆ ವಿಫಲ: ನ.26,27ಕ್ಕೆ ದೆಹಲಿ ಚಲೋ

ರೈತ ವಿರೋಧಿ
ಫೋಟೋ ಕೃಪೆ: ಸಿದ್ದೇಶ್ ಎಮ್‌.ಇ

ಅಲ್ಲದೆ ಇದೀಗ ಕೇಂದ್ರ ಹಾಗೂ ರಾಜ್ಯ ಸಕಾರಗಳು ಹಲವಾರು ರೈತ ವಿರೋಧಿ ಕಾಯ್ದೆಗಳನ್ನು ತಂದು ಬೆಂಬಲ ಬೆಲೆಗಳನ್ನು ಇಲ್ಲವಾಗಿಸುತ್ತಿದೆ. ರಾಜ್ಯ ಸೇರಿದಂತೆ ಕೇಂದ್ರ ಸರ್ಕಾರಗಳು ಖರೀದಿ ಕೇಂದ್ರದ ಬಗ್ಗೆ ಯಾವುದೆ ಮಾತೆತ್ತುತ್ತಿಲ್ಲ ಎಂದು ರೈತರು ದೂರುತ್ತಿದ್ದಾರೆ.

ಖರೀದಿ ಕೇಂದ್ರಗಳು ಎಂದರೇನು?

ಮಾರುಕಟ್ಟೆಯಲ್ಲಿ ಬೆಳೆಗಳು ಅಧಿಕವಾಗಿ ಬಂದಾಗ ಸಹಜವಾಗಿ ಬೆಲೆ ಇಳಿದು ಹೋಗುತ್ತದೆ. ಈ ಸಮಯದಲ್ಲಿ ರೈತರಿಗೆ ತಾವು ಬೆಳೆಗಳಿಗೆ ಸರಿಯಾದ ಬೆಲೆ ಸಿಗದೆ ಸಂಕಷ್ಟಕ್ಕೆ ಒಳಗಾಗುತ್ತಾರೆ. ಈ ಸಮಯದಲ್ಲಿ ಸರ್ಕಾರವೆ ಮುಂದೆ ನಿಂತು ಎಪಿಎಂಸಿ ಸೇರಿದಂತೆ ಸರ್ಕಾರಿ ನಿಯಂತ್ರಿತ ಮಾರುಕಟ್ಟೆಗಳಲ್ಲಿ ಬೆಳೆಗಳಿಗೆ ನಿಗದಿತ ಬೆಲೆಯನ್ನು ನೀಡಿ ಖರೀದಿ ಮಾಡುತ್ತದೆ. ಈ ಖರೀದಿ ಕೇಂದ್ರಗಳಲ್ಲಿ ಈ ಬೆಲೆಯೂ ತನ್ನದೆಂದು ದೃಡೀಕರಿಸಲು ರೈತನೂ ತನ್ನ ಬೆಳೆಗಳ ಜೊತೆಗೆ ತನ್ನ ಭೂಮಿಯ ಪತ್ರಗಳನ್ನು ತರಬೇಕಾಗುತ್ತದೆ.

PC : The United Nations

ಭೂಮಿ ಪತ್ರಗಳನ್ನು ತರಬೇಕು ಎನ್ನುವ ನಿಯಮ ಕೆಲವೊಮ್ಮ ರೈತರಿಗೆ ಮಾರಕವಾಗಿಯೂ ಪರಿಣಮಿಸುತ್ತದೆ. ಯಾಕೆಂದರೆ ತನ್ನ ಜಮೀನಲ್ಲದೆ ಇತರರಿಂದ ಗೇಣಿಗೆ ಪಡೆದು ಬೆಳೆದವನು ಅದನ್ನು ಖರೀದಿ ಕೇಂದ್ರದಲ್ಲಿ ಮಾರಲಾಗದೆ ಖಾಸಗಿಯಾಗಿ ಕಡಿಮೆ ಬೆಲೆಗೆ ಮಾರಾಟ ಮಾಡಿ ನಷ್ಟ ಅನುಭವಿಸುತ್ತಾನೆ. ಅಷ್ಟೆ ಅಲ್ಲದೆ ಭೂಮಿ ಪತ್ರವನ್ನು ವ್ಯಾಪಾರಿಗಳು ತಮಗೆ ಬೇಕಾದಂತೆ ಪಡೆದು, ರೈತರಿಂದ ಕಡಿಮೆ ಬೆಳೆಗಳನ್ನು ಖರೀದಿ ಮಾಡಿ ಅದನ್ನು ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡುವು ಸಾಧ್ಯತೆ ಕೂಡಾ ಇರುತ್ತೆ.

ಪ್ರಕಾಶ್ ಕಮ್ಮರಡಿ

“ಪ್ರತಿ ಬೆಳೆಗೂ ವೈಜ್ಞಾನಿಕ ದರ ನಿಗದಿಪಡಿಸಿ ಅದಕ್ಕಿಂತ ಕಡಿಮೆ ಬೆಲೆಗೆ ಖಾಸಗಿ ಹಾಗೂ ಸರ್ಕಾರಿ ಮಾರುಕಟ್ಟೆಯಲ್ಲಿ ಖರೀದಿ ಮಾಡುವಂತಿಲ್ಲ, ಅದಾಗಿಯೂ ಕಡಿಮೆ ಬೆಲೆ ನಿಗದಿ ಪಡಿಸಿದರೆ ಶಿಕ್ಷೆಗೆ ಒಳಪಡಿಸುವ ಕಾನೂನು ಬಂದರೆ ಈ ಸಮಸ್ಯೆಯ ಪರಿಹಾರವಾಗುತ್ತದೆ” ಎಂದು ಕರ್ನಾಟಕದ ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷರಾಗಿರುವ ಪ್ರಕಾಶ್ ಕಮ್ಮರಡಿ ಹೇಳುತ್ತಾರೆ. ಇಂತಹ ಕಾನೂನುಗಳು ರಾಜಸ್ಥಾನ ಹಾಗೂ ಕೇರಳ ಸರ್ಕಾರಗಳು ಮಾಡಿದೆ ಎಂದು ಅವರು ಉಲ್ಲೇಖಿಸುತ್ತಾರೆ.

ಇದನ್ನೂ ಓದಿ: ರೈತಬಂಧು ಪ್ರವಾದಿ ಮುಹಮ್ಮದ್ (ಸ) : ಮಿಸ್ರಿಯಾ ಐ ಪಜೀರ್

ಖರೀದಿ ಕೇಂದ್ರಗಳು ಈ ಸಮಯದಲ್ಲಿ ಯಾಕಿರಬೇಕು?

ಬೆಳೆಗಳು ಕೊಯ್ಲಿಗೆ ಬಂದು ಎಲ್ಲಾ ಕಡೆಯಿಂದಲೂ ಮಾರುಕಟ್ಟೆಗೆ ಬರುತ್ತಿರುವಾಗ ಸಹಜವಾಗಿಯೆ ಬೆಲೆಗಳು ಇಳಿಕೆಯಾಗುತ್ತದೆ. ಇದರ ಲಾಭವನ್ನು ಖಾಸಗಿ ವ್ಯಾಪಾರಿಗಳು ಪಡೆದು ಕೊಳ್ಳುತ್ತಾರೆ. ಕೆಲವೊಮ್ಮ ದರಗಳು ಎಷ್ಟು ಇಳಿದು ಹೋಗತ್ತದೆಯೆಂದರೆ ರೈತನೂ ತನ್ನ ಬೆಳೆಗಳನ್ನು ಇಳಿಸಿದ ಹಮಾಲಿಗೆ ಕೂಡಾ ಕೊಡಲು ದುಡ್ಡು ಇಲ್ಲದಷ್ಟು. ಈ ರೀತಿಯ ಸಮಸ್ಯೆಗಳು ಬರದಂತೆ ತಡೆಯಲು ಸರ್ಕಾರವೆ ಮುಂದೆ ನಿಂತು ರೈತರ ಬೆಳೆಗಳಿಗೆ ಬೆಂಬಲ ಬೆಲೆಯನ್ನು ನೀಡಿ ಖರೀದಿಸುತ್ತದೆ.

ಸುರೇಶ್ ಕಂಜರ್ಪಣೆ

ಪ್ರತಿ ಕೊಯ್ಲಿನ ಸಮಯದಲ್ಲಿ ಸರ್ಕಾರ ಬೆಲೆಗಳಿಗೆ ಸರಿಯಾದ ದರ ನಿಗದಿಪಡಿಸಿ ಅವುಗಳನ್ನು ಖರೀದಿ ಮಾಡಿದರೆ, ರೈತರನ್ನು ವ್ಯಾಪಾರಿಗಳಿಂದ ಕಾಪಾಡಿದಂತಾಗುತ್ತದೆ. “ಬಿತ್ತನೆ ಎಷ್ಟಾಗಿದೆ, ಅಂದಾಜು ಎಷ್ಟು ಬೆಳೆಗಳು, ಎಷ್ಟು ಪ್ರಮಾಣದಲ್ಲಿ, ಯಾವಾಗ ಮಾರುಕಟ್ಟೆಗೆ ಬರುತ್ತದೆ ಎಂದು ಸರ್ಕಾರಕ್ಕೆ ತಿಳಿದಿರುತ್ತದೆ. ಆವಾಗಲೇ ಖರೀದಿ ಕೇಂದ್ರಗಳಿಗೆ ತಯಾರಿ ಮಾಡುವ ಸಮಯಾವಕಾಶಗಳು ಅದಕ್ಕೆ ಇರುತ್ತದೆ. ಆದರೆ ಸರ್ಕಾರಕ್ಕೆ ಆ ಇಚ್ಛಾಶಕ್ತಿ ಇಲ್ಲದೆ ಇರುವುದು ದುರಂತವಾಗಿದೆ” ಎಂದು ಕೃಷಿ ತಜ್ಞ ಸುರೇಶ್ ಕಂಜರ್ಪಣೆ ಹೇಳುತ್ತಾರೆ.

ಸರ್ಕಾರ ಮಾಡುತ್ತಿರುವುದೇನು? ಮಾಡಬೇಕಿರುವುದೇನು?

ಇದುವರೆಗೂ ಸರ್ಕಾರ ಕೇವಲ 26 ಪ್ರಮುಖ ಬೆಲೆಗಳಿಗಷ್ಟೆ ಬೆಂಬಲ ಬೆಲೆ ನೀಡುತ್ತಿತ್ತು. ಇದೀಗ ಹೊಸತಾಗಿ ತರುತ್ತಿರುವ ಕಾಯ್ದೆಯಲ್ಲಿ ಅವುಗಳ ಸಂಖ್ಯೆಯನ್ನು ಇನ್ನೂ ಇಳಿಸುತ್ತಿದೆ. ಅಲ್ಲದೆ ಎಪಿಎಂಸಿ ಸೇರಿದಂತೆ ಕೆಲವು ಮಾರುಕಟ್ಟೆಗಳಲ್ಲಿ ಮಾತ್ರ ಖರೀದಿ ಕೇಂದ್ರಗಳಿವೆ. ಅವುಗಳು ಹೆಚ್ಚಿನವು ಜಿಲ್ಲಾ ಕೇಂದ್ರಗಳಲ್ಲಿ ಇದರಿಂದಾಗಿ ಸಣ್ಣಪುಟ್ಟ ರೈತರಿಗೆ ತಾವು ಬೆಳೆದ ಬೆಳೆಗಳನ್ನು ಅಲ್ಲಿವರೆಗೆ ಸಾಗಾಟ ಮಾಡುವುದು ದುಬಾರಿ ಎಣಿಸುತ್ತದೆ. ಅಷ್ಟೇ ಅಲ್ಲದೆ ಸರ್ಕಾರ ಕೂಡಾ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲು ಮೀನಾಮೇಷ ಎಣಿಸುತ್ತದೆ. ಇವುಗಳಿಂದಾಗಿ ರೈತನು ಮತ್ತಷ್ಟು ಕಷ್ಟಕ್ಕೆ ಒಳಗಾಗುತ್ತಾನೆ.

ಇದನ್ನೂ ಓದಿ: ರಾಜಸ್ಥಾನ: ವಿಮಾ ಕಂಪನಿ, ಬ್ಯಾಂಕ್ ವಿರುದ್ಧ ಸತತ 3 ವರ್ಷ ಹೋರಾಡಿ ವಿಮಾ ಹಕ್ಕು ಪಡೆದ ರೈತರು!

ಕೋಡಿಹಳ್ಳಿ ಚಂದ್ರಶೇಖರ್‌‌

“ಕಟಾವಿಗೆ ಬಂದಂತಹ ಎಲ್ಲಾ ಬೆಳೆಗಳು ’ಕನಿಷ್ಠ ಮಾರಾಟ ದರ’ದ ಒಳಗಡೆ ಖರೀದಿಯಾಗಬೇಕು. ಈ ಕನಿಷ್ಠ ಮಾರಾಟ ದರದ ನೀಡದಿದ್ದರೆ ಎರಡು ವರ್ಷ ಜೈಲು ಶಿಕ್ಷೆಯ ಕಾನೂನು ಆಗಬೇಕು. ಅಷ್ಟೇ ಅಲ್ಲದೆ ಜಿಲ್ಲಾ ಕೇಂದ್ರದಲ್ಲಿ ಇರುವ ಖರೀದಿ ಕೇಂದ್ರಗಳನ್ನು ಹೋಬಳಿ ಮಟ್ಟದಲ್ಲಿ ತೆರೆಯಬೇಕು” ಎಂದು ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್‌ ಹೇಳುತ್ತಾರೆ.

ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷ ಪ್ರಕಾಶ್ ಕಮ್ಮರಡಿ ಹೇಳುವಂತೆ, “ರಾಜ್ಯ ಸರ್ಕಾರ ಖರೀದಿ ಕೇಂದ್ರ ಸರ್ಕಾರ ತೆರೆಯಲು ಈಗಲೇ ಸಿದ್ದತೆ ನಡೆಸಬೇಕು. ರೈತನು ತನ್ನ ಬೆಳೆಯನ್ನು ಸಾಗಿಸುವ ಸಾರಿಗೆ ವೆಚ್ಚವನ್ನು ಸರ್ಕಾರವೆ ಹೊರಬೇಕು. ಆಗ ಖರೀದಿ ಕೇಂದ್ರಗಳಿಗೆ ತನ್ನ ಬೆಳೆಗಳನ್ನು ಸಾಗಿಸಲು ಸಾಧ್ಯವಾಗುತ್ತದೆ. ರೈತ ತಂದ ಬೆಳೆಗಳನ್ನು ಕೂಡಿಡುವ ವ್ಯವಸ್ಥೆಯನ್ನು ಕೂಡಾ ಸರ್ಕಾರ ಮಾಡಬೇಕು. ಈ ಕೂಡಿಟ್ಟ ಬೆಳೆಗಳ ಆಧಾರದಲ್ಲಿ ಅಡಮಾನ ಸಾಲವನ್ನು ಶೂನ್ಯ ಬಡ್ಡ ದರದಲ್ಲಿ ಸರ್ಕಾರ ನೀಡಬೇಕು” ಎಂದು ಹೇಳುತ್ತಾರೆ.

PC: Tribune India

ರಾಜ್ಯದಲ್ಲಿ ಬೆಳೆಯುವ ಪ್ರಮುಖ ಬೆಳೆಗಳಿಗೆ ಬೆಂಬಲ ಬೆಲೆ, ಉಗ್ರಾಣ, ಸಾರಿಗೆ, ಅವುಗಳ ಮೇಲಿನ ಬಡ್ಡಿ ರಹಿತ ಸಾಲ ಸೇರಿದಂತೆ ಖರೀದಿ ಕೇಂದ್ರಗಳಲ್ಲಿ ಖರೀದಿ ಮಾಡಲು 5-10 ಸಾವಿರ ಕೋಟಿ ಹಣಕಾಸು ಬೇಡುತ್ತದೆ. “ಈ ಹಣಕಾಸು ಒದಗಿಸುವುದು ರಾಜ್ಯ ಸರ್ಕಾರಕ್ಕೆ ಯಾವ ರೀತಿಯಿಂದಲೂ ಹೊರೆಯಾಗುವುದಿಲ್ಲ, ಆದರೆ ಸರ್ಕಾರ ಇಚ್ಚಾಶಕ್ತಿ ತೋರಿಸಬೇಕಷ್ಟೆ” ಎಂದು ಅವರು ಪ್ರಕಾಶ್ ಕಮ್ಮರಡಿ ಹೇಳುತ್ತಾರೆ.


ಇದನ್ನೂ ಓದಿ: ಡೇರಿ ಫಾರಂ, ಗೋಶಾಲೆಗಳಿಗೆ ಅನುಮತಿ ಕಡ್ಡಾಯ: ಮಾಲಿನ್ಯ ನಿಯಂತ್ರಣದ ಹೆಸರಿನಲ್ಲಿ ರೈತರ ಬದುಕಿಗೆ ಕೊಳ್ಳಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...