Homeಕರ್ನಾಟಕಉತ್ತಮ ಬೆಳೆಯಾದರೂ ಖರೀದಿ ಕೇಂದ್ರ ತೆರೆಯದ ಸರ್ಕಾರದ ವಿರುದ್ಧ ರೈತರ ಆಕ್ರೋಶ

ಉತ್ತಮ ಬೆಳೆಯಾದರೂ ಖರೀದಿ ಕೇಂದ್ರ ತೆರೆಯದ ಸರ್ಕಾರದ ವಿರುದ್ಧ ರೈತರ ಆಕ್ರೋಶ

ರಾಜ್ಯದಲ್ಲಿ ಬೆಳೆಯುವ ಪ್ರಮುಖ ಬೆಳೆಗಳಿಗೆ ಬೆಂಬಲ ಬೆಲೆ, ಉಗ್ರಾಣ, ಸಾರಿಗೆ, ಅವುಗಳ ಮೇಲಿನ ಬಡ್ಡಿ ರಹಿತ ಸಾಲ ಸೇರಿದಂತೆ ಖರೀದಿ ಕೇಂದ್ರಗಳಲ್ಲಿ ಖರೀದಿ ಮಾಡಲು 5-10 ಸಾವಿರ ಕೋಟಿ ಹಣಕಾಸು ಬೇಡುತ್ತದೆ. ಈ ಹಣಕಾಸು ರಾಜ್ಯ ಸರ್ಕಾರಕ್ಕೆ ಯಾವ ರೀತಿಯಿಂದಲೂ ಹೊರೆಯಲ್ಲ

- Advertisement -
- Advertisement -

ಉದ್ಯೋಗ ಅರಸುತ್ತಾ ಹಳ್ಳಿಯಿಂದ ನಗರದ ಕಡೆಗೆ ವಲಸೆ ಬಂದಿದ್ದ ಕೋಟ್ಯಾಂತರ ಜನರು ಯಾವುದೇ ಸಿದ್ದತೆಗಳಿಲ್ಲದೆ ಸರ್ಕಾರಗಳು ಹೇರಿದ್ದ ಲಾಕ್‌ಡೌನ್‌ನಿಂದಾಗಿ ನಗರದಲ್ಲಿಯೂ ಉದ್ಯೋಗಗಳಿಲ್ಲದೆ ಮತ್ತೇ ತಮ್ಮ ಹಳ್ಳಿಗಳಿಗೆ ಮರಳಿದ್ದಾರೆ. ಇದೆ ಸಮಯದಲ್ಲಿ ಉತ್ತಮ ಮುಂಗಾರು ಮಳೆಯಾದ್ದರಿಂದ ಉತ್ತಮ ಬೆಳೆಯಾಗಿದ್ದು, ಇದೀಗ ಮುಂಗಾರು ಬೆಳೆಗಳು ಮಾರುಕಟ್ಟೆಗೆ ಬರಲು ಪ್ರಾರಂಭವಾಗಿದೆ.

ರಾಜ್ಯದ ಕೆಲವೆಡೆ ಪ್ರವಾಹ ಬಂದು ಬೆಳೆಗಳು ಕೊಚ್ಚಿಕೊಂಡು ಹೋಗಿದೆಯದರೂ, ಉಳಿದ ಕಡೆ ರೈತರಿಗೆ ಉತ್ತಮ ಇಳುವರಿ ಬಂದಿದೆ. ಉತ್ತಮ ಬೆಳೆಯಾದರೆ ಸಾಮಾನ್ಯವಾಗಿ ಬೆಲೆಗಳು ಸಹಜವಾಗಿಯೇ ಇಳಿಯುತ್ತದೆ. ಆದರೆ ತಾನು ಕಷ್ಟ ಪಟ್ಟ ಬೆಳೆದ ಬೆಳೆಗಳನ್ನು ನಷ್ಟಕ್ಕೆ ಮಾರಾಟ ಮಾಡಲಾಗದೆ, ಬೆಳೆಗಳನ್ನು ತನ್ನಲ್ಲಿ ಇಟ್ಟುಕೊಳ್ಳಲೂ ಆಗದೆ ರೈತರು ಕಷ್ಟಕ್ಕ ಸಿಲುಕಿದ್ದಾರೆ. ಈ ಸಮಯದಲ್ಲಿ ಸರ್ಕಾರಗಳು ಖರೀದಿ ಕೇಂದ್ರಗಳನ್ನು ತೆರೆದು ರೈತರ ಬೆಳೆಗಳನ್ನು ಖರೀದಿ ಮಾಡಬೇಕು ಎಂದು ಹೋರಾಟಗಳು ನಡೆಯುತ್ತಿವೆ.

ಇದನ್ನೂ ಓದಿ: ಕೇಂದ್ರ ಸರ್ಕಾರದೊಂದಿಗೆ ರೈತ ಮುಖಂಡರ ಮಾತುಕತೆ ವಿಫಲ: ನ.26,27ಕ್ಕೆ ದೆಹಲಿ ಚಲೋ

ರೈತ ವಿರೋಧಿ
ಫೋಟೋ ಕೃಪೆ: ಸಿದ್ದೇಶ್ ಎಮ್‌.ಇ

ಅಲ್ಲದೆ ಇದೀಗ ಕೇಂದ್ರ ಹಾಗೂ ರಾಜ್ಯ ಸಕಾರಗಳು ಹಲವಾರು ರೈತ ವಿರೋಧಿ ಕಾಯ್ದೆಗಳನ್ನು ತಂದು ಬೆಂಬಲ ಬೆಲೆಗಳನ್ನು ಇಲ್ಲವಾಗಿಸುತ್ತಿದೆ. ರಾಜ್ಯ ಸೇರಿದಂತೆ ಕೇಂದ್ರ ಸರ್ಕಾರಗಳು ಖರೀದಿ ಕೇಂದ್ರದ ಬಗ್ಗೆ ಯಾವುದೆ ಮಾತೆತ್ತುತ್ತಿಲ್ಲ ಎಂದು ರೈತರು ದೂರುತ್ತಿದ್ದಾರೆ.

ಖರೀದಿ ಕೇಂದ್ರಗಳು ಎಂದರೇನು?

ಮಾರುಕಟ್ಟೆಯಲ್ಲಿ ಬೆಳೆಗಳು ಅಧಿಕವಾಗಿ ಬಂದಾಗ ಸಹಜವಾಗಿ ಬೆಲೆ ಇಳಿದು ಹೋಗುತ್ತದೆ. ಈ ಸಮಯದಲ್ಲಿ ರೈತರಿಗೆ ತಾವು ಬೆಳೆಗಳಿಗೆ ಸರಿಯಾದ ಬೆಲೆ ಸಿಗದೆ ಸಂಕಷ್ಟಕ್ಕೆ ಒಳಗಾಗುತ್ತಾರೆ. ಈ ಸಮಯದಲ್ಲಿ ಸರ್ಕಾರವೆ ಮುಂದೆ ನಿಂತು ಎಪಿಎಂಸಿ ಸೇರಿದಂತೆ ಸರ್ಕಾರಿ ನಿಯಂತ್ರಿತ ಮಾರುಕಟ್ಟೆಗಳಲ್ಲಿ ಬೆಳೆಗಳಿಗೆ ನಿಗದಿತ ಬೆಲೆಯನ್ನು ನೀಡಿ ಖರೀದಿ ಮಾಡುತ್ತದೆ. ಈ ಖರೀದಿ ಕೇಂದ್ರಗಳಲ್ಲಿ ಈ ಬೆಲೆಯೂ ತನ್ನದೆಂದು ದೃಡೀಕರಿಸಲು ರೈತನೂ ತನ್ನ ಬೆಳೆಗಳ ಜೊತೆಗೆ ತನ್ನ ಭೂಮಿಯ ಪತ್ರಗಳನ್ನು ತರಬೇಕಾಗುತ್ತದೆ.

PC : The United Nations

ಭೂಮಿ ಪತ್ರಗಳನ್ನು ತರಬೇಕು ಎನ್ನುವ ನಿಯಮ ಕೆಲವೊಮ್ಮ ರೈತರಿಗೆ ಮಾರಕವಾಗಿಯೂ ಪರಿಣಮಿಸುತ್ತದೆ. ಯಾಕೆಂದರೆ ತನ್ನ ಜಮೀನಲ್ಲದೆ ಇತರರಿಂದ ಗೇಣಿಗೆ ಪಡೆದು ಬೆಳೆದವನು ಅದನ್ನು ಖರೀದಿ ಕೇಂದ್ರದಲ್ಲಿ ಮಾರಲಾಗದೆ ಖಾಸಗಿಯಾಗಿ ಕಡಿಮೆ ಬೆಲೆಗೆ ಮಾರಾಟ ಮಾಡಿ ನಷ್ಟ ಅನುಭವಿಸುತ್ತಾನೆ. ಅಷ್ಟೆ ಅಲ್ಲದೆ ಭೂಮಿ ಪತ್ರವನ್ನು ವ್ಯಾಪಾರಿಗಳು ತಮಗೆ ಬೇಕಾದಂತೆ ಪಡೆದು, ರೈತರಿಂದ ಕಡಿಮೆ ಬೆಳೆಗಳನ್ನು ಖರೀದಿ ಮಾಡಿ ಅದನ್ನು ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡುವು ಸಾಧ್ಯತೆ ಕೂಡಾ ಇರುತ್ತೆ.

ಪ್ರಕಾಶ್ ಕಮ್ಮರಡಿ

“ಪ್ರತಿ ಬೆಳೆಗೂ ವೈಜ್ಞಾನಿಕ ದರ ನಿಗದಿಪಡಿಸಿ ಅದಕ್ಕಿಂತ ಕಡಿಮೆ ಬೆಲೆಗೆ ಖಾಸಗಿ ಹಾಗೂ ಸರ್ಕಾರಿ ಮಾರುಕಟ್ಟೆಯಲ್ಲಿ ಖರೀದಿ ಮಾಡುವಂತಿಲ್ಲ, ಅದಾಗಿಯೂ ಕಡಿಮೆ ಬೆಲೆ ನಿಗದಿ ಪಡಿಸಿದರೆ ಶಿಕ್ಷೆಗೆ ಒಳಪಡಿಸುವ ಕಾನೂನು ಬಂದರೆ ಈ ಸಮಸ್ಯೆಯ ಪರಿಹಾರವಾಗುತ್ತದೆ” ಎಂದು ಕರ್ನಾಟಕದ ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷರಾಗಿರುವ ಪ್ರಕಾಶ್ ಕಮ್ಮರಡಿ ಹೇಳುತ್ತಾರೆ. ಇಂತಹ ಕಾನೂನುಗಳು ರಾಜಸ್ಥಾನ ಹಾಗೂ ಕೇರಳ ಸರ್ಕಾರಗಳು ಮಾಡಿದೆ ಎಂದು ಅವರು ಉಲ್ಲೇಖಿಸುತ್ತಾರೆ.

ಇದನ್ನೂ ಓದಿ: ರೈತಬಂಧು ಪ್ರವಾದಿ ಮುಹಮ್ಮದ್ (ಸ) : ಮಿಸ್ರಿಯಾ ಐ ಪಜೀರ್

ಖರೀದಿ ಕೇಂದ್ರಗಳು ಈ ಸಮಯದಲ್ಲಿ ಯಾಕಿರಬೇಕು?

ಬೆಳೆಗಳು ಕೊಯ್ಲಿಗೆ ಬಂದು ಎಲ್ಲಾ ಕಡೆಯಿಂದಲೂ ಮಾರುಕಟ್ಟೆಗೆ ಬರುತ್ತಿರುವಾಗ ಸಹಜವಾಗಿಯೆ ಬೆಲೆಗಳು ಇಳಿಕೆಯಾಗುತ್ತದೆ. ಇದರ ಲಾಭವನ್ನು ಖಾಸಗಿ ವ್ಯಾಪಾರಿಗಳು ಪಡೆದು ಕೊಳ್ಳುತ್ತಾರೆ. ಕೆಲವೊಮ್ಮ ದರಗಳು ಎಷ್ಟು ಇಳಿದು ಹೋಗತ್ತದೆಯೆಂದರೆ ರೈತನೂ ತನ್ನ ಬೆಳೆಗಳನ್ನು ಇಳಿಸಿದ ಹಮಾಲಿಗೆ ಕೂಡಾ ಕೊಡಲು ದುಡ್ಡು ಇಲ್ಲದಷ್ಟು. ಈ ರೀತಿಯ ಸಮಸ್ಯೆಗಳು ಬರದಂತೆ ತಡೆಯಲು ಸರ್ಕಾರವೆ ಮುಂದೆ ನಿಂತು ರೈತರ ಬೆಳೆಗಳಿಗೆ ಬೆಂಬಲ ಬೆಲೆಯನ್ನು ನೀಡಿ ಖರೀದಿಸುತ್ತದೆ.

ಸುರೇಶ್ ಕಂಜರ್ಪಣೆ

ಪ್ರತಿ ಕೊಯ್ಲಿನ ಸಮಯದಲ್ಲಿ ಸರ್ಕಾರ ಬೆಲೆಗಳಿಗೆ ಸರಿಯಾದ ದರ ನಿಗದಿಪಡಿಸಿ ಅವುಗಳನ್ನು ಖರೀದಿ ಮಾಡಿದರೆ, ರೈತರನ್ನು ವ್ಯಾಪಾರಿಗಳಿಂದ ಕಾಪಾಡಿದಂತಾಗುತ್ತದೆ. “ಬಿತ್ತನೆ ಎಷ್ಟಾಗಿದೆ, ಅಂದಾಜು ಎಷ್ಟು ಬೆಳೆಗಳು, ಎಷ್ಟು ಪ್ರಮಾಣದಲ್ಲಿ, ಯಾವಾಗ ಮಾರುಕಟ್ಟೆಗೆ ಬರುತ್ತದೆ ಎಂದು ಸರ್ಕಾರಕ್ಕೆ ತಿಳಿದಿರುತ್ತದೆ. ಆವಾಗಲೇ ಖರೀದಿ ಕೇಂದ್ರಗಳಿಗೆ ತಯಾರಿ ಮಾಡುವ ಸಮಯಾವಕಾಶಗಳು ಅದಕ್ಕೆ ಇರುತ್ತದೆ. ಆದರೆ ಸರ್ಕಾರಕ್ಕೆ ಆ ಇಚ್ಛಾಶಕ್ತಿ ಇಲ್ಲದೆ ಇರುವುದು ದುರಂತವಾಗಿದೆ” ಎಂದು ಕೃಷಿ ತಜ್ಞ ಸುರೇಶ್ ಕಂಜರ್ಪಣೆ ಹೇಳುತ್ತಾರೆ.

ಸರ್ಕಾರ ಮಾಡುತ್ತಿರುವುದೇನು? ಮಾಡಬೇಕಿರುವುದೇನು?

ಇದುವರೆಗೂ ಸರ್ಕಾರ ಕೇವಲ 26 ಪ್ರಮುಖ ಬೆಲೆಗಳಿಗಷ್ಟೆ ಬೆಂಬಲ ಬೆಲೆ ನೀಡುತ್ತಿತ್ತು. ಇದೀಗ ಹೊಸತಾಗಿ ತರುತ್ತಿರುವ ಕಾಯ್ದೆಯಲ್ಲಿ ಅವುಗಳ ಸಂಖ್ಯೆಯನ್ನು ಇನ್ನೂ ಇಳಿಸುತ್ತಿದೆ. ಅಲ್ಲದೆ ಎಪಿಎಂಸಿ ಸೇರಿದಂತೆ ಕೆಲವು ಮಾರುಕಟ್ಟೆಗಳಲ್ಲಿ ಮಾತ್ರ ಖರೀದಿ ಕೇಂದ್ರಗಳಿವೆ. ಅವುಗಳು ಹೆಚ್ಚಿನವು ಜಿಲ್ಲಾ ಕೇಂದ್ರಗಳಲ್ಲಿ ಇದರಿಂದಾಗಿ ಸಣ್ಣಪುಟ್ಟ ರೈತರಿಗೆ ತಾವು ಬೆಳೆದ ಬೆಳೆಗಳನ್ನು ಅಲ್ಲಿವರೆಗೆ ಸಾಗಾಟ ಮಾಡುವುದು ದುಬಾರಿ ಎಣಿಸುತ್ತದೆ. ಅಷ್ಟೇ ಅಲ್ಲದೆ ಸರ್ಕಾರ ಕೂಡಾ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲು ಮೀನಾಮೇಷ ಎಣಿಸುತ್ತದೆ. ಇವುಗಳಿಂದಾಗಿ ರೈತನು ಮತ್ತಷ್ಟು ಕಷ್ಟಕ್ಕೆ ಒಳಗಾಗುತ್ತಾನೆ.

ಇದನ್ನೂ ಓದಿ: ರಾಜಸ್ಥಾನ: ವಿಮಾ ಕಂಪನಿ, ಬ್ಯಾಂಕ್ ವಿರುದ್ಧ ಸತತ 3 ವರ್ಷ ಹೋರಾಡಿ ವಿಮಾ ಹಕ್ಕು ಪಡೆದ ರೈತರು!

ಕೋಡಿಹಳ್ಳಿ ಚಂದ್ರಶೇಖರ್‌‌

“ಕಟಾವಿಗೆ ಬಂದಂತಹ ಎಲ್ಲಾ ಬೆಳೆಗಳು ’ಕನಿಷ್ಠ ಮಾರಾಟ ದರ’ದ ಒಳಗಡೆ ಖರೀದಿಯಾಗಬೇಕು. ಈ ಕನಿಷ್ಠ ಮಾರಾಟ ದರದ ನೀಡದಿದ್ದರೆ ಎರಡು ವರ್ಷ ಜೈಲು ಶಿಕ್ಷೆಯ ಕಾನೂನು ಆಗಬೇಕು. ಅಷ್ಟೇ ಅಲ್ಲದೆ ಜಿಲ್ಲಾ ಕೇಂದ್ರದಲ್ಲಿ ಇರುವ ಖರೀದಿ ಕೇಂದ್ರಗಳನ್ನು ಹೋಬಳಿ ಮಟ್ಟದಲ್ಲಿ ತೆರೆಯಬೇಕು” ಎಂದು ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್‌ ಹೇಳುತ್ತಾರೆ.

ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷ ಪ್ರಕಾಶ್ ಕಮ್ಮರಡಿ ಹೇಳುವಂತೆ, “ರಾಜ್ಯ ಸರ್ಕಾರ ಖರೀದಿ ಕೇಂದ್ರ ಸರ್ಕಾರ ತೆರೆಯಲು ಈಗಲೇ ಸಿದ್ದತೆ ನಡೆಸಬೇಕು. ರೈತನು ತನ್ನ ಬೆಳೆಯನ್ನು ಸಾಗಿಸುವ ಸಾರಿಗೆ ವೆಚ್ಚವನ್ನು ಸರ್ಕಾರವೆ ಹೊರಬೇಕು. ಆಗ ಖರೀದಿ ಕೇಂದ್ರಗಳಿಗೆ ತನ್ನ ಬೆಳೆಗಳನ್ನು ಸಾಗಿಸಲು ಸಾಧ್ಯವಾಗುತ್ತದೆ. ರೈತ ತಂದ ಬೆಳೆಗಳನ್ನು ಕೂಡಿಡುವ ವ್ಯವಸ್ಥೆಯನ್ನು ಕೂಡಾ ಸರ್ಕಾರ ಮಾಡಬೇಕು. ಈ ಕೂಡಿಟ್ಟ ಬೆಳೆಗಳ ಆಧಾರದಲ್ಲಿ ಅಡಮಾನ ಸಾಲವನ್ನು ಶೂನ್ಯ ಬಡ್ಡ ದರದಲ್ಲಿ ಸರ್ಕಾರ ನೀಡಬೇಕು” ಎಂದು ಹೇಳುತ್ತಾರೆ.

PC: Tribune India

ರಾಜ್ಯದಲ್ಲಿ ಬೆಳೆಯುವ ಪ್ರಮುಖ ಬೆಳೆಗಳಿಗೆ ಬೆಂಬಲ ಬೆಲೆ, ಉಗ್ರಾಣ, ಸಾರಿಗೆ, ಅವುಗಳ ಮೇಲಿನ ಬಡ್ಡಿ ರಹಿತ ಸಾಲ ಸೇರಿದಂತೆ ಖರೀದಿ ಕೇಂದ್ರಗಳಲ್ಲಿ ಖರೀದಿ ಮಾಡಲು 5-10 ಸಾವಿರ ಕೋಟಿ ಹಣಕಾಸು ಬೇಡುತ್ತದೆ. “ಈ ಹಣಕಾಸು ಒದಗಿಸುವುದು ರಾಜ್ಯ ಸರ್ಕಾರಕ್ಕೆ ಯಾವ ರೀತಿಯಿಂದಲೂ ಹೊರೆಯಾಗುವುದಿಲ್ಲ, ಆದರೆ ಸರ್ಕಾರ ಇಚ್ಚಾಶಕ್ತಿ ತೋರಿಸಬೇಕಷ್ಟೆ” ಎಂದು ಅವರು ಪ್ರಕಾಶ್ ಕಮ್ಮರಡಿ ಹೇಳುತ್ತಾರೆ.


ಇದನ್ನೂ ಓದಿ: ಡೇರಿ ಫಾರಂ, ಗೋಶಾಲೆಗಳಿಗೆ ಅನುಮತಿ ಕಡ್ಡಾಯ: ಮಾಲಿನ್ಯ ನಿಯಂತ್ರಣದ ಹೆಸರಿನಲ್ಲಿ ರೈತರ ಬದುಕಿಗೆ ಕೊಳ್ಳಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...