Homeಮುಖಪುಟರೈತರ ಆಕ್ರೋಶದ ಪರಿಣಾಮ: ಸರ್ಕಾರ ಪತನದ ಭೀತಿಯಲ್ಲಿ ಹರಿಯಾಣ ಸಿಎಂ!

ರೈತರ ಆಕ್ರೋಶದ ಪರಿಣಾಮ: ಸರ್ಕಾರ ಪತನದ ಭೀತಿಯಲ್ಲಿ ಹರಿಯಾಣ ಸಿಎಂ!

ಹರಿಯಾಣ ಮುಖ್ಯಮಂತ್ರಿ ಮನೋಹರ್‌ಲಾಲ್ ಖಟ್ಟರ್ ಈಗ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದನ್ನೇ ಕಡಿಮೆ ಮಾಡಿದ್ದಾರೆ.

- Advertisement -
- Advertisement -

ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್‌ಗೆ ಒಂದು ಕಡೆ ರೈತರ ಪ್ರತಿಭಟನೆಯ ಆಕ್ರೋಶದ ಬಿಸಿ ತಟ್ಟತೊಡಗಿದ್ದರೆ, ಇನ್ನೊಂದು ಕಡೆ ಆಡಳಿತದ ಮಿತ್ರ ಪಕ್ಷ ಜನತಾ ಜನನಾಯಕ್ ಪಾರ್ಟಿ (ಜೆಜೆಪಿ) ರೈತರಿಗೆ ಬೆಂಬಲವಾಗಿ ಯಾವ ಕ್ಷಣದಲ್ಲಾದರೂ ಹೋಳಾಗಬಹದು ಅಥವಾ ಅದರ ಎಲ್ಲ 10 ಶಾಸಕರೂ ಸರ್ಕಾರಕ್ಕೆ ಬೆಂಬಲ ಹಿಂತೆಗೆದುಕೊಳ್ಳಬಹುದು ಎಂಬ ಭಯ ಕಾಡತೊಡಗಿದೆ.

ಪ್ರತಿವರ್ಷ ಎಲ್ಲ ಮುಖ್ಯಮಂತ್ರಿಗಳು ನಿರ್ದಿಷ್ಟ ಸ್ಥಳದಲ್ಲಿ ಗಣರಾಜ್ಯೋತ್ಸವ ಧ್ವಜ ಹಾರಿಸುತ್ತಾರೆ. ಆದರೆ, ಈ ಸಲ ಖಟ್ಟರ್ ಗಣರಾಜ್ಯೋತ್ಸವ ಕಾರ್ಯಕ್ರಮದ ಸ್ಥಳವನ್ನೇ ಶಿಫ್ಟ್ ಮಾಡಿಸಿದ್ದರು. ಪಾಣಿಪತ್‌ನಲ್ಲಿ ಧ್ವಜ ಹಾರಿಸಲು ಹಿಂದೇಟು ಹಾಕಿದ ಖಟ್ಟರ್, ಸ್ವಲ್ಪ ಸುರಕ್ಷಿತ ಸ್ಥಳವೆಂದು ಪಂಚಕುಲಾದಲ್ಲಿ ಕಾರ್ಯಕ್ರಮ ನಡೆಸಿ ತ್ರಿವರ್ಣ ಧ್ವಜ ಹಾರಿಸಿದರು!

ಅರೆ, ಯಾರ ಭಯ? ಉಗ್ರರ ಭಯವಾ? ಊಹೂಂ, ರೈತರು ಕಪ್ಪು ಬಟ್ಟೆ ಪ್ರದರ್ಶನ ಮಾಡಬಹುದು ಅಥವಾ ಘೇರಾವ್ ಹಾಕಬಹುದು ಎಂಬ ಆತಂಕ. ತನ್ನ ರಾಜ್ಯದಲ್ಲೇ ಇಷ್ಟು ಆತಂಕಿತನಾಗಿ ಆಡಳಿತ ಮಾಡಿದ ಸಿಎಂ ಇನ್ನೊಬ್ಬರಿರಲಿಕ್ಕಿಲ್ಲ.

ಪಾಣಿಪತ್ ಮನೋಹರಲಾಲ್ ಖಟ್ಟರ್ ಸ್ವಗ್ರಾಮ ಕರ್ನಾಲ್‌ನಿಂದ 16 ಕಿಮೀ ದೂರದಲ್ಲಿದೆ. 15 ದಿನಗಳ ಹಿಂದೆ ಖಟ್ಟರ್ ಕರ್ನಾಲ್‌ಗೆ ಹೋಗಲೂ ಆಗಲಿಲ್ಲ. ಏಕೆಂದರೆ, ರೈತರು ಅಲ್ಲಿನ ಹೆಲಿಪ್ಯಾಡ್ ಧ್ವಂಸಗೊಳಿಸಿದ್ದರು. ಕಾರ್ಯಕ್ರಮ ನಡೆಯಬೇಕಿದ್ದ ವೇದಿಕೆಗೆ ನುಗ್ಗು ಚೆಲ್ಲಾಪಿಲ್ಲಿ ಮಾಡಿದ್ದರು. ತಿಂಗಳ ಹಿಂದೆ ಅದೇ ಕರ್ನಾಲ್‌ನಲ್ಲಿ ನಡೆಯಬೇಕಿದ್ದ ಸಾರ್ವಜನಿಕ ಕಾರ್ಯಕ್ರಮವನ್ನೇ ಖಟ್ಟರ್ ರದ್ದು ಮಾಡಬೇಕಾಯಿತು. ಕಾರಣ ರೈತರನ್ನು ಎದುರಿಸುವ ರಾಜಕೀಯ ದೃಢತೆಯೇ ಇಲ್ಲ.

ಅಂಬಾಲಾದಲ್ಲಿ 13 ರೈತರ ಮೇಲೆ ಕೊಲೆ ಯತ್ನ, ದಂಗೆ ಪ್ರಕರಣ ದಾಖಲಿಸಲಾಗಿದೆ. ರೈತರು ಖಟ್ಟರ್‌ಗೆ ಕಪ್ಪು ದ್ವಜ ಪ್ರದರ್ಶನ ಮಾಡಿದ್ದರು. ಹಾಗೆಯೇ ರೈತರು ಖಟ್ಟರ್ ಬೆಂಗಾವಲು ವಾಹನವನ್ನು ತಡೆದು ವಾಪಸ್ ಕಳಿಸಿದ್ದರು.

ರಾಜ್ಯದಲ್ಲಿ ಅರಾಜಕತೆ ಉಂಟಾಗಬಹುದು ಎಂಬ ನೆಪ ನೀಡಿ, 22 ಜಿಲ್ಲೆಗಳ ಪೈಕಿ 17ರಲ್ಲಿ ಇಂಟರ್‌ನೆಟ್ ಸೇವೆಯನ್ನು ಖಟ್ಟರ್ ಸ್ಥಗಿತಗೊಳಿಸಿದ್ದಾರೆ. ರೈತ ಹೋರಾಟ ಎಲ್ಲೆಡೆ ಹರಡದಂತೆ ತಡೆಯುವ ಕುತಂತ್ರ ಇದಾಗಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಂದುವರಿದು ರೈತರು ದೇವಸ್ಥಾನದ ಮೈಕ್‌ಗಳನ್ನು ಉಪಯೋಗಿಸಿ ರೈತ ಹೋರಾಟದ ಪರಿಸ್ಥಿತಿಯನ್ನು ವಿವರಿಸಿ, ಹೋರಾಟ ಸೇರಿಕೊಳ್ಳಲು ಕರೆ ನೀಡುತ್ತಿದ್ದಾರೆ.

ಸರ್ಕಾರ ಪತನದ ಭೀತಿ

ಇನ್ನೊಂದು ಕಡೆ ಖಟ್ಟರ್‌ಗೆ ಸರ್ಕಾರ ಬೀಳಬಹುದೆಂಬ ಆತಂಕ ಶುರುವಾಗಿದೆ. ಜನವರಿ 26ರ ಕೆಂಪುಕೋಟೆಯ ಅಹಿತಕರ ಘಟನೆ ನಂತರ ಸ್ವಲ್ಪ ನಿರಾಳರಾಗಿದ್ದ ಅವರಿಗೆ, ಟಿಕಾಯತ್ ಮನವಿ ನಂತರ ತೀವ್ರಗೊಳ್ಳುತ್ತಿರುವ ರೈತರ ಪ್ರತಿಭಟನೆ ಚಿಂತೆಗೀಡುಮಾಡಿದೆ.

90 ಸ್ಥಾನಗಳ ವಿಧಾನಸಭೆಯಲ್ಲಿ ಬಿಜೆಪಿಯ ಸಂಖ್ಯಾಬಲ 40. 10 ಜೆಜೆಪಿ ಶಾಸಕರ ಬೆಂಬಲದೊಂದಿಗೆ ಸರ್ಕಾರ ರಚನೆಯಾಗಿದೆ. ಇಬ್ಬರು ಪಕ್ಷೇತರರು ರೈತರ ಬೆಂಬಲಾರ್ಥವಾಗಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ಹಿಂಪಡೆದಿದ್ದಾರೆ.

ಜೆಜೆಪಿ ನಾಯಕ, ಉಪ ಮುಖ್ಯಮಂತ್ರಿ ದುಷ್ಯಂತ್ ಸಿಂಗ್ ಚೌತಾಲರ ಮೇಲೆ ಅವರ ಪಕ್ಷದ ಶಾಸಕರೆ ಒತ್ತಡ ಹೇರುತ್ತಿದ್ದು, ರೈತರ ಪರ ನಿಲ್ಲೋಣ, ಸರ್ಕಾರಕ್ಕೆ ಬೆಂಬಲ ಹಿಂಪಡೆಯೋಣ ಎನ್ನುತ್ತಿದ್ದಾರೆ. ಕೆಲವರು ಜೆಜೆಪಿ ಬಿಡಲೂ ತಯಾರಾಗಿದ್ದಾರೆ. ಐಎನ್‌ಎಲ್‌ಡಿ ಶಾಸಕ ಅಭಯ ಸಿಂಗ್ ಚೌತಾಲ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ ನಂತರ, ದುಷ್ಯಂತ್ ರಾಜಿನಾಮೆಗೆ ಒತ್ತಡ ಹೆಚ್ಚುತ್ತಿದೆ.

ಕೃಷಿ ಕಾಯ್ದೆ ಪರ ಮೋದಿಯವರನ್ನು ಬೆಂಬಲಿಸಿ, ಪ್ರಧಾನಿಗೆ ಶಕ್ತಿ ತುಂಬಬೇಕಿದ್ದ ಖಟ್ಟರ್, ಕಳೆದ ವಾರ ಡಿಸಿಎಂ ದುಷ್ಯಂತರನ್ನು ದೆಹಲಿಗೆ ಕರೆದುಕೊಂಡು ಹೋಗಿ, ಮೋದಿ-ಶಾ ಎದುರು ನಿಲ್ಲಿಸಿ, ನೀವೇ ನನ್ನ ಸರ್ಕಾರ ಉಳಿಸಿ ಎಂದು ಮನವಿ ಮಾಡಿದ್ದರು.

ರಾಜ್ಯವೊಂದರ ಪ್ರಬಲ ಸಮುದಾಯಕ್ಕೆ ಮುಖ್ಯಮಂತ್ರಿ ಪದವಿ ನೀಡದೇ, ಸಣ್ಣ ಸಮುದಾಯಕ್ಕೆ ನೀಡುವ ಮುಲಕ ಮುಖ್ಯಮಂತ್ರಿಯನ್ನು ಹಿಡಿತದಲ್ಲಿ ಇಟ್ಟುಕೊಳ್ಳುವ ಮೋದಿ-ಶಾ ತಂತ್ರದ ಭಾಗವಾಗಿ ಖಟ್ಟರ್‌ರನ್ನು ಹರಿಯಾಣ ಸಿಎಂ ಮಾಡಲಾಗಿದೆ. ಪ್ರಬಲ ಜಾಟ್ ಸಮುದಾಯಕ್ಕೆ ಮುಖ್ಯಮಂತ್ರಿ ಪಟ್ಟ ನಿರಾಕರಿಸಿ, ಪಂಜಾಬಿ ಖತ್ರಿ ಸಮುದಾಯಕ್ಕೆ ಸೇರಿದ ಖಟ್ಟರ್‌ಗೆ ಕಿರೀಟ ತೊಡಿಸಲಾಗಿತ್ತು. ಐದು ವರ್ಷಗಳ ಅಡಳಿತದಲ್ಲಿ ಅಂಥದ್ದೇನೂ ಮಾಡದ ಪರಿಣಾಮ ಕಳೆದ ಚುನಾವಣೆಯಲ್ಲಿ ಬಿಜೆಪಿಗೆ 40 ಸೀಟು ಸಿಕ್ಕವು. ಕಾಂಗ್ರೆಸ್‌ನ ಭೂಪಿಂದರ್ ಹೂಡಾ ಮತ್ತು ಐಎನ್‌ಎಲ್‌ಡಿಯ ಓಂಪ್ರಕಾಶ್ ಚೌತಾಲರ (ಶಿಕ್ಷಕರ ನೇಮಕಾತಿ ಹಗರಣದಲ್ಲಿ ಜೈಲು ಪಾಲಾಗಿದ್ದಾರೆ) ಭ್ರಷ್ಟಾಚಾರ ಪ್ರಕರಣಗಳ ಲಾಭ ಪಡೆದೂ ಬಿಜೆಪಿಗೆ ಸಿಕ್ಕಿದ್ದು 40 ಸೀಟು ಮಾತ್ರ.
ಈಗ ಜೆಜೆಪಿ ಕೈ ಕೊಟ್ಟರೆ ಖಟ್ಟರ್ ಸರ್ಕಾರ ಬೀಳುವುದು ಖಚಿತ. ಅದಕ್ಕೆ ನೇರ ಕಾರಣ ಎಂಬುದರಲ್ಲಿ ಸಂಶಯವಿಲ್ಲ.

  • ಪಿ.ಕೆ ಮಲ್ಲನಗೌಡರ್, (ಪತ್ರಕರ್ತರು, ಅಭಿಪ್ರಾಯಗಳು ವೈಯಕ್ತಿಕವಾದವು)

ಇದನ್ನೂ ಓದಿ: ರಾಕೇಶ್ ಟಿಕಾಯತ್ (2013-21)ರನ್ನು ಅರ್ಥ ಮಾಡಿಕೊಳ್ಳುವುದು ಹೇಗೆ? ‘ಹರ್ ಹರ್ ಮಹಾದೇವ್, ಅಲ್ಲಾಹು ಅಕ್ಬರ್’…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....