Homeಮುಖಪುಟರೈತರ ಆಕ್ರೋಶದ ಪರಿಣಾಮ: ಸರ್ಕಾರ ಪತನದ ಭೀತಿಯಲ್ಲಿ ಹರಿಯಾಣ ಸಿಎಂ!

ರೈತರ ಆಕ್ರೋಶದ ಪರಿಣಾಮ: ಸರ್ಕಾರ ಪತನದ ಭೀತಿಯಲ್ಲಿ ಹರಿಯಾಣ ಸಿಎಂ!

ಹರಿಯಾಣ ಮುಖ್ಯಮಂತ್ರಿ ಮನೋಹರ್‌ಲಾಲ್ ಖಟ್ಟರ್ ಈಗ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದನ್ನೇ ಕಡಿಮೆ ಮಾಡಿದ್ದಾರೆ.

- Advertisement -
- Advertisement -

ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್‌ಗೆ ಒಂದು ಕಡೆ ರೈತರ ಪ್ರತಿಭಟನೆಯ ಆಕ್ರೋಶದ ಬಿಸಿ ತಟ್ಟತೊಡಗಿದ್ದರೆ, ಇನ್ನೊಂದು ಕಡೆ ಆಡಳಿತದ ಮಿತ್ರ ಪಕ್ಷ ಜನತಾ ಜನನಾಯಕ್ ಪಾರ್ಟಿ (ಜೆಜೆಪಿ) ರೈತರಿಗೆ ಬೆಂಬಲವಾಗಿ ಯಾವ ಕ್ಷಣದಲ್ಲಾದರೂ ಹೋಳಾಗಬಹದು ಅಥವಾ ಅದರ ಎಲ್ಲ 10 ಶಾಸಕರೂ ಸರ್ಕಾರಕ್ಕೆ ಬೆಂಬಲ ಹಿಂತೆಗೆದುಕೊಳ್ಳಬಹುದು ಎಂಬ ಭಯ ಕಾಡತೊಡಗಿದೆ.

ಪ್ರತಿವರ್ಷ ಎಲ್ಲ ಮುಖ್ಯಮಂತ್ರಿಗಳು ನಿರ್ದಿಷ್ಟ ಸ್ಥಳದಲ್ಲಿ ಗಣರಾಜ್ಯೋತ್ಸವ ಧ್ವಜ ಹಾರಿಸುತ್ತಾರೆ. ಆದರೆ, ಈ ಸಲ ಖಟ್ಟರ್ ಗಣರಾಜ್ಯೋತ್ಸವ ಕಾರ್ಯಕ್ರಮದ ಸ್ಥಳವನ್ನೇ ಶಿಫ್ಟ್ ಮಾಡಿಸಿದ್ದರು. ಪಾಣಿಪತ್‌ನಲ್ಲಿ ಧ್ವಜ ಹಾರಿಸಲು ಹಿಂದೇಟು ಹಾಕಿದ ಖಟ್ಟರ್, ಸ್ವಲ್ಪ ಸುರಕ್ಷಿತ ಸ್ಥಳವೆಂದು ಪಂಚಕುಲಾದಲ್ಲಿ ಕಾರ್ಯಕ್ರಮ ನಡೆಸಿ ತ್ರಿವರ್ಣ ಧ್ವಜ ಹಾರಿಸಿದರು!

ಅರೆ, ಯಾರ ಭಯ? ಉಗ್ರರ ಭಯವಾ? ಊಹೂಂ, ರೈತರು ಕಪ್ಪು ಬಟ್ಟೆ ಪ್ರದರ್ಶನ ಮಾಡಬಹುದು ಅಥವಾ ಘೇರಾವ್ ಹಾಕಬಹುದು ಎಂಬ ಆತಂಕ. ತನ್ನ ರಾಜ್ಯದಲ್ಲೇ ಇಷ್ಟು ಆತಂಕಿತನಾಗಿ ಆಡಳಿತ ಮಾಡಿದ ಸಿಎಂ ಇನ್ನೊಬ್ಬರಿರಲಿಕ್ಕಿಲ್ಲ.

ಪಾಣಿಪತ್ ಮನೋಹರಲಾಲ್ ಖಟ್ಟರ್ ಸ್ವಗ್ರಾಮ ಕರ್ನಾಲ್‌ನಿಂದ 16 ಕಿಮೀ ದೂರದಲ್ಲಿದೆ. 15 ದಿನಗಳ ಹಿಂದೆ ಖಟ್ಟರ್ ಕರ್ನಾಲ್‌ಗೆ ಹೋಗಲೂ ಆಗಲಿಲ್ಲ. ಏಕೆಂದರೆ, ರೈತರು ಅಲ್ಲಿನ ಹೆಲಿಪ್ಯಾಡ್ ಧ್ವಂಸಗೊಳಿಸಿದ್ದರು. ಕಾರ್ಯಕ್ರಮ ನಡೆಯಬೇಕಿದ್ದ ವೇದಿಕೆಗೆ ನುಗ್ಗು ಚೆಲ್ಲಾಪಿಲ್ಲಿ ಮಾಡಿದ್ದರು. ತಿಂಗಳ ಹಿಂದೆ ಅದೇ ಕರ್ನಾಲ್‌ನಲ್ಲಿ ನಡೆಯಬೇಕಿದ್ದ ಸಾರ್ವಜನಿಕ ಕಾರ್ಯಕ್ರಮವನ್ನೇ ಖಟ್ಟರ್ ರದ್ದು ಮಾಡಬೇಕಾಯಿತು. ಕಾರಣ ರೈತರನ್ನು ಎದುರಿಸುವ ರಾಜಕೀಯ ದೃಢತೆಯೇ ಇಲ್ಲ.

ಅಂಬಾಲಾದಲ್ಲಿ 13 ರೈತರ ಮೇಲೆ ಕೊಲೆ ಯತ್ನ, ದಂಗೆ ಪ್ರಕರಣ ದಾಖಲಿಸಲಾಗಿದೆ. ರೈತರು ಖಟ್ಟರ್‌ಗೆ ಕಪ್ಪು ದ್ವಜ ಪ್ರದರ್ಶನ ಮಾಡಿದ್ದರು. ಹಾಗೆಯೇ ರೈತರು ಖಟ್ಟರ್ ಬೆಂಗಾವಲು ವಾಹನವನ್ನು ತಡೆದು ವಾಪಸ್ ಕಳಿಸಿದ್ದರು.

ರಾಜ್ಯದಲ್ಲಿ ಅರಾಜಕತೆ ಉಂಟಾಗಬಹುದು ಎಂಬ ನೆಪ ನೀಡಿ, 22 ಜಿಲ್ಲೆಗಳ ಪೈಕಿ 17ರಲ್ಲಿ ಇಂಟರ್‌ನೆಟ್ ಸೇವೆಯನ್ನು ಖಟ್ಟರ್ ಸ್ಥಗಿತಗೊಳಿಸಿದ್ದಾರೆ. ರೈತ ಹೋರಾಟ ಎಲ್ಲೆಡೆ ಹರಡದಂತೆ ತಡೆಯುವ ಕುತಂತ್ರ ಇದಾಗಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಂದುವರಿದು ರೈತರು ದೇವಸ್ಥಾನದ ಮೈಕ್‌ಗಳನ್ನು ಉಪಯೋಗಿಸಿ ರೈತ ಹೋರಾಟದ ಪರಿಸ್ಥಿತಿಯನ್ನು ವಿವರಿಸಿ, ಹೋರಾಟ ಸೇರಿಕೊಳ್ಳಲು ಕರೆ ನೀಡುತ್ತಿದ್ದಾರೆ.

ಸರ್ಕಾರ ಪತನದ ಭೀತಿ

ಇನ್ನೊಂದು ಕಡೆ ಖಟ್ಟರ್‌ಗೆ ಸರ್ಕಾರ ಬೀಳಬಹುದೆಂಬ ಆತಂಕ ಶುರುವಾಗಿದೆ. ಜನವರಿ 26ರ ಕೆಂಪುಕೋಟೆಯ ಅಹಿತಕರ ಘಟನೆ ನಂತರ ಸ್ವಲ್ಪ ನಿರಾಳರಾಗಿದ್ದ ಅವರಿಗೆ, ಟಿಕಾಯತ್ ಮನವಿ ನಂತರ ತೀವ್ರಗೊಳ್ಳುತ್ತಿರುವ ರೈತರ ಪ್ರತಿಭಟನೆ ಚಿಂತೆಗೀಡುಮಾಡಿದೆ.

90 ಸ್ಥಾನಗಳ ವಿಧಾನಸಭೆಯಲ್ಲಿ ಬಿಜೆಪಿಯ ಸಂಖ್ಯಾಬಲ 40. 10 ಜೆಜೆಪಿ ಶಾಸಕರ ಬೆಂಬಲದೊಂದಿಗೆ ಸರ್ಕಾರ ರಚನೆಯಾಗಿದೆ. ಇಬ್ಬರು ಪಕ್ಷೇತರರು ರೈತರ ಬೆಂಬಲಾರ್ಥವಾಗಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ಹಿಂಪಡೆದಿದ್ದಾರೆ.

ಜೆಜೆಪಿ ನಾಯಕ, ಉಪ ಮುಖ್ಯಮಂತ್ರಿ ದುಷ್ಯಂತ್ ಸಿಂಗ್ ಚೌತಾಲರ ಮೇಲೆ ಅವರ ಪಕ್ಷದ ಶಾಸಕರೆ ಒತ್ತಡ ಹೇರುತ್ತಿದ್ದು, ರೈತರ ಪರ ನಿಲ್ಲೋಣ, ಸರ್ಕಾರಕ್ಕೆ ಬೆಂಬಲ ಹಿಂಪಡೆಯೋಣ ಎನ್ನುತ್ತಿದ್ದಾರೆ. ಕೆಲವರು ಜೆಜೆಪಿ ಬಿಡಲೂ ತಯಾರಾಗಿದ್ದಾರೆ. ಐಎನ್‌ಎಲ್‌ಡಿ ಶಾಸಕ ಅಭಯ ಸಿಂಗ್ ಚೌತಾಲ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ ನಂತರ, ದುಷ್ಯಂತ್ ರಾಜಿನಾಮೆಗೆ ಒತ್ತಡ ಹೆಚ್ಚುತ್ತಿದೆ.

ಕೃಷಿ ಕಾಯ್ದೆ ಪರ ಮೋದಿಯವರನ್ನು ಬೆಂಬಲಿಸಿ, ಪ್ರಧಾನಿಗೆ ಶಕ್ತಿ ತುಂಬಬೇಕಿದ್ದ ಖಟ್ಟರ್, ಕಳೆದ ವಾರ ಡಿಸಿಎಂ ದುಷ್ಯಂತರನ್ನು ದೆಹಲಿಗೆ ಕರೆದುಕೊಂಡು ಹೋಗಿ, ಮೋದಿ-ಶಾ ಎದುರು ನಿಲ್ಲಿಸಿ, ನೀವೇ ನನ್ನ ಸರ್ಕಾರ ಉಳಿಸಿ ಎಂದು ಮನವಿ ಮಾಡಿದ್ದರು.

ರಾಜ್ಯವೊಂದರ ಪ್ರಬಲ ಸಮುದಾಯಕ್ಕೆ ಮುಖ್ಯಮಂತ್ರಿ ಪದವಿ ನೀಡದೇ, ಸಣ್ಣ ಸಮುದಾಯಕ್ಕೆ ನೀಡುವ ಮುಲಕ ಮುಖ್ಯಮಂತ್ರಿಯನ್ನು ಹಿಡಿತದಲ್ಲಿ ಇಟ್ಟುಕೊಳ್ಳುವ ಮೋದಿ-ಶಾ ತಂತ್ರದ ಭಾಗವಾಗಿ ಖಟ್ಟರ್‌ರನ್ನು ಹರಿಯಾಣ ಸಿಎಂ ಮಾಡಲಾಗಿದೆ. ಪ್ರಬಲ ಜಾಟ್ ಸಮುದಾಯಕ್ಕೆ ಮುಖ್ಯಮಂತ್ರಿ ಪಟ್ಟ ನಿರಾಕರಿಸಿ, ಪಂಜಾಬಿ ಖತ್ರಿ ಸಮುದಾಯಕ್ಕೆ ಸೇರಿದ ಖಟ್ಟರ್‌ಗೆ ಕಿರೀಟ ತೊಡಿಸಲಾಗಿತ್ತು. ಐದು ವರ್ಷಗಳ ಅಡಳಿತದಲ್ಲಿ ಅಂಥದ್ದೇನೂ ಮಾಡದ ಪರಿಣಾಮ ಕಳೆದ ಚುನಾವಣೆಯಲ್ಲಿ ಬಿಜೆಪಿಗೆ 40 ಸೀಟು ಸಿಕ್ಕವು. ಕಾಂಗ್ರೆಸ್‌ನ ಭೂಪಿಂದರ್ ಹೂಡಾ ಮತ್ತು ಐಎನ್‌ಎಲ್‌ಡಿಯ ಓಂಪ್ರಕಾಶ್ ಚೌತಾಲರ (ಶಿಕ್ಷಕರ ನೇಮಕಾತಿ ಹಗರಣದಲ್ಲಿ ಜೈಲು ಪಾಲಾಗಿದ್ದಾರೆ) ಭ್ರಷ್ಟಾಚಾರ ಪ್ರಕರಣಗಳ ಲಾಭ ಪಡೆದೂ ಬಿಜೆಪಿಗೆ ಸಿಕ್ಕಿದ್ದು 40 ಸೀಟು ಮಾತ್ರ.
ಈಗ ಜೆಜೆಪಿ ಕೈ ಕೊಟ್ಟರೆ ಖಟ್ಟರ್ ಸರ್ಕಾರ ಬೀಳುವುದು ಖಚಿತ. ಅದಕ್ಕೆ ನೇರ ಕಾರಣ ಎಂಬುದರಲ್ಲಿ ಸಂಶಯವಿಲ್ಲ.

  • ಪಿ.ಕೆ ಮಲ್ಲನಗೌಡರ್, (ಪತ್ರಕರ್ತರು, ಅಭಿಪ್ರಾಯಗಳು ವೈಯಕ್ತಿಕವಾದವು)

ಇದನ್ನೂ ಓದಿ: ರಾಕೇಶ್ ಟಿಕಾಯತ್ (2013-21)ರನ್ನು ಅರ್ಥ ಮಾಡಿಕೊಳ್ಳುವುದು ಹೇಗೆ? ‘ಹರ್ ಹರ್ ಮಹಾದೇವ್, ಅಲ್ಲಾಹು ಅಕ್ಬರ್’…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...