Homeಮುಖಪುಟರೈತರ ಆಕ್ರೋಶದ ಪರಿಣಾಮ: ಸರ್ಕಾರ ಪತನದ ಭೀತಿಯಲ್ಲಿ ಹರಿಯಾಣ ಸಿಎಂ!

ರೈತರ ಆಕ್ರೋಶದ ಪರಿಣಾಮ: ಸರ್ಕಾರ ಪತನದ ಭೀತಿಯಲ್ಲಿ ಹರಿಯಾಣ ಸಿಎಂ!

ಹರಿಯಾಣ ಮುಖ್ಯಮಂತ್ರಿ ಮನೋಹರ್‌ಲಾಲ್ ಖಟ್ಟರ್ ಈಗ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದನ್ನೇ ಕಡಿಮೆ ಮಾಡಿದ್ದಾರೆ.

- Advertisement -
- Advertisement -

ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್‌ಗೆ ಒಂದು ಕಡೆ ರೈತರ ಪ್ರತಿಭಟನೆಯ ಆಕ್ರೋಶದ ಬಿಸಿ ತಟ್ಟತೊಡಗಿದ್ದರೆ, ಇನ್ನೊಂದು ಕಡೆ ಆಡಳಿತದ ಮಿತ್ರ ಪಕ್ಷ ಜನತಾ ಜನನಾಯಕ್ ಪಾರ್ಟಿ (ಜೆಜೆಪಿ) ರೈತರಿಗೆ ಬೆಂಬಲವಾಗಿ ಯಾವ ಕ್ಷಣದಲ್ಲಾದರೂ ಹೋಳಾಗಬಹದು ಅಥವಾ ಅದರ ಎಲ್ಲ 10 ಶಾಸಕರೂ ಸರ್ಕಾರಕ್ಕೆ ಬೆಂಬಲ ಹಿಂತೆಗೆದುಕೊಳ್ಳಬಹುದು ಎಂಬ ಭಯ ಕಾಡತೊಡಗಿದೆ.

ಪ್ರತಿವರ್ಷ ಎಲ್ಲ ಮುಖ್ಯಮಂತ್ರಿಗಳು ನಿರ್ದಿಷ್ಟ ಸ್ಥಳದಲ್ಲಿ ಗಣರಾಜ್ಯೋತ್ಸವ ಧ್ವಜ ಹಾರಿಸುತ್ತಾರೆ. ಆದರೆ, ಈ ಸಲ ಖಟ್ಟರ್ ಗಣರಾಜ್ಯೋತ್ಸವ ಕಾರ್ಯಕ್ರಮದ ಸ್ಥಳವನ್ನೇ ಶಿಫ್ಟ್ ಮಾಡಿಸಿದ್ದರು. ಪಾಣಿಪತ್‌ನಲ್ಲಿ ಧ್ವಜ ಹಾರಿಸಲು ಹಿಂದೇಟು ಹಾಕಿದ ಖಟ್ಟರ್, ಸ್ವಲ್ಪ ಸುರಕ್ಷಿತ ಸ್ಥಳವೆಂದು ಪಂಚಕುಲಾದಲ್ಲಿ ಕಾರ್ಯಕ್ರಮ ನಡೆಸಿ ತ್ರಿವರ್ಣ ಧ್ವಜ ಹಾರಿಸಿದರು!

ಅರೆ, ಯಾರ ಭಯ? ಉಗ್ರರ ಭಯವಾ? ಊಹೂಂ, ರೈತರು ಕಪ್ಪು ಬಟ್ಟೆ ಪ್ರದರ್ಶನ ಮಾಡಬಹುದು ಅಥವಾ ಘೇರಾವ್ ಹಾಕಬಹುದು ಎಂಬ ಆತಂಕ. ತನ್ನ ರಾಜ್ಯದಲ್ಲೇ ಇಷ್ಟು ಆತಂಕಿತನಾಗಿ ಆಡಳಿತ ಮಾಡಿದ ಸಿಎಂ ಇನ್ನೊಬ್ಬರಿರಲಿಕ್ಕಿಲ್ಲ.

ಪಾಣಿಪತ್ ಮನೋಹರಲಾಲ್ ಖಟ್ಟರ್ ಸ್ವಗ್ರಾಮ ಕರ್ನಾಲ್‌ನಿಂದ 16 ಕಿಮೀ ದೂರದಲ್ಲಿದೆ. 15 ದಿನಗಳ ಹಿಂದೆ ಖಟ್ಟರ್ ಕರ್ನಾಲ್‌ಗೆ ಹೋಗಲೂ ಆಗಲಿಲ್ಲ. ಏಕೆಂದರೆ, ರೈತರು ಅಲ್ಲಿನ ಹೆಲಿಪ್ಯಾಡ್ ಧ್ವಂಸಗೊಳಿಸಿದ್ದರು. ಕಾರ್ಯಕ್ರಮ ನಡೆಯಬೇಕಿದ್ದ ವೇದಿಕೆಗೆ ನುಗ್ಗು ಚೆಲ್ಲಾಪಿಲ್ಲಿ ಮಾಡಿದ್ದರು. ತಿಂಗಳ ಹಿಂದೆ ಅದೇ ಕರ್ನಾಲ್‌ನಲ್ಲಿ ನಡೆಯಬೇಕಿದ್ದ ಸಾರ್ವಜನಿಕ ಕಾರ್ಯಕ್ರಮವನ್ನೇ ಖಟ್ಟರ್ ರದ್ದು ಮಾಡಬೇಕಾಯಿತು. ಕಾರಣ ರೈತರನ್ನು ಎದುರಿಸುವ ರಾಜಕೀಯ ದೃಢತೆಯೇ ಇಲ್ಲ.

ಅಂಬಾಲಾದಲ್ಲಿ 13 ರೈತರ ಮೇಲೆ ಕೊಲೆ ಯತ್ನ, ದಂಗೆ ಪ್ರಕರಣ ದಾಖಲಿಸಲಾಗಿದೆ. ರೈತರು ಖಟ್ಟರ್‌ಗೆ ಕಪ್ಪು ದ್ವಜ ಪ್ರದರ್ಶನ ಮಾಡಿದ್ದರು. ಹಾಗೆಯೇ ರೈತರು ಖಟ್ಟರ್ ಬೆಂಗಾವಲು ವಾಹನವನ್ನು ತಡೆದು ವಾಪಸ್ ಕಳಿಸಿದ್ದರು.

ರಾಜ್ಯದಲ್ಲಿ ಅರಾಜಕತೆ ಉಂಟಾಗಬಹುದು ಎಂಬ ನೆಪ ನೀಡಿ, 22 ಜಿಲ್ಲೆಗಳ ಪೈಕಿ 17ರಲ್ಲಿ ಇಂಟರ್‌ನೆಟ್ ಸೇವೆಯನ್ನು ಖಟ್ಟರ್ ಸ್ಥಗಿತಗೊಳಿಸಿದ್ದಾರೆ. ರೈತ ಹೋರಾಟ ಎಲ್ಲೆಡೆ ಹರಡದಂತೆ ತಡೆಯುವ ಕುತಂತ್ರ ಇದಾಗಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಂದುವರಿದು ರೈತರು ದೇವಸ್ಥಾನದ ಮೈಕ್‌ಗಳನ್ನು ಉಪಯೋಗಿಸಿ ರೈತ ಹೋರಾಟದ ಪರಿಸ್ಥಿತಿಯನ್ನು ವಿವರಿಸಿ, ಹೋರಾಟ ಸೇರಿಕೊಳ್ಳಲು ಕರೆ ನೀಡುತ್ತಿದ್ದಾರೆ.

ಸರ್ಕಾರ ಪತನದ ಭೀತಿ

ಇನ್ನೊಂದು ಕಡೆ ಖಟ್ಟರ್‌ಗೆ ಸರ್ಕಾರ ಬೀಳಬಹುದೆಂಬ ಆತಂಕ ಶುರುವಾಗಿದೆ. ಜನವರಿ 26ರ ಕೆಂಪುಕೋಟೆಯ ಅಹಿತಕರ ಘಟನೆ ನಂತರ ಸ್ವಲ್ಪ ನಿರಾಳರಾಗಿದ್ದ ಅವರಿಗೆ, ಟಿಕಾಯತ್ ಮನವಿ ನಂತರ ತೀವ್ರಗೊಳ್ಳುತ್ತಿರುವ ರೈತರ ಪ್ರತಿಭಟನೆ ಚಿಂತೆಗೀಡುಮಾಡಿದೆ.

90 ಸ್ಥಾನಗಳ ವಿಧಾನಸಭೆಯಲ್ಲಿ ಬಿಜೆಪಿಯ ಸಂಖ್ಯಾಬಲ 40. 10 ಜೆಜೆಪಿ ಶಾಸಕರ ಬೆಂಬಲದೊಂದಿಗೆ ಸರ್ಕಾರ ರಚನೆಯಾಗಿದೆ. ಇಬ್ಬರು ಪಕ್ಷೇತರರು ರೈತರ ಬೆಂಬಲಾರ್ಥವಾಗಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ಹಿಂಪಡೆದಿದ್ದಾರೆ.

ಜೆಜೆಪಿ ನಾಯಕ, ಉಪ ಮುಖ್ಯಮಂತ್ರಿ ದುಷ್ಯಂತ್ ಸಿಂಗ್ ಚೌತಾಲರ ಮೇಲೆ ಅವರ ಪಕ್ಷದ ಶಾಸಕರೆ ಒತ್ತಡ ಹೇರುತ್ತಿದ್ದು, ರೈತರ ಪರ ನಿಲ್ಲೋಣ, ಸರ್ಕಾರಕ್ಕೆ ಬೆಂಬಲ ಹಿಂಪಡೆಯೋಣ ಎನ್ನುತ್ತಿದ್ದಾರೆ. ಕೆಲವರು ಜೆಜೆಪಿ ಬಿಡಲೂ ತಯಾರಾಗಿದ್ದಾರೆ. ಐಎನ್‌ಎಲ್‌ಡಿ ಶಾಸಕ ಅಭಯ ಸಿಂಗ್ ಚೌತಾಲ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ ನಂತರ, ದುಷ್ಯಂತ್ ರಾಜಿನಾಮೆಗೆ ಒತ್ತಡ ಹೆಚ್ಚುತ್ತಿದೆ.

ಕೃಷಿ ಕಾಯ್ದೆ ಪರ ಮೋದಿಯವರನ್ನು ಬೆಂಬಲಿಸಿ, ಪ್ರಧಾನಿಗೆ ಶಕ್ತಿ ತುಂಬಬೇಕಿದ್ದ ಖಟ್ಟರ್, ಕಳೆದ ವಾರ ಡಿಸಿಎಂ ದುಷ್ಯಂತರನ್ನು ದೆಹಲಿಗೆ ಕರೆದುಕೊಂಡು ಹೋಗಿ, ಮೋದಿ-ಶಾ ಎದುರು ನಿಲ್ಲಿಸಿ, ನೀವೇ ನನ್ನ ಸರ್ಕಾರ ಉಳಿಸಿ ಎಂದು ಮನವಿ ಮಾಡಿದ್ದರು.

ರಾಜ್ಯವೊಂದರ ಪ್ರಬಲ ಸಮುದಾಯಕ್ಕೆ ಮುಖ್ಯಮಂತ್ರಿ ಪದವಿ ನೀಡದೇ, ಸಣ್ಣ ಸಮುದಾಯಕ್ಕೆ ನೀಡುವ ಮುಲಕ ಮುಖ್ಯಮಂತ್ರಿಯನ್ನು ಹಿಡಿತದಲ್ಲಿ ಇಟ್ಟುಕೊಳ್ಳುವ ಮೋದಿ-ಶಾ ತಂತ್ರದ ಭಾಗವಾಗಿ ಖಟ್ಟರ್‌ರನ್ನು ಹರಿಯಾಣ ಸಿಎಂ ಮಾಡಲಾಗಿದೆ. ಪ್ರಬಲ ಜಾಟ್ ಸಮುದಾಯಕ್ಕೆ ಮುಖ್ಯಮಂತ್ರಿ ಪಟ್ಟ ನಿರಾಕರಿಸಿ, ಪಂಜಾಬಿ ಖತ್ರಿ ಸಮುದಾಯಕ್ಕೆ ಸೇರಿದ ಖಟ್ಟರ್‌ಗೆ ಕಿರೀಟ ತೊಡಿಸಲಾಗಿತ್ತು. ಐದು ವರ್ಷಗಳ ಅಡಳಿತದಲ್ಲಿ ಅಂಥದ್ದೇನೂ ಮಾಡದ ಪರಿಣಾಮ ಕಳೆದ ಚುನಾವಣೆಯಲ್ಲಿ ಬಿಜೆಪಿಗೆ 40 ಸೀಟು ಸಿಕ್ಕವು. ಕಾಂಗ್ರೆಸ್‌ನ ಭೂಪಿಂದರ್ ಹೂಡಾ ಮತ್ತು ಐಎನ್‌ಎಲ್‌ಡಿಯ ಓಂಪ್ರಕಾಶ್ ಚೌತಾಲರ (ಶಿಕ್ಷಕರ ನೇಮಕಾತಿ ಹಗರಣದಲ್ಲಿ ಜೈಲು ಪಾಲಾಗಿದ್ದಾರೆ) ಭ್ರಷ್ಟಾಚಾರ ಪ್ರಕರಣಗಳ ಲಾಭ ಪಡೆದೂ ಬಿಜೆಪಿಗೆ ಸಿಕ್ಕಿದ್ದು 40 ಸೀಟು ಮಾತ್ರ.
ಈಗ ಜೆಜೆಪಿ ಕೈ ಕೊಟ್ಟರೆ ಖಟ್ಟರ್ ಸರ್ಕಾರ ಬೀಳುವುದು ಖಚಿತ. ಅದಕ್ಕೆ ನೇರ ಕಾರಣ ಎಂಬುದರಲ್ಲಿ ಸಂಶಯವಿಲ್ಲ.

  • ಪಿ.ಕೆ ಮಲ್ಲನಗೌಡರ್, (ಪತ್ರಕರ್ತರು, ಅಭಿಪ್ರಾಯಗಳು ವೈಯಕ್ತಿಕವಾದವು)

ಇದನ್ನೂ ಓದಿ: ರಾಕೇಶ್ ಟಿಕಾಯತ್ (2013-21)ರನ್ನು ಅರ್ಥ ಮಾಡಿಕೊಳ್ಳುವುದು ಹೇಗೆ? ‘ಹರ್ ಹರ್ ಮಹಾದೇವ್, ಅಲ್ಲಾಹು ಅಕ್ಬರ್’…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...