Homeಮುಖಪುಟರೈತರ ಆಕ್ರೋಶದ ಪರಿಣಾಮ: ಸರ್ಕಾರ ಪತನದ ಭೀತಿಯಲ್ಲಿ ಹರಿಯಾಣ ಸಿಎಂ!

ರೈತರ ಆಕ್ರೋಶದ ಪರಿಣಾಮ: ಸರ್ಕಾರ ಪತನದ ಭೀತಿಯಲ್ಲಿ ಹರಿಯಾಣ ಸಿಎಂ!

ಹರಿಯಾಣ ಮುಖ್ಯಮಂತ್ರಿ ಮನೋಹರ್‌ಲಾಲ್ ಖಟ್ಟರ್ ಈಗ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದನ್ನೇ ಕಡಿಮೆ ಮಾಡಿದ್ದಾರೆ.

- Advertisement -
- Advertisement -

ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್‌ಗೆ ಒಂದು ಕಡೆ ರೈತರ ಪ್ರತಿಭಟನೆಯ ಆಕ್ರೋಶದ ಬಿಸಿ ತಟ್ಟತೊಡಗಿದ್ದರೆ, ಇನ್ನೊಂದು ಕಡೆ ಆಡಳಿತದ ಮಿತ್ರ ಪಕ್ಷ ಜನತಾ ಜನನಾಯಕ್ ಪಾರ್ಟಿ (ಜೆಜೆಪಿ) ರೈತರಿಗೆ ಬೆಂಬಲವಾಗಿ ಯಾವ ಕ್ಷಣದಲ್ಲಾದರೂ ಹೋಳಾಗಬಹದು ಅಥವಾ ಅದರ ಎಲ್ಲ 10 ಶಾಸಕರೂ ಸರ್ಕಾರಕ್ಕೆ ಬೆಂಬಲ ಹಿಂತೆಗೆದುಕೊಳ್ಳಬಹುದು ಎಂಬ ಭಯ ಕಾಡತೊಡಗಿದೆ.

ಪ್ರತಿವರ್ಷ ಎಲ್ಲ ಮುಖ್ಯಮಂತ್ರಿಗಳು ನಿರ್ದಿಷ್ಟ ಸ್ಥಳದಲ್ಲಿ ಗಣರಾಜ್ಯೋತ್ಸವ ಧ್ವಜ ಹಾರಿಸುತ್ತಾರೆ. ಆದರೆ, ಈ ಸಲ ಖಟ್ಟರ್ ಗಣರಾಜ್ಯೋತ್ಸವ ಕಾರ್ಯಕ್ರಮದ ಸ್ಥಳವನ್ನೇ ಶಿಫ್ಟ್ ಮಾಡಿಸಿದ್ದರು. ಪಾಣಿಪತ್‌ನಲ್ಲಿ ಧ್ವಜ ಹಾರಿಸಲು ಹಿಂದೇಟು ಹಾಕಿದ ಖಟ್ಟರ್, ಸ್ವಲ್ಪ ಸುರಕ್ಷಿತ ಸ್ಥಳವೆಂದು ಪಂಚಕುಲಾದಲ್ಲಿ ಕಾರ್ಯಕ್ರಮ ನಡೆಸಿ ತ್ರಿವರ್ಣ ಧ್ವಜ ಹಾರಿಸಿದರು!

ಅರೆ, ಯಾರ ಭಯ? ಉಗ್ರರ ಭಯವಾ? ಊಹೂಂ, ರೈತರು ಕಪ್ಪು ಬಟ್ಟೆ ಪ್ರದರ್ಶನ ಮಾಡಬಹುದು ಅಥವಾ ಘೇರಾವ್ ಹಾಕಬಹುದು ಎಂಬ ಆತಂಕ. ತನ್ನ ರಾಜ್ಯದಲ್ಲೇ ಇಷ್ಟು ಆತಂಕಿತನಾಗಿ ಆಡಳಿತ ಮಾಡಿದ ಸಿಎಂ ಇನ್ನೊಬ್ಬರಿರಲಿಕ್ಕಿಲ್ಲ.

ಪಾಣಿಪತ್ ಮನೋಹರಲಾಲ್ ಖಟ್ಟರ್ ಸ್ವಗ್ರಾಮ ಕರ್ನಾಲ್‌ನಿಂದ 16 ಕಿಮೀ ದೂರದಲ್ಲಿದೆ. 15 ದಿನಗಳ ಹಿಂದೆ ಖಟ್ಟರ್ ಕರ್ನಾಲ್‌ಗೆ ಹೋಗಲೂ ಆಗಲಿಲ್ಲ. ಏಕೆಂದರೆ, ರೈತರು ಅಲ್ಲಿನ ಹೆಲಿಪ್ಯಾಡ್ ಧ್ವಂಸಗೊಳಿಸಿದ್ದರು. ಕಾರ್ಯಕ್ರಮ ನಡೆಯಬೇಕಿದ್ದ ವೇದಿಕೆಗೆ ನುಗ್ಗು ಚೆಲ್ಲಾಪಿಲ್ಲಿ ಮಾಡಿದ್ದರು. ತಿಂಗಳ ಹಿಂದೆ ಅದೇ ಕರ್ನಾಲ್‌ನಲ್ಲಿ ನಡೆಯಬೇಕಿದ್ದ ಸಾರ್ವಜನಿಕ ಕಾರ್ಯಕ್ರಮವನ್ನೇ ಖಟ್ಟರ್ ರದ್ದು ಮಾಡಬೇಕಾಯಿತು. ಕಾರಣ ರೈತರನ್ನು ಎದುರಿಸುವ ರಾಜಕೀಯ ದೃಢತೆಯೇ ಇಲ್ಲ.

ಅಂಬಾಲಾದಲ್ಲಿ 13 ರೈತರ ಮೇಲೆ ಕೊಲೆ ಯತ್ನ, ದಂಗೆ ಪ್ರಕರಣ ದಾಖಲಿಸಲಾಗಿದೆ. ರೈತರು ಖಟ್ಟರ್‌ಗೆ ಕಪ್ಪು ದ್ವಜ ಪ್ರದರ್ಶನ ಮಾಡಿದ್ದರು. ಹಾಗೆಯೇ ರೈತರು ಖಟ್ಟರ್ ಬೆಂಗಾವಲು ವಾಹನವನ್ನು ತಡೆದು ವಾಪಸ್ ಕಳಿಸಿದ್ದರು.

ರಾಜ್ಯದಲ್ಲಿ ಅರಾಜಕತೆ ಉಂಟಾಗಬಹುದು ಎಂಬ ನೆಪ ನೀಡಿ, 22 ಜಿಲ್ಲೆಗಳ ಪೈಕಿ 17ರಲ್ಲಿ ಇಂಟರ್‌ನೆಟ್ ಸೇವೆಯನ್ನು ಖಟ್ಟರ್ ಸ್ಥಗಿತಗೊಳಿಸಿದ್ದಾರೆ. ರೈತ ಹೋರಾಟ ಎಲ್ಲೆಡೆ ಹರಡದಂತೆ ತಡೆಯುವ ಕುತಂತ್ರ ಇದಾಗಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಂದುವರಿದು ರೈತರು ದೇವಸ್ಥಾನದ ಮೈಕ್‌ಗಳನ್ನು ಉಪಯೋಗಿಸಿ ರೈತ ಹೋರಾಟದ ಪರಿಸ್ಥಿತಿಯನ್ನು ವಿವರಿಸಿ, ಹೋರಾಟ ಸೇರಿಕೊಳ್ಳಲು ಕರೆ ನೀಡುತ್ತಿದ್ದಾರೆ.

ಸರ್ಕಾರ ಪತನದ ಭೀತಿ

ಇನ್ನೊಂದು ಕಡೆ ಖಟ್ಟರ್‌ಗೆ ಸರ್ಕಾರ ಬೀಳಬಹುದೆಂಬ ಆತಂಕ ಶುರುವಾಗಿದೆ. ಜನವರಿ 26ರ ಕೆಂಪುಕೋಟೆಯ ಅಹಿತಕರ ಘಟನೆ ನಂತರ ಸ್ವಲ್ಪ ನಿರಾಳರಾಗಿದ್ದ ಅವರಿಗೆ, ಟಿಕಾಯತ್ ಮನವಿ ನಂತರ ತೀವ್ರಗೊಳ್ಳುತ್ತಿರುವ ರೈತರ ಪ್ರತಿಭಟನೆ ಚಿಂತೆಗೀಡುಮಾಡಿದೆ.

90 ಸ್ಥಾನಗಳ ವಿಧಾನಸಭೆಯಲ್ಲಿ ಬಿಜೆಪಿಯ ಸಂಖ್ಯಾಬಲ 40. 10 ಜೆಜೆಪಿ ಶಾಸಕರ ಬೆಂಬಲದೊಂದಿಗೆ ಸರ್ಕಾರ ರಚನೆಯಾಗಿದೆ. ಇಬ್ಬರು ಪಕ್ಷೇತರರು ರೈತರ ಬೆಂಬಲಾರ್ಥವಾಗಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ಹಿಂಪಡೆದಿದ್ದಾರೆ.

ಜೆಜೆಪಿ ನಾಯಕ, ಉಪ ಮುಖ್ಯಮಂತ್ರಿ ದುಷ್ಯಂತ್ ಸಿಂಗ್ ಚೌತಾಲರ ಮೇಲೆ ಅವರ ಪಕ್ಷದ ಶಾಸಕರೆ ಒತ್ತಡ ಹೇರುತ್ತಿದ್ದು, ರೈತರ ಪರ ನಿಲ್ಲೋಣ, ಸರ್ಕಾರಕ್ಕೆ ಬೆಂಬಲ ಹಿಂಪಡೆಯೋಣ ಎನ್ನುತ್ತಿದ್ದಾರೆ. ಕೆಲವರು ಜೆಜೆಪಿ ಬಿಡಲೂ ತಯಾರಾಗಿದ್ದಾರೆ. ಐಎನ್‌ಎಲ್‌ಡಿ ಶಾಸಕ ಅಭಯ ಸಿಂಗ್ ಚೌತಾಲ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ ನಂತರ, ದುಷ್ಯಂತ್ ರಾಜಿನಾಮೆಗೆ ಒತ್ತಡ ಹೆಚ್ಚುತ್ತಿದೆ.

ಕೃಷಿ ಕಾಯ್ದೆ ಪರ ಮೋದಿಯವರನ್ನು ಬೆಂಬಲಿಸಿ, ಪ್ರಧಾನಿಗೆ ಶಕ್ತಿ ತುಂಬಬೇಕಿದ್ದ ಖಟ್ಟರ್, ಕಳೆದ ವಾರ ಡಿಸಿಎಂ ದುಷ್ಯಂತರನ್ನು ದೆಹಲಿಗೆ ಕರೆದುಕೊಂಡು ಹೋಗಿ, ಮೋದಿ-ಶಾ ಎದುರು ನಿಲ್ಲಿಸಿ, ನೀವೇ ನನ್ನ ಸರ್ಕಾರ ಉಳಿಸಿ ಎಂದು ಮನವಿ ಮಾಡಿದ್ದರು.

ರಾಜ್ಯವೊಂದರ ಪ್ರಬಲ ಸಮುದಾಯಕ್ಕೆ ಮುಖ್ಯಮಂತ್ರಿ ಪದವಿ ನೀಡದೇ, ಸಣ್ಣ ಸಮುದಾಯಕ್ಕೆ ನೀಡುವ ಮುಲಕ ಮುಖ್ಯಮಂತ್ರಿಯನ್ನು ಹಿಡಿತದಲ್ಲಿ ಇಟ್ಟುಕೊಳ್ಳುವ ಮೋದಿ-ಶಾ ತಂತ್ರದ ಭಾಗವಾಗಿ ಖಟ್ಟರ್‌ರನ್ನು ಹರಿಯಾಣ ಸಿಎಂ ಮಾಡಲಾಗಿದೆ. ಪ್ರಬಲ ಜಾಟ್ ಸಮುದಾಯಕ್ಕೆ ಮುಖ್ಯಮಂತ್ರಿ ಪಟ್ಟ ನಿರಾಕರಿಸಿ, ಪಂಜಾಬಿ ಖತ್ರಿ ಸಮುದಾಯಕ್ಕೆ ಸೇರಿದ ಖಟ್ಟರ್‌ಗೆ ಕಿರೀಟ ತೊಡಿಸಲಾಗಿತ್ತು. ಐದು ವರ್ಷಗಳ ಅಡಳಿತದಲ್ಲಿ ಅಂಥದ್ದೇನೂ ಮಾಡದ ಪರಿಣಾಮ ಕಳೆದ ಚುನಾವಣೆಯಲ್ಲಿ ಬಿಜೆಪಿಗೆ 40 ಸೀಟು ಸಿಕ್ಕವು. ಕಾಂಗ್ರೆಸ್‌ನ ಭೂಪಿಂದರ್ ಹೂಡಾ ಮತ್ತು ಐಎನ್‌ಎಲ್‌ಡಿಯ ಓಂಪ್ರಕಾಶ್ ಚೌತಾಲರ (ಶಿಕ್ಷಕರ ನೇಮಕಾತಿ ಹಗರಣದಲ್ಲಿ ಜೈಲು ಪಾಲಾಗಿದ್ದಾರೆ) ಭ್ರಷ್ಟಾಚಾರ ಪ್ರಕರಣಗಳ ಲಾಭ ಪಡೆದೂ ಬಿಜೆಪಿಗೆ ಸಿಕ್ಕಿದ್ದು 40 ಸೀಟು ಮಾತ್ರ.
ಈಗ ಜೆಜೆಪಿ ಕೈ ಕೊಟ್ಟರೆ ಖಟ್ಟರ್ ಸರ್ಕಾರ ಬೀಳುವುದು ಖಚಿತ. ಅದಕ್ಕೆ ನೇರ ಕಾರಣ ಎಂಬುದರಲ್ಲಿ ಸಂಶಯವಿಲ್ಲ.

  • ಪಿ.ಕೆ ಮಲ್ಲನಗೌಡರ್, (ಪತ್ರಕರ್ತರು, ಅಭಿಪ್ರಾಯಗಳು ವೈಯಕ್ತಿಕವಾದವು)

ಇದನ್ನೂ ಓದಿ: ರಾಕೇಶ್ ಟಿಕಾಯತ್ (2013-21)ರನ್ನು ಅರ್ಥ ಮಾಡಿಕೊಳ್ಳುವುದು ಹೇಗೆ? ‘ಹರ್ ಹರ್ ಮಹಾದೇವ್, ಅಲ್ಲಾಹು ಅಕ್ಬರ್’…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...