Homeಮುಖಪುಟರೈತರ ಆಕ್ರೋಶದ ಪರಿಣಾಮ: ಸರ್ಕಾರ ಪತನದ ಭೀತಿಯಲ್ಲಿ ಹರಿಯಾಣ ಸಿಎಂ!

ರೈತರ ಆಕ್ರೋಶದ ಪರಿಣಾಮ: ಸರ್ಕಾರ ಪತನದ ಭೀತಿಯಲ್ಲಿ ಹರಿಯಾಣ ಸಿಎಂ!

ಹರಿಯಾಣ ಮುಖ್ಯಮಂತ್ರಿ ಮನೋಹರ್‌ಲಾಲ್ ಖಟ್ಟರ್ ಈಗ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದನ್ನೇ ಕಡಿಮೆ ಮಾಡಿದ್ದಾರೆ.

- Advertisement -
- Advertisement -

ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್‌ಗೆ ಒಂದು ಕಡೆ ರೈತರ ಪ್ರತಿಭಟನೆಯ ಆಕ್ರೋಶದ ಬಿಸಿ ತಟ್ಟತೊಡಗಿದ್ದರೆ, ಇನ್ನೊಂದು ಕಡೆ ಆಡಳಿತದ ಮಿತ್ರ ಪಕ್ಷ ಜನತಾ ಜನನಾಯಕ್ ಪಾರ್ಟಿ (ಜೆಜೆಪಿ) ರೈತರಿಗೆ ಬೆಂಬಲವಾಗಿ ಯಾವ ಕ್ಷಣದಲ್ಲಾದರೂ ಹೋಳಾಗಬಹದು ಅಥವಾ ಅದರ ಎಲ್ಲ 10 ಶಾಸಕರೂ ಸರ್ಕಾರಕ್ಕೆ ಬೆಂಬಲ ಹಿಂತೆಗೆದುಕೊಳ್ಳಬಹುದು ಎಂಬ ಭಯ ಕಾಡತೊಡಗಿದೆ.

ಪ್ರತಿವರ್ಷ ಎಲ್ಲ ಮುಖ್ಯಮಂತ್ರಿಗಳು ನಿರ್ದಿಷ್ಟ ಸ್ಥಳದಲ್ಲಿ ಗಣರಾಜ್ಯೋತ್ಸವ ಧ್ವಜ ಹಾರಿಸುತ್ತಾರೆ. ಆದರೆ, ಈ ಸಲ ಖಟ್ಟರ್ ಗಣರಾಜ್ಯೋತ್ಸವ ಕಾರ್ಯಕ್ರಮದ ಸ್ಥಳವನ್ನೇ ಶಿಫ್ಟ್ ಮಾಡಿಸಿದ್ದರು. ಪಾಣಿಪತ್‌ನಲ್ಲಿ ಧ್ವಜ ಹಾರಿಸಲು ಹಿಂದೇಟು ಹಾಕಿದ ಖಟ್ಟರ್, ಸ್ವಲ್ಪ ಸುರಕ್ಷಿತ ಸ್ಥಳವೆಂದು ಪಂಚಕುಲಾದಲ್ಲಿ ಕಾರ್ಯಕ್ರಮ ನಡೆಸಿ ತ್ರಿವರ್ಣ ಧ್ವಜ ಹಾರಿಸಿದರು!

ಅರೆ, ಯಾರ ಭಯ? ಉಗ್ರರ ಭಯವಾ? ಊಹೂಂ, ರೈತರು ಕಪ್ಪು ಬಟ್ಟೆ ಪ್ರದರ್ಶನ ಮಾಡಬಹುದು ಅಥವಾ ಘೇರಾವ್ ಹಾಕಬಹುದು ಎಂಬ ಆತಂಕ. ತನ್ನ ರಾಜ್ಯದಲ್ಲೇ ಇಷ್ಟು ಆತಂಕಿತನಾಗಿ ಆಡಳಿತ ಮಾಡಿದ ಸಿಎಂ ಇನ್ನೊಬ್ಬರಿರಲಿಕ್ಕಿಲ್ಲ.

ಪಾಣಿಪತ್ ಮನೋಹರಲಾಲ್ ಖಟ್ಟರ್ ಸ್ವಗ್ರಾಮ ಕರ್ನಾಲ್‌ನಿಂದ 16 ಕಿಮೀ ದೂರದಲ್ಲಿದೆ. 15 ದಿನಗಳ ಹಿಂದೆ ಖಟ್ಟರ್ ಕರ್ನಾಲ್‌ಗೆ ಹೋಗಲೂ ಆಗಲಿಲ್ಲ. ಏಕೆಂದರೆ, ರೈತರು ಅಲ್ಲಿನ ಹೆಲಿಪ್ಯಾಡ್ ಧ್ವಂಸಗೊಳಿಸಿದ್ದರು. ಕಾರ್ಯಕ್ರಮ ನಡೆಯಬೇಕಿದ್ದ ವೇದಿಕೆಗೆ ನುಗ್ಗು ಚೆಲ್ಲಾಪಿಲ್ಲಿ ಮಾಡಿದ್ದರು. ತಿಂಗಳ ಹಿಂದೆ ಅದೇ ಕರ್ನಾಲ್‌ನಲ್ಲಿ ನಡೆಯಬೇಕಿದ್ದ ಸಾರ್ವಜನಿಕ ಕಾರ್ಯಕ್ರಮವನ್ನೇ ಖಟ್ಟರ್ ರದ್ದು ಮಾಡಬೇಕಾಯಿತು. ಕಾರಣ ರೈತರನ್ನು ಎದುರಿಸುವ ರಾಜಕೀಯ ದೃಢತೆಯೇ ಇಲ್ಲ.

ಅಂಬಾಲಾದಲ್ಲಿ 13 ರೈತರ ಮೇಲೆ ಕೊಲೆ ಯತ್ನ, ದಂಗೆ ಪ್ರಕರಣ ದಾಖಲಿಸಲಾಗಿದೆ. ರೈತರು ಖಟ್ಟರ್‌ಗೆ ಕಪ್ಪು ದ್ವಜ ಪ್ರದರ್ಶನ ಮಾಡಿದ್ದರು. ಹಾಗೆಯೇ ರೈತರು ಖಟ್ಟರ್ ಬೆಂಗಾವಲು ವಾಹನವನ್ನು ತಡೆದು ವಾಪಸ್ ಕಳಿಸಿದ್ದರು.

ರಾಜ್ಯದಲ್ಲಿ ಅರಾಜಕತೆ ಉಂಟಾಗಬಹುದು ಎಂಬ ನೆಪ ನೀಡಿ, 22 ಜಿಲ್ಲೆಗಳ ಪೈಕಿ 17ರಲ್ಲಿ ಇಂಟರ್‌ನೆಟ್ ಸೇವೆಯನ್ನು ಖಟ್ಟರ್ ಸ್ಥಗಿತಗೊಳಿಸಿದ್ದಾರೆ. ರೈತ ಹೋರಾಟ ಎಲ್ಲೆಡೆ ಹರಡದಂತೆ ತಡೆಯುವ ಕುತಂತ್ರ ಇದಾಗಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಂದುವರಿದು ರೈತರು ದೇವಸ್ಥಾನದ ಮೈಕ್‌ಗಳನ್ನು ಉಪಯೋಗಿಸಿ ರೈತ ಹೋರಾಟದ ಪರಿಸ್ಥಿತಿಯನ್ನು ವಿವರಿಸಿ, ಹೋರಾಟ ಸೇರಿಕೊಳ್ಳಲು ಕರೆ ನೀಡುತ್ತಿದ್ದಾರೆ.

ಸರ್ಕಾರ ಪತನದ ಭೀತಿ

ಇನ್ನೊಂದು ಕಡೆ ಖಟ್ಟರ್‌ಗೆ ಸರ್ಕಾರ ಬೀಳಬಹುದೆಂಬ ಆತಂಕ ಶುರುವಾಗಿದೆ. ಜನವರಿ 26ರ ಕೆಂಪುಕೋಟೆಯ ಅಹಿತಕರ ಘಟನೆ ನಂತರ ಸ್ವಲ್ಪ ನಿರಾಳರಾಗಿದ್ದ ಅವರಿಗೆ, ಟಿಕಾಯತ್ ಮನವಿ ನಂತರ ತೀವ್ರಗೊಳ್ಳುತ್ತಿರುವ ರೈತರ ಪ್ರತಿಭಟನೆ ಚಿಂತೆಗೀಡುಮಾಡಿದೆ.

90 ಸ್ಥಾನಗಳ ವಿಧಾನಸಭೆಯಲ್ಲಿ ಬಿಜೆಪಿಯ ಸಂಖ್ಯಾಬಲ 40. 10 ಜೆಜೆಪಿ ಶಾಸಕರ ಬೆಂಬಲದೊಂದಿಗೆ ಸರ್ಕಾರ ರಚನೆಯಾಗಿದೆ. ಇಬ್ಬರು ಪಕ್ಷೇತರರು ರೈತರ ಬೆಂಬಲಾರ್ಥವಾಗಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ಹಿಂಪಡೆದಿದ್ದಾರೆ.

ಜೆಜೆಪಿ ನಾಯಕ, ಉಪ ಮುಖ್ಯಮಂತ್ರಿ ದುಷ್ಯಂತ್ ಸಿಂಗ್ ಚೌತಾಲರ ಮೇಲೆ ಅವರ ಪಕ್ಷದ ಶಾಸಕರೆ ಒತ್ತಡ ಹೇರುತ್ತಿದ್ದು, ರೈತರ ಪರ ನಿಲ್ಲೋಣ, ಸರ್ಕಾರಕ್ಕೆ ಬೆಂಬಲ ಹಿಂಪಡೆಯೋಣ ಎನ್ನುತ್ತಿದ್ದಾರೆ. ಕೆಲವರು ಜೆಜೆಪಿ ಬಿಡಲೂ ತಯಾರಾಗಿದ್ದಾರೆ. ಐಎನ್‌ಎಲ್‌ಡಿ ಶಾಸಕ ಅಭಯ ಸಿಂಗ್ ಚೌತಾಲ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ ನಂತರ, ದುಷ್ಯಂತ್ ರಾಜಿನಾಮೆಗೆ ಒತ್ತಡ ಹೆಚ್ಚುತ್ತಿದೆ.

ಕೃಷಿ ಕಾಯ್ದೆ ಪರ ಮೋದಿಯವರನ್ನು ಬೆಂಬಲಿಸಿ, ಪ್ರಧಾನಿಗೆ ಶಕ್ತಿ ತುಂಬಬೇಕಿದ್ದ ಖಟ್ಟರ್, ಕಳೆದ ವಾರ ಡಿಸಿಎಂ ದುಷ್ಯಂತರನ್ನು ದೆಹಲಿಗೆ ಕರೆದುಕೊಂಡು ಹೋಗಿ, ಮೋದಿ-ಶಾ ಎದುರು ನಿಲ್ಲಿಸಿ, ನೀವೇ ನನ್ನ ಸರ್ಕಾರ ಉಳಿಸಿ ಎಂದು ಮನವಿ ಮಾಡಿದ್ದರು.

ರಾಜ್ಯವೊಂದರ ಪ್ರಬಲ ಸಮುದಾಯಕ್ಕೆ ಮುಖ್ಯಮಂತ್ರಿ ಪದವಿ ನೀಡದೇ, ಸಣ್ಣ ಸಮುದಾಯಕ್ಕೆ ನೀಡುವ ಮುಲಕ ಮುಖ್ಯಮಂತ್ರಿಯನ್ನು ಹಿಡಿತದಲ್ಲಿ ಇಟ್ಟುಕೊಳ್ಳುವ ಮೋದಿ-ಶಾ ತಂತ್ರದ ಭಾಗವಾಗಿ ಖಟ್ಟರ್‌ರನ್ನು ಹರಿಯಾಣ ಸಿಎಂ ಮಾಡಲಾಗಿದೆ. ಪ್ರಬಲ ಜಾಟ್ ಸಮುದಾಯಕ್ಕೆ ಮುಖ್ಯಮಂತ್ರಿ ಪಟ್ಟ ನಿರಾಕರಿಸಿ, ಪಂಜಾಬಿ ಖತ್ರಿ ಸಮುದಾಯಕ್ಕೆ ಸೇರಿದ ಖಟ್ಟರ್‌ಗೆ ಕಿರೀಟ ತೊಡಿಸಲಾಗಿತ್ತು. ಐದು ವರ್ಷಗಳ ಅಡಳಿತದಲ್ಲಿ ಅಂಥದ್ದೇನೂ ಮಾಡದ ಪರಿಣಾಮ ಕಳೆದ ಚುನಾವಣೆಯಲ್ಲಿ ಬಿಜೆಪಿಗೆ 40 ಸೀಟು ಸಿಕ್ಕವು. ಕಾಂಗ್ರೆಸ್‌ನ ಭೂಪಿಂದರ್ ಹೂಡಾ ಮತ್ತು ಐಎನ್‌ಎಲ್‌ಡಿಯ ಓಂಪ್ರಕಾಶ್ ಚೌತಾಲರ (ಶಿಕ್ಷಕರ ನೇಮಕಾತಿ ಹಗರಣದಲ್ಲಿ ಜೈಲು ಪಾಲಾಗಿದ್ದಾರೆ) ಭ್ರಷ್ಟಾಚಾರ ಪ್ರಕರಣಗಳ ಲಾಭ ಪಡೆದೂ ಬಿಜೆಪಿಗೆ ಸಿಕ್ಕಿದ್ದು 40 ಸೀಟು ಮಾತ್ರ.
ಈಗ ಜೆಜೆಪಿ ಕೈ ಕೊಟ್ಟರೆ ಖಟ್ಟರ್ ಸರ್ಕಾರ ಬೀಳುವುದು ಖಚಿತ. ಅದಕ್ಕೆ ನೇರ ಕಾರಣ ಎಂಬುದರಲ್ಲಿ ಸಂಶಯವಿಲ್ಲ.

  • ಪಿ.ಕೆ ಮಲ್ಲನಗೌಡರ್, (ಪತ್ರಕರ್ತರು, ಅಭಿಪ್ರಾಯಗಳು ವೈಯಕ್ತಿಕವಾದವು)

ಇದನ್ನೂ ಓದಿ: ರಾಕೇಶ್ ಟಿಕಾಯತ್ (2013-21)ರನ್ನು ಅರ್ಥ ಮಾಡಿಕೊಳ್ಳುವುದು ಹೇಗೆ? ‘ಹರ್ ಹರ್ ಮಹಾದೇವ್, ಅಲ್ಲಾಹು ಅಕ್ಬರ್’…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...