Homeಕರ್ನಾಟಕಚನ್ನರಾಯಪಟ್ಟಣ ಭೂ ಸ್ವಾಧೀನ | ಸಿಎಂ ಮಾತಿಗೆ ಬೆಲೆ ಕೊಡದೆ ಕೆಐಎಡಿಬಿ ಅಧಿಕಾರಿಗಳಿಂದ ನೋಟಿಸ್: ರೈತರ...

ಚನ್ನರಾಯಪಟ್ಟಣ ಭೂ ಸ್ವಾಧೀನ | ಸಿಎಂ ಮಾತಿಗೆ ಬೆಲೆ ಕೊಡದೆ ಕೆಐಎಡಿಬಿ ಅಧಿಕಾರಿಗಳಿಂದ ನೋಟಿಸ್: ರೈತರ ಆಕ್ರೋಶ

ಕೆಐಎಡಿಬಿ ಕಚೇರಿಗೆ ಮುತ್ತಿಗೆ, ನಕಲಿ ದಾಖಲೆ ವಿರುದ್ದ ದೂರು

- Advertisement -
- Advertisement -

ಭೂ ಸ್ವಾಧೀನ ರದ್ದುಗೊಳಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ ಬಳಿಕವೂ, ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ದಿ ಮಂಡಳಿ (ಕೆಐಎಡಿಬಿ) ಅಧಿಕಾರಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆ ಚನ್ನರಾಯಪಟ್ಟಣ ಹೋಬಳಿಯ ರೈತರಿಗೆ ನೋಟಿಸ್ ಕೊಟ್ಟಿರುವುದು ಗೊಂದಲಕ್ಕೆ ಕಾರಣವಾಗಿದೆ.

ರೈತರು ಮತ್ತು ಹೋರಾಟಗಾರರು ಸೋಮವಾರ (ಸೆ.1) ಬೆಂಗಳೂರಿನ ಖನಿಜ ಭವನದಲ್ಲಿರುವ ಕೆಐಎಡಿಬಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕಚೇರಿ ಮತ್ತು ಅರವಿಂದ ಭವನದಲ್ಲಿರುವ ವಿಶೇಷ ಭೂ ಸ್ವಾಧೀನ ಅಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಮೂರೂವರೆ ವರ್ಷಗಳ ನಿರಂತರ ಹೋರಾಟದ ಫಲವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿ ವ್ಯಾಪ್ತಿಯ 13 ಹಳ್ಳಿಗಳ ರೈತರ 1,777 ಎಕರೆ ಭೂಸ್ವಾಧೀನವನ್ನು 2025 ಜುಲೈ 15ರಂದು ಸರ್ಕಾರ ಕೈಬಿಟ್ಟಿತ್ತು. ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಮಾಧ್ಯಮಗಳ ಮುಂದೆ ಅಧಿಕೃತ ಘೋಷಣೆ ಮಾಡಿದ್ದರು.

ಆದರೆ, ಇದೀಗ ಹ್ಯಾಡಾಳ, ಗೋಕರೆಬಚ್ಚೇನಹಳ್ಳಿ ಗ್ರಾಮಗಳ 439 ಎಕರೆ ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ  ಸೆಪ್ಟೆಂಬರ್ 6ರಂದು ದರ ನಿಗದಿ ಸಭೆ ಕರೆಯಲಾಗಿದೆ. ಈ ಕುರಿತು ರೈತರಿಗೆ ನೋಟಿಸ್ ನೀಡಲಾಗಿದೆ.

ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಕೆಐಎಡಿಬಿ ಅಧಿಕಾರಿಗಳ ಈ ನಡೆಯನ್ನು ತೀವ್ರವಾಗಿ ಖಂಡಿಸಿದ್ದು, ಸಿಎಂ ಘೋಷಿಸಿದಂತೆ 13 ಹಳ್ಳಿಗಳ ಎಲ್ಲಾ ಭೂಮಿಗಳ ಡಿನೋಟಿಫಿಕೇಶನ್ ಮುಗಿಯುವವರೆಗೆ ಯಾವುದೇ ರೀತಿಯ ಭೂಸ್ವಾಧೀನ ಪ್ರಕ್ರಿಯೆಯನ್ನು ಮುಂದುವರಿಸದಂತೆ ಆಗ್ರಹಿಸಿದೆ.

ತಮ್ಮ ಒತ್ತಾಯಗಳನ್ನು ಕೂಡಲೇ ಈಡೇರಿಸದಿದ್ದರೆ ಮುಂದಿನ ಎಲ್ಲಾ ಪರಿಣಾಮಗಳಿಗೆ ಕೆಐಎಡಿಬಿ ಕಚೇರಿಯೇ ಹೊಣೆಯಾಗಿರುತ್ತದೆ ಎಂದು ಎಚ್ಚರಿಕೆ ಕೊಟ್ಟಿದೆ.  

ನಕಲಿ ದಾಖಲೆ ವಿರುದ್ದ ದೂರು

ಕೆಐಎಡಿಬಿ ಭೂಸ್ವಾಧೀನಕ್ಕೆ ಒಪ್ಪಿಗೆ ಇದೆ ಎಂದು ರೈತರ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಲಾಗಿದೆ. ಅದನ್ನು ನಂಬಿ ಅಧಿಕಾರಿಗಳು ನೋಟಿಸ್ ಕೊಟ್ಟಿದ್ದಾರೆ ಎಂಬ ಆರೋಪವೂ ಕೇಳಿ ಬಂದಿದೆ.

ಹ್ಯಾಡಾಳ ಗ್ರಾಮದ ರೈತ ಲಗುಮಯ್ಯ ಎಂಬವರು ಈ ಸಂಬಂಧ ವಿಶೇಷ ಭೂ ಸ್ವಾಧೀನ ಅಧಿಕಾರಿಗೆ ದೂರು ಕೊಟ್ಟಿದ್ದಾರೆ. “ಭೂ ಸ್ವಾಧೀನಕ್ಕೆ ನನ್ನ ಒಪ್ಪಿಗೆ ಇದೆ ಎಂದು ನಕಲಿ ದಾಖಲೆ ಸೃಷ್ಟಿಸಿ ಅಥವಾ ನಕಲಿ ಸಹಿ ಹಾಕಿ ಅಧಿಕಾರಿಗಳ ದಾರಿ ತಪ್ಪಿಸಿರುವವರು ಮತ್ತು ಅದಕ್ಕೆ ಕುಮ್ಮಕ್ಕು ನೀಡಿರುವವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಬಾನು ಮುಷ್ತಾಕ್‌ರನ್ನು ವಿರೋಧಿಸುತ್ತಿರುವವರು ಧರ್ಮಾಂಧರು: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....