Homeಚಳವಳಿಬಿಸಿಲಿಗೂ ಬಗ್ಗುವುದಿಲ್ಲ: ಹೋರಾಟನಿರತ ರೈತರ ಟ್ಯ್ರಾಲಿ, ಟೆಂಟ್‌ಗಳಿಗೆ ಬಂದ ಎಸಿ, ಕೂಲರ್‌ಗಳು!

ಬಿಸಿಲಿಗೂ ಬಗ್ಗುವುದಿಲ್ಲ: ಹೋರಾಟನಿರತ ರೈತರ ಟ್ಯ್ರಾಲಿ, ಟೆಂಟ್‌ಗಳಿಗೆ ಬಂದ ಎಸಿ, ಕೂಲರ್‌ಗಳು!

’ಕೇಂದ್ರ ಸರ್ಕಾರ ಈ ಮೂರು ಕಾನೂನುಗಳನ್ನು ವಾಪಸ್ ತೆಗೆದುಕೊಳ್ಳುವವರೆಗೂ ಇಲ್ಲಿಂದ ಕದಲುವುದಿಲ್ಲ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಲು ಎಸಿ ಅಳವಡಿಸಿದ್ದೇವೆ’

- Advertisement -
- Advertisement -

ದೆಹಲಿಯ ತೀವ್ರ ಚಳಿಯಲ್ಲಿ ಆರಂಭವಾದ ರೈತ ಹೋರಾಟ ಈಗ ತೀವ್ರ ಬಿಸಿಲಿನತ್ತ ಸಾಗುತ್ತಿದೆ. ಚಳಿಗೆ ಅಂಜದೆ ಕುಳಿತ ರೈತರು ಈಗ ಬಿಸಿಲಿನ ತಾಪವನ್ನು ಎದುರಿಸಲು ಮುಂದಾಗಿದ್ದಾರೆ. ತೀವ್ರ ಸೆಕೆಯಿಂದ ಬದುಕುಳಿಯಲು ಪ್ರತಿಭಟನಾ ಸ್ಥಳವಾದ ಟಿಕ್ರಿ ಗಡಿಯಲ್ಲಿ ಈಗಾಗಲೇ ಹಲವು ಟೆಂಟ್, ಟ್ಯ್ರಾಲಿಗಳಲ್ಲಿ ಎಸಿ, ಕೂಲರ್‌, ಪ್ಯಾನ್‌ಗಳನ್ನು ಅಳವಡಿಸಲಾಗುತ್ತಿದೆ.

ನವೆಂಬರ್‌ 26, 27ಕ್ಕೆ ದೆಹಲಿಯ ಗಡಿಗಳಿಗೆ ಬಂದ ರೈತರನ್ನು ಆಹ್ವಾನಿಸಿದ್ದು ಕೊರೆಯುವ ಚಳಿ. ಚಳಿಯಿಂದಾಗಿ ಅನೇಕ ರೈತರು ಹುತಾತ್ಮರಾಗಿದ್ದಾರೆ. ಆನಂತರ ಏಕಾಏಕಿ ಮಳೆ ಸುರಿಯಿತು. ಈಗ ದೆಹಲಿಯ ಬೇಸಿಗೆ ಅದಕ್ಕಿಂತಲೂ ಕಠಿಣವಾಗಿರುತ್ತದೆ. ಈ ಹಿನ್ನಲೆಯಲ್ಲಿ ಈಗಾಗಲೇ ಸಿಂಘು, ಟಿಕ್ರಿ, ಗಾಝಿಪುರ್ ಮತ್ತು ಶಹಜಾನ್‌ಪುರ ಗಡಿಗಳಲ್ಲಿ ಫ್ಯಾನ್, ಎಸಿ, ಕೂಲರ್‌ಗಳ ವ್ಯವಸ್ಥೆ ಮಾಡಲಾಗುತ್ತಿದೆ.

ಟಿಕ್ರಿ ಗಡಿಯಲ್ಲಿ ಟ್ಯ್ರಾಲಿಯೊಂದಿಗೆ ಪ್ರತಿಭಟನೆಯಲ್ಲಿ ನವೆಂಬರ್ ತಿಂಗಳಿನಿಂದ ಭಾಗಿಯಾಗಿರುವ ಪಂಜಾಬ್‌ನ ಬಲಜಿತ್ ಸಿಂಗ್‌ ತಮ್ಮ ಟ್ಯ್ರಾಲಿಗೆ ಎಸಿ ಅಳವಡಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ: 24 ವರ್ಷದ ಯುವಕ ಬಲ್ಜಿತ್ ಸಿಂಗ್ ಅವಿರೋಧವಾಗಿ ಸರ್‌ಪಂಚ್‌ ಆದ ಕಥೆ

PC: Baljeeth singh, punjab

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಯುವಕ ಬಲಜಿತ್ ಸಿಂಗ್, ”ಈಗ ಅಷ್ಟೇನು ಬಿಸಿಲು ಇಲ್ಲ. ಆದರೆ, ನಾವು ಇಲ್ಲಿ ಎಸಿ ಹಾಕಿರುವ ಕಾರಣವೆಂದರೆ, ನಾವು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕರಾಳ ಕಾನೂನುಗಳನ್ನು ವಾಪಸ್ ತೆಗೆದುಕೊಳ್ಳುವವರೆಗೂ ಇಲ್ಲಿಂದ ಕದಲುವುದಿಲ್ಲ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಲು ಎಸಿ ಅಳವಡಿಸಿದ್ದೇವೆ” ಎಂದಿದ್ದಾರೆ.

ಇದರ ಜೊತೆಗೆ ಹಲವು ಮಂದಿ ತಮ್ಮ ಟೆಂಟ್ ಮತ್ತು ಟ್ಯ್ರಾಲಿಗಳಲ್ಲಿ ಸಣ್ಣ ಫ್ಯಾನ್‌ಗಳು, ಕೂಲರ್‌ಗಳನ್ನು ಅಳವಡಿಸಿದ್ದಾರೆ.

PC: Baljeeth singh, punjab

ಇದನ್ನೂ ಓದಿ: ರೈತ ಹೋರಾಟ: ಜಾತಿ ಕಟ್ಟುಪಾಡುಗಳನ್ನು ಮುರಿಯುತ್ತಿರುವ ಮಹಾಪಂಚಾಯತ್!

ಕೂಲರ್‌ ಮತ್ತು ಫ್ಯಾನ್‌ಗಳನ್ನು ಕೊಳ್ಳಲು ತಮ್ಮ ತಮ್ಮ ಗ್ರಾಮಗಳಲ್ಲಿ ಹಣ ಸಂಗ್ರಹಣೆ ಮಾಡಲಾಗುತ್ತಿದೆ. ಒಂದು ಎಕರೆಗೆ ನೂರು ರೂಪಾಯಿಯಂತೆ ಹಣವನ್ನು ಸಂಗ್ರಹಿಸಲಾಗುತ್ತಿದೆ. ಈ ಹಣದಿಂದ ಕೂಲರ್‌, ಎಸಿಗಳನ್ನು ತೆಗೆದುಕೊಳ್ಳಲಾಗುತ್ತದೆ.

ಇದರ ಜೊತೆಗೆ ಪ್ರತಿಭಟನಾ ಸ್ಥಳಗಳಲ್ಲಿ ಸೇವೆ ಸಲ್ಲಿಸುತ್ತಿರುವ ಹಲವಾರು ಸಂಘ ಸಂಸ್ಥೆಗಳು ಕೂಡ ಪ್ರತಿಭಟನಾ ನಿರತ ರೈತರಿಗೆ ಬೇಸಿಗೆಗೆ ಬೇಕಾದ ಮೂಲ ಸೌಕರ್ಯಗಳನ್ನು ಒದಗಿಸಿಕೊಡುವತ್ತ ಗಮನ ಹರಿಸಿವೆ. ದೆಹಲಿಯಲ್ಲಿರುವ ರೈತರಿಗೆ ಬೇಕಾದ ಸೌಲಭ್ಯಗಳನ್ನು ಒದಗಿಸಿಕೊಡುವ ಬಗ್ಗೆ ಮಹಾಪಂಚಾಯತ್‌ಗಳಲ್ಲಿ ನಿರ್ಣಯಗಳನ್ನು ತೆಗೆದುಕೊಳ್ಳಲಾಗುತ್ತಿದೆ.

ಇಷ್ಟು ದಿನ ಹೊದಿಕೆ, ಕಂಬಳಿ, ಸ್ಪೇಟರ್‌ಗಳನ್ನು ಹೊಂದಿಸಿದ್ದ ರೈತರು ಮತ್ತು ಪ್ರತಿಭಟನಾ ಬೆಂಬಲಿಗರು ಈಗ ಬೇಸಿಗೆಗೆ ಬೇಕಾದ ಚಾಪೆ, ಮಂಚಗಳು, ಫ್ಯಾನ್, ಎಸಿ, ಕೂಲರ್‌ಗಳನ್ನು ವ್ಯವಸ್ಥೆ ಮಾಡಿಕೊಳ್ಳುತ್ತಿದ್ದಾರೆ. ಇದರ ಮೂಲಕ ಸರ್ಕಾರಕ್ಕೆ ತಮ್ಮ ಗಟ್ಟಿ ಹೋರಾಟದ ಉತ್ತರವನ್ನು ನೀಡುತ್ತಿದ್ದಾರೆ.

ಚಳಿ, ಮಳೆ, ಮಂಜಿನಲ್ಲಿ ಕಳೆದ 95 ದಿನಗಳಿಂದ ಹೋರಾಟ ನಡೆಸುತ್ತಿರುವ ರೈತರು ಇನ್ನೆಷ್ಟು ದಿನಗಳಾದರೂ ಇಲ್ಲಿಯೇ ಹೋರಾಟ ಮುಂದುವರೆಸುತ್ತೇವೆ ಎಂಬುದಕ್ಕೆ ಸಾಕ್ಷಿಯಾಗಿ ಈ ಎರ್‌ ಕಂಡಿಷನರ್‌, ಕೂಲರ್‌ಗಳನ್ನು ಅಳವಡಿಸುತ್ತಿದ್ದಾರೆ.


ಇದನ್ನೂ ಓದಿ: ಇದು ಇಡೀ ದೇಶದ ರೈತ ಹೋರಾಟ: ಟಿಕ್ರಿ ಗಡಿಯಲ್ಲಿ ದಕ್ಷಿಣ ಭಾರತದ ಕಾರ್ಯಕರ್ತರ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...