Homeಚಳವಳಿಬಿಸಿಲಿಗೂ ಬಗ್ಗುವುದಿಲ್ಲ: ಹೋರಾಟನಿರತ ರೈತರ ಟ್ಯ್ರಾಲಿ, ಟೆಂಟ್‌ಗಳಿಗೆ ಬಂದ ಎಸಿ, ಕೂಲರ್‌ಗಳು!

ಬಿಸಿಲಿಗೂ ಬಗ್ಗುವುದಿಲ್ಲ: ಹೋರಾಟನಿರತ ರೈತರ ಟ್ಯ್ರಾಲಿ, ಟೆಂಟ್‌ಗಳಿಗೆ ಬಂದ ಎಸಿ, ಕೂಲರ್‌ಗಳು!

’ಕೇಂದ್ರ ಸರ್ಕಾರ ಈ ಮೂರು ಕಾನೂನುಗಳನ್ನು ವಾಪಸ್ ತೆಗೆದುಕೊಳ್ಳುವವರೆಗೂ ಇಲ್ಲಿಂದ ಕದಲುವುದಿಲ್ಲ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಲು ಎಸಿ ಅಳವಡಿಸಿದ್ದೇವೆ’

- Advertisement -
- Advertisement -

ದೆಹಲಿಯ ತೀವ್ರ ಚಳಿಯಲ್ಲಿ ಆರಂಭವಾದ ರೈತ ಹೋರಾಟ ಈಗ ತೀವ್ರ ಬಿಸಿಲಿನತ್ತ ಸಾಗುತ್ತಿದೆ. ಚಳಿಗೆ ಅಂಜದೆ ಕುಳಿತ ರೈತರು ಈಗ ಬಿಸಿಲಿನ ತಾಪವನ್ನು ಎದುರಿಸಲು ಮುಂದಾಗಿದ್ದಾರೆ. ತೀವ್ರ ಸೆಕೆಯಿಂದ ಬದುಕುಳಿಯಲು ಪ್ರತಿಭಟನಾ ಸ್ಥಳವಾದ ಟಿಕ್ರಿ ಗಡಿಯಲ್ಲಿ ಈಗಾಗಲೇ ಹಲವು ಟೆಂಟ್, ಟ್ಯ್ರಾಲಿಗಳಲ್ಲಿ ಎಸಿ, ಕೂಲರ್‌, ಪ್ಯಾನ್‌ಗಳನ್ನು ಅಳವಡಿಸಲಾಗುತ್ತಿದೆ.

ನವೆಂಬರ್‌ 26, 27ಕ್ಕೆ ದೆಹಲಿಯ ಗಡಿಗಳಿಗೆ ಬಂದ ರೈತರನ್ನು ಆಹ್ವಾನಿಸಿದ್ದು ಕೊರೆಯುವ ಚಳಿ. ಚಳಿಯಿಂದಾಗಿ ಅನೇಕ ರೈತರು ಹುತಾತ್ಮರಾಗಿದ್ದಾರೆ. ಆನಂತರ ಏಕಾಏಕಿ ಮಳೆ ಸುರಿಯಿತು. ಈಗ ದೆಹಲಿಯ ಬೇಸಿಗೆ ಅದಕ್ಕಿಂತಲೂ ಕಠಿಣವಾಗಿರುತ್ತದೆ. ಈ ಹಿನ್ನಲೆಯಲ್ಲಿ ಈಗಾಗಲೇ ಸಿಂಘು, ಟಿಕ್ರಿ, ಗಾಝಿಪುರ್ ಮತ್ತು ಶಹಜಾನ್‌ಪುರ ಗಡಿಗಳಲ್ಲಿ ಫ್ಯಾನ್, ಎಸಿ, ಕೂಲರ್‌ಗಳ ವ್ಯವಸ್ಥೆ ಮಾಡಲಾಗುತ್ತಿದೆ.

ಟಿಕ್ರಿ ಗಡಿಯಲ್ಲಿ ಟ್ಯ್ರಾಲಿಯೊಂದಿಗೆ ಪ್ರತಿಭಟನೆಯಲ್ಲಿ ನವೆಂಬರ್ ತಿಂಗಳಿನಿಂದ ಭಾಗಿಯಾಗಿರುವ ಪಂಜಾಬ್‌ನ ಬಲಜಿತ್ ಸಿಂಗ್‌ ತಮ್ಮ ಟ್ಯ್ರಾಲಿಗೆ ಎಸಿ ಅಳವಡಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ: 24 ವರ್ಷದ ಯುವಕ ಬಲ್ಜಿತ್ ಸಿಂಗ್ ಅವಿರೋಧವಾಗಿ ಸರ್‌ಪಂಚ್‌ ಆದ ಕಥೆ

PC: Baljeeth singh, punjab

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಯುವಕ ಬಲಜಿತ್ ಸಿಂಗ್, ”ಈಗ ಅಷ್ಟೇನು ಬಿಸಿಲು ಇಲ್ಲ. ಆದರೆ, ನಾವು ಇಲ್ಲಿ ಎಸಿ ಹಾಕಿರುವ ಕಾರಣವೆಂದರೆ, ನಾವು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕರಾಳ ಕಾನೂನುಗಳನ್ನು ವಾಪಸ್ ತೆಗೆದುಕೊಳ್ಳುವವರೆಗೂ ಇಲ್ಲಿಂದ ಕದಲುವುದಿಲ್ಲ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಲು ಎಸಿ ಅಳವಡಿಸಿದ್ದೇವೆ” ಎಂದಿದ್ದಾರೆ.

ಇದರ ಜೊತೆಗೆ ಹಲವು ಮಂದಿ ತಮ್ಮ ಟೆಂಟ್ ಮತ್ತು ಟ್ಯ್ರಾಲಿಗಳಲ್ಲಿ ಸಣ್ಣ ಫ್ಯಾನ್‌ಗಳು, ಕೂಲರ್‌ಗಳನ್ನು ಅಳವಡಿಸಿದ್ದಾರೆ.

PC: Baljeeth singh, punjab

ಇದನ್ನೂ ಓದಿ: ರೈತ ಹೋರಾಟ: ಜಾತಿ ಕಟ್ಟುಪಾಡುಗಳನ್ನು ಮುರಿಯುತ್ತಿರುವ ಮಹಾಪಂಚಾಯತ್!

ಕೂಲರ್‌ ಮತ್ತು ಫ್ಯಾನ್‌ಗಳನ್ನು ಕೊಳ್ಳಲು ತಮ್ಮ ತಮ್ಮ ಗ್ರಾಮಗಳಲ್ಲಿ ಹಣ ಸಂಗ್ರಹಣೆ ಮಾಡಲಾಗುತ್ತಿದೆ. ಒಂದು ಎಕರೆಗೆ ನೂರು ರೂಪಾಯಿಯಂತೆ ಹಣವನ್ನು ಸಂಗ್ರಹಿಸಲಾಗುತ್ತಿದೆ. ಈ ಹಣದಿಂದ ಕೂಲರ್‌, ಎಸಿಗಳನ್ನು ತೆಗೆದುಕೊಳ್ಳಲಾಗುತ್ತದೆ.

ಇದರ ಜೊತೆಗೆ ಪ್ರತಿಭಟನಾ ಸ್ಥಳಗಳಲ್ಲಿ ಸೇವೆ ಸಲ್ಲಿಸುತ್ತಿರುವ ಹಲವಾರು ಸಂಘ ಸಂಸ್ಥೆಗಳು ಕೂಡ ಪ್ರತಿಭಟನಾ ನಿರತ ರೈತರಿಗೆ ಬೇಸಿಗೆಗೆ ಬೇಕಾದ ಮೂಲ ಸೌಕರ್ಯಗಳನ್ನು ಒದಗಿಸಿಕೊಡುವತ್ತ ಗಮನ ಹರಿಸಿವೆ. ದೆಹಲಿಯಲ್ಲಿರುವ ರೈತರಿಗೆ ಬೇಕಾದ ಸೌಲಭ್ಯಗಳನ್ನು ಒದಗಿಸಿಕೊಡುವ ಬಗ್ಗೆ ಮಹಾಪಂಚಾಯತ್‌ಗಳಲ್ಲಿ ನಿರ್ಣಯಗಳನ್ನು ತೆಗೆದುಕೊಳ್ಳಲಾಗುತ್ತಿದೆ.

ಇಷ್ಟು ದಿನ ಹೊದಿಕೆ, ಕಂಬಳಿ, ಸ್ಪೇಟರ್‌ಗಳನ್ನು ಹೊಂದಿಸಿದ್ದ ರೈತರು ಮತ್ತು ಪ್ರತಿಭಟನಾ ಬೆಂಬಲಿಗರು ಈಗ ಬೇಸಿಗೆಗೆ ಬೇಕಾದ ಚಾಪೆ, ಮಂಚಗಳು, ಫ್ಯಾನ್, ಎಸಿ, ಕೂಲರ್‌ಗಳನ್ನು ವ್ಯವಸ್ಥೆ ಮಾಡಿಕೊಳ್ಳುತ್ತಿದ್ದಾರೆ. ಇದರ ಮೂಲಕ ಸರ್ಕಾರಕ್ಕೆ ತಮ್ಮ ಗಟ್ಟಿ ಹೋರಾಟದ ಉತ್ತರವನ್ನು ನೀಡುತ್ತಿದ್ದಾರೆ.

ಚಳಿ, ಮಳೆ, ಮಂಜಿನಲ್ಲಿ ಕಳೆದ 95 ದಿನಗಳಿಂದ ಹೋರಾಟ ನಡೆಸುತ್ತಿರುವ ರೈತರು ಇನ್ನೆಷ್ಟು ದಿನಗಳಾದರೂ ಇಲ್ಲಿಯೇ ಹೋರಾಟ ಮುಂದುವರೆಸುತ್ತೇವೆ ಎಂಬುದಕ್ಕೆ ಸಾಕ್ಷಿಯಾಗಿ ಈ ಎರ್‌ ಕಂಡಿಷನರ್‌, ಕೂಲರ್‌ಗಳನ್ನು ಅಳವಡಿಸುತ್ತಿದ್ದಾರೆ.


ಇದನ್ನೂ ಓದಿ: ಇದು ಇಡೀ ದೇಶದ ರೈತ ಹೋರಾಟ: ಟಿಕ್ರಿ ಗಡಿಯಲ್ಲಿ ದಕ್ಷಿಣ ಭಾರತದ ಕಾರ್ಯಕರ್ತರ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...