Homeಚಳವಳಿಬಿಸಿಲಿಗೂ ಬಗ್ಗುವುದಿಲ್ಲ: ಹೋರಾಟನಿರತ ರೈತರ ಟ್ಯ್ರಾಲಿ, ಟೆಂಟ್‌ಗಳಿಗೆ ಬಂದ ಎಸಿ, ಕೂಲರ್‌ಗಳು!

ಬಿಸಿಲಿಗೂ ಬಗ್ಗುವುದಿಲ್ಲ: ಹೋರಾಟನಿರತ ರೈತರ ಟ್ಯ್ರಾಲಿ, ಟೆಂಟ್‌ಗಳಿಗೆ ಬಂದ ಎಸಿ, ಕೂಲರ್‌ಗಳು!

’ಕೇಂದ್ರ ಸರ್ಕಾರ ಈ ಮೂರು ಕಾನೂನುಗಳನ್ನು ವಾಪಸ್ ತೆಗೆದುಕೊಳ್ಳುವವರೆಗೂ ಇಲ್ಲಿಂದ ಕದಲುವುದಿಲ್ಲ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಲು ಎಸಿ ಅಳವಡಿಸಿದ್ದೇವೆ’

- Advertisement -
- Advertisement -

ದೆಹಲಿಯ ತೀವ್ರ ಚಳಿಯಲ್ಲಿ ಆರಂಭವಾದ ರೈತ ಹೋರಾಟ ಈಗ ತೀವ್ರ ಬಿಸಿಲಿನತ್ತ ಸಾಗುತ್ತಿದೆ. ಚಳಿಗೆ ಅಂಜದೆ ಕುಳಿತ ರೈತರು ಈಗ ಬಿಸಿಲಿನ ತಾಪವನ್ನು ಎದುರಿಸಲು ಮುಂದಾಗಿದ್ದಾರೆ. ತೀವ್ರ ಸೆಕೆಯಿಂದ ಬದುಕುಳಿಯಲು ಪ್ರತಿಭಟನಾ ಸ್ಥಳವಾದ ಟಿಕ್ರಿ ಗಡಿಯಲ್ಲಿ ಈಗಾಗಲೇ ಹಲವು ಟೆಂಟ್, ಟ್ಯ್ರಾಲಿಗಳಲ್ಲಿ ಎಸಿ, ಕೂಲರ್‌, ಪ್ಯಾನ್‌ಗಳನ್ನು ಅಳವಡಿಸಲಾಗುತ್ತಿದೆ.

ನವೆಂಬರ್‌ 26, 27ಕ್ಕೆ ದೆಹಲಿಯ ಗಡಿಗಳಿಗೆ ಬಂದ ರೈತರನ್ನು ಆಹ್ವಾನಿಸಿದ್ದು ಕೊರೆಯುವ ಚಳಿ. ಚಳಿಯಿಂದಾಗಿ ಅನೇಕ ರೈತರು ಹುತಾತ್ಮರಾಗಿದ್ದಾರೆ. ಆನಂತರ ಏಕಾಏಕಿ ಮಳೆ ಸುರಿಯಿತು. ಈಗ ದೆಹಲಿಯ ಬೇಸಿಗೆ ಅದಕ್ಕಿಂತಲೂ ಕಠಿಣವಾಗಿರುತ್ತದೆ. ಈ ಹಿನ್ನಲೆಯಲ್ಲಿ ಈಗಾಗಲೇ ಸಿಂಘು, ಟಿಕ್ರಿ, ಗಾಝಿಪುರ್ ಮತ್ತು ಶಹಜಾನ್‌ಪುರ ಗಡಿಗಳಲ್ಲಿ ಫ್ಯಾನ್, ಎಸಿ, ಕೂಲರ್‌ಗಳ ವ್ಯವಸ್ಥೆ ಮಾಡಲಾಗುತ್ತಿದೆ.

ಟಿಕ್ರಿ ಗಡಿಯಲ್ಲಿ ಟ್ಯ್ರಾಲಿಯೊಂದಿಗೆ ಪ್ರತಿಭಟನೆಯಲ್ಲಿ ನವೆಂಬರ್ ತಿಂಗಳಿನಿಂದ ಭಾಗಿಯಾಗಿರುವ ಪಂಜಾಬ್‌ನ ಬಲಜಿತ್ ಸಿಂಗ್‌ ತಮ್ಮ ಟ್ಯ್ರಾಲಿಗೆ ಎಸಿ ಅಳವಡಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ: 24 ವರ್ಷದ ಯುವಕ ಬಲ್ಜಿತ್ ಸಿಂಗ್ ಅವಿರೋಧವಾಗಿ ಸರ್‌ಪಂಚ್‌ ಆದ ಕಥೆ

PC: Baljeeth singh, punjab

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಯುವಕ ಬಲಜಿತ್ ಸಿಂಗ್, ”ಈಗ ಅಷ್ಟೇನು ಬಿಸಿಲು ಇಲ್ಲ. ಆದರೆ, ನಾವು ಇಲ್ಲಿ ಎಸಿ ಹಾಕಿರುವ ಕಾರಣವೆಂದರೆ, ನಾವು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕರಾಳ ಕಾನೂನುಗಳನ್ನು ವಾಪಸ್ ತೆಗೆದುಕೊಳ್ಳುವವರೆಗೂ ಇಲ್ಲಿಂದ ಕದಲುವುದಿಲ್ಲ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಲು ಎಸಿ ಅಳವಡಿಸಿದ್ದೇವೆ” ಎಂದಿದ್ದಾರೆ.

ಇದರ ಜೊತೆಗೆ ಹಲವು ಮಂದಿ ತಮ್ಮ ಟೆಂಟ್ ಮತ್ತು ಟ್ಯ್ರಾಲಿಗಳಲ್ಲಿ ಸಣ್ಣ ಫ್ಯಾನ್‌ಗಳು, ಕೂಲರ್‌ಗಳನ್ನು ಅಳವಡಿಸಿದ್ದಾರೆ.

PC: Baljeeth singh, punjab

ಇದನ್ನೂ ಓದಿ: ರೈತ ಹೋರಾಟ: ಜಾತಿ ಕಟ್ಟುಪಾಡುಗಳನ್ನು ಮುರಿಯುತ್ತಿರುವ ಮಹಾಪಂಚಾಯತ್!

ಕೂಲರ್‌ ಮತ್ತು ಫ್ಯಾನ್‌ಗಳನ್ನು ಕೊಳ್ಳಲು ತಮ್ಮ ತಮ್ಮ ಗ್ರಾಮಗಳಲ್ಲಿ ಹಣ ಸಂಗ್ರಹಣೆ ಮಾಡಲಾಗುತ್ತಿದೆ. ಒಂದು ಎಕರೆಗೆ ನೂರು ರೂಪಾಯಿಯಂತೆ ಹಣವನ್ನು ಸಂಗ್ರಹಿಸಲಾಗುತ್ತಿದೆ. ಈ ಹಣದಿಂದ ಕೂಲರ್‌, ಎಸಿಗಳನ್ನು ತೆಗೆದುಕೊಳ್ಳಲಾಗುತ್ತದೆ.

ಇದರ ಜೊತೆಗೆ ಪ್ರತಿಭಟನಾ ಸ್ಥಳಗಳಲ್ಲಿ ಸೇವೆ ಸಲ್ಲಿಸುತ್ತಿರುವ ಹಲವಾರು ಸಂಘ ಸಂಸ್ಥೆಗಳು ಕೂಡ ಪ್ರತಿಭಟನಾ ನಿರತ ರೈತರಿಗೆ ಬೇಸಿಗೆಗೆ ಬೇಕಾದ ಮೂಲ ಸೌಕರ್ಯಗಳನ್ನು ಒದಗಿಸಿಕೊಡುವತ್ತ ಗಮನ ಹರಿಸಿವೆ. ದೆಹಲಿಯಲ್ಲಿರುವ ರೈತರಿಗೆ ಬೇಕಾದ ಸೌಲಭ್ಯಗಳನ್ನು ಒದಗಿಸಿಕೊಡುವ ಬಗ್ಗೆ ಮಹಾಪಂಚಾಯತ್‌ಗಳಲ್ಲಿ ನಿರ್ಣಯಗಳನ್ನು ತೆಗೆದುಕೊಳ್ಳಲಾಗುತ್ತಿದೆ.

ಇಷ್ಟು ದಿನ ಹೊದಿಕೆ, ಕಂಬಳಿ, ಸ್ಪೇಟರ್‌ಗಳನ್ನು ಹೊಂದಿಸಿದ್ದ ರೈತರು ಮತ್ತು ಪ್ರತಿಭಟನಾ ಬೆಂಬಲಿಗರು ಈಗ ಬೇಸಿಗೆಗೆ ಬೇಕಾದ ಚಾಪೆ, ಮಂಚಗಳು, ಫ್ಯಾನ್, ಎಸಿ, ಕೂಲರ್‌ಗಳನ್ನು ವ್ಯವಸ್ಥೆ ಮಾಡಿಕೊಳ್ಳುತ್ತಿದ್ದಾರೆ. ಇದರ ಮೂಲಕ ಸರ್ಕಾರಕ್ಕೆ ತಮ್ಮ ಗಟ್ಟಿ ಹೋರಾಟದ ಉತ್ತರವನ್ನು ನೀಡುತ್ತಿದ್ದಾರೆ.

ಚಳಿ, ಮಳೆ, ಮಂಜಿನಲ್ಲಿ ಕಳೆದ 95 ದಿನಗಳಿಂದ ಹೋರಾಟ ನಡೆಸುತ್ತಿರುವ ರೈತರು ಇನ್ನೆಷ್ಟು ದಿನಗಳಾದರೂ ಇಲ್ಲಿಯೇ ಹೋರಾಟ ಮುಂದುವರೆಸುತ್ತೇವೆ ಎಂಬುದಕ್ಕೆ ಸಾಕ್ಷಿಯಾಗಿ ಈ ಎರ್‌ ಕಂಡಿಷನರ್‌, ಕೂಲರ್‌ಗಳನ್ನು ಅಳವಡಿಸುತ್ತಿದ್ದಾರೆ.


ಇದನ್ನೂ ಓದಿ: ಇದು ಇಡೀ ದೇಶದ ರೈತ ಹೋರಾಟ: ಟಿಕ್ರಿ ಗಡಿಯಲ್ಲಿ ದಕ್ಷಿಣ ಭಾರತದ ಕಾರ್ಯಕರ್ತರ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...