Homeಚಳವಳಿಬಿಸಿಲಿಗೂ ಬಗ್ಗುವುದಿಲ್ಲ: ಹೋರಾಟನಿರತ ರೈತರ ಟ್ಯ್ರಾಲಿ, ಟೆಂಟ್‌ಗಳಿಗೆ ಬಂದ ಎಸಿ, ಕೂಲರ್‌ಗಳು!

ಬಿಸಿಲಿಗೂ ಬಗ್ಗುವುದಿಲ್ಲ: ಹೋರಾಟನಿರತ ರೈತರ ಟ್ಯ್ರಾಲಿ, ಟೆಂಟ್‌ಗಳಿಗೆ ಬಂದ ಎಸಿ, ಕೂಲರ್‌ಗಳು!

’ಕೇಂದ್ರ ಸರ್ಕಾರ ಈ ಮೂರು ಕಾನೂನುಗಳನ್ನು ವಾಪಸ್ ತೆಗೆದುಕೊಳ್ಳುವವರೆಗೂ ಇಲ್ಲಿಂದ ಕದಲುವುದಿಲ್ಲ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಲು ಎಸಿ ಅಳವಡಿಸಿದ್ದೇವೆ’

- Advertisement -
- Advertisement -

ದೆಹಲಿಯ ತೀವ್ರ ಚಳಿಯಲ್ಲಿ ಆರಂಭವಾದ ರೈತ ಹೋರಾಟ ಈಗ ತೀವ್ರ ಬಿಸಿಲಿನತ್ತ ಸಾಗುತ್ತಿದೆ. ಚಳಿಗೆ ಅಂಜದೆ ಕುಳಿತ ರೈತರು ಈಗ ಬಿಸಿಲಿನ ತಾಪವನ್ನು ಎದುರಿಸಲು ಮುಂದಾಗಿದ್ದಾರೆ. ತೀವ್ರ ಸೆಕೆಯಿಂದ ಬದುಕುಳಿಯಲು ಪ್ರತಿಭಟನಾ ಸ್ಥಳವಾದ ಟಿಕ್ರಿ ಗಡಿಯಲ್ಲಿ ಈಗಾಗಲೇ ಹಲವು ಟೆಂಟ್, ಟ್ಯ್ರಾಲಿಗಳಲ್ಲಿ ಎಸಿ, ಕೂಲರ್‌, ಪ್ಯಾನ್‌ಗಳನ್ನು ಅಳವಡಿಸಲಾಗುತ್ತಿದೆ.

ನವೆಂಬರ್‌ 26, 27ಕ್ಕೆ ದೆಹಲಿಯ ಗಡಿಗಳಿಗೆ ಬಂದ ರೈತರನ್ನು ಆಹ್ವಾನಿಸಿದ್ದು ಕೊರೆಯುವ ಚಳಿ. ಚಳಿಯಿಂದಾಗಿ ಅನೇಕ ರೈತರು ಹುತಾತ್ಮರಾಗಿದ್ದಾರೆ. ಆನಂತರ ಏಕಾಏಕಿ ಮಳೆ ಸುರಿಯಿತು. ಈಗ ದೆಹಲಿಯ ಬೇಸಿಗೆ ಅದಕ್ಕಿಂತಲೂ ಕಠಿಣವಾಗಿರುತ್ತದೆ. ಈ ಹಿನ್ನಲೆಯಲ್ಲಿ ಈಗಾಗಲೇ ಸಿಂಘು, ಟಿಕ್ರಿ, ಗಾಝಿಪುರ್ ಮತ್ತು ಶಹಜಾನ್‌ಪುರ ಗಡಿಗಳಲ್ಲಿ ಫ್ಯಾನ್, ಎಸಿ, ಕೂಲರ್‌ಗಳ ವ್ಯವಸ್ಥೆ ಮಾಡಲಾಗುತ್ತಿದೆ.

ಟಿಕ್ರಿ ಗಡಿಯಲ್ಲಿ ಟ್ಯ್ರಾಲಿಯೊಂದಿಗೆ ಪ್ರತಿಭಟನೆಯಲ್ಲಿ ನವೆಂಬರ್ ತಿಂಗಳಿನಿಂದ ಭಾಗಿಯಾಗಿರುವ ಪಂಜಾಬ್‌ನ ಬಲಜಿತ್ ಸಿಂಗ್‌ ತಮ್ಮ ಟ್ಯ್ರಾಲಿಗೆ ಎಸಿ ಅಳವಡಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ: 24 ವರ್ಷದ ಯುವಕ ಬಲ್ಜಿತ್ ಸಿಂಗ್ ಅವಿರೋಧವಾಗಿ ಸರ್‌ಪಂಚ್‌ ಆದ ಕಥೆ

PC: Baljeeth singh, punjab

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಯುವಕ ಬಲಜಿತ್ ಸಿಂಗ್, ”ಈಗ ಅಷ್ಟೇನು ಬಿಸಿಲು ಇಲ್ಲ. ಆದರೆ, ನಾವು ಇಲ್ಲಿ ಎಸಿ ಹಾಕಿರುವ ಕಾರಣವೆಂದರೆ, ನಾವು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕರಾಳ ಕಾನೂನುಗಳನ್ನು ವಾಪಸ್ ತೆಗೆದುಕೊಳ್ಳುವವರೆಗೂ ಇಲ್ಲಿಂದ ಕದಲುವುದಿಲ್ಲ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಲು ಎಸಿ ಅಳವಡಿಸಿದ್ದೇವೆ” ಎಂದಿದ್ದಾರೆ.

ಇದರ ಜೊತೆಗೆ ಹಲವು ಮಂದಿ ತಮ್ಮ ಟೆಂಟ್ ಮತ್ತು ಟ್ಯ್ರಾಲಿಗಳಲ್ಲಿ ಸಣ್ಣ ಫ್ಯಾನ್‌ಗಳು, ಕೂಲರ್‌ಗಳನ್ನು ಅಳವಡಿಸಿದ್ದಾರೆ.

PC: Baljeeth singh, punjab

ಇದನ್ನೂ ಓದಿ: ರೈತ ಹೋರಾಟ: ಜಾತಿ ಕಟ್ಟುಪಾಡುಗಳನ್ನು ಮುರಿಯುತ್ತಿರುವ ಮಹಾಪಂಚಾಯತ್!

ಕೂಲರ್‌ ಮತ್ತು ಫ್ಯಾನ್‌ಗಳನ್ನು ಕೊಳ್ಳಲು ತಮ್ಮ ತಮ್ಮ ಗ್ರಾಮಗಳಲ್ಲಿ ಹಣ ಸಂಗ್ರಹಣೆ ಮಾಡಲಾಗುತ್ತಿದೆ. ಒಂದು ಎಕರೆಗೆ ನೂರು ರೂಪಾಯಿಯಂತೆ ಹಣವನ್ನು ಸಂಗ್ರಹಿಸಲಾಗುತ್ತಿದೆ. ಈ ಹಣದಿಂದ ಕೂಲರ್‌, ಎಸಿಗಳನ್ನು ತೆಗೆದುಕೊಳ್ಳಲಾಗುತ್ತದೆ.

ಇದರ ಜೊತೆಗೆ ಪ್ರತಿಭಟನಾ ಸ್ಥಳಗಳಲ್ಲಿ ಸೇವೆ ಸಲ್ಲಿಸುತ್ತಿರುವ ಹಲವಾರು ಸಂಘ ಸಂಸ್ಥೆಗಳು ಕೂಡ ಪ್ರತಿಭಟನಾ ನಿರತ ರೈತರಿಗೆ ಬೇಸಿಗೆಗೆ ಬೇಕಾದ ಮೂಲ ಸೌಕರ್ಯಗಳನ್ನು ಒದಗಿಸಿಕೊಡುವತ್ತ ಗಮನ ಹರಿಸಿವೆ. ದೆಹಲಿಯಲ್ಲಿರುವ ರೈತರಿಗೆ ಬೇಕಾದ ಸೌಲಭ್ಯಗಳನ್ನು ಒದಗಿಸಿಕೊಡುವ ಬಗ್ಗೆ ಮಹಾಪಂಚಾಯತ್‌ಗಳಲ್ಲಿ ನಿರ್ಣಯಗಳನ್ನು ತೆಗೆದುಕೊಳ್ಳಲಾಗುತ್ತಿದೆ.

ಇಷ್ಟು ದಿನ ಹೊದಿಕೆ, ಕಂಬಳಿ, ಸ್ಪೇಟರ್‌ಗಳನ್ನು ಹೊಂದಿಸಿದ್ದ ರೈತರು ಮತ್ತು ಪ್ರತಿಭಟನಾ ಬೆಂಬಲಿಗರು ಈಗ ಬೇಸಿಗೆಗೆ ಬೇಕಾದ ಚಾಪೆ, ಮಂಚಗಳು, ಫ್ಯಾನ್, ಎಸಿ, ಕೂಲರ್‌ಗಳನ್ನು ವ್ಯವಸ್ಥೆ ಮಾಡಿಕೊಳ್ಳುತ್ತಿದ್ದಾರೆ. ಇದರ ಮೂಲಕ ಸರ್ಕಾರಕ್ಕೆ ತಮ್ಮ ಗಟ್ಟಿ ಹೋರಾಟದ ಉತ್ತರವನ್ನು ನೀಡುತ್ತಿದ್ದಾರೆ.

ಚಳಿ, ಮಳೆ, ಮಂಜಿನಲ್ಲಿ ಕಳೆದ 95 ದಿನಗಳಿಂದ ಹೋರಾಟ ನಡೆಸುತ್ತಿರುವ ರೈತರು ಇನ್ನೆಷ್ಟು ದಿನಗಳಾದರೂ ಇಲ್ಲಿಯೇ ಹೋರಾಟ ಮುಂದುವರೆಸುತ್ತೇವೆ ಎಂಬುದಕ್ಕೆ ಸಾಕ್ಷಿಯಾಗಿ ಈ ಎರ್‌ ಕಂಡಿಷನರ್‌, ಕೂಲರ್‌ಗಳನ್ನು ಅಳವಡಿಸುತ್ತಿದ್ದಾರೆ.


ಇದನ್ನೂ ಓದಿ: ಇದು ಇಡೀ ದೇಶದ ರೈತ ಹೋರಾಟ: ಟಿಕ್ರಿ ಗಡಿಯಲ್ಲಿ ದಕ್ಷಿಣ ಭಾರತದ ಕಾರ್ಯಕರ್ತರ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...