Homeಚಳವಳಿಎಪಿಎಂಸಿ ಕಾಯ್ದೆ ತಿದ್ದುಪಡಿಯ ವಿರುದ್ಧ ಲಾಕ್‌ಡೌನ್‌ ನಡುವೆಯೇ ಬೀದಿಗಿಳಿದ ರೈತರು

ಎಪಿಎಂಸಿ ಕಾಯ್ದೆ ತಿದ್ದುಪಡಿಯ ವಿರುದ್ಧ ಲಾಕ್‌ಡೌನ್‌ ನಡುವೆಯೇ ಬೀದಿಗಿಳಿದ ರೈತರು

- Advertisement -
- Advertisement -

ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಹಗರಿಬೊಮ್ಮನಹಳ್ಳಿಯಲ್ಲಿ ಲಾಕ್‌ಡೌನ್‌ ನಡುವೆಯೆ ಬೀದಿಗಿಳಿದು ಪ್ರತಿಭಟನೆ ನಡೆಸಿರುವ ಘಟನೆ ಜರುಗಿದೆ.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ (ಎಪಿಎಂಸಿ) ನಿಯಂತ್ರಕ ಪಾತ್ರವನ್ನು ಕಡಿಮೆ ಮಾಡುವ ಸುಗ್ರೀವಾಜ್ಞೆ ಹೊರಡಿಸುವಂತೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯವು ಕರ್ನಾಟಕ ಸರ್ಕಾರಕ್ಕೆ ಪತ್ರ ಬರೆದಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ 2017ರ ಸೆಕ್ಷನ್‌ 8 ಅನ್ನು ತಿದ್ದುಪಡಿ ಮಾಡಬಾರದು ಎಂದು ರೈತರು ಆಗ್ರಹಿಸಿದ್ದಾರೆ.

ರೈತ ಮುಖಂಡ ಜೆ.ಎಂ ವೀರಸಂಗಯ್ಯ ಮಾತನಾಡಿ “ಎಪಿಎಂಸಿಯನ್ನು ಅಭಿವೃದ್ದಿಪಡಿಸುವ ಬದಲಾಗಿ ಉದ್ದಿಮೆದಾರರು ಆನ್‌ಲೈನ್‌ ಮೂಲಕ ತಾವು ಇದ್ದಲಿಂದಲೇ ರೈತರಿಂದ ನೇರವಾಗಿ ಕೊಳ್ಳಬಹುದು ಎಂಬ ತಿದ್ದುಪಡಿ ಮಾಡುವುದು ಮಾರಕವಾಗಿದೆ. ಇದರಿಂದ ರೈತರು ಸಂಪೂರ್ಣವಾಗಿ ನಾಶವಾಗುತ್ತಾರೆ. ಇದು ದಳ್ಳಾಳಿಗಳ ಪರವಾಗಿ, ವ್ಯಾಪರಸ್ಥರ ಪರವಾಗಿದೆಯೇ ಹೊರತು ರೈತರ ಪರವಾಗಿಲ್ಲ” ಎಂದು ಕಿಡಿಕಾರಿದ್ದಾರೆ.

APMC ಕಾಯ್ದೆಗೆ ತಿದ್ದುಪಡಿ: ರೈತರ ಸರ್ವನಾಶಕ್ಕೆ ದಾರಿ – ಜೆ.ಎಂ ವೀರಸಂಗಯ್ಯ

APMC ಕಾಯ್ದೆಗೆ ತಿದ್ದುಪಡಿ: ರೈತರ ಸರ್ವನಾಶಕ್ಕೆ ದಾರಿ – ಜೆ.ಎಂ ವೀರಸಂಗಯ್ಯ

Posted by Naanu Gauri on Tuesday, May 12, 2020

ರೈತರು ಎಪಿಎಂಸಿ ಮಾರುಕಟ್ಟೆಗೆ ತಮ್ಮ ಬೆಳೆಗಳನ್ನು ತರುವುದರಿಂದ ಅವರಿಗೆ ಬೆಲೆಯ ಖಾತ್ರಿ ಇರುತ್ತದೆ. ಇಲ್ಲಿ ಎಲ್ಲಾ ರೈತರ ಬೆಳೆಗಳಿಗೆ ಒಂದೇ ಬೆಲೆ ಇರುವುದರಿಂದ ಉದ್ದಿಮೆದಾರರು ಅದೇ ಬೆಲೆಗೆ ಕೊಳ್ಳುತ್ತಾರೆ. ಇದನ್ನು ಬಿಟ್ಟು ಹೊಸ ತಿದ್ದುಪಡಿಯಿಂದ ರೈತರು ಇರುವಲ್ಲಿಯೇ ಕೊಳ್ಳಲು ಹೋದರೆ ಅಲ್ಲಿ ವ್ಯಾಪರಸ್ಥರ ಕೈ ಮೇಲಾಗಿ ಬೆಲೆಗಳಲ್ಲಿ ಏರಿಳಿತ ಕಂಡುಬರುತ್ತದೆ. ರೈತರು ತಮ್ಮ ಬೆಳೆ ನಾಶವಾಗುವ ಭಯದಲ್ಲಿ ಸಿಕ್ಕಷ್ಟು ಬೆಲೆಗೆ ಮಾರಬೇಕಾದ ಅನಿವಾರ್ಯತೆಗೆ ಸಿಲುಕುತ್ತಾರೆ ಎಂದು ಅವರು ಆರೋಪಿಸಿದ್ದಾರೆ.

ಎಪಿಎಂಸಿ ಕಾಯ್ದೆ ತಿದ್ದುಪಡಿ ಮಾರುಕಟ್ಟೆಯನ್ನೇ ಮುಚ್ಚುವ ಯೋಜನೆ: ಹೆಚ್‌ಡಿಕೆ ಕಿಡಿ

“ಪ್ರಧಾನ ಮಂತ್ರಿಗಳ ಆದೇಶದ ಮೇರೆಗೆ ಎಪಿಎಂಸಿ ಕಾಯ್ದೆಗೆ ರಾಜ್ಯ ಸರ್ಕಾರ ತಿದ್ದುಪಡಿ ತರಲು ಹೊರಟಿದೆ. ಆದರೆ, ಈ ತಿದ್ದುಪಡಿಯಿಂದ 600 ಕೋಟಿ ರೂ ರಾಜ್ಯ ಸರ್ಕಾರಕ್ಕೆ ಕಡಿತ ಆಗುತ್ತದೆ. ಅಲ್ಲದೆ, ಇದು ಎಪಿಎಂಸಿ ಮಾರುಕಟ್ಟೆಯನ್ನೇ ಮುಚ್ಚುವ ಯೋಜನೆ” ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

“ಮಹಾರಾಷ್ಟ್ರದಲ್ಲಿ ಇಂತಹ ಯೋಜನೆಗಳನ್ನ ಜಾರಿಗೆ ತಂದು ಅದು ಫೇಲ್ ಆಗಿದೆ. ಹೀಗಾಗಿ ಇದೀಗ ಆ ರಾಜ್ಯದಲ್ಲಿ ಮತ್ತೆ ಮೊದಲಿನ ಹಾಗೆ ಮಾಡಲು ಮುಂದಾಗಿದ್ದಾರೆ. ಆದರೆ, ಕರ್ನಾಟಕದಲ್ಲಿ ಸರ್ಕಾರ ರೈತರ ಬುಡಕ್ಕೆ ತರಲು ಹೊರಟಿದ್ದಾರೆ. ಎಪಿಎಂಸಿ ಅಧಿಕಾರ ಮೊಟಕುಗೊಳಿಸಿ ದೊಡ್ಡ ದೊಡ್ಡ ಕಂಪನಿಗಳಿಗೆ ಅನುಕೂಲ ಮಾಡಿಕೊಡಲು ಹೊರಟಿದ್ದಾರೆ.

ರೈತನ ಹೊಲದಲ್ಲೇ ಯಾರೋ ಬಂದು ಬೆಳೆ ಖರೀದಿ ಮಾಡಿ ಮೋಸ ಮಾಡಿ ಹೋದ್ರೆ ರೈತರಿಗೆ ಹೇಗೆ ನ್ಯಾಯ ಕೊಡಿಸುತ್ತೀರಾ? ಇದರ ಅವಶ್ಯಕತೆ ಏನಿದೆ? ತರಾತುರಿಯಲ್ಲಿ ಯಾಕೆ ಜನ ವಿರೋಧಿ ಕಾನೂನುಗಳನ್ನ ತರ್ತೀರಾ? ಉಳ್ಳವರಿಗೆ ಸಂತೃಪ್ತಿಗೊಳಿಸಲು ಈ ರೀತಿ ಮಾಡ್ತಿದ್ದೀರಾ? ಹಾಗೆ ಹೊಸ ಕಾನೂನು ಜಾರಿಗೆ ತರಲೇ ಬೇಕು ಎಂದರೆ ತಕ್ಷಣ ಅಧಿವೇಶನ ಕರೆಯಿರಿ” ಎಂದು ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಚಾಟಿ ಬೀಸಿದ್ದಾರೆ.


ಇದನ್ನೂ ಓದಿ: ಮಣಿವಣ್ಣನ್ ವರ್ಗಾವಣೆ ರದ್ದುಗೊಳಿಸದಿದ್ದರೆ ಹೋರಾಟ – ಕಾರ್ಮಿಕ ಸಂಘಟನೆಗಳ ಎಚ್ಚರಿಕೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಾರ್ಮಿಕರ ಬದುಕನ್ನು ಮೂರಾಬಟ್ಟೆ ಮಾಡಿದ ಮನುವಾದಿಗಳ ಕಣ್ಣು ಈಗ ರೈತರ ಮೇಲೆ ಬಿದ್ದಿದೆ.

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...