Homeಚಳವಳಿಎಪಿಎಂಸಿ ಕಾಯ್ದೆ ತಿದ್ದುಪಡಿಯ ವಿರುದ್ಧ ಲಾಕ್‌ಡೌನ್‌ ನಡುವೆಯೇ ಬೀದಿಗಿಳಿದ ರೈತರು

ಎಪಿಎಂಸಿ ಕಾಯ್ದೆ ತಿದ್ದುಪಡಿಯ ವಿರುದ್ಧ ಲಾಕ್‌ಡೌನ್‌ ನಡುವೆಯೇ ಬೀದಿಗಿಳಿದ ರೈತರು

- Advertisement -
- Advertisement -

ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಹಗರಿಬೊಮ್ಮನಹಳ್ಳಿಯಲ್ಲಿ ಲಾಕ್‌ಡೌನ್‌ ನಡುವೆಯೆ ಬೀದಿಗಿಳಿದು ಪ್ರತಿಭಟನೆ ನಡೆಸಿರುವ ಘಟನೆ ಜರುಗಿದೆ.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ (ಎಪಿಎಂಸಿ) ನಿಯಂತ್ರಕ ಪಾತ್ರವನ್ನು ಕಡಿಮೆ ಮಾಡುವ ಸುಗ್ರೀವಾಜ್ಞೆ ಹೊರಡಿಸುವಂತೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯವು ಕರ್ನಾಟಕ ಸರ್ಕಾರಕ್ಕೆ ಪತ್ರ ಬರೆದಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ 2017ರ ಸೆಕ್ಷನ್‌ 8 ಅನ್ನು ತಿದ್ದುಪಡಿ ಮಾಡಬಾರದು ಎಂದು ರೈತರು ಆಗ್ರಹಿಸಿದ್ದಾರೆ.

ರೈತ ಮುಖಂಡ ಜೆ.ಎಂ ವೀರಸಂಗಯ್ಯ ಮಾತನಾಡಿ “ಎಪಿಎಂಸಿಯನ್ನು ಅಭಿವೃದ್ದಿಪಡಿಸುವ ಬದಲಾಗಿ ಉದ್ದಿಮೆದಾರರು ಆನ್‌ಲೈನ್‌ ಮೂಲಕ ತಾವು ಇದ್ದಲಿಂದಲೇ ರೈತರಿಂದ ನೇರವಾಗಿ ಕೊಳ್ಳಬಹುದು ಎಂಬ ತಿದ್ದುಪಡಿ ಮಾಡುವುದು ಮಾರಕವಾಗಿದೆ. ಇದರಿಂದ ರೈತರು ಸಂಪೂರ್ಣವಾಗಿ ನಾಶವಾಗುತ್ತಾರೆ. ಇದು ದಳ್ಳಾಳಿಗಳ ಪರವಾಗಿ, ವ್ಯಾಪರಸ್ಥರ ಪರವಾಗಿದೆಯೇ ಹೊರತು ರೈತರ ಪರವಾಗಿಲ್ಲ” ಎಂದು ಕಿಡಿಕಾರಿದ್ದಾರೆ.

APMC ಕಾಯ್ದೆಗೆ ತಿದ್ದುಪಡಿ: ರೈತರ ಸರ್ವನಾಶಕ್ಕೆ ದಾರಿ – ಜೆ.ಎಂ ವೀರಸಂಗಯ್ಯ

APMC ಕಾಯ್ದೆಗೆ ತಿದ್ದುಪಡಿ: ರೈತರ ಸರ್ವನಾಶಕ್ಕೆ ದಾರಿ – ಜೆ.ಎಂ ವೀರಸಂಗಯ್ಯ

Posted by Naanu Gauri on Tuesday, May 12, 2020

ರೈತರು ಎಪಿಎಂಸಿ ಮಾರುಕಟ್ಟೆಗೆ ತಮ್ಮ ಬೆಳೆಗಳನ್ನು ತರುವುದರಿಂದ ಅವರಿಗೆ ಬೆಲೆಯ ಖಾತ್ರಿ ಇರುತ್ತದೆ. ಇಲ್ಲಿ ಎಲ್ಲಾ ರೈತರ ಬೆಳೆಗಳಿಗೆ ಒಂದೇ ಬೆಲೆ ಇರುವುದರಿಂದ ಉದ್ದಿಮೆದಾರರು ಅದೇ ಬೆಲೆಗೆ ಕೊಳ್ಳುತ್ತಾರೆ. ಇದನ್ನು ಬಿಟ್ಟು ಹೊಸ ತಿದ್ದುಪಡಿಯಿಂದ ರೈತರು ಇರುವಲ್ಲಿಯೇ ಕೊಳ್ಳಲು ಹೋದರೆ ಅಲ್ಲಿ ವ್ಯಾಪರಸ್ಥರ ಕೈ ಮೇಲಾಗಿ ಬೆಲೆಗಳಲ್ಲಿ ಏರಿಳಿತ ಕಂಡುಬರುತ್ತದೆ. ರೈತರು ತಮ್ಮ ಬೆಳೆ ನಾಶವಾಗುವ ಭಯದಲ್ಲಿ ಸಿಕ್ಕಷ್ಟು ಬೆಲೆಗೆ ಮಾರಬೇಕಾದ ಅನಿವಾರ್ಯತೆಗೆ ಸಿಲುಕುತ್ತಾರೆ ಎಂದು ಅವರು ಆರೋಪಿಸಿದ್ದಾರೆ.

ಎಪಿಎಂಸಿ ಕಾಯ್ದೆ ತಿದ್ದುಪಡಿ ಮಾರುಕಟ್ಟೆಯನ್ನೇ ಮುಚ್ಚುವ ಯೋಜನೆ: ಹೆಚ್‌ಡಿಕೆ ಕಿಡಿ

“ಪ್ರಧಾನ ಮಂತ್ರಿಗಳ ಆದೇಶದ ಮೇರೆಗೆ ಎಪಿಎಂಸಿ ಕಾಯ್ದೆಗೆ ರಾಜ್ಯ ಸರ್ಕಾರ ತಿದ್ದುಪಡಿ ತರಲು ಹೊರಟಿದೆ. ಆದರೆ, ಈ ತಿದ್ದುಪಡಿಯಿಂದ 600 ಕೋಟಿ ರೂ ರಾಜ್ಯ ಸರ್ಕಾರಕ್ಕೆ ಕಡಿತ ಆಗುತ್ತದೆ. ಅಲ್ಲದೆ, ಇದು ಎಪಿಎಂಸಿ ಮಾರುಕಟ್ಟೆಯನ್ನೇ ಮುಚ್ಚುವ ಯೋಜನೆ” ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

“ಮಹಾರಾಷ್ಟ್ರದಲ್ಲಿ ಇಂತಹ ಯೋಜನೆಗಳನ್ನ ಜಾರಿಗೆ ತಂದು ಅದು ಫೇಲ್ ಆಗಿದೆ. ಹೀಗಾಗಿ ಇದೀಗ ಆ ರಾಜ್ಯದಲ್ಲಿ ಮತ್ತೆ ಮೊದಲಿನ ಹಾಗೆ ಮಾಡಲು ಮುಂದಾಗಿದ್ದಾರೆ. ಆದರೆ, ಕರ್ನಾಟಕದಲ್ಲಿ ಸರ್ಕಾರ ರೈತರ ಬುಡಕ್ಕೆ ತರಲು ಹೊರಟಿದ್ದಾರೆ. ಎಪಿಎಂಸಿ ಅಧಿಕಾರ ಮೊಟಕುಗೊಳಿಸಿ ದೊಡ್ಡ ದೊಡ್ಡ ಕಂಪನಿಗಳಿಗೆ ಅನುಕೂಲ ಮಾಡಿಕೊಡಲು ಹೊರಟಿದ್ದಾರೆ.

ರೈತನ ಹೊಲದಲ್ಲೇ ಯಾರೋ ಬಂದು ಬೆಳೆ ಖರೀದಿ ಮಾಡಿ ಮೋಸ ಮಾಡಿ ಹೋದ್ರೆ ರೈತರಿಗೆ ಹೇಗೆ ನ್ಯಾಯ ಕೊಡಿಸುತ್ತೀರಾ? ಇದರ ಅವಶ್ಯಕತೆ ಏನಿದೆ? ತರಾತುರಿಯಲ್ಲಿ ಯಾಕೆ ಜನ ವಿರೋಧಿ ಕಾನೂನುಗಳನ್ನ ತರ್ತೀರಾ? ಉಳ್ಳವರಿಗೆ ಸಂತೃಪ್ತಿಗೊಳಿಸಲು ಈ ರೀತಿ ಮಾಡ್ತಿದ್ದೀರಾ? ಹಾಗೆ ಹೊಸ ಕಾನೂನು ಜಾರಿಗೆ ತರಲೇ ಬೇಕು ಎಂದರೆ ತಕ್ಷಣ ಅಧಿವೇಶನ ಕರೆಯಿರಿ” ಎಂದು ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಚಾಟಿ ಬೀಸಿದ್ದಾರೆ.


ಇದನ್ನೂ ಓದಿ: ಮಣಿವಣ್ಣನ್ ವರ್ಗಾವಣೆ ರದ್ದುಗೊಳಿಸದಿದ್ದರೆ ಹೋರಾಟ – ಕಾರ್ಮಿಕ ಸಂಘಟನೆಗಳ ಎಚ್ಚರಿಕೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಾರ್ಮಿಕರ ಬದುಕನ್ನು ಮೂರಾಬಟ್ಟೆ ಮಾಡಿದ ಮನುವಾದಿಗಳ ಕಣ್ಣು ಈಗ ರೈತರ ಮೇಲೆ ಬಿದ್ದಿದೆ.

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...