Homeಚಳವಳಿಎಪಿಎಂಸಿ ಕಾಯ್ದೆ ತಿದ್ದುಪಡಿಯ ವಿರುದ್ಧ ಲಾಕ್‌ಡೌನ್‌ ನಡುವೆಯೇ ಬೀದಿಗಿಳಿದ ರೈತರು

ಎಪಿಎಂಸಿ ಕಾಯ್ದೆ ತಿದ್ದುಪಡಿಯ ವಿರುದ್ಧ ಲಾಕ್‌ಡೌನ್‌ ನಡುವೆಯೇ ಬೀದಿಗಿಳಿದ ರೈತರು

- Advertisement -
- Advertisement -

ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಹಗರಿಬೊಮ್ಮನಹಳ್ಳಿಯಲ್ಲಿ ಲಾಕ್‌ಡೌನ್‌ ನಡುವೆಯೆ ಬೀದಿಗಿಳಿದು ಪ್ರತಿಭಟನೆ ನಡೆಸಿರುವ ಘಟನೆ ಜರುಗಿದೆ.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ (ಎಪಿಎಂಸಿ) ನಿಯಂತ್ರಕ ಪಾತ್ರವನ್ನು ಕಡಿಮೆ ಮಾಡುವ ಸುಗ್ರೀವಾಜ್ಞೆ ಹೊರಡಿಸುವಂತೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯವು ಕರ್ನಾಟಕ ಸರ್ಕಾರಕ್ಕೆ ಪತ್ರ ಬರೆದಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ 2017ರ ಸೆಕ್ಷನ್‌ 8 ಅನ್ನು ತಿದ್ದುಪಡಿ ಮಾಡಬಾರದು ಎಂದು ರೈತರು ಆಗ್ರಹಿಸಿದ್ದಾರೆ.

ರೈತ ಮುಖಂಡ ಜೆ.ಎಂ ವೀರಸಂಗಯ್ಯ ಮಾತನಾಡಿ “ಎಪಿಎಂಸಿಯನ್ನು ಅಭಿವೃದ್ದಿಪಡಿಸುವ ಬದಲಾಗಿ ಉದ್ದಿಮೆದಾರರು ಆನ್‌ಲೈನ್‌ ಮೂಲಕ ತಾವು ಇದ್ದಲಿಂದಲೇ ರೈತರಿಂದ ನೇರವಾಗಿ ಕೊಳ್ಳಬಹುದು ಎಂಬ ತಿದ್ದುಪಡಿ ಮಾಡುವುದು ಮಾರಕವಾಗಿದೆ. ಇದರಿಂದ ರೈತರು ಸಂಪೂರ್ಣವಾಗಿ ನಾಶವಾಗುತ್ತಾರೆ. ಇದು ದಳ್ಳಾಳಿಗಳ ಪರವಾಗಿ, ವ್ಯಾಪರಸ್ಥರ ಪರವಾಗಿದೆಯೇ ಹೊರತು ರೈತರ ಪರವಾಗಿಲ್ಲ” ಎಂದು ಕಿಡಿಕಾರಿದ್ದಾರೆ.

APMC ಕಾಯ್ದೆಗೆ ತಿದ್ದುಪಡಿ: ರೈತರ ಸರ್ವನಾಶಕ್ಕೆ ದಾರಿ – ಜೆ.ಎಂ ವೀರಸಂಗಯ್ಯ

APMC ಕಾಯ್ದೆಗೆ ತಿದ್ದುಪಡಿ: ರೈತರ ಸರ್ವನಾಶಕ್ಕೆ ದಾರಿ – ಜೆ.ಎಂ ವೀರಸಂಗಯ್ಯ

Posted by Naanu Gauri on Tuesday, May 12, 2020

ರೈತರು ಎಪಿಎಂಸಿ ಮಾರುಕಟ್ಟೆಗೆ ತಮ್ಮ ಬೆಳೆಗಳನ್ನು ತರುವುದರಿಂದ ಅವರಿಗೆ ಬೆಲೆಯ ಖಾತ್ರಿ ಇರುತ್ತದೆ. ಇಲ್ಲಿ ಎಲ್ಲಾ ರೈತರ ಬೆಳೆಗಳಿಗೆ ಒಂದೇ ಬೆಲೆ ಇರುವುದರಿಂದ ಉದ್ದಿಮೆದಾರರು ಅದೇ ಬೆಲೆಗೆ ಕೊಳ್ಳುತ್ತಾರೆ. ಇದನ್ನು ಬಿಟ್ಟು ಹೊಸ ತಿದ್ದುಪಡಿಯಿಂದ ರೈತರು ಇರುವಲ್ಲಿಯೇ ಕೊಳ್ಳಲು ಹೋದರೆ ಅಲ್ಲಿ ವ್ಯಾಪರಸ್ಥರ ಕೈ ಮೇಲಾಗಿ ಬೆಲೆಗಳಲ್ಲಿ ಏರಿಳಿತ ಕಂಡುಬರುತ್ತದೆ. ರೈತರು ತಮ್ಮ ಬೆಳೆ ನಾಶವಾಗುವ ಭಯದಲ್ಲಿ ಸಿಕ್ಕಷ್ಟು ಬೆಲೆಗೆ ಮಾರಬೇಕಾದ ಅನಿವಾರ್ಯತೆಗೆ ಸಿಲುಕುತ್ತಾರೆ ಎಂದು ಅವರು ಆರೋಪಿಸಿದ್ದಾರೆ.

ಎಪಿಎಂಸಿ ಕಾಯ್ದೆ ತಿದ್ದುಪಡಿ ಮಾರುಕಟ್ಟೆಯನ್ನೇ ಮುಚ್ಚುವ ಯೋಜನೆ: ಹೆಚ್‌ಡಿಕೆ ಕಿಡಿ

“ಪ್ರಧಾನ ಮಂತ್ರಿಗಳ ಆದೇಶದ ಮೇರೆಗೆ ಎಪಿಎಂಸಿ ಕಾಯ್ದೆಗೆ ರಾಜ್ಯ ಸರ್ಕಾರ ತಿದ್ದುಪಡಿ ತರಲು ಹೊರಟಿದೆ. ಆದರೆ, ಈ ತಿದ್ದುಪಡಿಯಿಂದ 600 ಕೋಟಿ ರೂ ರಾಜ್ಯ ಸರ್ಕಾರಕ್ಕೆ ಕಡಿತ ಆಗುತ್ತದೆ. ಅಲ್ಲದೆ, ಇದು ಎಪಿಎಂಸಿ ಮಾರುಕಟ್ಟೆಯನ್ನೇ ಮುಚ್ಚುವ ಯೋಜನೆ” ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

“ಮಹಾರಾಷ್ಟ್ರದಲ್ಲಿ ಇಂತಹ ಯೋಜನೆಗಳನ್ನ ಜಾರಿಗೆ ತಂದು ಅದು ಫೇಲ್ ಆಗಿದೆ. ಹೀಗಾಗಿ ಇದೀಗ ಆ ರಾಜ್ಯದಲ್ಲಿ ಮತ್ತೆ ಮೊದಲಿನ ಹಾಗೆ ಮಾಡಲು ಮುಂದಾಗಿದ್ದಾರೆ. ಆದರೆ, ಕರ್ನಾಟಕದಲ್ಲಿ ಸರ್ಕಾರ ರೈತರ ಬುಡಕ್ಕೆ ತರಲು ಹೊರಟಿದ್ದಾರೆ. ಎಪಿಎಂಸಿ ಅಧಿಕಾರ ಮೊಟಕುಗೊಳಿಸಿ ದೊಡ್ಡ ದೊಡ್ಡ ಕಂಪನಿಗಳಿಗೆ ಅನುಕೂಲ ಮಾಡಿಕೊಡಲು ಹೊರಟಿದ್ದಾರೆ.

ರೈತನ ಹೊಲದಲ್ಲೇ ಯಾರೋ ಬಂದು ಬೆಳೆ ಖರೀದಿ ಮಾಡಿ ಮೋಸ ಮಾಡಿ ಹೋದ್ರೆ ರೈತರಿಗೆ ಹೇಗೆ ನ್ಯಾಯ ಕೊಡಿಸುತ್ತೀರಾ? ಇದರ ಅವಶ್ಯಕತೆ ಏನಿದೆ? ತರಾತುರಿಯಲ್ಲಿ ಯಾಕೆ ಜನ ವಿರೋಧಿ ಕಾನೂನುಗಳನ್ನ ತರ್ತೀರಾ? ಉಳ್ಳವರಿಗೆ ಸಂತೃಪ್ತಿಗೊಳಿಸಲು ಈ ರೀತಿ ಮಾಡ್ತಿದ್ದೀರಾ? ಹಾಗೆ ಹೊಸ ಕಾನೂನು ಜಾರಿಗೆ ತರಲೇ ಬೇಕು ಎಂದರೆ ತಕ್ಷಣ ಅಧಿವೇಶನ ಕರೆಯಿರಿ” ಎಂದು ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಚಾಟಿ ಬೀಸಿದ್ದಾರೆ.


ಇದನ್ನೂ ಓದಿ: ಮಣಿವಣ್ಣನ್ ವರ್ಗಾವಣೆ ರದ್ದುಗೊಳಿಸದಿದ್ದರೆ ಹೋರಾಟ – ಕಾರ್ಮಿಕ ಸಂಘಟನೆಗಳ ಎಚ್ಚರಿಕೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಾರ್ಮಿಕರ ಬದುಕನ್ನು ಮೂರಾಬಟ್ಟೆ ಮಾಡಿದ ಮನುವಾದಿಗಳ ಕಣ್ಣು ಈಗ ರೈತರ ಮೇಲೆ ಬಿದ್ದಿದೆ.

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...