Homeಮುಖಪುಟಕೃಷಿ ಮಸೂದೆ ವಿರುದ್ಧ ರೈತರ ಪ್ರತಿಭಟನೆ: ವಿಪಕ್ಷಗಳೇ ಕಾರಣ ಎಂದ ಪ್ರಧಾನಿ

ಕೃಷಿ ಮಸೂದೆ ವಿರುದ್ಧ ರೈತರ ಪ್ರತಿಭಟನೆ: ವಿಪಕ್ಷಗಳೇ ಕಾರಣ ಎಂದ ಪ್ರಧಾನಿ

ರೈತರಿಗೆ ಸದಾ ಸುಳ್ಳು ಹೇಳುತ್ತಿದ್ದ ವಿರೋಧ ಪಕ್ಷಗಳು, ಈಗ ತಮ್ಮ ರಾಜಕೀಯ ಲಾಭಕ್ಕಾಗಿ ಆ ಕೃಷಿಕರನ್ನು ದಾಳವನ್ನಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಪ್ರಧಾನಿ ಮೋದಿ ವಾಗ್ದಾಳಿ

- Advertisement -
- Advertisement -

ಕೇಂದ್ರ ಸರ್ಕಾರ ಅಂಗೀಕರಿಸಿರುವ ಕೃಷಿ ಮಸೂದೆಗಳ ವಿರುದ್ಧ ದೇಶದ ರೈತರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಆದರೆ ಪ್ರಧಾನಿ ನರೇಂದ್ರ ಮೋದಿ ಮಾತ್ರ ಇದು ವಿಪಕ್ಷಗಳ ಕೆಲಸ. ವಿಪಕ್ಷಗಳು ಮಸೂದೆ ಕುರಿತು ರೈತರಿಗೆ ಸುಳ್ಳು ವದಂತಿಗಳನ್ನು ನಂಬಿಸುತ್ತಿದ್ದಾರೆ ಎಂದು ವಿರೋಧ ಪಕ್ಷಗಳ ವಿರುದ್ಧ ಕಿಡಿಕಾರಿದ್ದಾರೆ.

ಪಂಡಿತ್‌ ದೀನ್‌ದಯಾಳ್ ಉಪಾಧ್ಯಾಯ ಅವರ ಜನ್ಮದಿನದ ಅಂಗವಾಗಿ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರಿಗಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಮಾತನಾಡಿದರು.

ರೈತರಿಗೆ ಸದಾ ಸುಳ್ಳು ಹೇಳುತ್ತಿದ್ದ ವಿರೋಧ ಪಕ್ಷಗಳು, ಈಗ ತಮ್ಮ ರಾಜಕೀಯ ಲಾಭಕ್ಕಾಗಿ ಆ ಕೃಷಿಕರನ್ನು ದಾಳವನ್ನಾಗಿ ಬಳಸಿಕೊಳ್ಳುತ್ತಿದ್ದಾರೆ. ಹಾಗಾಗಿ ನಾವು ಗ್ರೌಂಡ್​​ ಲೆವೆಲ್​​ಗೆ ಇಳಿದು, ಮಸೂದೆ ಬಗ್ಗೆ ಹರಿದಾಡುತ್ತಿರೋ ವದಂತಿ ಹಾಗೂ ಸುಳ್ಳುಗಳಿಗೆ ಅಂತ್ಯ ಹಾಡಬೇಕು. ಹೊಸ ಕೃಷಿ ಮಸೂದೆಗಳ ಮಹತ್ವದ ಬಗ್ಗೆ, ಅದು ಅವರನ್ನ ಹೇಗೆ ಸಶಕ್ತರನ್ನಾಗಿಮಾಡುತ್ತದೆ ಎಂಬ ಬಗ್ಗೆ ಸರಳವಾದ ಭಾಷೆಯಲ್ಲಿ ತಿಳಿಸಬೇಕು ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ಕಾರ್ಮಿಕ ಕಾಯ್ದೆಗಳ ತಿದ್ದುಪಡಿಯಿಂದ ಒಳ್ಳೆಯದಾಗಿದೆ: ಕಾರ್ಮಿಕ ಸಚಿವರ ಹೇಳಿಕೆಗೆ ತೀವ್ರ ವಿರೋಧ

ಈ ಮಸೂದೆ, ಎಪಿಎಂಸಿ ಹೊರಗೂ ರೈತರು ತಮ್ಮ ಉತ್ಪನ್ನಗಳಿಗೆ ತಾವೇ ಬೆಲೆ ನಿಗದಿಪಡಿಸಿ ಮಾರಾಟ ಮಾಡುವ ಅವಕಾಶವನ್ನು ಕಲ್ಪಿಸಲಿದೆ. ಇದರಿಂದ ದೇಶದಲ್ಲಿರುವ ಶೇ 85ರಷ್ಟು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಹೆಚ್ಚಿನ ಲಾಭವಾಗಲಿದೆ. ಮಸೂದೆಗಳ ಬಗ್ಗೆ ವದಂತಿಗಳನ್ನು ಹರಡಲಾಗುತ್ತಿದ್ದು, ಇಂಥವುಗಳಿಂದ ರೈತರನ್ನು ರಕ್ಷಿಸಬೇಕಿದೆ. ಆ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ಬಿಜೆಪಿ ಕಾರ್ಯಕರ್ತರಿಗೆ ತಿಳಿಸಿದರು.

ಪಿಎಂ ಕಿಸಾನ್ ಸಮ್ಮಾನ್​ ನಿಧಿ ಯೋಜನೆಯಡಿ ಸುಮಾರು 1 ಲಕ್ಷ ಕೋಟಿ ರೂಪಾಯಿ ಹಣವನ್ನ 10 ಕೋಟಿ ರೈತರಿಗೆ ಈಗಾಗಲೇ ವರ್ಗಾವಣೆ ಮಾಡಲಾಗಿದೆ. ಸಾಲ ಪಡೆಯಲು ಸಹಾಯಕವಾಗುವಂತೆ ಇನ್ನೂ ಹೆಚ್ಚು ಹೆಚ್ಚು ರೈತರಿಗೆ ಕಿಸಾನ್ ಕ್ರೆಡಿಟ್​ ಕಾರ್ಡ್​​ಗಳನ್ನ ನೀಡಬೇಕೆಂಬುದು ನಮ್ಮ ಉದ್ದೇಶ ಎಂದರು.

ದೇಶದಾದ್ಯಂತ ಮಸೂದೆಗಳ ಅಂಗೀಕಾರದ ವಿರುದ್ಧ ಭಾರಿ ಪ್ರತಿಭಟನೆ ನಡೆಯುತ್ತಿದ್ದು, ಇಂದು ಭಾರತ್ ಬಂದ್ ಆಚರಿಸಲಾಗಿದೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿರುವ ಪಂಬಾಬ್‌ನಲ್ಲಿ ರಸ್ತೆ ತಡೆ, ರೈಲ್ ರೋಕೊ ಚಳುವಳಿಗಳನ್ನು ನಡೆಸಲಾಗಿದೆ. ಕರ್ನಾಟಕದಲ್ಲಿಯೂ ರಸ್ತೆ ಬಂದ್ ಮಾಡಲಾಗಿದ್ದು, ರೈತ ಸಂಘಟನೆಗಳು ಹೆದ್ದಾರಿಗಳನ್ನು ತಡೆದು, ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.


ಇದನ್ನೂ ಓದಿ: ಕೃಷಿ ಕಾನೂನುಗಳು ನಮ್ಮ ರೈತರನ್ನು ಗುಲಾಮರನ್ನಾಗಿಸುತ್ತವೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...